ಗುಜರಾತ್ನಲ್ಲಿರುವ ಐತಿಹಾಸಿಕ ಸೋಮನಾಥ ದೇಗುಲದ ಮೇಲೆ ನಡೆದ ಮೊದಲ ದಾಳಿಗೆ 1000 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ‘ಸೋಮನಾಥ ಸ್ವಾಭಿಮಾನ ಪರ್ವ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ನಡೆದ ಶೌರ್ಯ ಯಾತ್ರೆಯಲ್ಲೂ ಭಾಗಿಯಾಗಿದ್ದ ಅವರು, ಶಿವನ ಆಯುಧ ‘ಡಮರು’ ನುಡಿಸಿ ಗಮನ ಸೆಳೆದರು.

10:39 PM (IST) Jan 12
ಬೆಂಗಳೂರು: ಟೀಂ ಇಂಡಿಯಾ ವಿಕೆಟ್ ಕೀಪರ್ ಹಾಗೂ ಆರ್ಸಿಬಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿರುವ ಜಿತೇಶ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಐಪಿಎಲ್ ದಿಗ್ಗಜರಾದ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಹಾಗೂ ಸುರೇಶ್ ರೈನಾ ಅವರನ್ನು ಕೈಬಿಟ್ಟಿದ್ದಾರೆ.
10:02 PM (IST) Jan 12
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿ 8 ಗಂಟೆ ಆತನ ಜೊತೆಗಿದ್ದೆ , ಅನಾಮಿಕನ ಜೊತೆ ಪರಿಚಯ, ಕಾಫಿ , ಮೂವಿ ಸೇರಿದಂತೆ ಮೊದಲ ಆ್ಯಪ್ ಡೇಟಿಂಗ್ ಅನುಭವವನ್ನು ಮಿಲನ ನಟಿ ಪಾರ್ವತಿ ಬಿಚ್ಚಿಟ್ಟಿದ್ದಾರೆ.
09:28 PM (IST) Jan 12
ಗಂಡಂದಿರು ತಮ್ಮ ಪತ್ನಿಯ ಕನಸಿಗೆ ಬೆನ್ನೆಲುಬಾಗಿ ನಿಂತು ಅವರನ್ನು ಓದಿಸುತ್ತಾರೆ. ಅನೇಕರು ಉದ್ಯೋಗವನ್ನು ಗಿಟ್ಟಿಸಿ ಗಂಡನ ಜೊತೆ ಸಂಸಾರ ಸರಿದೂಗಿಸುವುದಕ್ಕೆ ನೆರವಾಗುತ್ತಾರೆ. ಆದರೆ ಕನಸೆಲ್ಲಾ ಈಡೇರಿದ ಮೇಲೆ ತನಗೆ ಏಣಿಯಂತೆ ನಿಂತ ಪತಿಯನ್ನೇ ದೂರ ತಳ್ಳಿದ್ರೆ ವಿಧಿ ಮೆಚ್ಚಿತೇ…
08:45 PM (IST) Jan 12
ಬಾರಪ್ಪ ತಾಕತ್ ಇದ್ರೆ ಮುಟ್ಟಿ ನೋಡು, ರಾಜ್ ಠಾಕ್ರೆಯ ರಸಮಲೈ ವ್ಯಂಗ್ಯಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಮುಂಬೈ ಬರುತ್ತೇನೆ. ತಾಕತ್ ಇದ್ರೆ ಮುಟ್ಟಿ ನೋಡು ಎಂದು ಅಣ್ಣಾಮಲೈ ಸವಾಲು ಹಾಕಿದ್ದಾರೆ.
08:34 PM (IST) Jan 12
ಹೇಳುವುದಕ್ಕೆ ಇವರು ಭಿಕ್ಷುಕ. ಆದರೆ ಹೃದಯ ವೈಶ್ಯಾಲ್ಯತೆಯಲ್ಲಿ ಇವರು ನಿಜವಾಗಿಯೂ ಶ್ರೀಮಂತ ಎಂಬುದನ್ನು ಈ ಭಿಕ್ಷುಕ ಸಾಬೀತುಪಡಿಸಿದ್ದಾರೆ. ಹೌದು ಪಂಜಾಬ್ನ ಪಠಾಣ್ಕೋಟ್ನಲ್ಲಿ ಭಿಕ್ಷೆ ಬೇಡಿಯೇ ಜೀವನ ಮಾಡುತ್ತಿದ್ದ ರಾಜು ಎಂಬುವವರು ತಮ್ಮ ಕಷ್ಟದ ನಡುವೆಯೂ ಬೇರೆಯವರಿಗೆ ಭರವಸೆಯ ಬೆಳಕಾಗಿದ್ದಾರೆ.
07:47 PM (IST) Jan 12
ಹದಿಹರೆಯದವರ ಸಮ್ಮತಿಯ ಪ್ರೇಮ ಸಂಬಂಧಗಳ ಪ್ರಕರಣಗಳಲ್ಲಿ ಪೋಕ್ಸೊ ಕಾಯ್ದೆಯ ದುರುಪಯೋಗವನ್ನು ತಡೆಯಲು 'ರೋಮಿಯೋ ಜ್ಯೂಲಿಯೆಟ್ ನಿಯಮ' ಜಾರಿಗೆ ತರುವ ಬಗ್ಗೆ ಚಿಂತಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
07:45 PM (IST) Jan 12
ಮಾಜಿ ಉಪ ರಾಷ್ಟ್ರಪತಿ ಜಗ್ದೀಪ್ ಧನ್ಕರ್ ಆರೋಗ್ಯದಲ್ಲಿ ಏರುಪೇರು, ಎರಡು ಬಾರಿ ಪ್ರಜ್ಞೆ ತಪ್ಪಿದ ಧನ್ಕರ್ ದೆಹಲಿಯ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ. ವೈದ್ಯರ ತಂಡ ಧನ್ಕರ್ ಆರೋಗ್ಯದ ಮೇಲೆ ನಿಗಾವಹಿಸಿದೆ.
07:06 PM (IST) Jan 12
ಇಂಜೆಕ್ಷನ್ ನೀಡಿ 300 ಬೀದಿನಾಯಿಗಳನ್ನು ಹತ್ಯೆ ಮಾಡಿದಂತಹ ಅಮಾನವೀಯ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಶಯಂಪೇಟೆ ಮತ್ತು ಅರೆಪಲ್ಲಿ ಗ್ರಾಮಗಳಲ್ಲಿ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಗ್ರಾಮದ ಸರಪಂಚರು ಸೇರಿದಂತೆ ಒಟ್ಟು 9 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
06:58 PM (IST) Jan 12
ಬೆಂಗಳೂರು: ಟೀಂ ಇಂಡಿಯಾ ಸ್ಪೋಟಕ ಆರಂಭಿಕ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಜೆರ್ಸಿ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಮೂರು ಸಲ ಬದಲಾಗಿದೆ. ಒಮ್ಮೆಯಂತೂ ನಂಬರ್ ಇಲ್ಲದೇ ಸೆಹ್ವಾಗ್ ಕ್ರಿಕೆಟ್ ಆಡಿದ್ದಾರೆ. ಅತ್ತೆ-ಸೊಸೆಯ ಜಗಳದ ಕಥೆಯನ್ನು ಸ್ವತಃ ಸೆಹ್ವಾಗ್ ಬಿಚ್ಚಿಟ್ಟಿದ್ದಾರೆ.
06:16 PM (IST) Jan 12
ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಡಿಸೆಂಬರ್ 24ರಂದು ನಡೆದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಇಲ್ಲಿ ಕೊಲೆ ಮಾಡಿದ್ದು, ಬೇರೆ ಯಾರೋ ಹೊರಗಿನವರಲ್ಲ ಬದಲಾಗಿ ಮಹಿಳೆಯ ಸ್ವಂತ ಮಗನೇ ಎಂಬ ವಿಚಾರ ತಿಳಿದು ಇಡೀ ಗ್ರಾಮವೇ ಆಘಾತಕ್ಕೀಡಾಗಿದೆ.
06:11 PM (IST) Jan 12
ಸ್ವಾತಂತ್ರ್ಯ ಬಳಿಕ ಇದೇ ಮೊದಲು, ದೇಶದ ಪ್ರಧಾನ ಮಂತ್ರಿಗಳ ಕಚೇರಿ ವಿಳಾಸ ಸ್ವಾತಂತ್ರ್ಯ ಬಳಿಕ ಇದುವರೆಗೂ ಬದಲಾಗಿಲ್ಲ. ಇದೀಗ ಪ್ರಧಾನಿ ಮೋದಿ ಹೊಸ ಇತಿಹಾಸ ಬರೆಯುತ್ತಿದ್ದಾರೆ. ಸೌತ್ ಬ್ಲಾಕ್ನಿಂದ ಮೋದಿ ಆಫೀಸ್ ಸ್ಥಳಾಂತರವಾಗುತ್ತಿರುವುದೆಲ್ಲಿಗೆ?
06:08 PM (IST) Jan 12
ವಿಜಯ್ ಹಜಾರೆ ಕ್ವಾರ್ಟರ್ ಫೈನಲ್ನಲ್ಲಿ ಕರ್ನಾಟಕ ತಂಡ ಮುಂಬೈ ವಿರುದ್ಧ ವಿಜೆಡಿ ನಿಯಮದನ್ವಯ 55 ರನ್ಗಳ ಜಯ ಸಾಧಿಸಿ ಸೆಮಿಫೈನಲ್ಗೆ ಪ್ರವೇಶಿಸಿದೆ. ದೇವದತ್ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಅಜೇಯ ಅರ್ಧಶತಕಗಳ ನೆರವಿನಿಂದ, ಬ್ಯಾಡ್ ಲೈಟ್ನಿಂದ ಪಂದ್ಯ ಸ್ಥಗಿತಗೊಂಡಾಗ ಕರ್ನಾಟಕ ಸುಸ್ಥಿತಿಯಲ್ಲಿತ್ತು.
05:33 PM (IST) Jan 12
ಸಾಮಾಜಿಕ ಜಾಲತಾಣದಲ್ಲಿ ಹಿಜಾಬ್ ಧರಿಸಿಯೇ ರೀಲ್ಸ್ ಮಾಡ್ತಿರುವ ತನಗೆ ತನ್ನದೇ ಸಮುದಾಯ ಜನರು ಜೀವ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮಹಿಳೆಯೂ ಆಗಿರುವ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಾಹಿದಾ ಅಕ್ಧಾರ್ ಅವರು ಆರೋಪಿಸಿದ್ದಾರೆ.
04:59 PM (IST) Jan 12
ಸಂಕ್ರಾತಿಗೆ ಸಂಭ್ರಮದಲ್ಲಿ ಚಿನ್ನ ಖರೀದಿಸುವ ಪ್ಲಾನ್ ಇದೆಯಾ? ಜನವರಿ 12ರಂದು ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆಗಳಾಗಿದೆ. ಇದೀಗ ಜನಸಾಮಾನ್ಯರಿಗೂ ಚಿನ್ನ ಖರೀದಿ ಅಥವಾ ಹೂಡಿಕೆ ಮಾಡಬಹುದಾ?
04:57 PM (IST) Jan 12
ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ನಲ್ಲಿ ಮುಂಬೈ ನೀಡಿದ 255 ರನ್ಗಳ ಗುರಿ ಬೆನ್ನತ್ತಿದ ಕರ್ನಾಟಕ, ದೇವದತ್ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಅಜೇಯ ಶತಕದ ಜೊತೆಯಾಟದ ನೆರವಿನಿಂದ ಗೆಲುವಿನತ್ತ ಸಾಗುತ್ತಿದೆ. ಬ್ಯಾಡ್ ಲೈಟ್ನಿಂದಾಗಿ ಪಂದ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
04:31 PM (IST) Jan 12
ಸೆಕೆಂಡ್ ಸಿಮ್ ಆ್ಯಕ್ಟೀವ್ ಇಡಲು ರೀಚಾರ್ಜ್ ದುಬಾರಿಯಾಗ್ತಿದೆಯಾ? ಬ್ಯಾಂಕ್ ಸಂಬಂಧ, ಒಟಿಪಿ ಸೇರಿ ಇತರ ದಾಖಲೆಗಳಿಗಾಗಿ ಸಿಮ್ ಆ್ಯಕ್ಟೀವ್ ಇಡುವುದೇ ಇದೀಗ ದುಬಾರಿಯಾಗುತ್ತಿದೆ.ಇದಕ್ಕೆ ಅತೀ ಕಡಿಮೆ ಬೆಲೆಯ ಆಯ್ಕೆ ಇಲ್ಲಿದೆ.
04:16 PM (IST) Jan 12
ಭಾರತದಲ್ಲಿ ನಡೆದ ದೇಸಿ ವರ ಹಾಗೂ ವಿದೇಶಿ ವಧುವಿನ ಮದುವೆಯೊಂದರ ವಿಡಿಯೋ ವೈರಲ್ ಆಗಿದೆ. ವೆಡ್ಡಿಂಗ್ ಪ್ಲಾನರ್ಗಳ ಎಡವಟ್ಟಿನಿಂದ, ವಧು-ವರರು ಹಾರ ಬದಲಿಸಿಕೊಳ್ಳುವ ಬದಲು ಇಬ್ಬರು ಬಾಲಕರು ಅವರ ಕೊರಳಿಗೆ ಹಾರ ಹಾಕಿದ್ದಾರೆ. ಈ ತಮಾಷೆಯ ಘಟನೆ ಜನರನ್ನು ನಗೆಗಡಲಲ್ಲಿ ತೇಲಿಸುತ್ತಿದೆ.
03:52 PM (IST) Jan 12
ಭಾರತೀಯರಿಗೆ ಫ್ರೀ ವೀಸಾ ಟ್ಸಾನ್ಸಿಟ್ ಸೌಲಭ್ಯ ಘೋಷಿಸಿದ ಜರ್ಮನಿ, ಭಾರತ ಪ್ರವಾಸದಲ್ಲಿರುವ ಜರ್ಮನಿ ಫೆಡರಲ್ ಚಾನ್ಸಿಲರ್ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಈ ಪೈಕಿ ಭಾರತೀಯರಿಗೆ ವೀಸಾ ಫ್ರೀ ಟ್ರಾನ್ಸಿಟ್ ಸೌಲಭ್ಯ ಕೂಡ ಒಂದು.
03:29 PM (IST) Jan 12
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಗಾಯಗೊಂಡ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಡೆಲ್ಲಿ ಮೂಲದ ಯುವ ಬ್ಯಾಟರ್ ಆಯುಷ್ ಬದೋನಿಗೆ ಭಾರತ ತಂಡದಲ್ಲಿ ಇದೇ ಮೊದಲ ಬಾರಿಗೆ ಅವಕಾಶ ನೀಡಲಾಗಿದೆ.
01:56 PM (IST) Jan 12
ತುಂಬು ಗರ್ಭಿಣಿಯ ಆರೈಕೆ ಹಾಗೂ ಡೆಲಿವರಿ ಸಮಯದಲ್ಲಿ ಆಕೆಗೆ ಭಾವನಾತ್ಮಕ ಬೆಂಬಲವಾಗಿ ಇರಲು ರಜೆ ಮೇಲೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಮಗು ಜನಿಸುವುದಕ್ಕೆ ಕೆಲವೇ ಕ್ಷಣಗಳಿರುವಾಗ ಅವರು ಸಾವನ್ನಪ್ಪಿದ್ದಾರೆ.
01:48 PM (IST) Jan 12
12:56 PM (IST) Jan 12
12:34 PM (IST) Jan 12
ಹರ್ಯಾಣದ ರೇವಾರಿಯಲ್ಲಿ, ಜೂನಿಯರ್ ಹಾಕಿ ಮಹಿಳಾ ತಂಡದ ಕೋಚ್ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾ*ಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ನಾಲ್ಕು ತಿಂಗಳ ಹಿಂದೆ ನಡೆದ ಈ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿ, ನಂತರ ಗರ್ಭಪಾತವಾಗಿತ್ತು. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
11:51 AM (IST) Jan 12
ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಾಡಲು ಭಾರತ ಬರಲು ಬಾಂಗ್ಲಾದೇಶ ಹಿಂದೇಟು ಹಾಕುತ್ತಿರುವ ಬೆನ್ನಲ್ಲೇ ನೆರೆಯ ಪಾಕಿಸ್ತಾನ ಎಂಟ್ರಿಕೊಟ್ಟಿದ್ದು, ಬಾಂಗ್ಲಾದೇಶದ ಟಿ20 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯ ವಹಿಸಲು ನಾವು ಎಂದು ಮುಂದೆ ಬಂದಿದೆ. ಈ ಕುರಿತಾದ ಅಪ್ಡೇಟ್ಸ್ ಇಲ್ಲಿದೆ.
10:30 AM (IST) Jan 12
ವಡೋದರಾ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಶುಭಾರಂಭ ಮಾಡಿದೆ. ಇದೇ ಪಂದ್ಯದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹೊಸ ಮೈಲಿಗಲ್ಲಿನ ಮೂಲಕ ಮತ್ತೊಂದು ವಿಶ್ವದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆ ಬ್ರೇಕ್ ಆಗೋದು ಸದ್ಯಕ್ಕಂತೂ ಅನುಮಾನ.
09:58 AM (IST) Jan 12
ವಡೋದರಾ: ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನ ಗರಿಷ್ಠ ರನ್ ಸ್ಕೋರರ್ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅವರು ಶ್ರೀಲಂಕಾದ ಕುಮಾರ ಸಂಗಕ್ಕರ ಅವರನ್ನು ಹಿಂದಿಕ್ಕಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಟಾಪ್-5 ಆಟಗಾರರಿವರು.
09:13 AM (IST) Jan 12
ವಿಜಯ್ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿಯ ನಾಕೌಟ್ ಪಂದ್ಯಗಳು ಆರಂಭಗೊಂಡಿದ್ದು, ಮೊದಲ ಕ್ವಾರ್ಟರ್ ಫೈನಲ್ನಲ್ಲಿ ಕರ್ನಾಟಕ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಕರ್ನಾಟಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
07:57 AM (IST) Jan 12
07:37 AM (IST) Jan 12
06:30 AM (IST) Jan 12
ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರು ತಾವು ಸ್ಮಾರ್ಟ್ಫೋನ್ ಮತ್ತು ಇಂಟರ್ನೆಟ್ ಬಳಸುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ, ಅಲ್ ಫಲಾಹ್ ವಿವಿ ಜಪ್ತಿ ಸಾಧ್ಯತೆಗಳಿವೆ.