59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ!  59 ವರ್ಷದ ಬಳಿಕ ಭಾರತ ನಿರಾಳ!

59 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!

Published : Apr 01, 2026, 02:35 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾ, ನಕ್ಸಲರ ಕೇಂದ್ರೀಯ ಸಮಿತಿ ಮತ್ತು ಕಾರ್ಯಪಡೆ ಬಹುತೇಕ ನಿರ್ನಾಮವಾಗಿದ್ದು, 59 ವರ್ಷಗಳ ಬಳಿಕ ದೇಶ ನಕ್ಸಲ್ ಮುಕ್ತವಾಗಿದೆ ಎಂದು ಲೋಕಸಭೆಯಲ್ಲಿ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಸಾಧನೆ ಎಂದು ಅವರು ಬಣ್ಣಿಸಿದ್ದಾರೆ.

‘ನಕ್ಸಲರ ಕೇಂದ್ರೀಯ ಸಮಿತಿ ಮತ್ತು ನಕ್ಸಲರ ಪ್ರಮುಖ ಕಾರ್ಯಪಡೆ ಬಹುತೇಕ ನಿರ್ನಾಮವಾಗುವುದರೊಂದಿಗೆ 59 ವರ್ಷಗಳ ಬಳಿಕ ದೇಶ ನಕ್ಸಲ್‌ ಮುಕ್ತವಾಗಿ ಹೊರಹೊಮ್ಮಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಹತ್ವದ ಘೋಷಣೆ ಮಾಡಿದ್ದಾರೆ.

ದೇಶವನ್ನು 2026ರ ಮಾ.31ರೊಳಗೆ ನಕ್ಸಲ್ ಮುಕ್ತ ಮಾಡುವ ಮಾಡುವ ಕುರಿತು ಕಳೆದ ವರ್ಷ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಮುನ್ನಾ ದಿನ ಅವರು ಲೋಕಸಭೆಯಲ್ಲಿ ಸೋಮವಾರ ಇಂಥದ್ದೊಂದು ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಜೊತೆಗೆ, ‘ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಸಾಧನೆ’ ಎಂದು ಬಣ್ಣಿಸಿದ್ದಾರೆ.

‘ದಶಕಗಳಿಂದ ನಕ್ಸಲ್ ಹಿಂಸಾಚಾರಕ್ಕೆ ತುತ್ತಾಗಿದ್ದ ಭಾರತ ಕೊನೆಗೂ ಆ ಆತಂಕದಿಂದ ಹೊರಬಂದಿದೆ. ದೇಶದಲ್ಲಿ ನಕ್ಸಲರ ಅತ್ಯಂತ ಭದ್ರ ಎಂಬ ಕುಖ್ಯಾತಿ ಹೊಂದಿದ್ದ ಮತ್ತು ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭದ ಬಳಿಕ ಕೆಂಪು ಉಗ್ರರ ಕೊನೆಯ ಭದ್ರಕೋಟೆಯಾಗಿದ್ದ ಛತ್ತೀಸ್‌ಗಢದ ಬಸ್ತರ್‌ ವಲಯ ಕೂಡಾ ಬಹುತೇಕ ನಕ್ಸಲ್‌ ಮುಕ್ತವಾಗಿದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ನಕ್ಸಲ್ ಮುಕ್ತ:

ದೇಶವನ್ನು ಎಡಪಂಥೀಯ ಉಗ್ರವಾದದಿಂದ ಮುಕ್ತಗೊಳಿಸುವ ಯತ್ನಗಳ ಬಗ್ಗೆ ಸೋಮವಾರ ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್‌ ಶಾ, ‘ಕಾನೂನು ಇಲ್ಲದೆ 12 ರಾಜ್ಯಗಳು ಕೆಂಪು ಕಾರಿಡಾರ್‌ (ನಕ್ಸಲ್‌ ಪ್ರದೇಶ) ಆಗಿದ್ದವು. ಪರಿಣಾಮ ಈ ರಾಜ್ಯಗಳಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಯದೇ 12 ಕೋಟಿ ಜನರು ಯಾವುದೇ ಹಲವು ವರ್ಷ ಬಡತನದಲ್ಲಿ ಬದುಕುತ್ತಿದ್ದರು. ನಕ್ಸಲರ ಕ್ರೌರ್ಯಕ್ಕೆ 5,000 ಭದ್ರತಾ ಸಿಬ್ಬಂದಿ ಸೇರಿದಂತೆ 20,000 ಜನ ಬಲಿಯಾಗಿದ್ದಾರೆ’ ಎಂದು ಅಂಕಿಅಂಶಗಳನ್ನು ನೀಡಿದರು.

ಜತೆಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿ, ‘ನಮ್ಮ ಸರ್ಕಾರವು ಆದಿವಾಸಿಗಳ ಅಭಿವೃದ್ಧಿ ಮಾಡುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಯಾವುದೇ ರೀತಿಯ ಹಿಂಸೆಯನ್ನು ಸಹಿಸುವುದಿಲ್ಲ. ಅದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ. ನಕ್ಸಲ್‌ ಮುಕ್ತ ಭಾರತವೇ ಮೋದಿ ಸರ್ಕಾರದ ಬಹುದೊಡ್ಡ ಸಾಧನೆ ಹಾಗೂ ಇದನ್ನು ಎಲ್ಲಾ ಸಂಶೋಧನಾಕಾರರು ಒಪ್ಪುತ್ತಾರೆ’ ಎಂದು ಶಾ ಹೇಳಿದರು.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more