LIVE NOW
Published : Dec 11, 2025, 07:01 AM ISTUpdated : Dec 11, 2025, 10:34 PM IST

India Latest News Live: ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?

ಸಾರಾಂಶ

ನವದೆಹಲಿ: ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಹಾಗೂ ಟೆಕ್‌ ದೈತ್ಯ ಮೈಕ್ರೋಸಾಫ್ಟ್‌ ಕಂಪನಿಗಳು ಭಾರತದಲ್ಲಿ ಭಾರೀ ಹೂಡಿಕೆ ಮಾಡಲು ಮುಂದಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಲ್ಲಿ ಭೇಟಿಯಾದ ಮೈಕ್ರೊಸಾಫ್ಟ್‌ ಸಿಇಒ ಸತ್ಯ ನಾದೆಳ್ಲಾ 1.5 ಲಕ್ಷ ಕೋಟಿ ರು. ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಅದರ ಬೆನ್ನಲ್ಲೇ, ಅಮೆಜಾನ್‌ ಕೂಡ 3.1 ಲಕ್ಷ ಕೋಟಿ ರು.ಹೂಡಿಕೆಗೆ ತಯಾರಿ ನಡೆಸುತ್ತಿದೆ. ಎಐ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮುಂದಿನ 4 ವರ್ಷದಲ್ಲಿ 1.5 ಲಕ್ಷ ಕೋಟಿ ರು. ಹೂಡಿಕೆ ಮಾಡಲು ಮುಂದಾಗಿರುವ ಮೈಕ್ರೋಸಾಫ್ಟ್‌, ಇದೇ ವರ್ಷದಲ್ಲಿ 26 ಸಾವಿರ ಕೋಟಿ ರು. ಹೂಡಿಕೆ ಮಾಡಿತ್ತು.

ಪ್ರಸ್ತುತ ಕ್ವಿಕ್‌-ಕಾಮರ್ಸ್‌ ಅಮೆಜಾನ್‌, ದಿನ 5 ವರ್ಷಗಳಲ್ಲಿ ಕ್ಲೌಡ್‌ ಕಂಪ್ಯೂಟಿಂಗ್‌ ಮತ್ತು ಎಐ ಕ್ಷೇತ್ರಕ್ಕೂ ಕಾಲಿಡಲು ಸಿದ್ಧವಾಗುತ್ತಿದೆ. 2030ರ ವೇಳೆಗೆ ಎಐ ಹಾಗೂ ಸರಕುಸಾಗಣೆ ಮೂಲಸೌಕರ್ಯಗಳ ಮೇಲಿನ ಹೂಡಿಕೆಯಿಂದ 10 ಲಕ್ಷ ಉದ್ಯೋಗವನ್ನೂ ಸೃಷ್ಟಿಸುವುದಾಗಿ ಕಂಪನಿ ಹೇಳಿದೆ. 2010ರಿಂದ ಅಮೆಜಾನ್‌ ಭಾರತದಲ್ಲಿ 3.5 ಲಕ್ಷ ಕೋಟಿ ರು. ಹೂಡಿಕೆ ಮಾಡಿದೆ.

10:34 PM (IST) Dec 11

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?

ಈ ರೆಡ್ಮಿ ಮಾಸ್ಟರ್ ಪಿಕ್ಸೆಲ್ ಆವೃತ್ತಿಯು ಮುಂದಿನ ತಿಂಗಳು ಅಂದರೆ ಹೊಸ ವರ್ಷದಲ್ಲಿ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಬಿಡುಗಡೆಯಾದ ನಂತರ ಈ ಫೋನ್ ಯಾವ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುತ್ತದೆ ಮತ್ತು ಈ ಹ್ಯಾಂಡ್‌ಸೆಟ್ ಯಾವ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ ಅನ್ನೋ ವಿವರ ಇಲ್ಲಿದೆ.

 

Read Full Story

10:27 PM (IST) Dec 11

ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ - ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!

ರೈಲ್ವೆ ಇಲಾಖೆಯು 'ರೈಲ್ ಒನ್' ಎಂಬ ಹೊಸ ಆ್ಯಪ್​ ಅನ್ನು ಬಿಡುಗಡೆ ಮಾಡಿದೆ. ಈ ಒಂದೇ ಆ್ಯಪ್​ ಮೂಲಕ ಪ್ರಯಾಣಿಕರು ಟಿಕೆಟ್ ಬುಕ್ಕಿಂಗ್, ರೈಲಿನ ಲೈವ್ ಸ್ಟೇಟಸ್, ಪಿಎನ್‌ಆರ್ ಸ್ಥಿತಿ ಸೇರಿದಂತೆ ಹಲವು ಸೇವೆಗಳನ್ನು ಸುಲಭವಾಗಿ ಪಡೆಯಬಹುದು, ಇದರಿಂದಾಗಿ ಅನೇಕ ಆ್ಯಪ್‌ಗಳನ್ನು ಬಳಸುವ ಕಿರಿಕಿರಿ ತಪ್ಪುತ್ತದೆ.

Read Full Story

10:09 PM (IST) Dec 11

ವಾಟ್ಸಾಪ್ ಬಳಕೆದಾರರೇ ಎಚ್ಚರ - ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!

ವಾಟ್ಸಾಪ್ ನಮ್ಮ ದೈನಂದಿನ ಜೀವನದ ಭಾಗವಾಗಿದ್ದರೂ, ಇದರಲ್ಲಿ ಮಾಡುವ ಕೆಲವು ತಪ್ಪುಗಳು ಗಂಭೀರ ಕಾನೂನು ಪರಿಣಾಮಗಳನ್ನು ಉಂಟುಮಾಡಬಹುದು. ನಕಲಿ ಸುದ್ದಿ ಹರಡುವುದು, ಆಕ್ಷೇಪಾರ್ಹ ಫೋಟೋ/ವೀಡಿಯೊ ಕಳುಹಿಸುವುದು, ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸುವುದು ಸೈಬರ್ ಅಪರಾಧಗಳಾಗಿವೆ.

Read Full Story

10:07 PM (IST) Dec 11

10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ - ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ

ಅಜೆಂಡಾ ಆಜ್ ತಕ್ 2025 ರ ವೇದಿಕೆಯಲ್ಲಿ, ಅಸ್ಸಾಂ ಮುಖ್ಯಮಂತ್ರಿಗಳು ರಾಜ್ಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗಾಗಿ ತಮ್ಮ ಪ್ರಮುಖ ಯೋಜನೆಗಳನ್ನು ವಿವರಿಸಿದರು. ಒಂಬತ್ತನೇ ತರಗತಿಗಿಂತ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ 300,000 ಕ್ಕೂ ಹೆಚ್ಚು ಬೈಸಿಕಲ್‌ಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ.

 

Read Full Story

09:20 PM (IST) Dec 11

ಪ್ರಧಾನಿ ಮೋದಿ, ಅಮಿತ್‌ ಶಾ ಜೊತೆ ರಾಹುಲ್‌ ಗಾಂಧಿ 90 ನಿಮಿಷದ ಅಪರೂಪದ ಸಭೆ, ಚರ್ಚೆ ಆಗಿದ್ದೇನು?

ಎಲ್ಲಾ ನೇಮಕಾತಿಗೆ ರಾಹುಲ್ ಗಾಂಧಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಇದನ್ನು ಒಂದೇ ನೇಮಕಾತಿಗೆ ಸಲ್ಲಿಸಲಾಗಿದೆಯೇ ಅಥವಾ ಬಹು ನೇಮಕಾತಿಗೆ ಸಲ್ಲಿಸಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

 

Read Full Story

08:13 PM (IST) Dec 11

ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?

ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು 'ದೆವ್ವಗಳು' ಮತ್ತು ಅಲೌಕಿಕ ವಿದ್ಯಮಾನಗಳ ಕುರಿತು ಪಿಎಚ್‌ಡಿ ಮಾಡುವ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಿಷಯದ ಬಗ್ಗೆ ಅಧ್ಯಯನ ಮಾಡಲು ವಿದೇಶಿ ವಿಶ್ವವಿದ್ಯಾಲಯವನ್ನು ಪರಿಗಣಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಸಂದರ್ಶನದ ಲಿಂಕ್ ಇಲ್ಲಿದೆ.

Read Full Story

07:45 PM (IST) Dec 11

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ? ಭಾರತ ಹಾಗೂ ಶ್ರೀಲಂಕಾ ಆಯೋಜಿಸುತ್ತಿರುವ 2026ರ ಟಿ20 ವಿಶ್ವಕಪ್ ಟೂರ್ನಿ ಟಿಕೆಟ್ ಮಾರಾಟ ಆರಂಭಗೊಂಡಿದೆ.

 

Read Full Story

07:28 PM (IST) Dec 11

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್

ಭೀಮ್ ಆರ್ಮಿಯ ಸಹ ಸಂಸ್ಥಾಪಕ, ಅಜಾದ್ ಸಮಾಜ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಉತ್ತರ ಪ್ರದೇಶದ ನಾಗಿನಾ ಲೋಕಸಭಾ ಕ್ಷೇತ್ರದ ಸಂಸದ ಚಂದ್ರಶೇಖರ್ ಅಜಾದ್ ರಾವಣ್ ವಿರುದ್ದ ಈಗ ಅವರ ಮಾಜಿ ಗೆಳೆತಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

Read Full Story

06:55 PM (IST) Dec 11

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. ಚುನಾವಣಾ ಆಯೋಗದ ಮತದಾರ ಪಟ್ಟಿ ಪರಿಷ್ಕರಣೆ ವಿರೋಧ ವ್ಯಕ್ತಪಡಿಸಿರುವ ಮಮತಾ, ಇದೀಗ ಮಹಿಳೆಯರು SIR ವಿರುದ್ದ ಹೋರಾಟ ಮಾಡಲು ಸೂಚಿಸಿದ್ದಾರೆ.

 

Read Full Story

06:42 PM (IST) Dec 11

ಮಧುಮೇಹ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ - AIIMS ವೈದ್ಯರಿಂದ ಅದ್ಭುತ ಸಾಧನೆ, ಈಗ ಕೇವಲ 2 ಗಂಟೆಯಲ್ಲಿ ಗುಣಪಡಿಸಬಹುದು!

ದೆಹಲಿಯ ಏಮ್ಸ್ ಆಸ್ಪತ್ರೆಯು 'ಚಯಾಪಚಯ ಶಸ್ತ್ರಚಿಕಿತ್ಸೆ' ಎಂಬ ಹೊಸ ಚಿಕಿತ್ಸೆಯನ್ನು ಪರಿಚಯಿಸಿದೆ. ಕೇವಲ ಎರಡು ಗಂಟೆಗಳಲ್ಲಿ ಪೂರ್ಣಗೊಳ್ಳುವ ಈ ಶಸ್ತ್ರಚಿಕಿತ್ಸೆಯು, ನಿರ್ದಿಷ್ಟ ಅರ್ಹತೆಗಳನ್ನು ಹೊಂದಿರುವ ರೋಗಿಗಳಲ್ಲಿ ಮಧುಮೇಹವನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಯಶಸ್ವಿಯಾಗಿದೆ.
Read Full Story

06:29 PM (IST) Dec 11

ನದಿ ಸಮೀಪ ಡೆತ್ನೋಟ್ ಬರೆದಿಟ್ಟು ರೇ*ಪ್ ಆರೋಪಿ ಎಸ್ಕೇಪ್ - ಆತನಿಗಾಗಿ ನದಿಯಲ್ಲಿ 3 ದಿನ ಹುಡುಕಿದ ಪೊಲೀಸರು

ಅತ್ಯಾ*ಚಾರ ಪ್ರಕರಣದ ಆರೋಪಿಯೊಬ್ಬ, ಕಾನೂನಿನಿಂದ ತಪ್ಪಿಸಿಕೊಳ್ಳಲು ಆತ್ಮ*ಹತ್ಯೆ ನಾಟಕವಾಡಿದ್ದಾನೆ. ನದಿಗೆ ಹಾರಿದಂತೆ ನಂಬಿಸಿ, ಡೆತ್ ನೋಟ್ ಬಿಟ್ಟು ಹೋಗಿದ್ದ ಈತನನ್ನು, ಮೂರು ದಿನಗಳ ಶೋಧದ ನಂತರ ಪೊಲೀಸರು ಕಡೆಗೂ ಬಂಧಿಸಿದ್ದಾರೆ.

Read Full Story

05:38 PM (IST) Dec 11

ಚೈನೀಸ್ ಮಾಂಜಾಗೆ ಮತ್ತೊಂದು ಬಲಿ - ಮಗಳನ್ನು ಶಾಲೆಗೆ ಬಿಟ್ಟು ವಾಪಸಾಗುತ್ತಿದ್ದ ತಂದೆ ಸಾವು

ಗಾಳಿಪಟದ ದಾರ ಸಿಲುಕಿ ಮಗಳನ್ನು ಶಾಲೆಗೆ ಬಿಟ್ಟು ವಾಪಸ್ ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ತಂದೆಯೊಬ್ಬರು ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಚೈನೀಸ್ ಮಾಂಜಾ ಅವರ ಕತ್ತಿಗೆ ಸಿಲುಕಿ  ಈ ದುರಂತ ನಡೆದಿದೆ.

Read Full Story

05:34 PM (IST) Dec 11

ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್ - ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!

ಟಿ20 ಸರಣಿಯಿಂದ ಸಂಜು ಸ್ಯಾಮ್ಸನ್‌ರನ್ನು ಹೊರಗಿಟ್ಟಿದ್ದಕ್ಕೆ ಆರ್. ಅಶ್ವಿನ್ ಕಾರಣ ನೀಡಿದ್ದಾರೆ. ಶುಭಮನ್ ಗಿಲ್‌ರನ್ನು ಉಪನಾಯಕರನ್ನಾಗಿ ಮಾಡಿದ್ದೇ ಸಂಜು ಸ್ಥಾನಕ್ಕೆ ಕುತ್ತು ತಂದಿತು ಎಂದು ಅವರು ವಿಶ್ಲೇಷಿಸಿದ್ದಾರೆ.  

Read Full Story

05:12 PM (IST) Dec 11

ಮೊದಲ ಸಲ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸಂಬಳ ಕಟ್! ಬಿಸಿಸಿಐ ಮಹತ್ವದ ತೀರ್ಮಾನ?

ಡಿಸೆಂಬರ್ 22ರಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಟೀಂ ಇಂಡಿಯಾದ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪ್ರಮುಖ ಚರ್ಚೆಯ ವಿಷಯವಾಗಿದೆ. ಕೇವಲ ಏಕದಿನ ಮಾದರಿಯಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 'ಎ+' ಗ್ರೇಡ್‌ನಿಂದ ಹಿಂಬಡ್ತಿ ಹೊಂದುವ ಸಾಧ್ಯತೆಯಿದೆ.

Read Full Story

04:59 PM (IST) Dec 11

ಬಿಗ್‌ಬಾಸ್‌ ಮನೆಯಿಂದ ಹೊರಬಂದ ಬೆನ್ನಲ್ಲಿಯೇ ಸ್ಪರ್ಧಿ ಮೇಲೆ ಗಂಭೀರ ಆರೋಪ ಮಾಡಿದ ಡಿಸೈನರ್‌!

Bigg Boss Finalist Tanya Mittal Accused of Not Paying Designer for 800 Sarees After Show ಬಿಗ್ ಬಾಸ್ 19 ಮನೆಯಲ್ಲಿದ್ದಾಗ, ತಾನ್ಯಾ ಮಿತ್ತಲ್ ಯಾವಾಗಲೂ ಸೀರೆ ಧರಿಸುತ್ತಿದ್ದರು. ಅಷ್ಟೇ ಅಲ್ಲ, 800 ಸೀರೆಗಳ ಜೊತೆಗೆ ಬಿಗ್‌ ಮನೆಗೆ ಬಂದಿದ್ದಾಗಿ ಅವರು ಹೇಳಿಕೊಂಡಿದ್ದರು.

Read Full Story

04:47 PM (IST) Dec 11

22 ಕಾರ್ಮಿಕರ ಸಾಗಿಸುತ್ತಿದ್ದ ಟ್ರಕ್ ಭೀಕರ ಅಪಘಾತದಲ್ಲಿ 17 ಸಾವು, 4 ದಿನ ಬಳಿಕ ಘಟನೆ ಬೆಳಕಿಗೆ

22 ಕಾರ್ಮಿಕರ ಸಾಗಿಸುತ್ತಿದ್ದ ಟ್ರಕ್ ಭೀಕರ ಅಪಘಾತದಲ್ಲಿ 17 ಸಾವು, 4 ದಿನದ ಬಳಿಕ ಘಟನೆ ಬೆಳಕಿಗೆ, ಇನ್ನುಳಿದ ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ದುರಂತ ಎಂದರೆ ಅಪಘಾತವಾಗಿ ನಾಲ್ಕು ದಿನ ಬಳಿಕ ಘಟನೆ ಬೆಳಕಿಗೆ ಬಂದಿದೆ.

Read Full Story

04:45 PM (IST) Dec 11

ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್ - ಕೋಟಿ ಕೋಟಿ ಹಣ ಪತ್ತೆ - ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು

ಪ್ರತಿಷ್ಠಿತ ವರ್ಧಮಾನ್ ಗ್ರೂಪ್ ಆಫ್ ಸ್ಕೂಲ್ಸ್ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ತೆರಿಗೆ ವಂಚನೆ ಆರೋಪದ ಮೇಲೆ ನಡೆದ ಈ ಶೋಧ ಕಾರ್ಯಾಚರಣೆಯಲ್ಲಿ, ಶಾಲೆಯ ಕಚೇರಿಯಿಂದ ಕೋಟ್ಯಾಂತರ ರೂಪಾಯಿ ನಗದು ಮತ್ತು ರಿಯಲ್ ಎಸ್ಟೇಟ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Read Full Story

04:00 PM (IST) Dec 11

ಧೋನಿ ಸಸ್ಯಹಾರಿಯೋ, ಮಾಂಸಹಾರಿಯೋ? ಮಹಿ ಇಷ್ಟದ ಆಹಾರ ಬಗ್ಗೆ ಗುಟ್ಟು ಬಿಚ್ಚಿಟ್ಟ ಮಾಜಿ ರೂಮ್‌ಮೇಟ್!

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ, ಎಂ ಎಸ್ ಧೋನಿ ಜೊತೆಗಿನ ತಮ್ಮ ಹಳೆಯ ನೆನಪೊಂದನ್ನು ಹಂಚಿಕೊಂಡಿದ್ದಾರೆ. 2004ರಲ್ಲಿ ರೂಮ್‌ಮೇಟ್ ಆಗಿದ್ದಾಗ, ಸಸ್ಯಾಹಾರಿಯಾಗಿದ್ದ ಚೋಪ್ರಾ ಅವರಿಗಾಗಿ ಧೋನಿ ಒಂದು ತಿಂಗಳ ಕಾಲ ಕೇವಲ ಸಸ್ಯಾಹಾರವನ್ನೇ ಸೇವಿಸಿದ್ದರು.  

Read Full Story

04:00 PM (IST) Dec 11

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ

ದೆಹಲಿ ಪೊಲೀಸರು ಅಲಿಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತೀ ದೊಡ್ಡ ನಕಲಿ ಎಂಜಿನ್ ಎಣ್ಣೆ ಉತ್ಪಾದನಾ ಘಟಕವನ್ನು ಭೇದಿಸಿ, ಮಾರುಕಟ್ಟೆಯಲ್ಲಿ ವಿತರಣೆಗೆ ಸಿದ್ಧವಾಗಿದ್ದ ಕ್ಯಾಸ್ಟ್ರೋಲ್ ಬ್ರಾಂಡ್ ಉತ್ಪನ್ನಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದ್ದಾರೆ.

Read Full Story

03:51 PM (IST) Dec 11

ಪಾರ್ಕ್‌ನಲ್ಲಿ ವಾಕಿಂಗ್ ಹೋದಾಗ ತುಪುಕ್ ಎಂದು ಉಗುಳಿದ ವೃದ್ಧನಿಗೆ 26 ಸಾವಿರ ರೂ ದಂಡ

ಪಾರ್ಕ್‌ನಲ್ಲಿ ವಾಕಿಂಗ್ ಹೋದಾಗ ತುಪುಕ್ ಎಂದು ಉಗುಳಿದ ವೃದ್ಧನಿಗೆ 26 ಸಾವಿರ ರೂ ದಂಡ ವಿಧಿಸಲಾಗಿದೆ. ಅಚಾನಕ್ಕಾಗಿ ವೃದ್ಧ ಉಗುಳಿದ್ದಾನೆ. ಗಿಡದ ಎಲೆ ಮೇಲೆ ಉಗುಳಿದ ಕಾರಣಕ್ಕೆ 86 ವರ್ಷದ ವೃದ್ಧನಿಗೆ ದಂಡ ವಿಧಿಸಲಾಗಿದೆ.

Read Full Story

03:07 PM (IST) Dec 11

ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?

ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು? ಈ ಕಾರಿನ ನಿರ್ವಹಣೆ ಕಡಿಮೆ, ಉತ್ತಮ ಮೈಲೇಜ್ ನೀಡಲಿದೆ. ವಿಶೇಷ ಅಂದರೆ ಇದು ಪರಿಸರಕ್ಕೆ ಪೂರಕವಾಗಿರುವ ಕಾರು.

Read Full Story

02:58 PM (IST) Dec 11

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು

ಮದುವೆ ಬಗ್ಗೆ ಮಾತುಕತೆ ನಡೆಸುವುದಾಗಿ ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ಆತನ ಗರ್ಲ್‌ಫ್ರೆಂಡ್ ಮನೆಯವರೇ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿದಂತಹ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

Read Full Story

02:45 PM (IST) Dec 11

ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI

2026ರ ಐಪಿಎಲ್ ಮಿನಿ ಹರಾಜಿನಲ್ಲಿ, ಆರ್ಟಿಫಿಶಿಯಲ್ ಇಂಟಲಿಜೆನ್ಸ್ (AI) ವಿಶ್ಲೇಷಣೆಯ ಪ್ರಕಾರ ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ 20 ಕೋಟಿಗೂ ಹೆಚ್ಚು ಮೊತ್ತಕ್ಕೆ ಹರಾಜಾಗುವ ಸಾಧ್ಯತೆಯಿದೆ. ಅವರ ಆಲ್ರೌಂಡ್ ಸಾಮರ್ಥ್ಯದಿಂದಾಗಿ, KKR ಮತ್ತು CSK ಅವರನ್ನು ಖರೀದಿಸುವ ನಿರೀಕ್ಷೆಯಿದೆ.

Read Full Story

02:21 PM (IST) Dec 11

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ

ಮಹಿಳಾ ವೈದ್ಯರನ್ನೇ ಟಾರ್ಗೆಟ್ ಮಾಡಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ, ಅವರಿಗೆ ಸರ್ವಾಂಗವನ್ನೂ ತೋರಿಸಿದ ಭಾರತೀಯ ಮೂಲದ ಯುವಕನನ್ನು ಕೆನಡಾದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 25 ವರ್ಷದ ವೈಭವ್ ಎಂದು ಗುರುತಿಸಲಾಗಿದೆ.

Read Full Story

01:30 PM (IST) Dec 11

ವಿರಾಟ್ ಕೊಹ್ಲಿ to ಕೆಎಲ್ ರಾಹುಲ್, ಭಾರತೀಯ ಕ್ರಿಕೆಟಿಗರಲ್ಲಿದೆ ಅತೀ ದುಬಾರಿ ಕಾರು

ವಿರಾಟ್ ಕೊಹ್ಲಿ to ಕೆಎಲ್ ರಾಹುಲ್, ಭಾರತೀಯ ಕ್ರಿಕೆಟಿಗರಲ್ಲಿದೆ ಅತೀ ದುಬಾರಿ ಕಾರು, ಕೋಟಿ ಕೋಟಿ ರೂಪಾಯಿ ಮೌಲ್ಯದ ಒಂದಲ್ಲ ಹಲವು ಕಾರುಗಳ ಮಾಲೀಕರಾಗಿದ್ದಾರೆ. ಕ್ರಿಕೆಟಿಗರ ರೋಲ್ಸ್ ರೋಯ್ಸ್, ಬೆಂಟ್ಲಿ ಕಾಂಟಿನೆಂಟಲ್ ಸೇರಿದಂತೆ ದುಬಾರಿ ಕಾರುಗಳ ಲಿಸ್ಟ್.

Read Full Story

12:59 PM (IST) Dec 11

Year 2025 - ವಿದೇಶದಲ್ಲಿ ಬಾಲಿವುಡ್‌ಗೆ ಮಣ್ಣು ಮುಕ್ಕಿಸಿದ ಏಳು ಸೌಥ್ ಸಿನಿಮಾಗಳು

2025 ರಲ್ಲಿ, ದಕ್ಷಿಣ ಭಾರತದ ಸಿನಿಮಾಗಳು ವಿದೇಶಿ ಗಲ್ಲಾಪೆಟ್ಟಿಗೆಯಲ್ಲಿ ಬಾಲಿವುಡ್ ಅನ್ನು ಮೀರಿಸಿವೆ. ಪ್ಯಾನ್ ಇಂಡಿಯಾ ಸಿನಿಮಾಗಳ ಜಾಗತಿಕ ಯಶಸ್ಸನ್ನು ಸಾಬೀತುಪಡಿಸಿವೆ. ವಿದೇಶದಲ್ಲಿ ಅತಿ ಹೆಚ್ಚು ಗಳಿಸಿದ ಟಾಪ್ 10 ಚಿತ್ರಗಳಲ್ಲಿ ಸೌಥ್ ಸಿನಿಮಾಗಳೇ ಪಾರಮ್ಯ ಮೆರೆದಿವೆ.

Read Full Story

12:57 PM (IST) Dec 11

ಬ್ರೇಕ್ ಅಪ್ ಆಗೋರಿಗೆ ಮೂವ್ ಆನ್ ಆಗೋ ಬೆಸ್ಟ್ ಪಾಠ ಹೇಳಿದ ಸ್ಮೃತಿ ಮಂಧನಾ! ಕೊನೆಗೂ ಮೌನ ಮುರಿದ ಕ್ರಿಕೆಟರ್!

ಭಾರತದ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧನಾ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಅಧಿಕೃತವಾಗಿ ರದ್ದಾಗಿದೆ. ಈ ಬ್ರೇಕಪ್ ನಂತರ, ಮಂಧನಾ ತಮ್ಮ ವೈಯಕ್ತಿಕ ಸವಾಲುಗಳನ್ನು ಬದಿಗಿಟ್ಟು, ಕ್ರಿಕೆಟ್ ವೃತ್ತಿಜೀವನದ ಮೇಲೆ ಸಂಪೂರ್ಣವಾಗಿ ಗಮನಹರಿಸಲು ನಿರ್ಧರಿಸಿದ್ದಾರೆ.

Read Full Story

12:52 PM (IST) Dec 11

ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ - ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ

ವಾಕಿಂಗ್ ಹೋದವರು ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದ 79 ವರ್ಷದ ವೃದ್ದೆಯೊಬ್ಬರನ್ನು ಅವರ ಕುಟುಂಬದವರು ಆ ಮಹಿಳೆ ಧರಿಸಿದ್ದ ಜಿಪಿಎಸ್‌ ಇದ್ದ ನೆಕ್ಲೇಸ್‌ನಿಂದಾಗಿ ಪತ್ತೆ ಮಾಡಿದಂತಹ ಘಟನೆ ಮುಂಬೈನಲ್ಲಿ ನಡೆದಿದೆ.

Read Full Story

12:49 PM (IST) Dec 11

ಯಾವ ಭಯವೂ ಇಲ್ಲದೆ ಬೇಲಿ ಹಾರಿ ಭಾರತ ಪ್ರವೇಶಿಸುತ್ತಿದ್ದಾರೆ ಬಾಂಗ್ಲಾದೇಶಿಗಳು, ವಿಡಿಯೋ ವೈರಲ್

ಯಾವ ಭಯವೂ ಇಲ್ಲದೆ ಬೇಲಿ ಹಾರಿ ಭಾರತ ಪ್ರವೇಶಿಸುತ್ತಿದ್ದಾರೆ ಬಾಂಗ್ಲಾದೇಶಿಗಳು, ವಿಡಿಯೋ ವೈರಲ್ ಆಗಿದೆ. ಯುವಕನೊಬ್ಬ ಭಾರತ ಬಾಂಗ್ಲಾದೇಶ ಗಡಿಯಲ್ಲಿ ಹಾಕಿರುವ ಫೆನ್ಸಿಂಗ್ ಹಾರಿ ಭಾರತ ಪ್ರವೇಶಿಸಿದ್ದಾನೆ. ಈತ ಎಲ್ಲಿಯೂ ಭಾರತದ ಭದ್ರತೆ ಸವಾಲು ಎದುರಿಸಿಲ್ಲ.

 

Read Full Story

11:42 AM (IST) Dec 11

ಚೇರ್ ಮೇಲೆ ಕೂತು ಹೋಮ ಹವನ ಮಾಡಿದ ಶ್ರೇಯಸ್ ಅಯ್ಯರ್, ಸನಾತನಿಯೋ, ಅಲ್ವೋ ಚರ್ಚೆ!

ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್, ಟೀಂ ಇಂಡಿಯಾಗೆ ಮರಳಲು ಮನೆಯಲ್ಲಿ ಹೋಮ ಹವನ ಮಾಡಿಸಿದ್ದಾರೆ. ಆದರೆ, ಚೇರ್ ಮೇಲೆ ಕುಳಿತು ಪೂಜೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅವರ ಕಮ್‌ಬ್ಯಾಕ್ ಯಾವಾಗ ಎಂಬ ಕುತೂಹಲ ಹೆಚ್ಚಿಸಿದೆ.
Read Full Story

10:49 AM (IST) Dec 11

ಏರಿಕೆಯಾಗ್ತಿರೋ ಚಿನ್ನವನ್ನು ಲಾಭದಾಯಕವಾಗಿ ಹೇಗೆ ಖರೀದಿಸಬೇಕು? ತಜ್ಞರ ಸಲಹೆ

ಅಂತರಾಷ್ಟ್ರೀಯ ಕಾರಣಗಳಿಂದಾಗಿ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆಯಾಗಿವೆ. ಈ ಬೆಲೆ ಏರಿಕೆಯ ನಡುವೆ, ತುರ್ತು ಅಗತ್ಯಗಳಿಗಾಗಿ ತಕ್ಷಣವೇ ಖರೀದಿಸುವುದು ಮತ್ತು ಹೂಡಿಕೆಗಾಗಿ ಭಾಗಶಃ ಖರೀದಿಸುವುದು ಉತ್ತಮ ತಂತ್ರವೆಂದು ತಜ್ಞರು ಶಿಫಾರಸು ಮಾಡುತ್ತಾರೆ.

Read Full Story

10:03 AM (IST) Dec 11

ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್

ಭಾರತೀಯ ರೈಲ್ವೆಯ ಹೊಸ ನಿಯಮದ ಪ್ರಕಾರ, ಹಿರಿಯ ನಾಗರಿಕರು, 45 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಗರ್ಭಿಣಿ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಈ ಬದಲಾವಣೆ ಪ್ರಯಾಣವನ್ನು ಸುಲಭಗೊಳಿಸುತ್ತದೆ. ಏನಿದು ಸಿಹಿ ಸುದ್ದಿ ಗೊತ್ತಾ?

Read Full Story

09:38 AM (IST) Dec 11

ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?

ನವದೆಹಲಿ: ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಎಲ್ಲಾ 20 ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ. ಆದರೆ ಅಚ್ಚರಿಯ ಸಂಗತಿಯಂದ್ರೆ, ಇಲ್ಲಿಂದ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯವರೆಗೆ ಈ 3 ತಂಡಗಳು ಯಾವುದೇ ಅಂತಾರಾಷ್ಟ್ರೀಯ ಟಿ20 ಮ್ಯಾಚ್ ಆಡುತ್ತಿಲ್ಲ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ.

 

Read Full Story

08:57 AM (IST) Dec 11

ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20 - ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!

ಭಾರತ 1-0 ಮುನ್ನಡೆಯಲ್ಲಿದ್ದರೂ, ಶುಭ್‌ಮನ್‌ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ತಂಡಕ್ಕೆ ಚಿಂತೆ ತಂದಿದೆ. ಗುರುವಾರದ 2ನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸರಣಿ ಸಮಬಲಗೊಳಿಸಲು ಪ್ರಯತ್ನಿಸಲಿದ್ದು, ಹಾರ್ದಿಕ್ ಪಾಂಡ್ಯ ಐತಿಹಾಸಿಕ ದಾಖಲೆಯ ಹೊಸ್ತಿಲಲ್ಲಿದ್ದಾರೆ.
Read Full Story

08:42 AM (IST) Dec 11

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು

An Emotional Video of Dog and Owner: ಈ ವಿಡಿಯೋ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತದೆ. ಪ್ರಾಣಿಗಳು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತವೆ. ಆದರೆ ಅವುಗಳಿಗೆ ಮಾತನಾಡಲು ಸಾಧ್ಯವಿಲ್ಲ ಎಂಬುವುದು ನಿಮಗೆ ಅರ್ಥವಾಗುತ್ತದೆ. ಆ ಪ್ರೀತಿಯನ್ನು ಕಳೆದುಕೊಂಡ ನಾಯಿ ಕಣ್ಣೀರು ಹಾಕಿದೆ.

Read Full Story

More Trending News