
ನವದೆಹಲಿ(ಜು.30): ಕೊರೋನಾ ಸಂಕಷ್ಟದ ಮಧ್ಯೆ ದೇಶದಲ್ಲಿ 10 ಲಕ್ಷ ಸೋಂಕಿರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಸಂಬಂಧ ಟ್ವೀಟ್ ಮಾಡಿದ್ದು, 10 ಲಕ್ಷ ಜನ ಸೋಂಕಿತರು ಗುಣಮುಖರಾಗಿದ್ದು, ಇದರ ಹಿರಿಮೆ ವೈದ್ಯರು ಹಾಗೂ ಫ್ರಂಟ್ ಲೈನ್ ಆರೋಗ್ಯ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ಟ್ವೀಟ್ನಲ್ಲಿ ತಿಳಿಸಲಾಗಿದೆ.
ಬಡವರಿಗಾಗಿ ಕಚೇರಿಯನ್ನೇ ಕೋವಿಡ್ ಕೇಂದ್ರವಾಗಿಸಿದ!
ಭಾರತದಲ್ಲಿ ಇಲ್ಲಿಯಬರೆಗೂ 10 ಲಕ್ಷ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. ವೈದ್ಯರೂ, ಫ್ರಂಟ್ಲೈನ್ ಕಾರ್ಯಕರ್ತರೂ, ನರ್ಸ್ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ. ಅವರ ನಿಸ್ವಾರ್ಥ ಸೇವೆ, ತ್ಯಾಗವೇ ಇದಕ್ಕೆ ಕಾರಣ ಎಂದು ಟ್ವೀಟ್ ಮಾಡಲಾಗಿದೆ.
ಮರಣ ಪ್ರಮಾಣವೂ ಕಡಿಮೆಯಾಗಿದೆ. ಬೇರೆ ದೇಶಗಳ ಕೊರೋನಾ ಮರಣ ಪ್ರಮಾಣಕ್ಕೆ ಹೋಲಿಸಿದಲ್ಲಿ ಭಾರತದಲ್ಲಿ ಮರಣ ಪ್ರಮಾಣ ಕಡಿಮೆ ಇದೆ. ಜೂನ್ 19ಕ್ಕೆ ಶೇ.3.3 ರಷ್ಟು ಇದ್ದ ಮರಣ ಪ್ರಮಾಣ ಬುಧವಾರ ಜುಲೈ.29ಕ್ಕೆ 2.23ಕ್ಕೆ ಇಳಿದಿದೆ. ಇದೀಗ ಪ್ರತಿ ದಿನ ದೇಶದಲ್ಲಿ 30 ಸಾವಿರ ಜನ ಸೋಂಕಿತರು ಗುಣಮುಖರಾಗುತ್ತಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
ಅತಿಯಾದ ಸ್ಯಾನಿಟೈಸರ್ ಬಳಸುತ್ತೀರಾ? ಎಚ್ಚರ...! ಮತ್ತೊಂದು ಸಮಸ್ಯೆಗೆ ಇದು ದಾರಿ!
ಭಾರತದಲ್ಲಿ ಕಳೆದ 6 ತಿಂಗಳಲ್ಲಿ 16 ಲಕ್ಷ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ನಮ್ಮಲ್ಲಿ ಪ್ರಕರಣ ಇನ್ನಷ್ಟು ಹೆಚ್ಚಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮುಂಬೈ ಮತ್ತು ದೆಹಲಿಯಲ್ಲಿಯೂ ಕೊರೋನಾ ಸಾವಿನ ಸಂಖ್ಯೆ ಇಳಿಕೆಯಾಗಿದೆ. ಕೊರೋನಾ ಸೋಂಕಿತರು ಗುಣಮುಖರಾಗುವ ಪ್ರಮಾಣ ಶೇ.64.51ರಷ್ಟು ಹೆಚ್ಚಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ