2 ತಿಂಗಳಲ್ಲಿ ಸಕ್ರಿಯ ಕೇಸ್‌ ಶೇ.300ರಷ್ಟು ಇಳಿಮುಖ!

Published : Nov 03, 2020, 07:59 AM IST
2 ತಿಂಗಳಲ್ಲಿ ಸಕ್ರಿಯ ಕೇಸ್‌ ಶೇ.300ರಷ್ಟು ಇಳಿಮುಖ!

ಸಾರಾಂಶ

2 ತಿಂಗಳಲ್ಲಿ ಸಕ್ರಿಯ ಕೇಸ್‌ ಶೇ.300ರಷ್ಟುಇಳಿಮುಖ| ಸೆಪ್ಟೆಂಬರಲ್ಲಿ ಶೇ.21 ಇದ್ದ ಸಕ್ರಿಯ ಕೇಸ್‌ ಈಗ ಶೇ.7| ಚೇತರಿಕೆಗೆ ಕರ್ನಾಟಕದ ಕೊಡುಗೆ ಅಪಾರ: ಕೇಂದ್ರ

ನವದೆಹಲಿ(ನ.03): ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ವಿಶ್ವ ದಾಖಲೆ ಬರೆದಿದ್ದ ಭಾರತ ಇದೀಗ ಆ ವ್ಯಾಧಿಯಿಂದ ಚೇತರಿಸಿಕೊಳ್ಳುವ ಹಾದಿಯಲ್ಲಿ ದಾಪುಗಾಲು ಇಡುತ್ತಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಸಕ್ರಿಯ ಸೋಂಕಿತರ ಪ್ರಮಾಣ ಬರೋಬ್ಬರಿ ಶೇ.300ರಷ್ಟುಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ಹೇಳುತ್ತವೆ.

ಕೆಲವೇ ದಿನಗಳ ಹಿಂದಿನವರೆಗೂ ದೇಶದ ಸೋಂಕಿತರ ಸಂಖ್ಯೆಗೆ ಭಾರಿ ಕೊಡುಗೆ ನೀಡುತ್ತಿದ್ದ ಕರ್ನಾಟಕ ಅಗಾಧ ಪ್ರಮಾಣದಲ್ಲಿ ಕೊರೋನಾಪೀಡಿತರು ಚೇತರಿಸಿಕೊಳ್ಳುತ್ತಿರುವ ಬೆಳವಣಿಗೆಗೂ ಸಾಕ್ಷಿಯಾಗಿದೆ ಎಂದು ಸರ್ಕಾರ ತಿಳಿಸಿದೆ.

ದೇಶದಲ್ಲಿ ಸೋಮವಾರ ಬೆಳಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ 53,285 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ವೈರಸ್‌ ಸೋಂಕು ಗೆದ್ದವರ ಒಟ್ಟಾರೆ ಸಂಖ್ಯೆ 75,44,798ಕ್ಕೇರಿದೆ. ಹೀಗಾಗಿ ಚೇತರಿಕೆ ಪ್ರಮಾಣ ಶೇ.91.68ಕ್ಕೆ ಹೆಚ್ಚಳವಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ 5,61,908ರಷ್ಟಿದೆ. ಸತತ 4ನೇ ದಿನವೂ 6 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಸೋಂಕಿತರು ಇದ್ದಾರೆ. ಈ ಪ್ರಮಾಣ ಒಟ್ಟಾರೆ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಶೇ.6.83 ಮಾತ್ರ. ಸೆಪ್ಟೆಂಬರ್‌ನಲ್ಲಿ ಇದು ಶೇ.21.16ರಷ್ಟಿತ್ತು. ಅದಕ್ಕೆ ಹೋಲಿಸಿದರೆ ಎರಡೇ ತಿಂಗಳಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಶೇ.300ರಷ್ಟುಕಡಿಮೆಯಾಗಿದೆ ಎಂದು ಸರ್ಕಾರ ತಿಳಿಸಿದೆ.

ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ ಶೇ.78ರಷ್ಟುಮಂದಿ 10 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಕರ್ನಾಟಕ ಹಾಗೂ ಕೇರಳದಲ್ಲಿ ಸೋಮವಾರ 8 ಸಾವಿರಕ್ಕೂ ಅಧಿಕ ಮಂದಿ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆಗೆ ಭಾರಿ ಕೊಡುಗೆ ನೀಡಿವೆ ಎಂದು ಹೇಳಿದೆ.

ದೇಶದಲ್ಲಿ 45,231 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಶೇ.80ರಷ್ಟುಸೋಂಕು 10 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿದೆ. ಅದರಲ್ಲೂ ಕೇರಳ 7025 ಸೋಂಕಿನೊಂದಿಗೆ ಪ್ರಥಮ ಸ್ಥಾನದಲ್ಲಿದ್ದರೆ, ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ 5000ಕ್ಕೂ ಹೆಚ್ಚು ಪ್ರಕರಣಗಳು ಒಂದೇ ದಿನ ದಾಖಲಾಗಿವೆ. ದೇಶದಲ್ಲಿ ಒಟ್ಟಾರೆ 496 ಮಂದಿ ಸೋಮವಾರ ಸಾವಿಗೀಡಾಗಿದ್ದಾರೆ ಎಂದು ವಿವರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು