ಮುಂಬೈ : ‘ಉದ್ಯಮಿ ವಿಜಯ ಮಲ್ಯ ಅವರ 14,131.6 ಕೋಟಿ ರು. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಎಸ್ಬಿಐ ನೇತೃತ್ವದ ಒಕ್ಕೂಟಕ್ಕೆ ಹಸ್ತಾಂತರಿಸಲಾಗಿದೆಯಾದರೂ, ಇದು ಮಲ್ಯ ವಿರುದ್ಧದ ಹಣ ವರ್ಗಾವಣೆ ಆರೋಪಗಳನ್ನು ರದ್ದುಗೊಳಿಸುವುದಿಲ್ಲ ಅಥವಾ ಕೈಬಿಡುವುದಿಲ್ಲ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ.
‘ನನ್ನ 14 ಸಾವಿರ ಕೋಟಿ ರು. ವಸೂಲಾಗಿದೆ. ಹೀಗಾಗಿ ನನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ಅಂತ್ಯ ಮಾಡಿ’ ಎಂದು ಮಲ್ಯ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಬಾಂಬೆ ಹೈಕೋರ್ಟ್ಗೆ ಇ.ಡಿ. ಪ್ರತಿಕ್ರಿಯೆ ಸಲ್ಲಿಸಿದ್ದು, ‘ತನಿಖೆಯಿಂದ ಮಲ್ಯ ನುಣಚಿಕೊಳ್ಳುತ್ತಿದ್ದಾರೆ. ಅವರ ಮೇಲಿನ ಕೇಸು ರದ್ದಿಲ್ಲ’ ಎಂದಿದೆ.