ನಾಗ್ಪುರ: ‘ಛತ್ರಪತಿ ಶಿವಾಜಿ ಮಹಾರಾಜರ ದಾರಿಯಲ್ಲೇ ಟಿಪ್ಪು ಸುಲ್ತಾನರೂ ನಡೆದಿದ್ದಾರೆ. ಟಿಪ್ಪುವನ್ನು ಶಿವಾಜಿ ಮಹಾರಾಜರಿಗೆ ಸಮಾನವಾಗಿ ಕಾಣಬೇಕು’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ಹರ್ಷವರ್ಧನ್ ಸಪ್ಕಾಲ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಸಿಎಂ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದಾರೆ.
‘ಟಿಪ್ಪು ಸುಲ್ತಾನ್ ಒಬ್ಬ ಯೋಧ. ಆತ ಬ್ರಿಟಿಷರ ವಿರುದ್ಧ ಹೋರಾಡಿದ ಧೈರ್ಯವನ್ನು ತೋರಿಸಿದವನು. ಮಣ್ಣಿನ ಮಗ. ಅವನೆಂದೂ ವಿಷಕಾರಿ, ವಿನಾಶಕಾರಿ ವಿಚಾರಗಳನ್ನು ಸ್ವೀಕರಿಸಲಿಲ್ಲ. ಶೌರ್ಯದ ಸಂಕೇತವಾಗಿ, ಟಿಪ್ಪು ಸುಲ್ತಾನನನ್ನು ಛತ್ರಪತಿ ಶಿವಾಜಿ ಮಹಾರಾಜರಿಗೆ ಸಮಾನವಾಗಿ ನೋಡಬೇಕು’ ಎಂದು ಸಪ್ಕಾಲ್ ಹೇಳಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ‘ಶಿವಾಜಿ ಮಹಾರಾಜರು ಸ್ವರಾಜ್ಯವನ್ನು ಸ್ಥಾಪಿಸಿ ಜನರನ್ನು ಮೊಘಲ್ ಆಳ್ವಿಕೆಯಿಂದ ಮುಕ್ತಗೊಳಿಸಿದರು. ಮತ್ತೊಂದೆಡೆ, ಟಿಪ್ಪು ಸಾವಿರಾರು ಹಿಂದೂಗಳನ್ನು ಕೊಂದ. ನಾವು ಈ ಹೋಲಿಕೆಯನ್ನು ಸಹಿಸುವುದಿಲ್ಲ’ ಎಂದು ಕಿಡಿ ಕಾರಿದ್ದಾರೆ.
10:52 AM (IST) Feb 15
10:51 AM (IST) Feb 15
ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಯ ಸಂಚಿನ ಆರೋಪ ಎದುರಿಸುತ್ತಿದ್ದ ಭಾರತ ಮೂಲದ ನಿಖಿಲ್ ಗುಪ್ತಾ, ಅಮೆರಿಕದ ನ್ಯಾಯಾಲಯದಲ್ಲಿ ತನ್ನ ಅಪರಾಧ ಒಪ್ಪಿಗೆ ಈ ಹಿಂದೆ ಆರೋಪಗಳನ್ನು ನಿರಾಕರಿಸಿದ್ದ ಆತನ ಮೇಲೆ ಇದೀಗ ದೋಷಾರೋಪ ಹೊರಿಸಲಾಗಿದ್ದು, ಮೇ 29 ರಂದು ತೀರ್ಪು ಪ್ರಕಟವಾಗಲಿದೆ.
10:42 AM (IST) Feb 15
ಪಾಕಿಸ್ತಾನದ ಸೂಪರ್ ಸ್ಟಾರ್ ಬ್ಯಾಟರ್ ಹಾಗೂ ರನ್ ಮಷೀನ್ ಎಂದೇ ಗುರುತಿಸಿಕೊಂಡಿರುವ ಬಾಬರ್ ಅಜಂ ಅವರ ಪ್ರದರ್ಶನ ಭಾರತದ ಮೇಲೆ ಹೇಗಿದೆ ಎನ್ನುವುದನ್ನು ನೋಡೋಣ ಬನ್ನಿ.
09:54 AM (IST) Feb 15
Mahindra Udo ಮಹೀಂದ್ರಾ ಸಂಸ್ಥೆಯು 'ಆಟೋ ಪ್ಲೇನ್' ಪರಿಕಲ್ಪನೆಯ ಹೊಸ ಎಲೆಕ್ಟ್ರಿಕ್ ಆಟೋ 'ಉಡೋ'ವನ್ನು ಬಿಡುಗಡೆ ಮಾಡಿದೆ. ಒಮ್ಮೆ ಚಾರ್ಜ್ ಮಾಡಿದರೆ 200 ಕಿ.ಮೀ. ಮೈಲೇಜ್ ನೀಡುವ ಈ ವಾಹನವು, ರಿವರ್ಸ್ ಥ್ರೋಟಲ್, ಮೂರು ಡ್ರೈವಿಂಗ್ ಮೋಡ್ಗಳಂತಹ ಸ್ಮಾರ್ಟ್ ವೈಶಿಷ್ಟ್ಯಗಳಿವೆ.
09:31 AM (IST) Feb 15
ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಪಂದ್ಯಕ್ಕೆ ಈಗ ಮಳೆಯ ಭೀತಿ ಎದುರಾಗಿದೆ. ಫೆಬ್ರವರಿ 15 ರಂದು ಐಸಿಸಿ ಪುರುಷರ ಟಿ20 ವಿಶ್ವಕಪ್ನ ಗ್ರೂಪ್ ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಳೆಯಿಂದಾಗಿ ನಡೆಯೋದೇ ಡೌಟ್ ಎನ್ನಲಾಗ್ತಿದೆ.
09:10 AM (IST) Feb 15
ಕೊಲಂಬೊ: ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ಇಂದು ನಡೆಯಲಿದೆ. ಈ ಮ್ಯಾಚ್ನಲ್ಲಿ ಆಟಗಾರರ ನಡುವೆ ಶೇಕ್ಹ್ಯಾಂಡ್ ಇರುತ್ತಾ ಎನ್ನುವ ಪ್ರಶ್ನೆಗೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಉತ್ತರಿಸಿದ್ದಾರೆ.
08:48 AM (IST) Feb 15
ಕೊಲಂಬೊ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯದಲ್ಲಿಂದು ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ಭಾರತ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಕನ್ಫರ್ಮ್ ಆಗಿದೆ. ಭಾರತ ಸಂಭಾವ್ಯ ತಂಡ ಹೀಗಿದೆ.