LIVE NOW
Published : Apr 01, 2026, 06:49 AM ISTUpdated : Apr 01, 2026, 09:53 AM IST

India Latest News Live: ಇಂದಿನಿಂದ ಗಲ್ಫ್‌ನಲ್ಲಿರುವ ಅಮೆರಿಕದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ - ಇರಾನ್ ಎಚ್ಚರಿಕೆ

ಸಾರಾಂಶ

ಮುಂಬೈ: ಐಪಿಎಲ್‌ನಲ್ಲಿ ಬ್ರಾಡ್‌ಕಾಸ್ಟ್‌ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಬ್ರಿಟನ್‌ನ ಜಾನ್‌ ವಿಲಿಯಮ್‌ ಲಾಂಗ್‌ಫೋರ್ಡ್‌(75) ಮುಂಬೈನ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸೋಮವಾರ ಬೆಳಗ್ಗೆ ಹೋಟೆಲ್‌ನಲ್ಲಿ ಲಾಂಗ್‌ಫೋರ್ಡ್‌ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಹೋಟೆಲ್‌ನವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರೊಳಗೆ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಜಾನ್‌ ಸಾವಿಗೆ ಐಪಿಎಲ್‌ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.

Iran Donald Trump

09:53 AM (IST) Apr 01

ಇಂದಿನಿಂದ ಗಲ್ಫ್‌ನಲ್ಲಿರುವ ಅಮೆರಿಕದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ - ಇರಾನ್ ಎಚ್ಚರಿಕೆ

ತನ್ನ ನಾಯಕರ ಹತ್ಯೆಗೆ ಪ್ರತೀಕಾರವಾಗಿ, ಗಲ್ಫ್‌ನಲ್ಲಿರುವ ಅಮೆರಿಕದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಎಚ್ಚರಿಸಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕವು ಇರಾನ್‌ನ ನೀರು ಶುದ್ಧೀಕರಣ ಘಟಕದ ಮೇಲೆ ದಾಳಿ ನಡೆಸಿದೆ.

Read Full Story

09:21 AM (IST) Apr 01

ಐದೇ ದಿನದಲ್ಲಿ ಬ್ರೈನ್‌ ಟ್ಯೂಮರ್‌ ಮಾಯ ಮಾಡೋ ವಿಧಾನ ಪತ್ತೆ; ಮೂವರ ಮೇಲೆ ಯಶಸ್ವಿ ಪ್ರಯೋಗ

ಗ್ಲಿಯೊಬ್ಲಾಸ್ಟೊಮಾ ಎಂಬ ಅಪಾಯಕಾರಿ ಮೆದುಳಿನ ಕ್ಯಾನ್ಸರ್‌ಗೆ ಕಾರ್-ಟಿ ಎಂಬ ಹೊಸ ಚಿಕಿತ್ಸಾ ವಿಧಾನವು ಆಶಾಕಿರಣ ಮೂಡಿಸಿದೆ. ಮೂವರು ರೋಗಿಗಳ ಮೇಲೆ ನಡೆಸಿದ ಪ್ರಯೋಗದಲ್ಲಿ, ಈ ಚಿಕಿತ್ಸೆಯು ಕೆಲವೇ ದಿನಗಳಲ್ಲಿ ಮೆದುಳಿನ ಗಡ್ಡೆಯನ್ನು ಗಣನೀಯವಾಗಿ ಕಡಿಮೆ ಮಾಡಿದೆ. 

Read Full Story

08:58 AM (IST) Apr 01

ಬಾಲ್ ಟ್ಯಾಂಪರಿಂಗ್ ಪ್ರಕರಣ - ಫಖರ್ ಜಮಾನ್ ಎರಡು ಮ್ಯಾಚ್‌ಗಳಿಗೆ ಬ್ಯಾನ್!

ಪಾಕಿಸ್ತಾನ ಸೂಪರ್‌ ಲೀಗ್‌ನಲ್ಲಿ ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪದ ಮೇಲೆ ಲಾಹೋರ್ ಖಲಂದರ್ಸ್‌ ಆಟಗಾರ ಫಖರ್‌ ಜಮಾನ್‌ಗೆ ಪಿಸಿಬಿ ಎರಡು ಪಂದ್ಯಗಳಿಗೆ ನಿಷೇಧ ಹೇರಿದೆ. ಇದೇ ವೇಳೆ, ಭದ್ರತಾ ನಿಯಮ ಉಲ್ಲಂಘಿಸಿದ್ದಕ್ಕಾಗಿ ತಂಡದ ನಾಯಕ ಶಾಹೀನ್‌ ಅಫ್ರಿದಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

Read Full Story

08:42 AM (IST) Apr 01

ಕಾಲ್ನಡಿಗೆ ಮೂಲಕ ತಿರುಮಲಕ್ಕೆ ಬರುವ ಭಕ್ತಾದಿಗಳಿಗೆ ಸಂತಸದ ಸುದ್ದಿ; ಇನ್ಮುಂದೆ ಇರಲ್ಲ ಜೀವ ಭಯ

ಕಲಿಯುಗದ ವೈಕುಂಠ ತಿರುಮಲ ಶ್ರೀವಾರಿಯ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಪ್ರತಿದಿನ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಇದರಲ್ಲಿ ಕಾಲ್ನಡಿಗೆ ಮೂಲಕ ಏಳು ಬೆಟ್ಟಗಳನ್ನು ಹತ್ತುವವರ ಸಂಖ್ಯೆಯೂ ದೊಡ್ಡದಿದೆ. ಹೀಗೆ ನಡೆದು ಸಾಗುವ ಭಕ್ತರ ಸುರಕ್ಷತೆಗಾಗಿ ಟಿಟಿಡಿ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ.
Read Full Story

08:24 AM (IST) Apr 01

IPL 2026 - ನಿನ್ನೆ ನಡೆದ ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್‌ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಗುಜರಾತ್ ನೀಡಿದ 162 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ಪ್ರಸಿದ್ಧ್ ಕೃಷ್ಣ ಅವರ ಮಾರಕ ಬೌಲಿಂಗ್‌ನಿಂದಾಗಿ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಿತು. ಆದಾಗ್ಯೂ, ಕೂಪರ್ ಕೊನೊಲಿ ಅವರ ಅಜೇಯ 72 ರನ್‌ಗಳ ಏಕಾಂಗಿ ಹೋರಾಟದ ನೆರವಿನಿಂದ ಪಂಜಾಬ್ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.
Read Full Story

More Trending News