
ನವದೆಹಲಿ (ಆ.20): ಭಾರತ ಮತ್ತು ಚೀನಾ ಸಂಬಂಧ ಸುಧಾರಿಸುತ್ತಿರುವ ಹೊತ್ತಿನಲ್ಲೇ, ಸೋಮವಾರ ಉಭಯ ದೇಶಗಳ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಹಾಗೂ ವಾಂಗ್ ಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತಕ್ಕೆ ಲಾಭದಾಯಕವಾದ ಕೆಲ ಹೆಜ್ಜೆಗಳನ್ನು ಇಡಲಾಗಿದೆ. ಭಾರತ ಬಳಸುವ ರಸಗೊಬ್ಬರದಲ್ಲಿ ಶೇ.30ರಷ್ಟನ್ನು ರಫ್ತು ಮಾಡುವ ಚೀನಾ, ಅವರ ಪೂರೈಕೆಯ ನಿಯಮಗಳನ್ನು ಸರಳಿಸಲು ಒಪ್ಪಿಕೊಂಡಿದೆ. ಸುರಂಗ ಕೊರೆಯುವ ಯಂತ್ರಗಳ ಬೇಡಿಕೆಗೂ ಸ್ಪಂದಿಸಲು ಒಪ್ಪಿಕೊಂಡಿದೆ. ಇದರಿಂದ ಭಾರತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಳ್ಳಲಿವೆ.
ಬಹುತೇಕ ಎಲೆಕ್ಟ್ರಾನಿಕ್ ಉಪಕರ ಣಗಳಲ್ಲಿ ಬಳಸಲಾಗುವ ಉಪಕರಣ ಗಳ ತಯಾರಿಗೆ ಅಗತ್ಯವಾದ ಈ ಅಪರೂಪದ ಖನಿಜಗಳನ್ನು ಪೂರೈಸಲೂ ಚೀನಾ ಒಪ್ಪಿದೆ.
ಸಂಬಂಧ ಸುಧಾರಣೆಯ ಭಾಗವಾಗಿ ಉಭಯ ದೇಶಗಳ ನಡುವಿನ ಗಡಿ ವ್ಯಾಪಾರ ಪುನಾರಂಭ, ಹೂಡಿಕೆ ಹೆಚ್ಚಳದಂತ ಮಹತ್ವದ ನಿರ್ಧಾರಗಳನ್ನು ಭಾರತ-ಚೀನಾ ಕೈಗೊಂಡಿವೆ. ನಿರ್ದಿಷ್ಟ ಕ್ರಮಗಳ ಮೂಲಕ ಪರಸ್ಪರ ವ್ಯಾಪಾರ, ಹೂಡಿಕೆ ಹರಿವು ಸುಗಮಗೊಳಿಸಲು ಒಪ್ಪಿಗೆ ನೀಡಲಾಗಿದೆ. 3 ನಿರ್ದಿಷ್ಟ ವ್ಯಾಪಾರ ಕೇಂದ್ರಗಳ ಮೂಲಕ ಗಡಿ ವ್ಯಾಪಾರವನ್ನು ಪುನಃ ತೆರೆಯಲು ಒಪ್ಪಿಗೆ ಪಡೆಯಲಾಗಿದೆ. ಸ್ನೇಹಪರ ಸಮಾಲೋಚನೆ ಮೂಲಕ ಗಡಿ ಪ್ರದೇಶಗಳಲ್ಲಿ ಶಾಂತಿ ನೆಲೆಸುವಂತೆ ಮಾಡಲು ಜಂಟಿ ಕ್ರಮ ಜಾರಿಗೆ ಉಭಯ ದೇಶಗಳು ಒಪ್ಪಿವೆ. ಚೀನಾ ಮತ್ತು ಭಾರತದ ನಡುವೆ ನೇರ ವಿಮಾನ ಸಂಪರ್ಕವನ್ನು ಆದಷ್ಟು ಬೇಗ ಪುನರಾರಂಭಿಸಲು ಉಭಯ ದೇಶಗಳು ನಿರ್ಧಾರ ಮಾಡಿವೆ. ಸಹಕಾರ ಹೆಚ್ಚಿಸಿ, ಸಮಸ್ಯೆ ಪರಿಹರಿಸಲು ವಿವಿಧ ಸಂವಾದ ಕಾರ್ಯಕ್ರಮ ಪುನರಾರಂಭಿಸಲು ಉಭಯ ದೇಶಗಳಿಂದ ಸಮ್ಮತಿ ಸಿಕ್ಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ