ಭಾರತದಲ್ಲಿ ಆತಂಕಕಾರಿಯಾಗಿ ಏರುತ್ತಿದೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ? ಕರ್ನಾಟಕಕ್ಕೆ ಎಷ್ಟನೇ ಸ್ಥಾನ.?

Published : Aug 30, 2024, 09:46 AM IST
ಭಾರತದಲ್ಲಿ ಆತಂಕಕಾರಿಯಾಗಿ ಏರುತ್ತಿದೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ? ಕರ್ನಾಟಕಕ್ಕೆ ಎಷ್ಟನೇ ಸ್ಥಾನ.?

ಸಾರಾಂಶ

ದೇಶದ ಭವಿಷ್ಯ ನಿರ್ಧರಿಸುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣದ ದೇಶದಲ್ಲಿ ವರ್ಷ ವರ್ಷ ಹೆಚ್ಚುತ್ತಿದೆ. ವಿದ್ಯಾರ್ಥಿಗಳ ಸಾವಿನ ಪ್ರಮಾಣ ಜನಸಂಖ್ಯಾ ಬೆಳವಣಿಗೆ ದರ ಮತ್ತು ರೈತರ ಆತ್ಮಹತ್ಯೆ ಸಂಖ್ಯೆಯನ್ನೂ ಮೀರಿಸಿದೆ ಎಂದು ವರದಿಯೊಂದು ಕಳವಳ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ 4ನೇ ಸ್ಥಾನದಲ್ಲಿದೆ.

ನವದೆಹಲಿ (ಆ.30): ದೇಶದ ಭವಿಷ್ಯ ನಿರ್ಧರಿಸುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣದ ದೇಶದಲ್ಲಿ ವರ್ಷ ವರ್ಷ ಹೆಚ್ಚುತ್ತಿದೆ. ವಿದ್ಯಾರ್ಥಿಗಳ ಸಾವಿನ ಪ್ರಮಾಣ ಜನಸಂಖ್ಯಾ ಬೆಳವಣಿಗೆ ದರ ಮತ್ತು ರೈತರ ಆತ್ಮಹತ್ಯೆ ಸಂಖ್ಯೆಯನ್ನೂ ಮೀರಿಸಿದೆ ಎಂದು ವರದಿಯೊಂದು ಕಳವಳ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ 4ನೇ ಸ್ಥಾನದಲ್ಲಿದೆ.

ಜಾಗತಿಕವಾಗಿ ಶಾಲಾ ಮಕ್ಕಳಿಗೆ ವಿವಿಧ ರೀತಿಯ ನೆರವು ನೀಡುವ ‘ಐಸಿ3’ ಎಂಬ ಸರ್ಕಾರೇತರ ಸಂಸ್ಥೆ 2021-2022ನೇ ಸಾಲಿನ ರಾಷ್ಟ್ರೀಯ ಅಪರಾಧ ಬ್ಯೂರೋದ ವರದಿ ಆಧರಿಸಿ ಇಂಥದ್ದೊಂದು ವರದಿ ಮುಂದಿಟ್ಟಿದೆ.

ವರದಿ ಹೇಳಿದ್ದೇನು?:

2021ರಲ್ಲಿ ದೇಶವ್ಯಾಪಿ 13089 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಶೇ.4.5ರಷ್ಟು ಹೆಚ್ಚು. ಆ ವರ್ಷ ದೇಶದಲ್ಲಿ ಸಂಭವಿಸಿದ ಒಟ್ಟು ಆತ್ಮಹತ್ಯೆಯಲ್ಲಿ ವಿದ್ಯಾರ್ಥಿಗಳ ಪಾಲು ಶೇ.8ರಷ್ಟಿತ್ತು. ಜೊತೆಗೆ 2002-11ರ ದಶಕಕ್ಕೆ ಹೋಲಿಸಿದರೆ 2012-21ರ ದಶಕದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ (97571 ಸಾವು) ಶೇ.57ರಷ್ಟು ಹೆಚ್ಚಳವಾಗಿದೆ. ವಿದ್ಯಾರ್ಥಿಗಳ ಸಾವಿನ ಪ್ರಮಾಣ ಜನಸಂಖ್ಯಾ ಬೆಳವಣಿಗೆ ದರ ಮತ್ತು ಒಟ್ಟಾರೆ ಆತ್ಮಹತ್ಯೆಯ ಪ್ರವೃತ್ತಿಗಿಂತಲೂ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

 

ಆತ್ಮಹತ್ಯೆ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿರುವ 6 ನಗರಗಳು ಇಲ್ಲಿವೆ

ಟಾಪ್‌ 5 ರಾಜ್ಯಗಳು:

2021ರಲ್ಲಿ ಮಹಾರಾಷ್ಟ್ರದಲ್ಲಿ 1834, ಮಧ್ಯಪ್ರದೇಶ 1308, ತಮಿಳುನಾಡು 1246, ಕರ್ನಾಟಕ 855, ಒಡಿಶಾ 834 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದ ಒಟ್ಟು ವಿದ್ಯಾರ್ಥಿಗಳ ಸಾವಿನಲ್ಲಿ ಈ 5 ರಾಜ್ಯಗಳ ಪಾಲು ಶೇ.46ರಷ್ಟಿದೆ. ಜೊತೆಗೆ ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಾಲು ಶೇ.29ರಷ್ಟಿದೆ ಎಂದು ವರದಿ ಹೇಳಿದೆ.

2021 ಮತ್ತು ಅದರ ಹಿಂದಿನ 6 ವರ್ಷಗಳಲ್ಲಿ ರೈತರ ಆತ್ಮಹತ್ಯೆ ಶೇ.12ರಷ್ಟು ಇಳಿದಿದ್ದರೆ, ವಿದ್ಯಾರ್ಥಿಗಳ ಆತ್ಮಹತ್ಯೆಯಲ್ಲಿ ಶೇ.62ರಷ್ಟು ಏರಿಕೆಯಾಗಿದೆ. 2021ರಲ್ಲಿ 10881 ರೈತರು ಮತ್ತು 13089 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಆತ್ಮಹತ್ಯೆಗೆ ಪ್ರೇರೇಪಿಸುವ ನೋವು: ಟ್ರೈಜಿಮಿನಲ್ ನ್ಯೂರಾಲ್ಜಿಯಾ ಕಾಯಿಲೆ ಲಕ್ಷಣಗಳು ಮತ್ತು ಚಿಕಿತ್ಸೆ

ಕಾರಣ ಏನು?:

ಶೈಕ್ಷಣಿಕ ಒತ್ತಡ, ಉದ್ಯೋಗ ಆಯ್ಕೆಯ ಒತ್ತಡ, ಶೈಕ್ಷಣಿಕ ಸಂಸ್ಥೆಗಳಿಂದ ಯಾವುದೇ ನೆರವಿಲ್ಲದಿರುವುದು, ರ್‍ಯಾಗಿಂಗ್‌ ಮತ್ತು ಕಿರುಕುಳ, ತಾರತಮ್ಯ, ಹಣಕಾಸು ಬಿಕ್ಕಟ್ಟು, ಕೌಟುಂಬಿಕ ರಚನೆಯಲ್ಲಿ ಬದಲಾವಣೆ, ಭಾವನಾತ್ಮಕವಾಗಿ ನಿರ್ಲಕ್ಷ್ಯ, ಸಾಮಾಜಿಕವಾಗಿ ಕಡೆಗಣನೆ, ಮಾನಸಿಕ ಒತ್ತಡದ ಕಡೆಗಣನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು