
ನವದೆಹಲಿ(ಫೆ26): ಭಾರತದಲ್ಲಿ ಕೊರೋನಾ 2ನೇ ಅಲೆ ಭೀತಿ ಎದುರಾಗಿದೆ. ಮಹಾರಾಷ್ಟ್ರ, ಕೇರಳ ಸೇರಿದಂತೆ 5 ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ಕೈಮೀರುತ್ತಿದೆ. ಇದರಿಂದ ನೆರೆ ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲೂ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಭಾರತೀಯ ವಿಮಾನಯಾನ ಸಚಿವಾಲಯ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ನಿರ್ಬಂಧವನ್ನು ಮಾರ್ಚ್31ರ ವರೆಗೆ ವಿಸ್ತರಿಸಿದೆ.
ಕೆಂಪೇಗೌಡ ಏರ್ಪೋರ್ಟ್ಲ್ಲಿ ನಿಷ್ಕ್ರೀಯ ವಿಮಾನ ತೆರವುಗೊಳಿಸಲು ‘ರಿಕವರಿ ಕಿಟ್’
ವಾಣಿಜ್ಯ ವಿಮಾನಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಆದರೆ ಸರಕು ವಿಮಾನ, ಹಾಗೂ DGCA ಅನುಮೋದಿಸಿದ ನೀಡಿದ ವಿಮಾನಗಳಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವಾಲಯ ಹೇಳಿದೆ.
ಆದರೆ ಕೆಲ ಆಯ್ದ ಮಾರ್ಗಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ಕೆಲ ವಿಮಾನಗಳು ಹಾರಾಟ ನಡೆಸಲು DGCA ಅವಕಾಶ ನೀಡಲಿದೆ. ಕೊರೋನಾ ಕಾರಣ ಮತ್ತೆ ವಿಮಾನಯಾನ ಸೇವೆಗಳು ಸೇರಿದೆತೆ ಹಲವು ಸೇವೆಗಳು ಒಂದರ ಮೇಲೊಂದರಂತೆ ನಿರ್ಬಂಧಕ್ಕೆ ಒಳಪಡುತ್ತಿದೆ. ಮುಂಬೈನ ಅಮರಾವತಿ ಜಿಲ್ಲೆ ಮತ್ತೆ ಲಾಕ್ಡೌನ್ ಆಗಿದೆ.
ಪುಣೆ ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಕೊರೋನಾ ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಹರಸಹಾಸ ಮಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ