Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Published : Apr 02, 2026, 12:49 PM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಯಂತೆ, 59 ವರ್ಷಗಳ ಸುದೀರ್ಘ ಸಶಸ್ತ್ರ ಹೋರಾಟದ ನಂತರ ಭಾರತ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. ಸೇನಾ ಕಾರ್ಯಾಚರಣೆಗಳು ಮತ್ತು ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಮೋದಿ ಸರ್ಕಾರ ಈ ಐತಿಹಾಸಿಕ ಸಾಧನೆ ಮಾಡಿದೆ.

ನವದೆಹಲಿ (ಏ.2): ಭಾರತಕ್ಕೆ ದಶಕಗಳ ಕಾಲ ಆಂತರಿಕ ಭದ್ರತೆಯ ಸವಾಲಾಗಿ ಕಾಡುತ್ತಿದ್ದ ನಕ್ಸಲ್ ವಾದಕ್ಕೆ ಕೊನೆಗೂ ಶಾಶ್ವತ ಅಂತ್ಯ ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಹಿಂದೆ ನೀಡಿದ್ದ ಗಡುವಿನಂತೆ, ದೇಶ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. 59 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದ ಈ ಸಶಸ್ತ್ರ ಹೋರಾಟವನ್ನು ಮೋದಿ ಸರ್ಕಾರ ತನ್ನ ಇಚ್ಛಾಶಕ್ತಿಯ ಮೂಲಕ ಬುಡಮೇಲು ಮಾಡಿದೆ.

59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!

ಮೋದಿ-ಶಾ ಜೋಡಿಯ ಆಪರೇಷನ್: ಕೇವಲ ಸೇನಾ ಕಾರ್ಯಾಚರಣೆ ಅಷ್ಟೇ ಅಲ್ಲದೆ, ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಸರ್ಕಾರ ಈ ಸಾಧನೆ ಮಾಡಿದೆ. ಕಳೆದ 12 ವರ್ಷಗಳಲ್ಲಿ ನಡೆದ ಸಮಗ್ರ ಕಾರ್ಯಾಚರಣೆಯ ಫಲವಾಗಿ, 2,218 ನಕ್ಸಲರ ಬಂಧನ ಮತ್ತು 4,839 ಮಂದಿ ಶರಣಾಗತಿಯಾಗಿದೆ. ಕೆಂಪು ಕಾರಿಡಾರ್ ಎಂದು ಗುರುತಿಸಲ್ಪಟ್ಟಿದ್ದ ಪ್ರದೇಶಗಳು ಇಂದು ನಕ್ಸಲ್ ಮುಕ್ತವಾಗಿವೆ.

ಕೆಂಪು ಸಾಮ್ರಾಜ್ಯದ ಪತನ: ಅಮಿತ್ ಶಾ ಅವರ 'ಆಪರೇಷನ್ ಬ್ಲ್ಯಾಕ್ ಫಾರೆಸ್ಟ್' ಮೂಲಕ ನಕ್ಸಲರ ನೆಲೆಗಳನ್ನು ಸಂಪೂರ್ಣ ನಾಶಪಡಿಸಲಾಗಿದೆ. ಯಾವುದೇ ಮ್ಯಾಜಿಕ್ ಇಲ್ಲದೆ, ದೀರ್ಘಕಾಲದ ಯೋಜಿತ ತಂತ್ರಗಾರಿಕೆಯಿಂದ ಈ ಐತಿಹಾಸಿಕ ಸಾಧನೆ ಸಾಧ್ಯವಾಗಿದೆ. ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಈಗ ಶೂನ್ಯಕ್ಕೆ ತಲುಪಿದ್ದು, ದೇಶದ ಆಂತರಿಕ ಭದ್ರತೆಯಲ್ಲಿ ಇದು ಹೊಸ ಮೈಲಿಗಲ್ಲಾಗಿದೆ.
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more