ಹಲ್ದ್ವಾನಿ(ಉತ್ತರಾಖಂಡ): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ್ದರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಇದೇ ಪ್ರಕರಣ ಈಗ ತಿರುಗುಬಾಣವಾಗಿ ಪರಿಣಮಿಸಿದೆ. ಶುದ್ಧೀಕರಣ ನಡೆಸಿದವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದಿದ್ದ ರಾಹುಲ್ ವಿರುದ್ಧವೇ ಉತ್ತರಾಖಂಡ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರಾಹುಲ್ ಅವರು ಈ ಧಾರ್ಮಿಕ ವಿಧಿಗೆ ಜಾತಿಯ ಬಣ್ಣ ಬಳಿದು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಪೂಜೆ ಮಾಡಿದವರನ್ನು ‘ಅಸ್ಪೃಶ್ಯತೆ ಆಚರಿಸುವವರು’ ಎಂದು ಬಿಂಬಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
06:14 AM (IST) Sep 01