LIVE NOW
Published : Dec 14, 2025, 06:52 AM ISTUpdated : Dec 14, 2025, 04:12 PM IST

India Latest News Live: ಬೊಂಡಿ ಬೀಚ್‌ ಗುಂಡಿನ ದಾಳಿಗೆ 10 ಸಾವು, ಬರಿಗೈಯಲ್ಲೇ ಶೂಟರ್ ಹಿಡಿದು ಗನ್ ಕಸಿದ ಸಾಹಸಿ ವಿಡಿಯೋ

ಸಾರಾಂಶ

ತಿರುವನಂತಪುರ ಇತ್ತೀಚೆಗೆ ನಡೆದ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅತಿದೊಡ್ಡ ಮೈತ್ರಿಕೂಟವಾಗಿ ಹೊರಹೊಮ್ಮಿದೆ. ರಾಜ್ಯದ ಯಾವುದೇ ಮಹಾನಗರದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿರುವುದು ಇದೇ ಮೊದಲು. ಜತೆಗೆ ಎರ್ನಾಕುಲಂ ಜಿಲ್ಲೆಯ ತ್ರಿಪುನಿತುರ ನಗರಸಭೆಯಲ್ಲಿ ಮೊದಲ ಬಾರಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಪಾಲಕ್ಕಾಡ್ ನಗರಸಭೆಯಲ್ಲಿ ಸತತ 3ನೇ ಬಾರಿಗೆ ಗೆಲುವು ಸಾಧಿಸಿದೆ. 45 ವರ್ಷಗಳಲ್ಲಿ ತಿರುವನಂತಪುರದ ಅಭಿವೃದ್ಧಿಗೆ ಸಿಪಿಎಂ ಎನೂ ಮಾಡಿಲ್ಲ. ಹೀಗಾಗಿ ಜನ ನಮ್ಮನ್ನು ಸ್ವೀಕರಿಸಿದ್ದಾರೆ. ಶ್ರಮಕ್ಕೆ ಫಲ ಸಿಕ್ಕಿದೆ. ನಾನು ವೈಯಕ್ತಿಕವಾಗಿ ಪ್ರಚಾರದಲ್ಲಿ ತೊಡಗಿದ್ದ ಕಾರಣ ಚುನಾವಣಾ ಫಲಿತಾಂಶದ ಬಗ್ಗೆ ಸ್ಪಷ್ಟತೆ ಇತ್ತು ಎಂದು ಈ ಗೆಲುವಿನ ಬಗ್ಗೆ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

Bondi beach shooting

04:12 PM (IST) Dec 14

ಬೊಂಡಿ ಬೀಚ್‌ ಗುಂಡಿನ ದಾಳಿಗೆ 10 ಸಾವು, ಬರಿಗೈಯಲ್ಲೇ ಶೂಟರ್ ಹಿಡಿದು ಗನ್ ಕಸಿದ ಸಾಹಸಿ ವಿಡಿಯೋ

ಬೊಂಡಿ ಬೀಚ್‌ ಗುಂಡಿನ ದಾಳಿಗೆ 10 ಸಾವು,ಬರಿಗೈಯಲ್ಲೇ ಶೂಟರ್ ಹಿಡಿದು ಗನ್ ಕಸಿದ ಸಾಹಸಿ ವಿಡಿಯೋ, ಯಹೂದಿಗಳ ಹಬ್ಬಕ್ಕೆ ಇಬ್ಬರು ಗನ್‌ಮ್ಯಾನ್ ಎಂಟ್ರಿಕೊಟ್ಟು ಅಮಾಯಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇಲ್ಲೇ ಇದ್ದ ಸಾಮಾನ್ಯನೊಬ್ಬ ಧೈರ್ಯದಿಂದ ಒರ್ವ ಶೂಟರ್ ಹಿಡಿದು ಕತೆ ಮುಗಿಸಿದ್ದಾನೆ.

Read Full Story

04:10 PM (IST) Dec 14

ಇವು ಕೆರೆಯಲ್ಲಿ ಅರಳಿದ ತಾವರೆಗಳಲ್ಲ - ಸಂಭಾರ್ ಸರೋವರದಲ್ಲಿ ಗುಲಾಬಿ ಚಿತ್ತಾರ ಬಿಡಿಸಿದ ಸಾವಿರಾರು ಫ್ಲೇಮಿಂಗೋಗಳು

ಕಾಲಕ್ಕೆ ತಕ್ಕಂತೆ ತನ್ನಲ್ಲಿ ಅಮೋಘ ಜೀವಕಳೆಯನ್ನು ತುಂಬುವ ಪ್ರಕೃತಿಯ ಸೌಂದರ್ಯ ವರ್ಣನಾತೀತ. ಹಾಗೆಯೇ ಪ್ರಕೃತಿಯ ಅಮೋಘ ಸೃಷ್ಟಿಗೆ ಉದಾಹರಣೆಯಾಗಿದೆ ಈಗ ರಾಜಸ್ಥಾನದ ಸಾಂಭಾರ್ ಸರೋವರ. ಹೌದು ಫ್ಲೇಮಿಂಗೋ ಹಕ್ಕಿಗಳ ವಲಸೆಯಿಂದಾಗಿ ಈ ಕೆರೆ ಗುಲಾಬಿ ಬಣ್ಣಕ್ಕೆ ತಿರುಗಿದೆ. 

Read Full Story

03:48 PM (IST) Dec 14

ಮುಂಬೈನಲ್ಲಿ ಸಚಿನ್, ಛೆಟ್ರಿ ಭೇಟಿಯಾಗಲಿರುವ ಮೆಸ್ಸಿ; ಈ ಲಿಸ್ಟ್‌ನಲ್ಲಿದ್ದಾರೆ ಹಲವು ಸೆಲಿಬ್ರಿಟೀಸ್!

ಫುಟ್ಬಾಲ್ ದಂತಕತೆ ಲಿಯೋನೆಲ್ ಮೆಸ್ಸಿ ತಮ್ಮ ಮೂರು ದಿನಗಳ ಭಾರತ ಪ್ರವಾಸದ ಭಾಗವಾಗಿ ಮುಂಬೈಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಸಚಿನ್ ತೆಂಡೂಲ್ಕರ್, ಸುನಿಲ್ ಛೆಟ್ರಿ ಅವರಂತಹ ಕ್ರೀಡಾ ದಿಗ್ಗಜರನ್ನು ಭೇಟಿಯಾಗಲಿದ್ದು, ಚಾರಿಟಿ ಫ್ಯಾಷನ್ ಶೋ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Read Full Story

03:30 PM (IST) Dec 14

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸ ವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಕಾರಣ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಕಠಿಣ ಮಾರ್ಗಸೂಚಿ ಹೊರಡಿಸಲಾಗಿದೆ.

Read Full Story

02:57 PM (IST) Dec 14

ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ

ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಕ್ಯಾಬಿನ್‌ನಲ್ಲಿ ಮಾಲೀಕನ ಜೊತೆ ಸಾಕು ಪ್ರಾಣಿ ಪ್ರಯಾಣ ಮಾಡಬಹುದು. ಇನ್ನು 10 ಕೆಜಿಗಿಂತ ಮೇಲ್ಪಟ್ಟ ಸಾಕು ಪ್ರಾಣಿಗಳ ನಿಯಮದಲ್ಲೂ ಮಹತ್ತರ ಬದಲಾವಣೆ ಮಾಡಲಾಗಿದೆ.

Read Full Story

01:53 PM (IST) Dec 14

U19 Asia Cup - ಪಾಕಿಸ್ತಾನ ಎದುರು ಮುಗ್ಗರಿಸಿದ 14 ವರ್ಷದ ವೈಭವ್ ಸೂರ್ಯವಂಶಿ; ಸ್ಪರ್ಧಾತ್ಮಕ ಮೊತ್ತದತ್ತ ಯುವ ಪಡೆ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಅಂಡರ್ 19 ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆರಂಭಿಕ ಆಘಾತ ಅನುಭವಿಸಿತು. ಕಳೆದ ಪಂದ್ಯದ ಶತಕವೀರ ವೈಭವ್ ಸೂರ್ಯವಂಶಿ ಅಲ್ಪ ಮೊತ್ತಕ್ಕೆ ಔಟಾದರು, ಆದರೆ ಆರೋನ್ ಜಾರ್ಜ್‌ ಅವರ 85 ರನ್‌ಗಳ ನೆರವಿನಿಂದ ಭಾರತ ಚೇತರಿಸಿಕೊಂಡು ಸ್ಪರ್ಧಾತ್ಮಕ ಮೊತ್ತದತ್ತ ಸಾಗಿತು.
Read Full Story

01:07 PM (IST) Dec 14

ಮೀನುಗಾರ ಬಲೆಗೆ ಸಿಲುಕಿ ತೀರಕ್ಕೆ ಬಂದ ಭಾರಿ ಗಾತ್ರದ ಶಾರ್ಕ್‌ - ವಾಪಸ್ ಸಮುದ್ರಕ್ಕೆ ಬಿಟ್ಟ ಕಡಲ ಮಕ್ಕಳು..

ಕೇರಳದ ವರ್ಕಲಾ ಬೀಚ್‌ನಲ್ಲಿ ಮೀನುಗಾರರ ಬಲೆಗೆ ಸಿಲುಕಿ ದಡಕ್ಕೆ ಬಂದಿದ್ದ ಬೃಹತ್ ಶಾರ್ಕ್ ಮೀನನ್ನು ಸ್ಥಳೀಯರು ಮತ್ತು ಪ್ರವಾಸಿಗರು ಸೇರಿ ರಕ್ಷಿಸಿದ್ದಾರೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್‌ಗಳ ಸಹಾಯದಿಂದ ಮೀನನ್ನು ಯಶಸ್ವಿಯಾಗಿ ಮರಳಿ ಸಮುದ್ರಕ್ಕೆ ಬಿಡಲಾಗಿದೆ.

Read Full Story

12:50 PM (IST) Dec 14

ಸಂಜು ಇನ್, ಗಿಲ್ ಔಟ್ - ಮೂರನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ; ಯಾರಿಗೆಲ್ಲಾ ಸಿಗಲಿದೆ ಚಾನ್ಸ್?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು, ಸರಣಿ 1-1 ಸಮಬಲಗೊಂಡಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು, ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವ ನಿರೀಕ್ಷೆಯಿದೆ.
Read Full Story

11:53 AM (IST) Dec 14

ಆತಂಕಕಾರಿ ಹಂತಕ್ಕೆ ದೆಹಲಿ ಹವೆ - 430ರ ಗಡಿ ದಾಟಿದ ವಾಯು ಗುಣಮಟ್ಟ ಸೂಚ್ಯಂಕ - ವಾರದಲ್ಲಿ ಕೆಲವೇ ದಿನ ಮಕ್ಕಳಿಗೆ ಶಾಲೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಗುಣಮಟ್ಟ ಕಳವಳಕಾರಿ ಮಟ್ಟಕ್ಕೆ ಕುಸಿದಿರುವ ಕಾರಣ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆಯ (ಜಿಆರ್‌ಎಪಿ) 4ನೇ ಹಂತದ ಅಡಿಯಲ್ಲಿ ಮಾಲಿನ್ಯ ತಡೆ ನಿರ್ಬ೦ಧಗಳನ್ನು ಶನಿವಾರ ಜಾರಿಗೊಳಿಸಲಾಗಿದೆ.

Read Full Story

11:37 AM (IST) Dec 14

ಒಂದು ಕಾಲದಲ್ಲಿ ಮನೆ ಬಾಡಿಗೆ ಕಟ್ಟಲೂ ಹಣಕ್ಕಾಗಿ ಪರದಾಡುತ್ತಿದ್ದ WWE ರೆಸ್ಲರ್ ಜಾನ್ ಸಿನಾ ಸಂಪತ್ತು ಇಷ್ಟೊಂದಾ?

WWE ಸೂಪರ್‌ಸ್ಟಾರ್ ಜಾನ್ ಸಿನಾ ತಮ್ಮ 23 ವರ್ಷಗಳ ವೃತ್ತಿಪರ ರೆಸ್ಲಿಂಗ್ ಬದುಕಿಗೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ತಮ್ಮ ಕೊನೆಯ ಪಂದ್ಯದಲ್ಲಿ ಗುಂಟರ್ ವಿರುದ್ಧ ಸೋತರೂ, ಕುಸ್ತಿ ಮತ್ತು ಸಿನಿಮಾಗಳ ಮೂಲಕ ಸುಮಾರು 664 ಕೋಟಿ ರುಪಾಯಿ ಆಸ್ತಿಯನ್ನು ಗಳಿಸಿ ಯಶಸ್ವಿ ಪಯಣವನ್ನು ಪೂರ್ಣಗೊಳಿಸಿದ್ದಾರೆ.
Read Full Story

11:13 AM (IST) Dec 14

ಟ್ರಂಪ್ ನಿರ್ಧಾರಕ್ಕೆ 20 ರಾಜ್ಯಗಳ ಸೆಡ್ಡು - ಅಮೆರಿಕದಲ್ಲೇ ಶುರುವಾಯ್ತು ಸಮರ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಎಚ್1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರದ ವಿರುದ್ಧ 20 ರಾಜ್ಯಗಳು ಕಾನೂನು ಹೋರಾಟ ಆರಂಭಿಸಿವೆ. ಇದೇ ವೇಳೆ, ಭಾರತದ ಮೇಲೆ ಶೇ.50ರಷ್ಟು ತೆರಿಗೆ ಹೇರುವ ಪ್ರಸ್ತಾಪಕ್ಕೆ ಮೂವರು ಪ್ರಭಾವಿ ಅಮೆರಿಕನ್ ಸಂಸದರು ವಿರೋಧ ವ್ಯಕ್ತಪಡಿಸಿ, ನಿರ್ಣಯ ಮಂಡಿಸಿದ್ದಾರೆ.
Read Full Story

10:42 AM (IST) Dec 14

ನಿರ್ಮಲಾ ಸೀತಾರಾಮನ್ ಭಾರತದ ನಂ.1 ಪ್ರಭಾವಿ ಮಹಿಳೆ - ವಿಶ್ವದ ಪ್ರಭಾವಿಗಳಲ್ಲಿ ಭಾರತದ ಮೂವರಿಗೆ ಸ್ಥಾನ

ಫೋರ್ಬ್ಸ್‌ ಮ್ಯಾಗಜಿನ್ 2025ರ ಪ್ರಭಾವಿ ಸ್ತ್ರೀಯರ ಪಟ್ಟಿ ಬಿಡುಗಡೆ ಮಾಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

Read Full Story

10:05 AM (IST) Dec 14

Ind vs SA 3rd T20I - ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬಳಿಕ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಹಲವು ಪ್ರಶ್ನೆಗಳನ್ನು ಎದುರಿಸುತ್ತಿದೆ. ಮೂರನೇ ಟಿ20 ಪಂದ್ಯದಲ್ಲಿ, ಕಳಪೆ ಫಾರ್ಮ್‌ನಲ್ಲಿರುವ ಶುಭ್‌ಮನ್‌ ಗಿಲ್‌ ಮತ್ತು ಸೂರ್ಯಕುಮಾರ್ ಯಾದವ್‌ ಮೇಲೆ ಎಲ್ಲರ ಕಣ್ಣಿದ್ದು, ಇದು ಅವರಿಗೆ ಅಗ್ನಿಪರೀಕ್ಷೆಯಾಗಲಿದೆ.
Read Full Story

09:41 AM (IST) Dec 14

ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು - ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ

ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನದ ಆವಶ್ಯಕತೆಯಿದೆ. ಸರ್ಕಾರ ಅಥವಾ ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನುವುದು ಸರಿಯಲ್ಲ. ಪಕ್ಷವು ಸಂಕುಚಿತ ಮನೋಭಾವ ಬಿಟ್ಟು ಉದಾರ ಮನಃ ಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಮಾಜಿ ಕಾಂಗ್ರೆಸ್ಸಿಗ ಅಶ್ವನಿ ಕುಮಾರ್ ಹೇಳಿದ್ದಾರೆ.

Read Full Story

09:00 AM (IST) Dec 14

ಲಿಯೋನೆಲ್ ಮೆಸ್ಸಿ ನೋಡಲಾಗದೇ ರೊಚ್ಚಿಗೆದ್ದ ಕೋಲ್ಕತಾ! ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಪೊಲೀಸರಿಂದ ಲಾಠಿಚಾರ್ಜ್

ಫುಟ್ಬಾಲ್‌ ದಂತಕತೆ ಲಿಯೋನೆಲ್‌ ಮೆಸ್ಸಿಯವರ ಕೋಲ್ಕತಾ ಭೇಟಿಯು ರಾಜಕೀಯ ಮೇಲಾಟ ಮತ್ತು ದುರಾಡಳಿತದಿಂದಾಗಿ ಗದ್ದಲ, ಗಲಾಟೆಯಲ್ಲಿ ಅಂತ್ಯಗೊಂಡಿತು. ದುಬಾರಿ ಟಿಕೆಟ್‌ ಖರೀದಿಸಿದ್ದ ಸಾವಿರಾರು ಅಭಿಮಾನಿಗಳು ನಿರಾಸೆಗೊಂಡು ದಾಂಧಲೆ ನಡೆಸಿದರು, ಇದರಿಂದಾಗಿ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು.
Read Full Story

08:31 AM (IST) Dec 14

ಪಶ್ಚಿಮ ಬಂಗಾಳದಲ್ಲಿ 1 ಕೋಟಿ ನಕಲಿ ಮತದಾರರಿಗೆ ಕೊಕ್ ಸಾಧ್ಯತೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ 85 ಲಕ್ಷ ಮತದಾರರ ಮಾಹಿತಿಗಳು ತಪ್ಪಾಗಿ ದಾಖಲಾಗಿರುವುದು ಬೆಳಕಿಗೆ ಬಂದಿದೆ.

Read Full Story

08:09 AM (IST) Dec 14

ಜಮ್ಮುವಿನ ಜೈಲಿನಲ್ಲಿ ಸುರಂಗ ತೋಡಿ ಜೈಲಿನಿಂದ ಪರಾರಿಗೆ ಯತ್ನಿಸಿದ್ದಿ - ಅಜ‌ರ್

'ಜಮ್ಮುವಿನ ಕೋಟ್ ಬಲ್ವಾಲ್ ಜೈಲಿನಿಂದ ತಪ್ಪಿಸಿಕೊಳ್ಳಲು ಸುರಂಗ ಕೊರೆದಿದ್ದೆವು. ಆದರೆ ಕೊನೆಯ ಕ್ಷಣದಲ್ಲಿ ಸಿಕ್ಕಿಹಾಕಿಕೊಂಡು ಚಿತ್ರಹಿಂಸೆ ಅನುಭವಿಸಿದೆ' ಎಂದು ಜೈಷ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿದ್ದಾನೆ.

Read Full Story

07:16 AM (IST) Dec 14

ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡೇಕಿಲ್ಲ - ಹೈಕೋರ್ಟ್ ಮಹತ್ವದ ತೀರ್ಪು

ವಿಚ್ಛೇದಿತ ಮಹಿಳೆಯು ದುಡಿಯುವ ಸಾಮರ್ಥ್ಯ ಹೊಂದಿದ್ದು, ಜೀವನ ನಡೆಸಲು ಶಕ್ತಳಾಗಿದ್ದರೆ ಪತಿಯಿಂದ ಜೀವನಾಂಶ ಪಡೆಯುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

Read Full Story

More Trending News