74ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ವೈಭವ!

Published : Aug 15, 2020, 08:06 AM ISTUpdated : Aug 15, 2020, 06:47 PM IST
74ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ವೈಭವ!

ಸಾರಾಂಶ

ಕೊರೋನಾತಂಕ ನಡುವೆಯೇ 74ನೇ ಸ್ವಾತಂತ್ರ್ಯೋತ್ಸವ| ಕೆಂಪು ಕೋಟೆಯಲ್ಲಿ ಪಿಎತ್ರಿವರ್ಣ ಧ್ವಜ ಹಾರಿಸಿದ ಪಿಎಂ ಮೋದಿ| ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ

ನವದೆಹಲಿ(ಆ.15): ಕೊರೋನಾತಂಕ ನಡುವೆಯೇ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.

"

ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿದ ಪಿಎಂ ಮೋದಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. 

ಇದಾದ ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು.  ಲೆಫ್ಟಿನೆಂಟ್​ ಕರ್ನರ್​ ಗೌರವ್ ಎಸ್​ ಯೆವಾಲ್ಕರ್ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ  ಗಾರ್ಡ್​ ಆಫ್​ ಹಾನರ್ ಸಲ್ಲಿಸಲಾಯ್ತು.

ಇನ್ನು ಕೊರೋನಾತಂಕ ಹಿನ್ನೆಲೆ ಕೆಂಪುಕೋಟೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೆಲವೇ ಗಣ್ಯರಿಗೆ ಪ್ರವೇಶ ನೀಡಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ
ಮಾಡೆಲ್ ಮಗಳ ಯಶಸ್ಸು: ಮಾಲ್‌ನಲ್ಲಿ ಬಿಲ್‌ಬೋರ್ಡ್ ಮೇಲೆ ಮಗಳ ಫೋಟೋ ನೋಡಿ ಭಾವುಕರಾದ ಪೋಷಕರು