
ನವದೆಹಲಿ(ಜೂ.16): ದೇಶಾದ್ಯಂತ ಕೊರೋನಾ ಅನಾಹುತಗಳು ಸೋಮವಾರ ಕೂಡಾ ಮುಂದುವರೆದಿದ್ದು, ನಿನ್ನೆ ಒಂದೇ ದಿನ 366 ಜನ ಸಾವನ್ನಪ್ಪಿದ್ದು, 10490 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 9911ಕ್ಕೆ ತಲುಪಿದೆ. ಈ ಮೂಲಕ ಅತಿ ಹೆಚ್ಚು ಕೊರೋನಾ ಸೋಂಕಿತರು ಸಾವನ್ನಪ್ಪಿದ ದೇಶಗಳ ಪೈಕಿ 9ರಿಂದ 8ನೇ ಸ್ಥಾನಕ್ಕೆ ಏರಿದೆ. ಮತ್ತೊಂದೆಡೆ ಒಟ್ಟು ಸೋಂಕಿತರ ಸಂಖ್ಯೆ 335626 ಕ್ಕೆ ತಲುಪಿದೆ. ಜೊತೆಗೆ 174315 ರೋಗಿಗಳು ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಸೋಮವಾರ ಮಹಾರಾಷ್ಟ್ರದಲ್ಲಿ 188 ಬಲಿಯಾಗುವುದರೊಂದಿಗೆ ಈ ವ್ಯಾಧಿಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 4128ಕ್ಕೆ ಜಿಗಿದಿದೆ. ದಿಲ್ಲಿಯಲ್ಲಿ ಸೋಮವಾರ 73 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 1400ಕ್ಕೆ ಏರಿಕೆಯಾಗಿದೆ. ಉಳಿದಂತೆ ತಮಿಳುನಾಡಿನಲ್ಲಿ 44, ಗುಜರಾತ್ನಲ್ಲಿ 28, ಒಡಿಶಾದಲ್ಲಿ 14, ಹರ್ಯಾಣದಲ್ಲಿ 12, ಪಶ್ಚಿಮ ಬಂಗಾಳದಲ್ಲಿ 10 ಮಂದಿ ಬಲಿಯಾಗಿದ್ದಾರೆ.
ಮತ್ತೊಂದೆಡೆ, ಮಹಾರಾಷ್ಟ್ರದಲ್ಲಿ 2786,ತಮಿಳುನಾಡಿನಲ್ಲಿ 1843, ದೆಹಲಿಯಲ್ಲಿ 1647, ಗುಜರಾತ್ನಲ್ಲಿ 514, ಉತ್ತರ ಪ್ರದೇಶದಲ್ಲಿ 000, ಪಶ್ಚಿಮ ಬಂಗಾಳದಲ್ಲಿ 407, ಆಂಧ್ರ ಪ್ರದೇಶದಲ್ಲಿ 304 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ