LIVE NOW
Published : Mar 01, 2026, 06:29 AM ISTUpdated : Mar 01, 2026, 09:32 AM IST

India Latest News Live: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ದೃಢ; 40 ದಿನ ಶೋಕಾಚರಣೆ, 7 ದಿನ ರಜೆ

ಸಾರಾಂಶ

ದುಬೈ: ಇರಾನ್‌ ಮೇಲೆ ಅಮೆರಿಕ ದಾಳಿ ಹಿನ್ನೆಲೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಿಂದ ತವರಿಗೆ ಮರಳುವ ಆಟಗಾರರಿಗೆ ಪರ್ಯಾಯ ವಿಮಾನ ಮಾರ್ಗಗಳನ್ನು ಯೋಜಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ತಿಳಿಸಿದೆ.

ಈ ಬಗ್ಗೆ ಐಸಿಸಿ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು, ‘ಪ್ರತಿಯೊಬ್ಬರ ಸುರಕ್ಷತೆ ನಮ್ಮ ಆದ್ಯತೆ. ಈಗಾಗಲೇ ನಮ್ಮ ಪ್ರಯಾಣ, ಲಾಜಿಸ್ಟಿಕ್ಸ್ ಮತ್ತು ಭದ್ರತಾ ತಂಡಗಳನ್ನು ಸಜ್ಜುಗೊಳಿಸಿದ್ದೇವೆ. ಎಲ್ಲರೂ ಸುರಕ್ಷಿತವಾಗಿ ಮನೆಗೆ ಮರಳಬಹುದು ಎಂದು ಖಚಿತಪಡಿಸಿಕೊಳ್ಳಲು 24 ಗಂಟೆಯೂ ಕೆಲಸ ಮಾಡುತ್ತಿದ್ದೇವೆ’ ಎಂದಿದೆ. ಅಲ್ಲದೆ ಪಂದ್ಯ ವೀಕ್ಷಣೆಗಾಗಿ ಬೇರೆ ದೇಶಗಳಿಂದ ಪ್ರಯಾಣ ಬೆಳೆಸುವ ಅಭಿಮಾನಿಗಳು ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದೆ.

09:32 AM (IST) Mar 01

ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ದೃಢ; 40 ದಿನ ಶೋಕಾಚರಣೆ, 7 ದಿನ ರಜೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಹತ್ಯೆಯಾಗಿದ್ದಾರೆ. ಈ ದಾಳಿಯಲ್ಲಿ ಅವರ ಕುಟುಂಬ ಮತ್ತು ಹಿರಿಯ ಸೇನಾಧಿಕಾರಿಗಳು ಕೂಡ ಸಾವನ್ನಪ್ಪಿದ್ದು, ದೇಶದಲ್ಲಿ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. 

Read Full Story

08:50 AM (IST) Mar 01

ಸೇತುವೆಗಳೂ ಉಸಿರಾಡುತ್ತವೆ; ಮೇಘಾಲಯದ ಲಿವಿಂಗ್ ರೂಟ್ಸ್ ಬ್ರಿಡ್ಜ್ ಹಿಂದಿನ ಅಚ್ಚರಿಗಳು

ಮೇಘಾಲಯದ ಖಾಸಿ ಮತ್ತು ಜೈಂತಿಯಾ ಬುಡಕಟ್ಟು ಜನಾಂಗದವರು ಜೀವಂತ ಮರದ ಬೇರುಗಳನ್ನು ಬಳಸಿ ಸೇತುವೆಗಳನ್ನು ನಿರ್ಮಿಸುವ ವಿಶಿಷ್ಟ ಪರಂಪರೆಯನ್ನು ಹೊಂದಿದ್ದಾರೆ. ಈ ಜೈವಿಕ ಎಂಜಿನಿಯರಿಂಗ್ ಕಲೆಗೆ ದಶಕಗಳ ಕಾಲ ಶ್ರಮಿಸಿದ ಹ್ಯಾಲಿ ವಾರ್ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Read Full Story

08:41 AM (IST) Mar 01

ಇಂದು ಭಾರತ vs ವಿಂಡೀಸ್‌ ‘ಕ್ವಾರ್ಟರ್‌’ - ಚಿಂತೆ ನಡುವೆಯೂ ಆಟಕ್ಕೆ ಸಜ್ಜಾದ ಟೀಂ ಇಂಡಿಯಾ

ಟಿ20 ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್‌ಇಂಡೀಸ್‌ ಸೆಣಸಾಡಲಿದ್ದು, ಇದು ವರ್ಚುವಲ್‌ ಕ್ವಾರ್ಟರ್‌ ಫೈನಲ್‌ ಆಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಸೆಮಿಫೈನಲ್‌ ಪ್ರವೇಶಿಸಲಿದ್ದು, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. 

Read Full Story

08:02 AM (IST) Mar 01

‘ಭಾರತದ ಮುಕುಟ’ಕ್ಕೆ ಚೊಚ್ಚಲ ರಣಜಿ ಕಿರೀಟ; ಅನುಭವಿಗಳಿದ್ದರೂ ರಾಜ್ಯಕ್ಕೆ ತವರಲ್ಲೇ ಹೀನಾಯ ಸೋಲು

ದೇಸಿ ಕ್ರಿಕೆಟ್‌ನ ರಣಜಿ ಟ್ರೋಫಿ ಫೈನಲ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರ ತಂಡವು ಕರ್ನಾಟಕವನ್ನು ಸೋಲಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದೆ. ಹುಬ್ಬಳ್ಳಿಯಲ್ಲಿ ನಡೆದ ಪಂದ್ಯ ಡ್ರಾಗೊಂಡರೂ, ಮೊದಲ ಇನ್ನಿಂಗ್ಸ್‌ನ ಬೃಹತ್ ಮುನ್ನಡೆಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ತಂಡ ವಿಜಯಶಾಲಿಯಾಯಿತು.
Read Full Story

07:27 AM (IST) Mar 01

ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ!

ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿವೆ. ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. 

Read Full Story

06:51 AM (IST) Mar 01

ಅಯತೊಲ್ಲಾ ಅಲಿ ಖಮೇನಿ ಹತ್ಯೆ? ಡೊನಾಲ್ಡ್ ಟ್ರಂಪ್‌ಗೆ X ಮೂಲಕ ತಿರುಗೇಟು ಕೊಟ್ಟ ಇರಾನ್!

ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂಬ ವದಂತಿಯನ್ನು ಇರಾನ್ ಅಲ್ಲಗಳೆದಿದೆ. ಖಮೇನಿ ಅವರ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಈ ಸುದ್ದಿಗೆ ತಿರುಗೇಟು ನೀಡಿದೆ.

Read Full Story

More Trending News