ಪ್ರಾದೇಶಿಕ ಪಕ್ಷಗಳಿಗೆ ಅನಾಮಿಕ ಮೂಲಗಳಿಂದ ಹರಿದುಬಂದಿದೆ 887 ಕೋಟಿ ರೂ.!

Published : May 17, 2023, 10:33 AM IST
ಪ್ರಾದೇಶಿಕ ಪಕ್ಷಗಳಿಗೆ ಅನಾಮಿಕ ಮೂಲಗಳಿಂದ ಹರಿದುಬಂದಿದೆ 887 ಕೋಟಿ ರೂ.!

ಸಾರಾಂಶ

ಕಳೆದ ಸಲಕ್ಕೆ ಹೋಲಿಸಿದರೆ ಈ ಬಾರಿ ಅನಾಮಿಕ ಮೂಲಗಳಿಂದ ಹರಿದು ಬಂದ ಆದಾಯ ಸುಮಾರು 600 ಕೋಟಿ ರೂ. ನಷ್ಟು ಹೆಚ್ಚಿದೆ ಎಂದು ಎಡಿಆರ್‌ ವರದಿ ಹೇಳಿದೆ.

ನವದೆಹಲಿ (ಮೇ 17, 2023): ಪ್ರಾದೇಶಿಕ ಪಕ್ಷಗಳಿಗೆ 2021-22ನೇ ಸಾಲಿನಲ್ಲಿ ಅನಾಮಧೇಯ ಮೂಲಗಳಿಂದ 887.55 ಕೋಟಿ ರೂ. ಆದಾಯ ಹರಿದುಬಂದಿದೆ. ಇದು ಅವುಗಳ ಒಟ್ಟಾರೆ ಆದಾಯದ ಶೇ.76ರಷ್ಟು ಎಂದು ಅಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್‌ (ಎಡಿಆರ್‌) ಸಂಸ್ಥೆಯ ಅಧ್ಯಯನ ಹೇಳಿದೆ. ಈ 887 ಕೋಟಿ ರೂ ಪೈಕಿ 827 ಕೋಟಿ ರೂ. ಚುನಾವಣಾ ಬಾಂಡ್‌ಗಳಿಂದ ಹರಿದುಬಂದಿದೆ.

2020-21ರಲ್ಲಿ ಒಟ್ಟಾರೆಯಾಗಿ ಪ್ರಾದೇಶಿಕ ಪಕ್ಷಗಳಿಗೆ 530 ಕೋಟಿ ರೂ. ಆದಾಯ ಹರಿದು ಬಂದಿತ್ತು. ಈ ಪೈಕಿ 263.93 ಕೋಟಿ ರೂ ಮೊತ್ತವು ಅನಾಮಿಕ ಮೂಲದಿಂದ ಬಂದಿತ್ತು. ಇದು ಒಟ್ಟಾರೆ ಆದಾಯದ ಶೇ.49.73 ರಷ್ಟಾಗಿತ್ತು. ಹೀಗಾಗಿ ಕಳೆದ ಸಲಕ್ಕೆ ಹೋಲಿಸಿದರೆ ಈ ಬಾರಿ ಅನಾಮಿಕ ಮೂಲಗಳಿಂದ ಹರಿದು ಬಂದ ಆದಾಯ ಸುಮಾರು 600 ಕೋಟಿ ರೂ. ನಷ್ಟು ಹೆಚ್ಚಿದೆ ಎಂದು ಹೇಳಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆ ವಿಚಾರಣೆ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಪ್ಪಿಗೆ

20 ಸಾವಿರ ರೂ.ಗಿಂತ ಹೆಚ್ಚಿನ ಆದಾಯವನ್ನು ‘ಗೊತ್ತಿರುವ ಮೂಲಗಳಿಂದ ಬಂದ ಆದಾಯ’ ಎಂದು ಪರಿಗಣಿಸಲಾಗುತ್ತದೆ. ಅಂಥ ದೇಣಿಗೆದಾರರ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಪಕ್ಷಗಳು ನೀಡಬೇಕು. ಇದಕ್ಕಿಂತ ಕಡಿಮೆ ಮೊತ್ತವನ್ನು ‘ಅನಾಮಿಕ ಮೂಲಗಳಿಂದ ಬಂದ ಆದಾಯ’ ಎಂದು ಪರಿಗಣಿಸಲಾಗುತ್ತದೆ ಹಾಗೂ ದೇಣಿಗೆದಾರರ ಹೆಸರು ಬಹಿರಂಗಪಡಿಸುವ ಅಗತ್ಯವಿಲ್ಲ. ಕೇವಲ ವಾರ್ಷಿಕ ಆಡಿಟ್‌ನಲ್ಲಿ ಆದಾಯವನ್ನು ಮಾತ್ರ ಉಲ್ಲೇಖಿಸಬೇಕು.

ಎಲೆಕ್ಟೋರಲ್‌ (ಚುನಾವಣಾ) ಬಾಂಡ್‌ ಅಂದರೇನು?
ಚುನಾವಣಾ ಬಾಂಡ್‌ನ ಈ ಹೊಸ ಅಧಿಸೂಚನೆ ಪ್ರಕಾರ "ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕಾಂಗ ಸಭೆಗಳಿಗೆ ಸಾರ್ವತ್ರಿಕ ಚುನಾವಣೆಯ ವರ್ಷದಲ್ಲಿ" ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ "15 ದಿನಗಳ ಹೆಚ್ಚುವರಿ ಅವಧಿಯನ್ನು" ಒದಗಿಸಲು ಯೋಜನೆಯನ್ನು ತಿದ್ದುಪಡಿ ಮಾಡಿದೆ. "ಅವರು ಯೋಜನೆಯ ವಿರುದ್ಧ ಅಧಿಸೂಚನೆಯನ್ನು ಹೊರಡಿಸುತ್ತಿದ್ದಾರೆ. ಈ ಅಧಿಸೂಚನೆಯು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ" ಎಂದು  ಹಿರಿಯ ವಕೀಲ ಅನೂಪ್ ಚೌಧರಿ ಹೇಳಿದರು. ಈ ಮನವಿಗೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್‌ ಸಿಜೆಐ ಚಂದ್ರಚೂಡ್, ನಾವು ಅದನ್ನು ಪಟ್ಟಿ ಮಾಡುತ್ತೇವೆ, ಈ ವಿಷಯದ ವಿಚಾರಣೆ ಬರುತ್ತದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಸಂಸದರ ಆಸ್ತಿ ಮೌಲ್ಯ ಏರಿಕೆ: ರಮೇಶ್‌ ಜಿಗಜಿಗಣಿ ನಂ. 1, ಪಿ.ಸಿ. ಮೋಹನ್ ನಂ. 2..!

ಎಲೆಕ್ಟೋರಲ್ ಬಾಂಡ್ ಎನ್ನುವುದು ಪ್ರಾಮಿಸರಿ ನೋಟ್ ಅಥವಾ ಬೇರರ್ ಬಾಂಡ್‌ನ ಒಂದು ಸಾಧನವಾಗಿದ್ದು, ವ್ಯಕ್ತಿ ಅಥವಾ ಸಂಸ್ಥೆಯು ಭಾರತದ ಪ್ರಜೆಯಾಗಿದ್ದರೆ ಅಥವಾ ಭಾರತದಲ್ಲಿ ಸಂಘಟಿತ ಅಥವಾ ಸ್ಥಾಪಿಸಲ್ಪಟ್ಟಿದ್ದರೆ ಅದನ್ನು ಯಾವುದೇ ವ್ಯಕ್ತಿ, ಕಂಪನಿ, ಸಂಸ್ಥೆ ಅಥವಾ ವ್ಯಕ್ತಿಗಳ ಸಂಘದಿಂದ ಖರೀದಿಸಬಹುದಾಗಿದೆ.

ಇದನ್ನೂ ಓದಿ: 122 ಶಾಸಕರ ಮೇಲಿವೆ ಕ್ರಿಮಿನಲ್‌ ಕೇಸ್‌; 71 ಮಂದಿ ವಿರುದ್ಧ ಗಂಭೀರ ಸ್ವರೂಪದ ಮೊಕದ್ದಮೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?