ಚಂಡೀಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಹರ್ಯಾಣದ ಸೋನಿಪತ್ ಜಿಲ್ಲೆಯಲ್ಲಿ ರೈತರೊಬ್ಬರ ಪುತ್ರಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗಮನ ಸೆಳೆದರು.
2023ರಲ್ಲಿ ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಮದಿನಾ ಗ್ರಾಮದಲ್ಲಿ ರೈತ ಸಂಜಯ್ ಮಲಿಕ್ ಎನ್ನುವವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ಎದುರಿಸಿರುವ ಕಷ್ಟಗಳ ಬಗ್ಗೆ ಆಲಿಸಿದ್ದರು. ಇದೇ ಬಾಂಧವ್ಯದಿಂದ ಅವರಿಗ ಆ ರೈತನ ಮಗಳ ಮದುವೆಗೆ ಸಾಕ್ಷಿಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕ ಸಾಂಪ್ರದಾಯಿಕ ಭಕ್ಷ್ಯಗಳನ್ನು ಸವಿದು, ರೈತನ ಕುಟುಂಬಸ್ಥರು, ಗ್ರಾಮಸ್ಥರ ಜತೆಗೆ ಕೆಲ ಕಾಲ ಮಾತುಕತೆ ನಡೆಸಿದರು.