ಪುಣೆ: ‘ಡಿ.19ಕ್ಕೆ ಅಮೆರಿಕದಲ್ಲಿ ವಿವಾದಾತ್ಮಕ ಜೆಫ್ರಿ ಎಪ್ಸ್ಟೀನ್ ಲೈಂ*ಗಿಕ ಕಡತಗಳು ಬಿಡುಗಡೆಯಾಗಲಿವೆ. ಅದು ಭಾರತದ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಹಾಗೇನಾದರೂ ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದಿಂದ ಕೆಳಗಿಳಿಯುತ್ತಾರೆ. ಮಹಾರಾಷ್ಟ್ರದಿಂದಲೇ ಒಬ್ಬರು ಪ್ರಧಾನಿಯಾಗುವ ಸಾಧ್ಯತೆಯಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಜೆಫ್ರಿ ಎಪ್ಸ್ಟೀನ್ ಅಮೆರಿಕದ ಲೈಂ*ಗಿಕ ಅಪರಾಧಿ. ಅಪ್ರಾಪ್ತ ಬಾಲಕಿಯರನ್ನು ಲೈಂ*ಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ 2019ರಲ್ಲಿ ಜೈಲಿನಲ್ಲಿದ್ದಾಗಲೇ ಸಾವನ್ನಪ್ಪಿದ್ದ. ಆತನ ಲೈಂ*ಗಿಕ ಹಗರಣಗಳ ರಹಸ್ಯ ದಾಖಲೆಗಳನ್ನು ಬಿಡುಗಡೆ ಮಾಡುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಹಿ ಹಾಕಿದ್ದಾರೆ. ಇದರಲ್ಲಿ ಅನೇಕ ಗಣ್ಯರ ಹೆಸರಿವೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಚವಾಣ್ ಈ ಹೇಳಿಕೆ ನೀಡಿದ್ದಾರೆ.
11:43 PM (IST) Dec 15
Mock Auction Shock: Cameroon Green Sold to KKR for Record ₹30.5 Crore Ahead of IPL 2026 Mini-Auction ಕೆಕೆಆರ್ ಐಪಿಎಲ್ 2026 ರ ಹರಾಜಿನಲ್ಲಿ 64.30 ಕೋಟಿ ರೂಪಾಯಿಗಳ ಅತಿ ದೊಡ್ಡ ಹಣದೊಂದಿಗೆ ಪ್ರವೇಶಿಸಲಿದೆ.
11:20 PM (IST) Dec 15
Squash World Cup 2025: ಭಾರತ ಸ್ಕ್ವಾಷ್ ವಿಶ್ವಕಪ್ ಗೆಲುವು ಸಾಧಿಸಿದೆ. ಇದರೊಂದಿಗೆ ಭಾರತ ಮೊದಲ ಬಾರಿಗೆ ಗೆಲುವಿನ ರುಚಿ ಸವಿಯಿತು. ಅಂತಿಮ ಪಂದ್ಯದಲ್ಲಿ ಹಾಂಗ್ ಕಾಂಗ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತು.
10:52 PM (IST) Dec 15
ರಿಲಯನ್ಸ್ ಜಿಯೋ ಹ್ಯಾಪಿ ನ್ಯೂ ಇಯರ್ ಪ್ಲಾನ್ 2026 ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಪ್ಲಾನ್ ನಲ್ಲಿ ಡೇಟಾ, ಕರೆ ಮತ್ತು SMS ಜೊತೆಗೆ, ನೀವು ಕಡಿಮೆ ಬೆಲೆಗೆ 10 ಕ್ಕೂ ಹೆಚ್ಚು OTT ಆಪ್ ಗಳಿಗೆ ಉಚಿತ ಪ್ರವೇಶ ನೀಡಲಿದೆ.
09:19 PM (IST) Dec 15
08:17 PM (IST) Dec 15
Shivali Prab Photos: ಜನಪ್ರಿಯ ಮರಾಠಿ ನಟಿ ಶಿವಾಲಿ ಪರಬ್ ತಮ್ಮ ಇತ್ತೀಚಿನ ಹಾಟ್ ಫೋಟೋಶೂಟ್ಗಾಗಿ ಸುದ್ದಿಯಲ್ಲಿದ್ದಾರೆ. ಹಳದಿ ಸೀರೆ, ಬ್ಲೇಜರ್ ಧರಿಸಿ, ಸೊಂಟದ ಬಳಿ ಕನ್ನಡಕ ಇಟ್ಟುಕೊಂಡು ಪೋಸ್ ನೀಡಿದ ಫೋಟೋದಿಂದಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟ್ರೋಲ್ಗೆ ಒಳಗಾಗಿದ್ದಾರೆ.
08:00 PM (IST) Dec 15
07:38 PM (IST) Dec 15
ಮದುವೆಗೆ ಕೆಲವೇ ಗಂಟೆಗಳ ಮೊದಲು, ವಧುವೊಬ್ಬಳು ತನ್ನ ಮಾಜಿ ಪ್ರೇಮಿಯನ್ನು ಭೇಟಿಯಾಗಿ ಅಪ್ಪಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಕುಟುಂಬದ ಒತ್ತಡದಿಂದ ಬೇರೆಯವರನ್ನು ಮದುವೆಯಾಗುತ್ತಿರುವ ಆಕೆ, ಕೊನೆಯ ಬಾರಿ ಪ್ರೇಮಿಗೆ ವಿದಾಯ ಹೇಳಲು ಬಂದಿದ್ದಳು.
07:32 PM (IST) Dec 15
07:11 PM (IST) Dec 15
ಡಿಜಿಟಲ್ ಯುಗದಲ್ಲಿ ಕ್ಯೂಆರ್ ಕೋಡ್ ಪಾವತಿ ಸಾಮಾನ್ಯವಾಗಿದ್ದು, ಇದರೊಂದಿಗೆ ಮೋಸದ ಜಾಲವೂ ಬೆಳೆಯುತ್ತಿದೆ. ಪಾರ್ಕಿಂಗ್ನಂತಹ ಸಾರ್ವಜನಿಕ ಸ್ಥಳಗಳಲ್ಲಿ ನಕಲಿ ಕ್ಯೂಆರ್ ಕೋಡ್ ಅಂಟಿಸಿ ವಂಚನೆ ಹೆಚ್ಚಾಗಿದ್ದು, ಇದನ್ನು ಗುರುತಿಸುವುದು ಮತ್ತು ಮೋಸ ಹೋದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ
06:30 PM (IST) Dec 15
ಮಹಿಳಾ ಆಯೋಗ ಕೂಡ ಈ ಸೂಕ್ಷ್ಮ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆಯನ್ನು ಪ್ರಾರಂಭಿಸಿದೆ. ಈ ಪರೀಕ್ಷೆಯು ಗೌಪ್ಯತೆಯ ಉಲ್ಲಂಘನೆ ಮಾತ್ರವಲ್ಲದೆ ತಾರತಮ್ಯವೂ ಆಗಿದೆ ಎಂದು ಮಹಿಳಾ ಹಕ್ಕುಗಳ ಕಾರ್ಯಕರ್ತರು ಹೇಳಿದ್ದಾರೆ.
05:44 PM (IST) Dec 15
Congress Rebel H. Rasheed Wins Palakkad Polls, Declares Support for Secular Front; Will Not Join BJP ಪಕ್ಷದಿಂದ ಉಚ್ಚಾಟನೆಗೊಂಡಿರುವುದರಿಂದ ತಾನು ಸ್ವತಂತ್ರ ಅಭ್ಯರ್ಥಿಯಾಗಿಯೇ ಉಳಿಯುತ್ತೇನೆ ಎಂದು ರಶೀದ್ ಹೇಳಿದ್ದಾರೆ.
05:32 PM (IST) Dec 15
ಬೆಂಗಳೂರು: 2026ರ ಐಪಿಎಲ್ ಮಿನಿ ಹರಾಜು ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಹೀಗಿರುವಾಗಲೇ 19ನೇ ಆವೃತ್ತಿಯ ಐಪಿಎಲ್ ಹರಾಜಿಗೂ ಮುನ್ನ ಟಾಪ್ 06 ದುಬಾರಿ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ.
05:23 PM (IST) Dec 15
04:47 PM (IST) Dec 15
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ 'ಮೋದಿ ತೇರಿ ಕಬರ್ ಖುದೇಗಿ' ಎಂಬ ಘೋಷಣೆ ಕೂಗಲಾಗಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಘೋಷಣೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಮೊಘಲರಂತೆ ಅಂತ್ಯ ಕಾಣಲಿದೆ ಎಂದು ಹೇಳಿದೆ.
04:46 PM (IST) Dec 15
ತ್ರಿಕ್ಕಾಕರದ ಸ್ವತಂತ್ರ ಅಭ್ಯರ್ಥಿ ಸಾಬು ಫ್ರಾನ್ಸಿಸ್, ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ 12,000 ಲಡ್ಡುಗಳನ್ನು ತಯಾರಿಸುವ ಮೂಲಕ ತಮ್ಮ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದರು. ಇದು ವ್ಯರ್ಥ ಕೂಡ ಆಗಲಿಲ್ಲ. ಆತ 142 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
04:25 PM (IST) Dec 15
ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್, ಮುಂಬೈನಲ್ಲಿ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ವೇಳೆ ಸಹ ಆಟಗಾರರನ್ನು ಬದಿಗೆ ಸರಿಸಿ, ಅನುಮತಿ ಇಲ್ಲದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅವರ ವರ್ತನೆಯು ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.
04:03 PM (IST) Dec 15
ಮೋದಿ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಯನ್ನು ರದ್ದುಗೊಳಿಸಿ, 'ವಿಕಸಿತ ಭಾರತ- ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಖಾತರಿ ಮಿಷನ್ (ಗ್ರಾಮೀಣ) (ವಿಬಿ-ಜಿ RAM ಜಿ) ಮಸೂದೆ, 2025' ಎಂಬ ಹೊಸ ಕಾನೂನನ್ನು ಪರಿಚಯಿಸುತ್ತಿದೆ.
03:46 PM (IST) Dec 15
ರಾಮ ಮಂದಿರ ಚಳವಳಿಯ ಹಿರಿಯ ಸಂತ ಮತ್ತು ಮಾಜಿ ಸಂಸದ ಡಾ. ರಾಮ್ ವಿಲಾಸ್ ದಾಸ್ ವೇದಾಂತಿ ಅವರು ಮಧ್ಯಪ್ರದೇಶದ ರೇವಾದಲ್ಲಿ ನಿಧನರಾಗಿದ್ದಾರೆ. ರಾಮ ಜನ್ಮಭೂಮಿ ನ್ಯಾಸ್ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದ ಅವರು, ರಾಮಕಥಾ ಪ್ರವಚನದ ವೇಳೆ ಆರೋಗ್ಯ ಹದಗೆಟ್ಟು ಕೊನೆಯುಸಿರೆಳೆದಿದ್ದಾರೆ.
03:28 PM (IST) Dec 15
ಓಪನರ್ ಆಗಿ ನಿರಾಸೆ ಮೂಡಿಸುತ್ತಿರುವ ಶುಭಮನ್ ಗಿಲ್ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮುಂದಿನ 2 ಪಂದ್ಯಗಳಲ್ಲಿ ಅವಕಾಶ ನೀಡಬೇಕು ಎಂದು ಮಾಜಿ ಆಟಗಾರ ಆರ್. ಅಶ್ವಿನ್ ಹೇಳಿದ್ದಾರೆ. ಒಂದು ವೇಳೆ ಆ ಪಂದ್ಯಗಳಲ್ಲೂ ಗಿಲ್ ವಿಫಲವಾದರೆ, ಅವರನ್ನು ತಂಡದಿಂದ ಕೈಬಿಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.
02:44 PM (IST) Dec 15
ಐಐಟಿ ಮದ್ರಾಸ್, ಬಿಟೆಕ್ ಪದವಿ ಪೂರ್ಣಗೊಳಿಸಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ನಂತರ ಬಿಎಸ್ಸಿ ಪದವಿಯೊಂದಿಗೆ ನಿರ್ಗಮಿಸುವ ಹೊಸ ಆಯ್ಕೆಯನ್ನು ಪರಿಚಯಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿರುವ ಈ ಕ್ರಮವು, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಗುರಿ ಹೊಂದಿದೆ.
01:47 PM (IST) Dec 15
ಅರ್ಜೆಂಟೀನಾದ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ತಮ್ಮ ಭಾರತ ಪ್ರವಾಸದಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾದರು. ಈ ಐತಿಹಾಸಿಕ ಭೇಟಿಯ ವೇಳೆ ಇಬ್ಬರೂ ದಿಗ್ಗಜರು ವಿಶೇಷ ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು.
01:11 PM (IST) Dec 15
ಉತ್ತರ ಪ್ರದೇಶದ ಅಮ್ರೋಹಾದಲ್ಲಿ, ನಿದ್ರಿಸುತ್ತಿದ್ದ ಪೋಷಕರ ಮಧ್ಯೆ ಸಿಲುಕಿ ಒಂದು ತಿಂಗಳ ನವಜಾತ ಶಿಶು ಉಸಿರುಕಟ್ಟಿ ಸಾವನ್ನಪ್ಪಿದೆ. ಡಿಟೇಲ್ ಸ್ಟೋರಿ ಇಲ್ಲಿದೆ.
01:00 PM (IST) Dec 15
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಜಯ ಸಾಧಿಸಿದರೂ, ನಾಯಕ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್ ಚಿಂತೆಗೆ ಕಾರಣವಾಗಿದೆ. ಪಂದ್ಯದ ನಂತರ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿದ ಸೂರ್ಯ, ತಾನು ಔಟ್ ಆಫ್ ಫಾರ್ಮ್ ಆಗಿಲ್ಲ ಎಂದು ಹೇಳಿದ್ದಾರೆ.
11:51 AM (IST) Dec 15
10:53 AM (IST) Dec 15
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಜಯ ಸಾಧಿಸಿ, ಸರಣಿಯಲ್ಲಿ 2-1ರ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ಬೌಲರ್ಗಳ ದಾಳಿಗೆ ತತ್ತರಿಸಿದ ಹರಿಣಗಳ ಪಡೆ 117 ರನ್ಗಳಿಗೆ ಆಲೌಟ್ ಆಯಿತು. ಸೋಲಿನ ಬಗ್ಗೆ ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್ರಮ್ ಕಾರಣ ಬಿಚ್ಚಿಟ್ಟಿದ್ದಾರೆ.
09:32 AM (IST) Dec 15
ಪ್ರಧಾನಿ ಮೋದಿ ತಮಿಳುನಾಡು ಪ್ರವಾಸ ಕೈಗೊಂಡು ರೈತರೊಂದಿಗೆ ಪೊಂಗಲ್ ಆಚರಿಸುವ ಸಾಧ್ಯತೆಯಿದ್ದು, ಇದು ರಾಜಕೀಯ ಮಹತ್ವ ಪಡೆದಿದೆ. ತಮಿಳುನಾಡಿನ ಗ್ರಾಮೀಣ ಮತ್ತು ರೈತಾಪಿ ವರ್ಗದ ಮತ ಸೆಳೆಯಲೂ ಮುಂದಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
09:17 AM (IST) Dec 15
08:56 AM (IST) Dec 15
ಡಾಲರ್ ಎದುರು ರುಪಾಯಿ ಮೌಲ್ಯ ಕುಸಿಯುತ್ತಿರೋದರಿಂದ ಸಾರ್ವಜನಿಕರಿಗೆ ಬೆಲೆ ಏರಿಕೆ ಬಿಸಿ ತಾಗಲಿದೆ. ಆಮದು ವೆಚ್ಚಗಳು ಹೆಚ್ಚಾದ ಹಿನ್ನೆಲೆ ಬೆಲೆ ಏರಿಕೆ ಅನಿವಾರ್ಯ ಎಂದು ಉತ್ಪಾದಕರು ಮಾಹಿತಿ ನೀಡಿದ್ದಾರೆ.
08:08 AM (IST) Dec 15
ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ತಮ್ಮ ಭಾರತ ಪ್ರವಾಸದ ಭಾಗವಾಗಿ ಮುಂಬೈಗೆ ಭೇಟಿ ನೀಡಿದರು. ಈ ವೇಳೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮತ್ತು ಫುಟ್ಬಾಲ್ ನಾಯಕ ಸುನಿಲ್ ಚೆಟ್ರಿ ಅವರನ್ನು ಭೇಟಿಯಾಗಿ, ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು.
07:58 AM (IST) Dec 15
ಪಂಜಾಬ್ನ 80 ವರ್ಷದ ವೃದ್ಧರೊಬ್ಬರು 62 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಭೂ ವ್ಯಾಜ್ಯವನ್ನು ಗೆದ್ದಿದ್ದಾರೆ. 1963ರಲ್ಲಿ ತಮ್ಮ ತಾಯಿ ಖರೀದಿಸಿದ್ದ ಸೈಟುಗಳಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ವೃದ್ಧರ ಪರ ತೀರ್ಪು ನೀಡಿದೆ.
07:49 AM (IST) Dec 15
‘ವೋಟ್ ಚೋರ್ ಗದ್ದೀ ಛೋಡ್’ ರ್ಯಾಲಿಯಲ್ಲಿ ಮಾತನಾಡಿದ ಖರ್ಗೆ, ‘ಬಿಜೆಪಿಗರು ದ್ರೋಹಿಗಳು ಮತ್ತು ಡ್ರಾಮೆಬಾಜ್ (ನಾಟಕ) ಮಾಡುತ್ತಾರೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದರು.
07:36 AM (IST) Dec 15
ಚೌಹಾಣ್ ಅವರನ್ನು ಪಾಕ್ನ ಐಎಸ್ಐ ಗುರಿ ಮಾಡಿದೆ ಎಂಬ ಮಾಹಿತಿ ಲಭಿಸಿದ ತಕ್ಷಣವೇ ಕೇಂದ್ರ ಗೃಹ ಇಲಾಖೆಯು ಕೂಡಲೇ ಮಧ್ಯ ಪ್ರದೇಶ ಡಿಜಿಪಿ ಮತ್ತು ದೆಹಲಿಯ ವಿಶೇಷ ಕಮಿಷನರ್ರಿಗೆ ಪತ್ರ ಬರೆದು ಭದ್ರತೆ ಹೆಚ್ಚಿಸುವಂತೆ ಆದೇಶಿಸಿದೆ.