ಬಂದವರಿಗೆಲ್ಲ ಆಶ್ರಯ ನೀಡಲು ಭಾರತ ಧರ್ಮ ಶಾಲೆಯಲ್ಲ : ಸುಪ್ರೀಂಕೋರ್ಟ್

Published : May 20, 2025, 07:46 AM IST
ಬಂದವರಿಗೆಲ್ಲ ಆಶ್ರಯ ನೀಡಲು ಭಾರತ ಧರ್ಮ ಶಾಲೆಯಲ್ಲ : ಸುಪ್ರೀಂಕೋರ್ಟ್

ಸಾರಾಂಶ

ಜೈಲು ಶಿಕ್ಷೆ ಅನುಭವಿಸಿದ ನಂತರ ಭಾರತದಲ್ಲಿ ಆಶ್ರಯ ಕೋರಿದ್ದ ಶ್ರೀಲಂಕಾ ಪ್ರಜೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಭಾರತವು ಪ್ರಪಂಚದಾದ್ಯಂತ ಇರುವ ನಿರಾಶ್ರಿತರಿಗೆ ಆಶ್ರಯ ನೀಡಲು ಇರುವ ಧರ್ಮಶಾಲೆಯಲ್ಲ ಎಂದು ಕೋರ್ಟ್ ಹೇಳಿದೆ.

ನವದೆಹಲಿ: ಜೈಲುಶಿಕ್ಷೆ ಅನುಭವಿಸಿದ ನಂತರ ತನ್ನ ಗಡೀಪಾರು ಪ್ರಶ್ನಿಸಿ ಭಾರತದಲ್ಲೇ ಆಶ್ರಯ ಕೋರಿದ್ದ ಶ್ರೀಲಂಕಾ ಪ್ರಜೆಯೊಬ್ಬನ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ. ಅಲ್ಲದೆ, ಭಾರತವು ಪ್ರಪಂಚದಾದ್ಯಂತ ಇರುವ ನಿರಾಶ್ರಿತರಿಗೆ ಆಶ್ರಯ ನೀಡಲು ಇರುವ ಧರ್ಮಶಾಲೆಯಲ್ಲ ಎಂದು ಕಟುವಾಗಿ ನುಡಿದಿದೆ.

ಶ್ರೀಲಂಕಾ ಪ್ರಜೆಯಾಗಿರುವ ಅರ್ಜಿದಾರ, ಲಂಕೆಯ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಸಂಘಟನೆಯೊಂದಿಗೆ ಗುರುತಿಸಿಕೊಂಡು 2015ರಲ್ಲಿ ಭಾರತದಲ್ಲಿ ಬಂಧನಕ್ಕೊಳಗಾಗಿದ್ದ. 2018ರಲ್ಲಿ ವಿಚಾರಣಾ ನ್ಯಾಯಾಲಯವು ಆತನನ್ನು ದೋಷಿ ಎಂದು ಘೋಷಿಸಿ 10 ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. 2022ರಲ್ಲಿ, ಮದ್ರಾಸ್ ಹೈಕೋರ್ಟ್ ಶಿಕ್ಷೆಯನ್ನು 7 ವರ್ಷಗಳಿಗೆ ಕಡಿತಗೊಳಿಸಿ, ಶಿಕ್ಷೆ ಮುಗಿದ ತಕ್ಷಣ ದೇಶ ತೊರೆಯುವಂತೆ ಆದೇಶಿಸಿತ್ತು. ಆದರೆ ಶಿಕ್ಷೆ ಮುಗಿದ ಬಳಿಕ, ಶ್ರೀಲಂಕಾದಲ್ಲಿ ತನಗೆ ಜೀವ ಬೆದರಿಕೆ ಇದೆ ಎಂಬ ನೆಪವೊಡ್ಡಿ ಭಾರತ ತೊರೆಯಲು ನಿರಾಕರಿಸಿದ್ದ.

ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ, ‘ನಾವು ಭಾರತದಲ್ಲಿರುವ 140 ಕೋಟಿ ಜನಸಂಖ್ಯೆಯೊಂದಿಗೆ ಕಷ್ಟಪಡುತ್ತಿದ್ದೇವೆ. ಇದು ಎಲ್ಲೆಡೆಯಿಂದ ಬರುವ ವಿದೇಶಿ ಪ್ರಜೆಗಳಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ. ಇಲ್ಲಿ ನೆಲೆಸಲು ನಿಮಗೆ ಯಾವ ಹಕ್ಕಿದೆ?’ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.

ಏನಿದು ಪ್ರಕರಣ?

  • ಎಲ್‌ಟಿಟಿಇ ನಂಟಿನ ಹಿನ್ನೆಲೆ ಲಂಕಾ ಪ್ರಜೆಗೆ 2015ರಲ್ಲಿ 10 ವರ್ಷ ಜೈಲು
  • 2022ರಲ್ಲಿ ಈತನ ಶಿಕ್ಷೆ 7 ವರ್ಷಕ್ಕೆ ಇಳಿಸಿ ಮದ್ರಾಸ್‌ ಹೈಕೋರ್ಟ್‌ ಆದೇಶ
  • ಬಿಡುಗಡೆ ಬಳಿಕ ತಕ್ಷಣ ದೇಶ ತೊರೆಯುವಂತೆ ಆದೇಶಿಸಿದ್ದ ನ್ಯಾಯಾಲಯ
  • ಆದರೆ ಲಂಕಾದಲ್ಲಿ ಜೀವ ಬೆದರಿಕೆ ಎಂದು ದೇಶ ತೊರೆಯಲು ಆತನ ನಕಾರ
  • ಭಾರತದಲ್ಲೇ ಉಳಿಯಲು ಅವಕಾಶ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ
  • ವಿಚಾರಣೆ ವೇಳೆ ನಾವೇ 140 ಕೋಟಿ ಜನಸಂಖ್ಯೆಯೊಂದಿಗೆ ಕಷ್ಟದಲ್ಲಿದ್ದೇವೆ
  • ವಿದೇಶಿಯರಿಗೆ ಆಶ್ರಯ ನೀಡಲು ಭಾರತ ಧರ್ಮಶಾಲೆಯಲ್ಲ ಎಂದು ಅರ್ಜಿ ವಜಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..