
ನವದೆಹಲಿ[ಮಾ.15]: ದೇಶಾದ್ಯಂತ 80ಕ್ಕೂ ಹೆಚ್ಚು ಮಂದಿಗೆ ಹರಡಿ, ಇಬ್ಬರನ್ನು ಬಲಿಪಡೆದ ಮಾರಕ ಕೊರೋನಾ ವೈರಸ್ ಅನ್ನು ‘ಸೂಚಿತ ವಿಪತ್ತು’ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ತನ್ಮೂಲಕ ಕೊರೋನಾ ಪೀಡಿತರು ಹಾಗೂ ಅವರ ಕುಟುಂಬಕ್ಕೆ ಆರ್ಥಿಕ ನೆರವು ಸೇರಿದಂತೆ ಇನ್ನಿತರ ನೆರವುಗಳನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೆ, ಕೊರೋನಾ ಪೀಡಿತರ ರಕ್ಷಣೆಗೆ ಅಗತ್ಯವಿರುವ ಹಣಕಾಸು ಸೇರಿದಂತೆ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ತಂಡಗಳು ನಿರ್ವಹಿಸಲಿವೆ.
ಇದರನ್ವಯ ಕೊರೋನಾ ವ್ಯಾಧಿಯಿಂದ ಸಾವನ್ನಪ್ಪಿದ ಕುಟುಂಬಗಳಿಗೆ 4 ಲಕ್ಷ ರು. ಪರಿಹಾರ ನೀಡಲಾಗುತ್ತದೆ. ಅಲ್ಲದೆ, ಕೊರೋನಾಕ್ಕೆ ತುತ್ತಾಗಿ ಪ್ರತ್ಯೇಕ ಶಿಬಿರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ವೈದ್ಯಕೀಯ ನೆರವು, ಆಹಾರ ಪೂರೈಕೆ, ನೀರು, ಬಟ್ಟೆ-ಬರೆಗಳಿಗೆ ಅಗತ್ಯವಿರುವ ಹಣವನ್ನು ಆಯಾ ರಾಜ್ಯ ಸರ್ಕಾರಗಳು ಒದಗಿಸಲಿವೆ.
ಅಲ್ಲದೆ, ದೇಶಾದ್ಯಂತ ಅಗತ್ಯವಿರುವ ಹೆಚ್ಚುವರಿ ಕೊರೋನಾ ಪರೀಕ್ಷಾ ಕೇಂದ್ರಗಳ ಸ್ಥಾಪನೆ, ಪೊಲೀಸರು, ಆರೋಗ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿ ವರ್ಗಕ್ಕೆ ಅಗತ್ಯವಿರುವ ಸುರಕ್ಷತಾ ಪರಿಕರಗಳು, ಥರ್ಮಲ್ ಸ್ಕ್ಯಾನರ್ಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಇತರೆ ಪರಿಕರಗಳ ಖರೀದಿಗೆ ಎಸ್ಡಿಆರ್ಎಫ್ ನಿಧಿಯನ್ನೇ ಸದ್ಬಳಕೆ ಮಾಡಿಕೊಳ್ಳಲಾಗುತ್ತದೆ. ಆದರೆ, ಇದಕ್ಕೆ ಕೇಂದ್ರ ವಿಪತ್ತು ನಿರ್ವಹಣಾ ನಿಧಿಯಿಂದ ಯಾವುದೇ ಹಣ ನೀಡಲಾಗುವುದಿಲ್ಲ. ಜೊತೆಗೆ, ಹೀಗೆ ಬಳಕೆಯಾಗುವ ನಿಧಿಯು ವಾರ್ಷಿಕ ಹಂಚಿಕೆಯ ಶೇ.10ರ ಮಿತಿ ಮೀರಬಾರದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ