Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ

Published : Apr 02, 2026, 12:49 PM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಯಂತೆ, 59 ವರ್ಷಗಳ ಸುದೀರ್ಘ ಸಶಸ್ತ್ರ ಹೋರಾಟದ ನಂತರ ಭಾರತ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. ಸೇನಾ ಕಾರ್ಯಾಚರಣೆಗಳು ಮತ್ತು ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಮೋದಿ ಸರ್ಕಾರ ಈ ಐತಿಹಾಸಿಕ ಸಾಧನೆ ಮಾಡಿದೆ.

ನವದೆಹಲಿ (ಏ.2): ಭಾರತಕ್ಕೆ ದಶಕಗಳ ಕಾಲ ಆಂತರಿಕ ಭದ್ರತೆಯ ಸವಾಲಾಗಿ ಕಾಡುತ್ತಿದ್ದ ನಕ್ಸಲ್ ವಾದಕ್ಕೆ ಕೊನೆಗೂ ಶಾಶ್ವತ ಅಂತ್ಯ ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಹಿಂದೆ ನೀಡಿದ್ದ ಗಡುವಿನಂತೆ, ದೇಶ ಈಗ ಅಧಿಕೃತವಾಗಿ 'ನಕ್ಸಲ್ ಮುಕ್ತ' ರಾಷ್ಟ್ರವಾಗಿದೆ. 59 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದ ಈ ಸಶಸ್ತ್ರ ಹೋರಾಟವನ್ನು ಮೋದಿ ಸರ್ಕಾರ ತನ್ನ ಇಚ್ಛಾಶಕ್ತಿಯ ಮೂಲಕ ಬುಡಮೇಲು ಮಾಡಿದೆ.

59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!

ಮೋದಿ-ಶಾ ಜೋಡಿಯ ಆಪರೇಷನ್: ಕೇವಲ ಸೇನಾ ಕಾರ್ಯಾಚರಣೆ ಅಷ್ಟೇ ಅಲ್ಲದೆ, ಶರಣಾದ ನಕ್ಸಲರಿಗೆ ಮುಖ್ಯವಾಹಿನಿಯ ಬದುಕು ನೀಡುವ ಮೂಲಕ ಸರ್ಕಾರ ಈ ಸಾಧನೆ ಮಾಡಿದೆ. ಕಳೆದ 12 ವರ್ಷಗಳಲ್ಲಿ ನಡೆದ ಸಮಗ್ರ ಕಾರ್ಯಾಚರಣೆಯ ಫಲವಾಗಿ, 2,218 ನಕ್ಸಲರ ಬಂಧನ ಮತ್ತು 4,839 ಮಂದಿ ಶರಣಾಗತಿಯಾಗಿದೆ. ಕೆಂಪು ಕಾರಿಡಾರ್ ಎಂದು ಗುರುತಿಸಲ್ಪಟ್ಟಿದ್ದ ಪ್ರದೇಶಗಳು ಇಂದು ನಕ್ಸಲ್ ಮುಕ್ತವಾಗಿವೆ.

ಕೆಂಪು ಸಾಮ್ರಾಜ್ಯದ ಪತನ: ಅಮಿತ್ ಶಾ ಅವರ 'ಆಪರೇಷನ್ ಬ್ಲ್ಯಾಕ್ ಫಾರೆಸ್ಟ್' ಮೂಲಕ ನಕ್ಸಲರ ನೆಲೆಗಳನ್ನು ಸಂಪೂರ್ಣ ನಾಶಪಡಿಸಲಾಗಿದೆ. ಯಾವುದೇ ಮ್ಯಾಜಿಕ್ ಇಲ್ಲದೆ, ದೀರ್ಘಕಾಲದ ಯೋಜಿತ ತಂತ್ರಗಾರಿಕೆಯಿಂದ ಈ ಐತಿಹಾಸಿಕ ಸಾಧನೆ ಸಾಧ್ಯವಾಗಿದೆ. ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಈಗ ಶೂನ್ಯಕ್ಕೆ ತಲುಪಿದ್ದು, ದೇಶದ ಆಂತರಿಕ ಭದ್ರತೆಯಲ್ಲಿ ಇದು ಹೊಸ ಮೈಲಿಗಲ್ಲಾಗಿದೆ.
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more