ಭಾರತ ಈಗಾಗಲೇ ಹಿಂದೂ ರಾಷ್ಟ್ರ: ಆರೆಸ್ಸೆಸ್ ಪ್ರತಿಪಾದನೆ

Published : Mar 15, 2023, 05:46 AM IST
ಭಾರತ ಈಗಾಗಲೇ ಹಿಂದೂ ರಾಷ್ಟ್ರ: ಆರೆಸ್ಸೆಸ್ ಪ್ರತಿಪಾದನೆ

ಸಾರಾಂಶ

ಸಾಂಸ್ಕೃತಿಕ ಪರಿಕಲ್ಪನೆಯಲ್ಲಿ ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದ್ದು, ಇದನ್ನು ಸಂವಿಧಾನದ ಮೂಲಕ ರುಜುವಾತು ಮಾಡುವ ಅವಶ್ಯಕತೆ ಇಲ್ಲ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಹೇಳಿದ್ದಾರೆ.

ಸಮಲ್ಖಾ (ಹರಾರ‍ಯಣ): ‘ಸಾಂಸ್ಕೃತಿಕ ಪರಿಕಲ್ಪನೆಯಲ್ಲಿ ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದ್ದು, ಇದನ್ನು ಸಂವಿಧಾನದ ಮೂಲಕ ರುಜುವಾತು ಮಾಡುವ ಅವಶ್ಯಕತೆ ಇಲ್ಲ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಹೇಳಿದ್ದಾರೆ.

ಇಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ನ 3 ದಿನಗಳ ಸಮಾವೇಶದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಾರತ ಹಿಂದೂ ರಾಷ್ಟ್ರ ಎಂಬುದನ್ನು ನಾವು ಕಳೆದ 100 ವರ್ಷಗಳ ಹಿಂದೆಯೇ ಒಪ್ಪಿಕೊಂಡಿದ್ದೇವೆ. ಇದು ಸಾಂಸ್ಕೃತಿಕ ಪರಿಕಲ್ಪನೆಯಾಗಿದೆ’ ಎಂದರು.

‘ರಾಜ್ಯ ಮತ್ತು ರಾಷ್ಟ್ರ ಎಂಬ ಪರಿಕಲ್ಪನೆಗಳು ಬೇರೆಬೇರೆಯಾಗಿವೆ. ರಾಜ್ಯ ಎಂಬುದು ಸಂವಿಧಾನದಿಂದ ಹುಟ್ಟಿಕೊಂಡಿದ್ದು. ಆದರೆ ದೇಶ ಎಂಬುದು ಸಾಂಸ್ಕೃತಿಕ ಪರಿಕಲ್ಪನೆಯಿಂದ ಹುಟ್ಟಿಕೊಂಡಿದ್ದು. ಹಾಗಾಗಿ ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ಹಾಗಾಗಿ ಭಾರತವನ್ನು ಹಿಂದೂ ರಾಷ್ಟ್ರ ಮಾಡುವತ್ತ ಕೆಲಸ ಮಾಡಬೇಕಿಲ್ಲ’ ಎಂದು ಅವರು ಹೇಳಿದರು.

ಸಲಿಂಗ ವಿವಾಹಕ್ಕೆ ವಿರೋಧ:

ಇದೇ ವೇಳೆ ಸಲಿಂಗ ವಿವಾಹದ ವಿರುದ್ಧ ಕೇಂದ್ರ ಸರ್ಕಾರದ ವಾದವನ್ನು ಒಪ್ಪಿಕೊಳ್ಳುವುದಾಗಿ ಹೇಳಿದ ಹೊಸಬಾಳೆ, ‘ಮದುವೆಗಳು ಯಾವಾಗಲೂ ವಿರುದ್ಧ ಲಿಂಗಗಳ ನಡುವೆಯೇ ನಡೆಯಬೇಕು’ ಎಂದರು.

ಆರೆಸ್ಸೆಸ್‌ ಕಾರ್ಯಕ್ರಮಗಳಲ್ಲಿ ಸ್ತ್ರೀಯರ ಸಕ್ರಿಯ ಭಾಗವಹಿಸುವಿಕೆ ಹೆಚ್ಚಿಸಲು ಚರ್ಚೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ನಡೆಸುವ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕ್ರಮಗಳನ್ನು ಕೈಗೊಳ್ಳಲು ಈ ಬಾರಿಯ ವಾರ್ಷಿಕ ಸಭೆಯಲ್ಲಿ ಚರ್ಚೆ ನಡೆಸಲು ಸಂಘ ನಿರ್ಧರಿಸಿದೆ. ಆರ್‌ಎಸ್‌ಎಸ್‌ನ ವಾರ್ಷಿಕ 3 ದಿನಗಳ ಸಭೆ ಭಾನುವಾರದಿಂದ ಆರಂಭಗೊಂಡಿದ್ದು, ಈ ಸಭೆಯಲ್ಲಿ ಮುಂಬರುವ ವರ್ಷದಲ್ಲಿ ಆರ್‌ಎಸ್‌ಎಸ್‌ ಮಾಡಬೇಕಾಗಿರುವ ಕೆಲಸದ ಕುರಿತು ಯೋಜನೆ ತಯಾರಿಸಲಾಗುತ್ತದೆ ಎಂದು ಜಂಟಿ ಪ್ರಧಾನ ಕಾರ್ಯದರ್ಶಿ ಮನ್‌ಮೋಹನ್‌ ವೈದ್ಯ ತಿಳಿಸಿದ್ದಾರೆ. ಅಲ್ಲದೇ ದೇಶದ ವಿವಿಧೆಡೆ ಇರುವ ಶಾಖಾ ಸಂಖ್ಯೆಗಳನ್ನು ಹೆಚ್ಚಿಸಲು ಹಾಗೂ 7.25 ಲಕ್ಷ ಜನರನ್ನು ಆರ್‌ಎಸ್‌ಎಸ್‌ಗೆ ಸೇರುವಂತೆ ಮಾಡುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ