ಐಟಿ ರೇಡ್‌: ಕಾಂಗ್ರೆಸ್‌ ಸಂಸದನ ನಿವಾಸದಲ್ಲಿ ಪತ್ತೆಯಾಯ್ತು ನೂರಾರು ಕೋಟಿ ರೂ. ನಗದು!

Published : Dec 08, 2023, 01:29 PM ISTUpdated : Dec 08, 2023, 01:58 PM IST
ಐಟಿ ರೇಡ್‌: ಕಾಂಗ್ರೆಸ್‌ ಸಂಸದನ ನಿವಾಸದಲ್ಲಿ ಪತ್ತೆಯಾಯ್ತು ನೂರಾರು ಕೋಟಿ ರೂ. ನಗದು!

ಸಾರಾಂಶ

ಕಾಂಗ್ರೆಸ್‌ ನಾಯಕನ ಮನೆಯಲ್ಲಿ ಸಿಕ್ಕಿರುವ ಹಣದ ನಿಖರವಾದ ಮೊತ್ತದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲದಿದ್ದರೂ, 150 ರಿಂದ 300 ಕೋಟಿ ರೂ. ಎಂದು ಐಟಿ ಮೂಲಗಳು ಹೇಳಿವೆ.

ರಾಂಚಿ (ಡಿಸೆಂಬರ್ 8, 2023): ಜಾರ್ಖಂಡ್‌, ಒಡಿಶಾ ಸೇರಿ ಹಲವೆಡೆ ಐಟಿ ರೇಡ್‌ ನಡೆದಿದೆ. ಈ ವೇಳೆ, ಜಾರ್ಖಂಡ್‌ನಲ್ಲಿ, ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಧೀರಜ್ ಪ್ರಸಾದ್ ಸಾಹು ನಿವಾಸಗಳಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೊತ್ತವು 100 ಕೋಟಿ ರೂಪಾಯಿಗಳನ್ನು ಮೀರಿದ್ದು, ಎಂದು ಮೂಲಗಳು ವರದಿ ಮಾಡಿದೆ. 

ಕಾಂಗ್ರೆಸ್‌ ನಾಯಕನ ಮನೆಯಲ್ಲಿ ಸಿಕ್ಕಿರುವ ಹಣದ ನಿಖರವಾದ ಮೊತ್ತದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲದಿದ್ದರೂ, 150 ರಿಂದ 300 ಕೋಟಿ ರೂ. ಎಂದು ಐಟಿ ಮೂಲಗಳು ಹೇಳಿವೆ. ಧೀರಜ್ ಪ್ರಸಾದ್ ಸಾಹು ನಿವಾಸದಲ್ಲಿ ನೋಟುಗಳಿಂದ ತುಂಬಿದ ಅಲ್ಮೇರಾ ಪತ್ತೆಯಾಗಿದ್ದು, ನೋಟುಗಳ ಎಣಿಕೆ ಕಾರ್ಯ ಅಂತಿಮಗೊಂಡಿರಲಿಲ್ಲ ಎಂದೂ ಹೇಳಲಾಗಿದೆ. ಸ್ವಾರಸ್ಯಕರ ಸಂಗತಿಯೆಂದರೆ, ವಸೂಲಿಯಾದ ಹಣವನ್ನು ಎಣಿಸಲು ಐಟಿ ಅಧಿಕಾರಿಗಳು ಬಳಸುತ್ತಿದ್ದ ನೋಟು ಎಣಿಕೆ ಯಂತ್ರವು 50 ಕೋಟಿ ರೂ. ವರೆಗೆ ಎಣಿಸಿದ ನಂತರ ಕೆಟ್ಟುಹೋಯಿತು. 

ಇದನ್ನು ಓದಿ: ಚುನಾವಣೆಯಲ್ಲಿ ಹಂಚಲು ಕರ್ನಾಟಕದಿಂದ ತೆಲಂಗಾಣಕ್ಕೆ 3.5 ಕೋಟಿ ರೂ. ಹಣ ಸಾಗಾಟ! ಹೈದರಾಬಾದಲ್ಲಿ ಜಪ್ತಿ

ಬುಧವಾರ (ಡಿಸೆಂಬರ್ 6) ರಾಂಚಿ ಮತ್ತು ಲೋಹರ್ದಗಾದಲ್ಲಿನ ನಿವಾಸಗಳು ಸೇರಿದಂತೆ ಐದು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ರಾಂಚಿಯ ರೇಡಿಯಂ ರಸ್ತೆಯಲ್ಲಿರುವ ಸುಶೀಲಾ ನಿಕೇತನ್ ನಿವಾಸದ ಹೊರತಾಗಿ, ಒಡಿಶಾದ ಬಲಂಗೀರ್, ಸಂಬಲ್‌ಪುರ್ ಮತ್ತು ಕಲಹಂಡಿಯಲ್ಲಿ ತಲಾ ಒಂದು ಸ್ಥಳದಲ್ಲಿ ದಾಳಿ ನಡೆಸಲಾಗಿದೆ.

ಇನ್ನು, ಆದಾಯ ತೆರಿಗೆ ಇಲಾಖೆ ತಂಡವು ಲೋಹರ್ಡಗಾ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲಿಸಿದೆ. ಈ ಕಾರ್ಯಾಚರಣೆಯ ವೇಳೆ ಯಾರಿಗೂ ಆವರಣದೊಳಗೆ ಪ್ರವೇಶಿಸಲು ಅವಕಾಶವಿರಲಿಲ್ಲ. ಮತ್ತು ಐಟಿ ತಂಡವು ಬೆಳಗ್ಗೆಯಿಂದ ತಡರಾತ್ರಿಯವರೆಗೆ ಕೆಲಸ ಮಾಡಿದೆ ಎಂದೂ ತಿಳಿದುಬಂದಿದೆ. ಗುರುವಾರ ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ (ಬಿಡಿಪಿಎಲ್) ಸಹ ದಾಳಿ ನಡೆಸಲಾಯಿತು.

ಕರ್ನಾಟಕ ರಾಜಕಾರಣ ಟಾಪ್‌ 10 ತಿರುಗುಬಾಣ: ಐಟಿ ದಾಳಿಯ ನಂತರ ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿ

ಜಾರ್ಖಂಡ್‌ನ ಲೋಹರ್ಡಗಾ ನಿವಾಸಿಯಾಗಿರುವ ಧೀರಜ್ ಸಾಹು 1977 ರಲ್ಲಿ ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಹಳೆಯ ಕಾಂಗ್ರೆಸ್ ನಾಯಕರಾಗಿದ್ದು, ಅವರು ಮೂರನೇ ಬಾರಿಗೆ ರಾಜ್ಯಸಭಾ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!