ರಾಷ್ಟ್ರಪತಿ, ಪ್ರಧಾನಿಗೆ ಕೊಟ್ಟಂತೆ ಈ ಮರಕ್ಕೆ Z+ ಭದ್ರತೆ ಕೊಡುತ್ತಿರುವ ಸರ್ಕಾರ!

Published : Dec 16, 2024, 06:35 PM ISTUpdated : Dec 16, 2024, 06:36 PM IST
ರಾಷ್ಟ್ರಪತಿ, ಪ್ರಧಾನಿಗೆ ಕೊಟ್ಟಂತೆ ಈ ಮರಕ್ಕೆ Z+ ಭದ್ರತೆ ಕೊಡುತ್ತಿರುವ ಸರ್ಕಾರ!

ಸಾರಾಂಶ

ಭೋಪಾಲ್ ಬಳಿ ಶ್ರೀಲಂಕಾ ಪ್ರಧಾನಿ ನೆಟ್ಟ ಬೋಧಿ ವೃಕ್ಷಕ್ಕೆ ಝೆಡ್ ಪ್ಲಸ್ ಭದ್ರತೆ ಒದಗಿಸಲಾಗಿದೆ. ಮೂಲ ಬೋಧಿವೃಕ್ಷ ನಾಶವಾದ ನಂತರ, ಶ್ರೀಲಂಕಾದಿಂದ ತಂದ ಕೊಂಬೆಯಿಂದ ಬೆಳೆಸಿದ ಈ ಮರಕ್ಕೆ ವಾರ್ಷಿಕ ₹15 ಲಕ್ಷ ಭದ್ರತಾ ವೆಚ್ಚವಿದೆ. ಜಿಲ್ಲಾಧಿಕಾರಿಯೇ ಮರದ ಮೇಲ್ವಿಚಾರಣೆ ನೋಡಿಕೊಳ್ಳುತ್ತಾರೆ. ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ಧಿ ಪಡೆದಿದೆ.

ಬಿಹಾರ (ಡಿ.16) : ಸಾಮಾನ್ಯವಾಗಿ ನಾವು Z ಪ್ಲಸ್ ಸೆಕ್ಯುರಿಟಿ ಬಗ್ಗೆ ಕೇಳಿದಾಗ, ಪ್ರಧಾನಿ, ರಾಷ್ಟ್ರಪತಿ ಮತ್ತು ಯಾವುದೇ ವಿವಿಐಪಿ ವ್ಯಕ್ತಿಯ ಸುರಕ್ಷತೆ ನೆನಪಿಗೆ ಬರುತ್ತದೆ. ದೇಶದ ಯಾವುದೇ ದೊಡ್ಡ ಸೆಲೆಬ್ರಿಟಿ ಅಥವಾ ಉದ್ಯಮಿಗಳಿಗೂ ಅಗತ್ಯವಿದ್ದಾಗ ಈ ಸೆಕ್ಯುರಿಟಿ ನೀಡಲಾಗುತ್ತದೆ. ಆದರೆ ಒಂದು ಮರಕ್ಕೆ 24 ಗಂಟೆ ಝಡ್ ಪ್ಲಸ್ (Z+ security) ಸೆಕ್ಯುರಿಟಿ ನೀಡಲಾಗುತ್ತದೆ ಎಂದು ಹೇಳಿದರೆ ನಿಮಗೆ ಆಶ್ಚರ್ಯವಾಗಬಹುದು.

ಆದರೆ ಇದು ನಿಜ. ಒಂದು ವಿವಿಐಪಿ ಮರವೂ ಇದೆ, ಅದರ ಸುರಕ್ಷತೆಗಾಗಿ 24 ಗಂಟೆ ಗಾರ್ಡ್‌ಗಳು ನೇಮಕ ಆಗಿರುತ್ತಾರೆ. ಭಾರತದಲ್ಲಿ ಈ ಮರಕ್ಕೆ ಇಷ್ಟೊಂದು ಬಿಗಿ ಭದ್ರತೆ ಏಕೆ ನೀಡಲಾಗುತ್ತದೆ ಎಂದು ತಿಳಿದುಕೊಳ್ಳೋಣ. ನಾವು ಇದೀಗ ಭಗವಾನ್ ಗೌತಮ ಬುದ್ಧನಿಗೆ ಜ್ಞಾನೋದಯವಾದ ನಿಜವಾದ 'ಬೋಧಿ ವೃಕ್ಷ'ದ ಬಗ್ಗೆ ಹೇಳುತ್ತಿದ್ದೇವೆ. ಇದು ಬಿಹಾರದ ಗಯಾ ಜಿಲ್ಲೆಯಲ್ಲಿದೆ. ಈ ಬೋಧಿ ವೃಕ್ಷವನ್ನು ಹಲವು ಬಾರಿ ನಾಶಮಾಡಲು ಪ್ರಯತ್ನಿಸಲಾಗಿದೆ ಎಂದು ಹೇಳಲಾಗುತ್ತದೆ. ಆದರೆ, ಪ್ರತಿ ಬಾರಿಯೂ ಅಲ್ಲಿ ಹೊಸ ಮರ ಬೆಳೆಯುತ್ತದೆ.

ಭಾರತೀಯ ಇತೊಹಾಸ ತಜ್ಞರು ಹೇಳುವಂತೆ ಗೌತಮ ಬುದ್ಧನಿಗೆ ಜ್ಞಾನೋದಯವಾದ ಬೋಧಿ ವೃಕ್ಷವು 1857ರ ನೈಸರ್ಗಿಕ ವಿಕೋಪದಿಂದ ನಾಶವಾಯಿತು ಎಂದು ಹೇಳುತ್ತಾರೆ. ನಂತರ 1880ರಲ್ಲಿ ಬ್ರಿಟಿಷ್ ಅಧಿಕಾರಿ ಲಾರ್ಡ್ ಕನ್ನಿಂಗ್ ಹ್ಯಾಮ್ ಶ್ರೀಲಂಕಾದ ಅನುರಾಧಪುರಂನಿಂದ ಬೋಧಿ ವೃಕ್ಷದ ಒಂದು ಕೊಂಬೆಯನ್ನು ತಂದು ಬೋಧಗಯಾದಲ್ಲಿ ಮತ್ತೆ ನೆಟ್ಟರು. ಅದು ನಂತರ ಭಾರತದ ಬೋಧಿ ವೃಕ್ಷವಾಗಿ ಒಂದು ಅವಧಿವರೆಗೆ ಬೆಳೆಯುತ್ತದೆ.

ಮಧ್ಯಪ್ರದೇಶದಲ್ಲಿದೆ ಬೋಧಿ ವೃಕ್ಷ: ಇದೀಗ ಭಾರತದಲ್ಲಿ ಭಾರೀ ಚರ್ಚೆಯಲ್ಲಿರುವ ಹೈ ಸೆಕ್ಯುರಿಟಿ ಮರ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಮತ್ತು ವಿದಿಶಾ ನಡುವಿನ ಸಲಾಮತ್‌ಪುರ ಬೆಟ್ಟಗಳಲ್ಲಿದೆ. ಈ ವಿಶೇಷ ಮರವನ್ನು ಶ್ರೀಲಂಕಾದ ಅಂದಿನ ಪ್ರಧಾನಿ ಮಹಿಂದ್ರ ರಾಜಪಕ್ಸೆ 2012ರಲ್ಲಿ ತಮ್ಮ ಭಾರತ ಪ್ರವಾಸದ ಸಂದರ್ಭದಲ್ಲಿ ನೆಟ್ಟರು ಎಂದು ಹೇಳಲಾಗುತ್ತದೆ. ಈ ಮರದ ಸೆಕ್ಯೂರಿಟಿಗೆ ಸರ್ಕಾರದಿಂದ ಝಡ್ ಪ್ಲಸ್ ಸೆಕ್ಯೂರಿಟಿಯನ್ನು ಒದಗಿಸಲಾಗಿದೆ. ದಿನದ 24 ಗಂಟೆಯೂ ಈ ಮರವನ್ನು ಕಾಯಲಾಗುತ್ತಿದೆ.

ಇದನ್ನೂ ಓದಿ: 10ನೇ ತರಗತಿ ಪಾಸಾದ ಈ ಮಹಿಳೆ ಅಮೇಜಾನ್‌ನಿಂದ ಲಕ್ಷ ಲಕ್ಷ ಸಂಪಾದನೆ!

ಮರದ ಸುರಕ್ಷತೆಗೆ ಸರ್ಕಾರದಿಂದ ವಾರ್ಷಿಕ ₹15 ಲಕ್ಷ ವೆಚ್ಚ:  ಇನ್ನು ಈ ಮರ ತುಂಬಾ ಅಮೂಲ್ಯವಾದುದರಿಂದ ಮಧ್ಯಪ್ರದೇಶ ಸರ್ಕಾರ ಇದರ ಸುರಕ್ಷತೆಗಾಗಿ ವಾರ್ಷಿಕ ಸುಮಾರು 12 ರಿಂದ 15 ಲಕ್ಷ ರೂಪಾಯಿ ಖರ್ಚು ಮಾಡುತ್ತದೆ. ಈ ಮರ 100 ಎಕರೆ ವಿಸ್ತೀರ್ಣದ ಬೆಟ್ಟದ ಮೇಲೆ 15 ಅಡಿ ಎತ್ತರದ ಕಬ್ಬಿಣದ ಬೇಲಿಗಳ ಒಳಗೆ ಇದೆ ಎಂದು ಹೇಳಲಾಗುತ್ತದೆ. ಇದನ್ನು ಬೋಧಿ ವೃಕ್ಷ ಎಂದು ಕರೆಯುತ್ತಾರೆ.

ಬೋಧಿ ವೃಕ್ಷದ ಸುರಕ್ಷತೆ ಡಿಎಂ ಜವಾಬ್ದಾರಿ:  ಮಧ್ಯ ಪ್ರದೇಶದಲ್ಲಿರುವ ಬೋಧಿ ವೃಕ್ಷದ ಮೇಲ್ವಿಚಾರಣೆಯನ್ನು ಡಿಎಂ (ಜಿಲ್ಲೆಯ ಅಧಿಕಾರಿ) ಸ್ವತಃ ಮಾಡುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಈ ಮರಕ್ಕೆ ನೀರುಣಿಸಲು ಪ್ರತ್ಯೇಕ ನೀರಾವರಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಕೃಷಿ ಇಲಾಖೆಯ ಅಧಿಕಾರಿಗಳು ಸಹ ಸಮಯ ಸಮಯಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿಗೆ ತಲುಪಲು ವಿದಿಶಾ ಹೆದ್ದಾರಿಯಿಂದ ಬೆಟ್ಟದವರೆಗೆ ಪಕ್ಕಾ ರಸ್ತೆ ನಿರ್ಮಿಸಲಾಗಿದೆ. ಇದರಿಂದ ಪ್ರವಾಸಿಗರು ಸುಲಭವಾಗಿ ಇಲ್ಲಿಗೆ ತಲುಪಬಹುದು. ಇದೊಂದು ಪ್ರವಾಸಿ ತಾಣವಾಗಿಯೂ ಪ್ರಸಿದ್ಧಿಯಾಗಿದೆ

ಭಗವಾನ್ ಬುದ್ಧರಿಗೆ ಜ್ಞಾನೋದಯವಾದ ಮರ: ಭಾರತದಲ್ಲಿ ಬೌದ್ಧ ಧರ್ಮ ಸ್ಥಾಪನೆ ಮಾಡಿ ವಿಶ್ವದಾದ್ಯಂತ ಪ್ರಚಾರ ಮಾಡಿದ ಭಗವಾನ್ ಬುದ್ಧ ಈ ಮರದ ಕೆಳಗೆ ಕುಳಿತು ಪ್ರಾರ್ಥನೆ ಮಾಡಿದ ನಂತರ ಜ್ಞಾನೋದಯವಾಯಿತು ಎಂದು ಹೇಳಲಾಗುತ್ತದೆ. ಆದರೆ, ಇದು ಮೂಲ ಮರವಲ್ಲ. ಈಗಾಗಲೇ ಮೂಲ ಮರವು 1857ರಲ್ಲಿಯೇ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿದೆ ಎಂದು ಹೇಳಲಾಗುತ್ತಿದೆ. ಇದಾದ ನಂತರ ಲಾರ್ಡ್ ಕನ್ನಿಂಗ್ ಹ್ಯಾಮ್ ನೆಟ್ಟಿದ್ದರಾದರೂ ಅದು ಕೂಡ ನಾಶವಾಗಿದೆ. ಇದಾದ ನಂತರ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಷೆ ಅವರು ತಂದು ನೆಟ್ಟಿರುವ ಮರ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಎಲ್ಲೆಲ್ಲೂ ಹಾವಿನ ಕಾಟ, ಮನೆಯಿಂದ ಹೊರಬರಲು ಹೆದರ್ತಿದ್ದಾರೆ ಜನ!

ಶ್ರೀಲಂಕಾಗೆ ಬೋಧಿ ವೃಕ್ಷ ಹೇಗೆ ಹೋಯಿತು?
ಕ್ರಿ.ಪೂ. ಮೂರನೇ ಶತಮಾನದಲ್ಲಿ ಭಾರತದ ಚಕ್ರವರ್ತಿ ಅಶೋಕ ಅವರು ಬೌದ್ಧ ಧರ್ಮದ ಪ್ರಚಾರಕ್ಕಾಗಿ ಸಾಕಷ್ಟು ಪ್ರಯತ್ನಿಸಿದರು ಎಂದು ಇತಿಹಾಸದಲ್ಲಿ ಉಲ್ಲೇಖ ಮಾಡಲಾಗಿದೆ.  ಈ ಸಂದರ್ಭದಲ್ಲಿ ಅವರು ತಮ್ಮ ಮಗ ಮಹೇಂದ್ರ ಮತ್ತು ಮಗಳು ಸಂಘಮಿತ್ರಾಳನ್ನು ಬೌದ್ಧ ಧರ್ಮ ಪ್ರಚಾರಕ್ಕೆ ಶ್ರೀಲಂಕಾಗೆ ಕಳುಹಿಸಿದರು. ಅವರನ್ನು ಶ್ರೀಲಂಕಾಗೆ ಕಳುಹಿಸುವಾಗ ಅವರೊಂದಿಗೆ ಬುದ್ಧನಿಗೆ ಜ್ಞಾನೋದಯವಾಗಿದ್ದ ಬೋಧಿ ವೃಕ್ಷದ ಒಂದು ಕೊಂಬೆಯನ್ನು ಕಳುಹಿಸಿಕೊಟ್ಟಿದ್ದರು. ಇಲ್ಲಿನ ಮೂಲಕ ಬೋಧಿ ವೃಕ್ಷದ ಒಂದು ಕೊಂಬೆಯನ್ನು ಶ್ರೀಲಂಕಾದಲ್ಲಿ ನೆಟ್ಟು ಬೆಳೆಸಿದ್ದರು. ಈಗಲೂ ಶ್ರೀಲಂಕಾದ ದೇಶದ ಅನುರಾಧಪುರದಲ್ಲಿ ಮೂಲ ಬೋಧಿ ವೃಕ್ಷದಿಂದ ಬೆಳೆಯಲಾದ ಮರವನ್ನು ನಾವು ನೋಡಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್