LIVE NOW
Published : Dec 13, 2025, 07:37 AM ISTUpdated : Dec 13, 2025, 11:27 PM IST

India Latest News Live: ಮೆಸ್ಸಿ ಭಾರತ ಭೇಟಿ - ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ಮೆಸ್ಸಿ, ಬಂಗಾಳದಲ್ಲಿ ಫ್ಯಾನ್ಸ್ ದಾಂಧಲೆ, ಕ್ಷಮೆಯಾಚಿಸಿದ ಮಮತಾ

ಸಾರಾಂಶ

ಕಾಠ್ಮಂಡು: ನೇಪಾಳದ ಕೆ.ಪಿ. ಶರ್ಮಾ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಸೆಪ್ಟೆಂಬರ್‌ನಲ್ಲಿ ನಡೆದ ಜೆನ್‌-ಝಿ ದಂಗೆಯಿಂದಾಗಿ ದೇಶಕ್ಕೆ ಬರೋಬ್ಬರಿ 8.5 ಸಾವಿರ ಕೋಟಿ ರು. ನಷ್ಟವಾಗಿದೆ ಎಂದು, ದಂಗೆಯಿಂದಾದ ನಷ್ಟ ಪರಿಶೀಲನೆಗೆ ರಚಿಸಲಾಗಿದ್ದ ಸಮಿತಿಯು ಸಚಿವಸಂಪುಟದಲ್ಲಿ ಮಾಹಿತಿ ನೀಡಿದೆ. ಇದು ಭೌತಿಕವಾಗಿ 8.5 ಸಾವಿರ ಕೋಟಿ ನಷ್ಟ ಉಂಟುಮಾಡಿದರೆ, 77 ಜೀವಹಾನಿಯಾಗಿತ್ತು.

Messi Gifts T Shirt to Rahul Gandhi During India Visit Hyderabad Event a Hit

11:27 PM (IST) Dec 13

ಮೆಸ್ಸಿ ಭಾರತ ಭೇಟಿ - ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ಮೆಸ್ಸಿ, ಬಂಗಾಳದಲ್ಲಿ ಫ್ಯಾನ್ಸ್ ದಾಂಧಲೆ, ಕ್ಷಮೆಯಾಚಿಸಿದ ಮಮತಾ

ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡಿದರು. ಕೋಲ್ಕತ್ತಾದಲ್ಲಿ ಅವ್ಯವಸ್ಥೆಯಿಂದಾಗಿ ಬೇಗನೆ ನಿರ್ಗಮಿಸಿದರೆ, ಹೈದರಾಬಾದ್‌ನಲ್ಲಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು, ಅಲ್ಲಿ ಅವರು ಗಣ್ಯರೊಂದಿಗೆ ಫುಟ್‌ಬಾಲ್ ಆಡಿ, ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದರು.
Read Full Story

11:01 PM (IST) Dec 13

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಚುನಾವಣೆ ಫಲಿತಾಂಶ ಉಲ್ಟಾ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಚುನಾವಣೆ ಫಲಿತಾಂಶ ಉಲ್ಟಾ ಹೊಡೆದ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ, ಕೇರಳ ಸ್ಥಳೀಯ ಸಂಸ್ಥೆಯ ಚುನಾವಣೆ ಬಳಿಕ ಈ ಘಟನೆ ನಡದಿದೆ. ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದ ಎಲ್‌ಡಿಎಫ್ ಸ್ಥಳೀಯ ಮುಖಂಡ ಮುಖಭಂಗ ಅನುಭವಿಸಿದ್ದಾರೆ.

Read Full Story

09:10 PM (IST) Dec 13

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು , ಮುನ್ನಾರ್‌ನಿಂದ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಭಾರಿ ಸಂಚಲನ ಸೃಷ್ಟಿಸಿದ್ದರು. ಈ ಸ್ಪರ್ಧೆ ಕಾಂಗ್ರೆಸ್‌ಗೆ ಆತಂಕ ತಂದಿತ್ತು. ಆದರೆ ಸೋನಿಯಾ ಗಾಂಧಿ ಗೆಲುವು ಕಂಡಿಲ್ಲ.

Read Full Story

08:19 PM (IST) Dec 13

ಶೇ.100ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಕೇರಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು

ಶೇ.100ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಕೇರಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು ಸಾಧಿಸಿದ್ದಾರೆ. ವಿಶೇಷ ಅಂದರೆ ವಕ್ಫ್ ವಿವಾದಗಳಿಂದ ಭಾರಿ ಕೋಲಾಹಲ ಸೃಷ್ಟಿಯಾಗಿದ್ದ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಮತದಾರರು ಬಿಜೆಪಿ ಕೈಹಿಡಿದ್ದಾರೆ. ಕೇರಳದ ರಾಜಕೀಯ ಬದಲಾಗುವ ಸೂಚನೆ ನೀಡಿದೆ.

Read Full Story

07:31 PM (IST) Dec 13

ಅಪಘಾತದಲ್ಲಿ ತಂದೆ ಆಸ್ಪತ್ರೆ ದಾಖಲಾದ ಬೆನ್ನಲ್ಲೇ ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ

ಅಪಘಾತದಲ್ಲಿ ತಂದೆ ಆಸ್ಪತ್ರೆ ದಾಖಲಾದ ಬೆನ್ನಲ್ಲೇ ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ, ಭಾರಿ ಭರವಸೆ ಮೂಡಿಸಿದ್ದ 30 ವರ್ಷದ ಯುವ ನಟನ ದುರಂತ ಅಂತ್ಯ ಇಡೀ ಸಿನಿಮಾ ರಂಗಕ್ಕೆ ಆಘಾತ ನೀಡಿದೆ. ಕುಟುಂಬದ ಪರಿಸ್ಥಿತಿ ಚಿಂತಾಜನಕವಾಗಿದೆ.

Read Full Story

06:27 PM (IST) Dec 13

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?

ಪತ್ನಿ ಅನುಷ್ಕಾ ಶರ್ಮಾ ಜೊತೆ ಲಂಡನ್‌ನಿಂದ ಮುಂಬೈಗೆ ಮರಳಿದ ವಿರಾಟ್ ಕೊಹ್ಲಿ. ಇದೇ ಸಮಯದಲ್ಲಿ ಭಾರತ ಪ್ರವಾಸದಲ್ಲಿರುವ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿಯನ್ನು ಕೊಹ್ಲಿ ಭೇಟಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಕೋಲ್ಕತಾದಲ್ಲಿ ನಡೆದ ಮೆಸ್ಸಿ ಕಾರ್ಯಕ್ರಮದ ಗೊಂದಲದ ಬಗ್ಗೆಯೂ ಈ ಲೇಖನ ವಿವರಿಸುತ್ತದೆ.
Read Full Story

04:35 PM (IST) Dec 13

ಕೇರಳ ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಗೆ ಭರ್ಜರಿ ಗೆಲುವು, 45 ವರ್ಷದ LDF ಅಧಿಪತ್ಯ ಅಂತ್ಯ

ಕೇರಳ ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಗೆ ಭರ್ಜರಿ ಗೆಲುವು, 45 ವರ್ಷದ LDF ಅಧಿಪತ್ಯ ಅಂತ್ಯ, ಎನ್‌ಡಿಎ ಮೈತ್ರಿಕೂಟ ತಿರುವನಂತಪುರಂ ಕಾರ್ಪೋರೇಶನ್‌ನಲ್ಲಿ 50 ಸ್ಥಾನ ಗೆಲ್ಲುವ ಮೂಲಕ ಹೊಸ ಇತಿಹಾಸ ರಚಿಸಿದೆ.

Read Full Story

03:45 PM (IST) Dec 13

ಅಬ್ಬಬ್ಬಾ..! ಲಿಯೋನೆಲ್ ಮೆಸ್ಸಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಒಂದು ದಿನದ ಚಾರ್ಜ್ ಇಷ್ಟೊಂದಾ?

ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಕೋಲ್ಕತಾಗೆ ಆಗಮಿಸಿದ್ದು, ಬಿಗಿ ಭದ್ರತೆಯಲ್ಲಿ ಹಯಟ್ ರೆಗೆನ್ಸಿ ಹೋಟೆಲ್‌ ತಲುಪಿದ್ದಾರೆ. ಅವರ ವಾಸ್ತವ್ಯಕ್ಕಾಗಿ ಇಡೀ ಫ್ಲೋರ್ ಸೀಲ್ ಮಾಡಲಾಗಿದ್ದು, ಅವರ ಐಷಾರಾಮಿ ಸೂಟ್‌ನ ವಿವರಗಳು ಮತ್ತು ಅಭಿಮಾನಿಗಳ ಸಂಭ್ರಮವನ್ನು ಈ ಲೇಖನ ವಿವರಿಸುತ್ತದೆ.
Read Full Story

03:38 PM (IST) Dec 13

ರೈಲು ಟಿಕೆಟ್ ಬುಕಿಂಗ್‌ನಿಂದ ಪ್ರಯಾಣ , ಹಿರಿಯ ನಾಗರೀಕರಿಗಿದೆ ಹಲವು ವಿನಾಯಿತಿ

ರೈಲು ಟಿಕೆಟ್ ಬುಕಿಂಗ್‌ನಿಂದ ಪ್ರಯಾಣ , ಹಿರಿಯ ನಾಗರೀಕರಿಗಿದೆ ಹಲವು ವಿನಾಯಿತಿ ನೀಡಲಾಗಿದೆ. ಹಲವು ಪ್ರಯಾಣಿಕರು ಕನ್ಸೆಶನ್ ಮಾಹಿತಿ ಇಲ್ಲದೆ ಪ್ರಯಾಣ ಮಾಡುತ್ತಾರೆ. ಈ ಎಲ್ಲಾ ಸೇವೆ ಉಚಿತವಾಗಿ ಹಿರಿಯ ನಾಗರೀಕರಿಗೆ ನೀಡಲಾಗುತ್ತದೆ.

Read Full Story

03:06 PM (IST) Dec 13

ಕೇರಳದ ಮೊದಲ ಜೆನ್‌ಝಿ ಪೋಸ್ಟ್ ಆಫೀಸ್ ಆರಂಭ, ಟ್ರೆಂಡಿ ಕಚೇರಿಗೆ ಮನಸೋತ ಯುವ ಸಮೂಹ

ಕೇರಳದ ಮೊದಲ ಜೆನ್‌ಝಿ ಪೋಸ್ಟ್ ಆಫೀಸ್ ಆರಂಭ, ಟ್ರೆಂಡಿ ಕಚೇರಿಗೆ ಮನಸೋತ ಯುವ ಸಮೂಹ , ಕ್ಯೂಆರ್ ಕೋಡ್ ಫೀಚರ್, ಲೈಬ್ರರಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗಿದೆ. ಈ ಪೋಸ್ಟ್ ಆಫೀಸ್ ವಿಶೇಷತೆ ಇಲ್ಲಿದೆ.

Read Full Story

02:22 PM (IST) Dec 13

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!

ದುಬೈ: ಭಾರತ ಕ್ರಿಕೆಟ್ ತಂಡವು ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ದಯನೀಯ ಕುಸಿತ ಕಂಡಿದೆ. ತವರಿನಲ್ಲಿ ಎರಡು ಬಾರಿ ವೈಟ್ ವಾಷ್ ಅನುಭವಿಸಿರುವ ಭಾರತ ತಂಡ, ಇದೀಗ ಅಂಕಪಟ್ಟಿಯಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ

Read Full Story

01:36 PM (IST) Dec 13

ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!

ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ 14 ವರ್ಷಗಳ ಬಳಿಕ ಕೋಲ್ಕತಾಗೆ ಆಗಮಿಸಿದ್ದಾರೆ. ಆದರೆ, ಸಾಲ್ಟ್‌ಲೇಕ್ ಸ್ಟೇಡಿಯಂನಲ್ಲಿ ಕೇವಲ 10 ನಿಮಿಷ ಮಾತ್ರ ಕಾಣಿಸಿಕೊಂಡು ನಿರ್ಗಮಿಸಿದ್ದರಿಂದ, ನಿರಾಸೆಗೊಂಡ ಸಾವಿರಾರು ಅಭಿಮಾನಿಗಳು ದಾಂಧಲೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

Read Full Story

12:44 PM (IST) Dec 13

ಧಾರಾವಾಹಿ ನಟಿಗೆ ಸ್ತನ ಕ್ಯಾನ್ಸರ್;‌ ಮಾರಕ ಕಾಯಿಲೆಯಿಂದ ಚೆಂದದ ಬೆಡಗಿ ಇಂದು ಹೀಗೆ ಆಗಿದ್ದಾರಾ?

Actress Vahini Cancer: ಕ್ಯಾನ್ಸರ್‌ ಎಂಬ ಮಹಾಮಾರಿ ಕಾಯಿಲೆ ಈಗಾಗಲೇ ಅನೇಕರನ್ನು ಬಲಿ ತೆಗೆದುಕೊಂಡಿದೆ. ಸಾಕಷ್ಟು ಜನರು ಕ್ಯಾನ್ಸರ್‌ ವಿರುದ್ಧ ಹೋರಾಡಿ ಗೆದ್ದಿದ್ದುಂಟು. ಕೆಲವರು ಒಮ್ಮೆ ಕ್ಯಾನ್ಸರ್‌ ಪ್ರೀ ಆದರೂ ಕೂಡ, ಮತ್ತೆ ಈ ಕಾಯಿಲೆ ಬಂದ ಉದಾಹರಣೆ ಇದೆ. ಈಗ ನಟಿಯೋರ್ವರಿಗೆ ಕ್ಯಾನ್ಸರ್‌ ಬಂದಿದೆ.

 

Read Full Story

11:51 AM (IST) Dec 13

ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!

ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿ ಕಠಿಣ ಪರಿಶ್ರಮಕ್ಕೆ ಹೆಸರುವಾಸಿಯಾಗಿದ್ದರೂ, ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ತಂಡದ ಅತ್ಯಂತ ಶ್ರಮಜೀವಿ ಆಟಗಾರ ಶುಭ್‌ಮನ್ ಗಿಲ್ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.  

Read Full Story

10:25 AM (IST) Dec 13

ನಿವೃತ್ತಿಗೆ ಯು ಟರ್ನ್ ಹೊಡೆದ ವಿನೇಶ್ ಫೋಗಟ್; 2028ರ ಒಲಿಂಪಿಕ್ಸ್ ಮೇಲೆ ಕಣ್ಣಿಟ್ಟ ಕಾಂಗ್ರೆಸ್ ಶಾಸಕಿ!

ನವದೆಹಲಿ: ಭಾರತದ ತಾರಾ ಕುಸ್ತಿಪಟು ಹಾಗೂ ಕಾಂಗ್ರೆಸ್ ಶಾಸಕಿ ವಿನೇಶ್ ಫೋಗಟ್ ಇದೀಗ ಕುಸ್ತಿ ಅಖಾಡಕ್ಕೆ ಮರಳುವುದಾಗಿ ಘೋಷಿಸಿದ್ದಾರೆ. 31 ವರ್ಷದ ವಿನೇಶ್ ಇದೀಗ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಮೇಲೆ ಕಣ್ಣಿಟ್ಟಿದ್ದಾರೆ.

 

Read Full Story

10:15 AM (IST) Dec 13

Dhurandhar Ott Release Date - ವಿಶ್ವದ ಗಮನ ಸೆಳೆದ ರಣವೀರ್‌ ಸಿಂಗ್‌ 'ಧುರಂಧರ್‌' ಒಟಿಟಿಯಲ್ಲಿ ರಿಲೀಸ್ ಯಾವಾಗ?

Dhurandhar Hindi Movie Ott: ರಣವೀರ್‌ ಸಿಂಗ್‌, ಸಾರಾ ಅರ್ಜುನ್‌, ಆರ್‌ ಮಾಧವನ್‌ ನಟನೆಯ ‘ಧುರಂಧರ್’‌ ಸಿನಿಮಾ ರಿಲೀಸ್‌ ಆಗಿದ್ದು ಅನೇಕರಿಂದ ಪ್ರಶಂಸೆ ಪಡೆಯುತ್ತಿದೆ. ಹಾಗಾದರೆ ಈ ಸಿನಿಮಾವನ್ನು ಎಲ್ಲಿ? ಯಾವಾಗ ನೋಡಬಹುದು? ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

Read Full Story

09:48 AM (IST) Dec 13

Year 2025 - ಬಿಡುಗಡೆಯಾದ ಮೊದಲ ದಿನವೇ ಅತ್ಯಧಿಕ ಗಳಿಕೆ ಮಾಡಿದ ಟಾಪ್ 10 ಸಿನಿಮಾಗಳು

2025 ವರ್ಷದ ಅಂತ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೊಸ ವರ್ಷಕ್ಕೆ ಬಿಡುಗಡೆಯಾಗಲು ಹಲವು ಸಿನಿಮಾಗಳು ಸಿದ್ಧಗೊಂಡಿವೆ. 2025ರಲ್ಲಿ ಬಿಡುಗಡೆಯಾದ ಮೊದಲ ದಿನವೇ ಅತ್ಯಧಿಕ ಗಳಿಕೆ ಮಾಡಿದ ಟಾಪ್ 10 ಸಿನಿಮಾಗಳ ಪಟ್ಟಿ ಇಲ್ಲಿದೆ.

Read Full Story

09:10 AM (IST) Dec 13

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!

ದುಬೈನಲ್ಲಿ ನಡೆದ ಅಂಡರ್‌-19 ಏಷ್ಯಾಕಪ್‌ ಪಂದ್ಯದಲ್ಲಿ, 14 ವರ್ಷದ ವೈಭವ್‌ ಸೂರ್ಯವಂಶಿ ಯುಎಇ ವಿರುದ್ಧ ಕೇವಲ 95 ಎಸೆತಗಳಲ್ಲಿ 171 ರನ್ ಸಿಡಿಸಿ ಆರ್ಭಟಿಸಿದ್ದಾರೆ. ಅವರ ವಿಶ್ವದಾಖಲೆಯ 14 ಸಿಕ್ಸರ್‌ಗಳ ನೆರವಿನಿಂದ ಭಾರತ 234 ರನ್‌ಗಳ ಭರ್ಜರಿ ಜಯ ಸಾಧಿಸಿತು.
Read Full Story

More Trending News