ದುಬೈ: ಇರಾನ್ ಮೇಲೆ ಅಮೆರಿಕ ದಾಳಿ ಹಿನ್ನೆಲೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನಿಂದ ತವರಿಗೆ ಮರಳುವ ಆಟಗಾರರಿಗೆ ಪರ್ಯಾಯ ವಿಮಾನ ಮಾರ್ಗಗಳನ್ನು ಯೋಜಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ತಿಳಿಸಿದೆ.
ಈ ಬಗ್ಗೆ ಐಸಿಸಿ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು, ‘ಪ್ರತಿಯೊಬ್ಬರ ಸುರಕ್ಷತೆ ನಮ್ಮ ಆದ್ಯತೆ. ಈಗಾಗಲೇ ನಮ್ಮ ಪ್ರಯಾಣ, ಲಾಜಿಸ್ಟಿಕ್ಸ್ ಮತ್ತು ಭದ್ರತಾ ತಂಡಗಳನ್ನು ಸಜ್ಜುಗೊಳಿಸಿದ್ದೇವೆ. ಎಲ್ಲರೂ ಸುರಕ್ಷಿತವಾಗಿ ಮನೆಗೆ ಮರಳಬಹುದು ಎಂದು ಖಚಿತಪಡಿಸಿಕೊಳ್ಳಲು 24 ಗಂಟೆಯೂ ಕೆಲಸ ಮಾಡುತ್ತಿದ್ದೇವೆ’ ಎಂದಿದೆ. ಅಲ್ಲದೆ ಪಂದ್ಯ ವೀಕ್ಷಣೆಗಾಗಿ ಬೇರೆ ದೇಶಗಳಿಂದ ಪ್ರಯಾಣ ಬೆಳೆಸುವ ಅಭಿಮಾನಿಗಳು ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದೆ.
09:32 AM (IST) Mar 01
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಹತ್ಯೆಯಾಗಿದ್ದಾರೆ. ಈ ದಾಳಿಯಲ್ಲಿ ಅವರ ಕುಟುಂಬ ಮತ್ತು ಹಿರಿಯ ಸೇನಾಧಿಕಾರಿಗಳು ಕೂಡ ಸಾವನ್ನಪ್ಪಿದ್ದು, ದೇಶದಲ್ಲಿ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
08:50 AM (IST) Mar 01
ಮೇಘಾಲಯದ ಖಾಸಿ ಮತ್ತು ಜೈಂತಿಯಾ ಬುಡಕಟ್ಟು ಜನಾಂಗದವರು ಜೀವಂತ ಮರದ ಬೇರುಗಳನ್ನು ಬಳಸಿ ಸೇತುವೆಗಳನ್ನು ನಿರ್ಮಿಸುವ ವಿಶಿಷ್ಟ ಪರಂಪರೆಯನ್ನು ಹೊಂದಿದ್ದಾರೆ. ಈ ಜೈವಿಕ ಎಂಜಿನಿಯರಿಂಗ್ ಕಲೆಗೆ ದಶಕಗಳ ಕಾಲ ಶ್ರಮಿಸಿದ ಹ್ಯಾಲಿ ವಾರ್ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
08:41 AM (IST) Mar 01
ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ಇಂಡೀಸ್ ಸೆಣಸಾಡಲಿದ್ದು, ಇದು ವರ್ಚುವಲ್ ಕ್ವಾರ್ಟರ್ ಫೈನಲ್ ಆಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಸೆಮಿಫೈನಲ್ ಪ್ರವೇಶಿಸಲಿದ್ದು, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.
08:02 AM (IST) Mar 01
07:27 AM (IST) Mar 01
ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿವೆ. ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.
06:51 AM (IST) Mar 01
ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂಬ ವದಂತಿಯನ್ನು ಇರಾನ್ ಅಲ್ಲಗಳೆದಿದೆ. ಖಮೇನಿ ಅವರ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಈ ಸುದ್ದಿಗೆ ತಿರುಗೇಟು ನೀಡಿದೆ.