ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ರೀತಿಯಲ್ಲೇ ದೆಹಲಿಯ ಪಂಚತಾರಾ ಹೊಟೆಲ್ಗಳಾದ ಜೆಡಬ್ಲ್ಯೂ ಮ್ಯಾರಿಯಟ್ ಮತ್ತು ಅಂದಾಜ್ನಲ್ಲಿ ಕಳಪೆ ಆಹಾರ ಮತ್ತು ವ್ಯವಸ್ಥೆ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆಹಾರ ನಿಯಂತ್ರಕ ಎಫ್ಎಸ್ಎಸ್ಎಐ ನೋಟಿಸ್ ಜಾರಿ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ, ಬ್ರಿಕ್ಸ್ ಸಭೆಗೆಂದು ಆಗಮಿಸುವ ವಿದೇಶಿ ಗಣ್ಯರು ಉಳಿದುಕೊಳ್ಳುವುದು ಈ ಎರಡು ಹೊಟೆಲ್ಗಳಲ್ಲಿ.
ಪರಿಶೀಲನೆ ವೇಳೆ ಈ ಎರಡೂ ಹೊಟೆಲ್ಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಗಂಭೀರ ಕೊರತೆಗಳು ಕಂಡುಬಂದಿವೆ. ಕೀಟ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳದ ಕಾರಣ ಜಿರಳೆ, ನೊಣ, ಸೊಳ್ಳೆ, ಜೇಡದ ಬಲೆ ಇತ್ಯಾದಿಗಳು ಫ್ರೀಜರ್, ಹಿಟ್ಟು ರುಬ್ಬುವ ಸ್ಥಳದಲ್ಲಿ ಪತ್ತೆಯಾಗಿವೆ. ಪಾನೀಯಗಳನ್ನು ತುಂಬಿಸುವಲ್ಲಿ ಗುಟ್ಕಾ ಪ್ಯಾಕೆಟ್ಗಳು ಕಂಡುಬಂದಿವೆ. ಇನ್ನೊಂದೆಡೆ ಸರಿಯಾಗಿ ತೊಳೆಯದ ಪಾತ್ರೆಗಳು, ಕಲುಷಿತ ನೀರು, ಕೊಳೆಯುತ್ತಿರುವ ಟೊಮ್ಯಾಟೊ, ಬೂಸ್ಟ್ ಬಂದಿರುವ ಆ್ಯಪಲ್, ಸಸ್ಯಾಹಾರಿ ಮತ್ತು ಮಾಂಸಾಹಾರಿ ಪದಾರ್ಥಗಳನ್ನು ಒಂದೆಡೆ ಇಟ್ಟಿರುವುದು ಕೂಡ ಪತ್ತೆ ಆಗಿದೆ. ಪನೀರ್, ಖೋಯಾ, ಚನ್ನಾ ಮಸಾಲಾ, ಮೆಣಸಿನ ಪ್ಯಾಕೆಟ್ಗಳ ಮೇಲೆ ಅವುಗಳಿಗೆ ಸಂಬಂಧಿಸಿದ ವಿವರಗಳನ್ನು ಬರೆಯಲಾಗಿರಲಿಲ್ಲ. 87 ಕೆ.ಜಿ. ಅವಧಿ ಮುಗಿದ ಸಿಹಿತಿನಿಸು, ಕೇಕ್, ಬ್ರೆಡ್ ಕೂಡ ದೊರಕಿದೆ.
10:13 PM (IST) Aug 27
09:37 PM (IST) Aug 27
ಝೀ ಗ್ರೂಪ್ ಸಂಸ್ಥಾಪಕ ಸುಭಾಷ್ ಚಂದ್ರ ಅವರ ವೈಯಕ್ತಿಕ ದಿವಾಳಿತನ ಪ್ರಕರಣದಲ್ಲಿ, ₹22,000 ಕೋಟಿಗೂ ಅಧಿಕ ಸಾಲಕ್ಕೆ ಪ್ರತಿಯಾಗಿ ಕೇವಲ ₹6.5 ಕೋಟಿ ಪಾವತಿಸುವ ಯೋಜನೆಗೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಅನುಮೋದನೆ ನೀಡಿದೆ. ಈ ಯೋಜನೆಯಡಿ ಸಾಲದಾತರು ಶೇ. 99.97ರಷ್ಟು ನಷ್ಟ ಅನುಭವಿಸಲಿದ್ದು, ಸಾಲದಾತರ 'ವಾಣಿಜ್ಯ ಬುದ್ಧಿವಂತಿಕೆ' ಮತ್ತು ಚಂದ್ರರ ಆಸ್ತಿ ಮೌಲ್ಯದ ಕೊರತೆಯನ್ನು ಆಧರಿಸಿ ನ್ಯಾಯಮಂಡಳಿ ಈ ತೀರ್ಪು ನೀಡಿದೆ.
09:35 PM (IST) Aug 27
ಸಾವಿ ಸಿಧು ಅವರ ಬದುಕು ಅನಿರೀಕ್ಷಿತ ತಿರುವು ಕಂಡಿದೆ. ವೈಯಕ್ತಿಕ ನಷ್ಟಗಳು, ಆರೋಗ್ಯ ಸಮಸ್ಯೆಗಳು ಮತ್ತು ಆರ್ಥಿಕ ಸಂಕಷ್ಟದ ಬಳಿಕ ಅವರು ಮುಂಬೈ ಅಪಾರ್ಟ್ಮೆಂಟ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದ ಕಥೆ ಇದೀಗ ಮತ್ತೊಮ್ಮೆ ಗಮನ ಸೆಳೆಯುತ್ತಿದೆ.
09:02 PM (IST) Aug 27
ಶ್ರೀಲಂಕಾ ಎದುರಿನ ಎರಡನೇ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡಿದೆ. ಇದು ಟೀಂ ಇಂಡಿಯಾಗೆ ದೊಡ್ಡ ಆಘಾತ ತಂದಿದೆ. WTC ಫೈನಲ್ ಎದುರು ನೋಡ್ತಿದ್ದ ಭಾರತ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ.
08:59 PM (IST) Aug 27
ಭಾರತೀಯ ರೈಲ್ವೆಯು ರೈಲ್ವೆ ನಿಲ್ದಾಣ, ರೈಲು ಮತ್ತು ಆವರಣದಲ್ಲಿ ನೈರ್ಮಲ್ಯ ನಿಯಮಗಳನ್ನು ಬಿಗಿಗೊಳಿಸಿದೆ. ಹೊಸ ತಿದ್ದುಪಡಿಯ ಪ್ರಕಾರ, ಗಲೀಜು ಮಾಡುವುದು, ಉಗುಳುವುದು ಸೇರಿದಂತೆ ಹಲವು ಕೃತ್ಯಗಳಿಗೆ ವಿಧಿಸುವ ದಂಡವನ್ನು ₹500 ರಿಂದ ₹1000 ಕ್ಕೆ ಹೆಚ್ಚಿಸಲಾಗಿದೆ.
08:45 PM (IST) Aug 27
ಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಸನಿಹ ಬಂದು ಡ್ರಾ ಮಾಡಿಕೊಂಡಿದ್ದಕ್ಕೆ ಭಾರತೀಯ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಟೀಮ್ ಇಂಡಿಯಾ ನಾಯಕ ಗಿಲ್ ಮಾತ್ರ ಪಂದ್ಯದ ಫಲಿತಾಂಶವನ್ನು ಸಕಾರಾತ್ಮಕವಾಗಿ ನೋಡಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಅವರು ಅಂತಿಮವಾಗಿ ಇಂದು ಟೆಸ್ಟ್ ಕ್ರಿಕೆಟ್ ಗೆದ್ದಿದೆ ಎಂದು ಬಣ್ಣಿಸಿದ್ದಾರೆ.
08:02 PM (IST) Aug 27
07:28 PM (IST) Aug 27
07:28 PM (IST) Aug 27
ನೀಟ್ ಪ್ರತಿಭಟನೆಯಿಂದ ಗಮನ ಸೆಳೆದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ರಾಜಕೀಯ ಪಕ್ಷವಾಗಿ ಚುನಾವಣೆಗೆ ಸ್ಪರ್ಧಿಸಿದರೆ ಹೆಚ್ಚಿನ ಜನ ಬೆಂಬಲಿಸುವುದಿಲ್ಲ ಎಂದು 'ಮೂಡ್ ಆಫ್ ದಿ ನೇಷನ್' ಸಮೀಕ್ಷೆ ತಿಳಿಸಿದೆ.
07:10 PM (IST) Aug 27
ಇಂಡಿಯಾ ಟುಡೇ ಮತ್ತು ಸಿ-ವೋಟರ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯ ಪ್ರಕಾರ, ಇಂದು ಲೋಕಸಭಾ ಚುನಾವಣೆ ನಡೆದರೆ ಎನ್ಡಿಎ ಮೈತ್ರಿಕೂಟ 326 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಗಳಿಸಲಿದೆ. ಆದಾಗ್ಯೂ, ಕಳೆದ ಜನವರಿ ಸಮೀಕ್ಷೆಗೆ ಹೋಲಿಸಿದರೆ ಎನ್ಡಿಎ 26 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.
06:37 PM (IST) Aug 27
06:28 PM (IST) Aug 27
ಮಾಜಿ ಕೇಂದ್ರ ರೈಲ್ವೈ ಸಚಿವ ಮುಕುಲ್ ರಾಯ್ ಸೊಸೆ ನೇಪಾಳ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಕೈಲಾಸ ಹಾಗೂ ಮಾನಸ ಸರೋವರ ಯಾತ್ರೆಯಲ್ಲಿದ್ದ ಮುಕುಲ್ ರಾಯ್ ಸೊಸೆ ಕುರಿತು ಯಾವುದೇ ಸುಳಿವು ಪತ್ತೆಯಾಗಿಲ್ಲ.
06:03 PM (IST) Aug 27
06:01 PM (IST) Aug 27
ಖ್ಯಾತ ಮಾಡೆಲ್ ಮನೆಗೆ ನುಗ್ಗಿದ ಜಿಮ್ ಟ್ರೈನರ್ ಒಬ್ಬ, ಆಕೆ ಮೇಲೆ ಮನಬಂದಂತೆ ಚಾಕುವಿನಿಂದ ದಾಳಿ ನಡೆಸಿ ಜೀವ ತೆಗೆದು ಪರಾರಿ ಆಗಿದ್ದಾನೆ. ಬೆನ್ನಲ್ಲೇ ಮೃತ ಮಾಡೆಲ್ನ ಸ್ನೇಹಿತ ನೀಡಿದ ಹೇಳಿಕೆ ಬೆಚ್ಚಿ ಬೀಳಿಸುವಂತಿದೆ..
05:34 PM (IST) Aug 27
ಮಾಸ್ ಮಹಾರಾಜ ರವಿತೇಜ ಅಭಿನಯದ ‘ಇರುಮುಡಿ’ ಸಿನಿಮಾ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ನಡುವೆಯೇ ವಿವಾದಕ್ಕೆ ಸಿಲುಕಿದೆ. ಸರ್ಕಾರಿ ಶಾಲೆಗಳು ಮತ್ತು ಶಿಕ್ಷಕರನ್ನು ನಕಾರಾತ್ಮಕವಾಗಿ ಬಿಂಬಿಸಲಾಗಿದೆ ಎಂದು ಆಂಧ್ರಪ್ರದೇಶದ APTF ಹಾಗೂ UTF ಶಿಕ್ಷಕರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
05:04 PM (IST) Aug 27
ಬೆಂಗಳೂರಿನ 'ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ' (NLSIU) ತನ್ನ 34ನೇ ವಾರ್ಷಿಕ ಘಟಿಕೋತ್ಸವವನ್ನು ರದ್ದುಗೊಳಿಸಿದೆ. ಸಿಜೆಐ ಸೂರ್ಯ ಕಾಂತ್ ಮತ್ತು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ಭಾಗವಹಿಸುವಿಕೆಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
05:02 PM (IST) Aug 27
04:39 PM (IST) Aug 27
ಇತ್ತೀಚೆಗಷ್ಟೇ ಭಾರತವು ಬ್ರಿಟೀಷರಿಂದ ಸ್ವಾತಂತ್ರ್ಯವನ್ನು ಪಡೆದುಕೊಂಡು 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಇನ್ನೂರಕ್ಕೂ ಅಧಿಕ ವರ್ಷಗಳ ಕಾಲ ಭಾರತವನ್ನು ಆಳಿದ ಬ್ರಿಟೀಷರಿಗೆ ಈ ಒಂದು ರಾಜ್ಯ ಅವರ ಆಡಳಿತಕ್ಕೆ ಒಳಪಡಲೇಯಿಲ್ಲ. ಯಾವುದದು ರಾಜ್ಯ ನೋಡೋಣ ಬನ್ನಿ.
04:19 PM (IST) Aug 27
04:02 PM (IST) Aug 27
ಜೀ ಗ್ರೂಪ್ ಸಂಸ್ಥಾಪಕ ಸುಭಾಷ್ ಚಂದ್ರ ಅವರ 22,006 ಕೋಟಿ ರೂ. ಸಾಲಕ್ಕೆ ಕೇವಲ 6.5 ಕೋಟಿ ರೂ. ಪಾವತಿಸುವ ಯೋಜನೆಗೆ ರಾಷ್ಟ್ರೀಯ ಕಂಪನಿ ಕಾನೂನು ಮಂಡಳಿ (NCLT) ಅನುಮೋದನೆ ನೀಡಿದೆ. ಈ ನಿರ್ಧಾರದಿಂದ ಸಾಲದಾತರಿಗೆ 99.97% ನಷ್ಟವಾಗಲಿದೆ.
03:33 PM (IST) Aug 27
02:58 PM (IST) Aug 27
ಸಂದೀಪ್ ರೆಡ್ಡಿ ವಂಗಾ ಇತ್ತೀಚೆಗೆ ತಮ್ಮ ಸಹೋದರ ಪ್ರಣಯ್ ರೆಡ್ಡಿ ವಂಗಾ ನಿರ್ಮಿಸಿರುವ 'ರೋಮಾಂಚಕಂ' ಚಿತ್ರದ ಪ್ರಚಾರದ ವೇಳೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದವರು ಸ್ವಾಭಾವಿಕವಾಗಿ ಅವರ ಮುಂಬರುವ ಬಿಗ್ ಬಜೆಟ್ ಸಿನಿಮಾ 'ಸ್ಪಿರಿಟ್' (Spirit) ಬಗ್ಗೆ ಪ್ರಶ್ನೆಗಳ ಸುರಿಮಳೆಗೈದರು.
02:31 PM (IST) Aug 27
01:47 PM (IST) Aug 27
ನೇಪಾಳ ಪ್ರವಾಹ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ ಬಾಲಿವುಡ್ ನಟ ಸೋನು ಸೂದ್ ಸಂತ್ರಸ್ತರಿಗೆ ನೆರವು ಘೋಷಿಸಿದ್ದಾರೆ. ನೀವು ಏಕಾಂಗಿಯಲ್ಲ, ನಿಮ್ಮ ಜೊತೆ ನಾವಿದ್ದೇವೆ ಎಂದು ಎಲ್ಲಾ ರೀತಿ ನೆರವಿನ ಭರವಸೆ ನೀಡಿದ್ದಾರೆ.
01:37 PM (IST) Aug 27
01:25 PM (IST) Aug 27
ಪೆಟ್ರೋಲ್ ಬಂಕ್ ಡೀಲರ್ಗೆ ಒಂದು ಲೀಟರ್ ಪೆಟ್ರೋಲ್ ಅಥವಾ ಡೀಸೆಲ್ ಮಾರಾಟ ಮಾಡಿದರೆ ಎಷ್ಟು ಹಣ ಸಿಗುತ್ತದೆ? ಡೀಲರ್ ಕಮಿಷನ್, ಬಂಕ್ ನಿರ್ವಹಣೆ ವೆಚ್ಚ ಮತ್ತು ಇತರ ಎಲ್ಲಾ ಹೂಡಿಕೆ ಸೇರಿ ಎಷ್ಟು ಲಾಭ ಸಿಗುತ್ತೆ ಎಂದು ತಿಳಿದುಕೊಳ್ಳಲು ಈ ಸ್ಟೋರಿ ಓದಿ.
01:16 PM (IST) Aug 27
12:08 PM (IST) Aug 27
ಎಮ್ಮೆಯೊಂದರ ಮಾಲೀಕತ್ವಕ್ಕಾಗಿ ಇಬ್ಬರ ನಡುವೆ ವಿವಾದ ಉಂಟಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಪೊಲೀಸರು ಎಮ್ಮೆಗೆ ಡಿಎನ್ಎ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ತಾಯಿಯ ಜೀನ್ಸ್ನೊಂದಿಗೆ ಹೋಲಿಕೆ ಮಾಡಿ ನಿಜವಾದ ಮಾಲೀಕರನ್ನು ಪತ್ತೆಹಚ್ಚಲಿದ್ದಾರೆ.
11:55 AM (IST) Aug 27
11:52 AM (IST) Aug 27
ನೇಪಾಳ ಪ್ರವಾಹದಲ್ಲಿ ಇಶಾ ಫೌಂಡೇಶನ್ನ 77 ಯಾತ್ರಿಕರು ನಾಪತ್ತೆಯಾಗಿದ್ದಾರೆ. ಮಾನಸ ಸರೋವರ ಯಾತ್ರೆ ವೇಳೆ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಅದೃಷ್ಟವಶಾತ್ ನಟಿ ಮಾನಸಿ ಅಪಾಯದಿಂದ ಪಾರಾಗಿದ್ದಾರೆ.
10:51 AM (IST) Aug 27
ಹಿರಿಯ ನಟ ಮತ್ತು ನಿರ್ಮಾಪಕ ಜಿವಿ ನಾರಾಯಣ ರಾವು (73) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೆಗಾಸ್ಟಾರ್ ಚಿರಂಜೀವಿಯವರ ಆಪ್ತ ಸ್ನೇಹಿತರಾಗಿದ್ದ ಇವರು, ಸೂಪರ್ಸ್ಟಾರ್ ರಜನಿಕಾಂತ್ ಅವರ ಸಹಪಾಠಿಯಾಗಿದ್ದು, ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
10:36 AM (IST) Aug 27
10:24 AM (IST) Aug 27
ರವಿತೇಜ ನಟನೆಯ 'ಇರುಮುಡಿ' ಸಿನಿಮಾ ಭರ್ಜರಿ ಯಶಸ್ಸು ಗಳಿಸಿದ್ದರೂ, ಈಗ ವಿವಾದಕ್ಕೆ ಸಿಲುಕಿದೆ. ಚಿತ್ರದ ಬಗ್ಗೆ ಆಂಧ್ರಪ್ರದೇಶ ಶಿಕ್ಷಕರ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಶಿವ ನಿರ್ವಾಣ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
09:49 AM (IST) Aug 27
09:14 AM (IST) Aug 27
ಬಾದಾಮಿ, ಗೋಡಂಬಿಯಂತಹ ನಟ್ಸ್ ತರಹನೇ ಸೂರ್ಯಕಾಂತಿ ಬೀಜಗಳು ಕೂಡ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಪ್ರತಿದಿನ ಸೂರ್ಯಕಾಂತಿ ಬೀಜವನ್ನು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
08:53 AM (IST) Aug 27
ಒಂದು ಕಾಲದಲ್ಲಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಅಲೆ ಸೃಷ್ಟಿಸಿದ್ದ ನಟಿ ಶಕೀಲಾ, ತಮ್ಮ ಕೋಟ್ಯಂತರ ರೂಪಾಯಿ ಸಂಪಾದನೆಯನ್ನು ಸ್ವಂತ ಅಕ್ಕನೇ ಕಸಿದುಕೊಂಡಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.
08:48 AM (IST) Aug 27
07:44 AM (IST) Aug 27
07:44 AM (IST) Aug 27
07:43 AM (IST) Aug 27
ಸೆಪ್ಟೆಂಬರ್ 1 ರಿಂದ ಬ್ಯಾಂಕಿಂಗ್, ಎಲ್ಪಿಜಿ ಗ್ಯಾಸ್ ಮತ್ತು ಅಂತರರಾಷ್ಟ್ರೀಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಲವು ಹೊಸ ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ದೈನಂದಿನ ಖರ್ಚು ಮತ್ತು ಉಳಿತಾಯದ ಮೇಲೆ ನೇರ ಪರಿಣಾಮ ಬೀರಲಿವೆ.