
ಆರಂಬಾಘ್ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಮಹಿಳೆಯರು ಹಾಗೂ ಜನಸಾಮಾನ್ಯರ ಮೇಲೆ ನಡೆದ ದೌರ್ಜನ್ಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, ‘ಇಂಡಿಯಾ ಕೂಟದ ನಾಯಕರು ಗಾಂಧೀಜಿಯ ಮೂರು ಮಂಗಗಳಿದ್ದಂತೆ’ ಎಂದು ಕಿಡಿಕಾರಿದ್ದಾರೆ.
‘ಸಂದೇಶ್ಖಾಲಿ ಘಟನೆ ಬಗ್ಗೆ ಇಂಡಿಯಾ ಕೂಟದ ನಾಯಕರು ಮೌನವಾಗಿದ್ದಾರೆ. ಅವರು ಗಾಂಧೀಜಿಯ ಮೂರು ಮಂಗಗಳಿದ್ದಂತೆ. ಸಂದೇಶ್ಖಾಲಿಯ ಬಗ್ಗೆ ಕೇಳಿದಾಗ ಕಾಂಗ್ರೆಸ್ ಅಧ್ಯಕ್ಷರು ‘ಬಂಗಾಳದಲ್ಲಿ ಇದೆಲ್ಲ ಆಗುತ್ತಿರುತ್ತದೆ ಬಿಟ್ಹಾಕಿ’ ಎಂದು ಹೇಳಿದರಂತೆ’ ಎಂದೂ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
225 ರಾಜ್ಯಸಭಾ ಸದಸ್ಯರ ಒಟ್ಟು ಆಸ್ತಿ 19602 ಕೋಟಿ! ಅಚ್ಚರಿಯ ಅಂಶ ಬೆಳಕಿಗೆ, ಶ್ರೀಮಂತ ಪಕ್ಷ ಯಾವುದು?
ಹೂಗ್ಲಿ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ‘ಇಡೀ ದೇಶ ಇಂದು ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದರೆ ಬಂಗಾಳ ಸರ್ಕಾರ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನೋಡಿಕೊಂಡು ಸುಮ್ಮನೆ ಕುಳಿತಿದೆ. ತೃಣಮೂಲ ಕಾಂಗ್ರೆಸ್ನ ಕೃತ್ಯಗಳನ್ನು ನೋಡಿ ಇಡೀ ದೇಶದ ಜನರು ಕ್ರುದ್ಧರಾಗಿದ್ದಾರೆ. ಮಾ, ಮಾಟಿ, ಮಾನುಷ್ ಎಂದು ಜಪ ಮಾಡುವ ಟಿಎಂಸಿ ಪಕ್ಷ ಸಂದೇಶ್ಖಾಲಿಯ ಅಕ್ಕತಂಗಿಯರಿಗೆ ಏನು ಮಾಡಿದೆ ನೋಡಿ. ಇದು ನಾಚಿಕೆಗೇಡಿನ ಸಂಗತಿ’ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ತಡ ರಾತ್ರಿ 3.30ರವರೆಗೂ ಚುನಾವಣಾ ಸಮಿತಿ ಸಭೆ, ಕೆಲಸ ಮಾಡದ ಹಲವು ಸಂಸದರಿಗೆ ಕೊಕ್
ಟಿಎಂಸಿ ನಾಯಕ ಶಾಜಹಾನ್ ಶೇಖ್ ಹಾಗೂ ಆತನ ಬೆಂಬಲಿಗರು ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಹಾಗೂ ಜನರ ಭೂಮಿಯನ್ನು ಕಬಳಿಸಿ ದೌರ್ಜನ್ಯ ಎಸಗಿರುವ ವಿಚಾರ ತೀವ್ರ ವಿವಾದಕ್ಕೀಡಾಗಿದೆ. ಗುರುವಾರವಷ್ಟೇ ಶಾಜಹಾನ್ನನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಂಗಾಳಕ್ಕೆ ಶುಕ್ರವಾರ ನೀಡಿದ ಭೇಟಿ ಕಳೆದ ಮೂರು ವರ್ಷಗಳಲ್ಲೇ ಮೊದಲನೆಯದ್ದಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ