
ನವದೆಹಲಿ[ಜ.19]: ಶ್ವಾಸಕೋಶದ ತೊಂದರೆಗೆ ಕಾರಣವಾಗುವ ಕರೋನಾವೈರಸ್ ಎಂಬ ಮಾರಕ ವೈರಾಣು ಚೀನಾದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಚೀನಾಗೆ ತೆರಳುವ ಭಾರತೀಯ ಪ್ರವಾಸಿಗರು ಎಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಹೆಚ್ಚೆಚ್ಚು ಮಕ್ಕಳ ಹಡೆಯಿರಿ ಅಂದ್ರೂ ಇಲ್ಲಿ ಫಲವಿಲ್ಲ, ವೃದ್ಧರ ಸಂಖ್ಯೆ ಹೆಚ್ಚಳ ಭೀತಿ!
ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಆರೋಗ್ಯ ಇಲಾಖೆ ಈ ಬಗ್ಗೆ ಸಲಹಾ ಸೂಚಿಯನ್ನು ಬಿಡುಗಡೆ ಮಾಡಿದ್ದು, ಚೀನಾಕ್ಕೆ ಭೇಟಿ ನೀಡಿದಾಗ ಅಲ್ಲಿನ ಜಾನುವಾರು ವಧಾ ಸ್ಥಳಕ್ಕೆ ಹೋಗಬೇಡಿ, ಹಸಿ ಹಾಗೂ ಅರೆ ಬೇಯಿಸಿದ ಮಾಂಸ ತಿನ್ನಬೇಡಿ, ಕೆಮ್ಮುವಾಗ ಮುಖ ಮುಚ್ಚಿಕೊಳ್ಳಿ, ನೆಗಡಿ, ಕೆಮ್ಮು ಸಮಸ್ಯೆ ಇದ್ದವರಿಂದ ಅಂತರ ಕಾಯ್ದುಕೊಳ್ಳಿ ಎಂದು ಎಚ್ಚರಿಕೆ ನೀಡಿದೆ.
ಅಲ್ಲದೆ ಮುಖ ಗವಸು ಧರಿಸಿಯೇ ಪ್ರಯಾಣಿಸಿ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ