LIVE NOW
Published : Jul 15, 2026, 07:26 AM ISTUpdated : Jul 15, 2026, 09:59 AM IST

India Latest News Live: ಇಂಗ್ಲೆಂಡ್ ವಿರುದ್ಧ ರೋಹಿತ್-ಕೊಹ್ಲಿ ವೈಫಲ್ಯ; ಕಮ್‌ಬ್ಯಾಕ್ ಪಂದ್ಯದಲ್ಲಿ ರೋ-ಕೋ ಜೋಡಿ ಫೇಲ್

ಸಾರಾಂಶ

ಕಾಶಿ ವಿಶ್ವನಾಥ ಮಂದಿರದ ಆವರಣದಲ್ಲಿರುವ ಜ್ಞಾನವಾಪಿ ಮಸೀದಿ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಗೊಳಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್‌ ನೀಡಿದ್ದ ಸಲಹೆಯನ್ನು ಹಿಂದೂ, ಮುಸ್ಲಿಂ ಸಮುದಾಯದವರು ತಿರಸ್ಕರಿಸಿದ್ದಾರೆ. ನ್ಯಾಯಾಲಯಗಳೇ ಈ ವಿಷಯವನ್ನು ನಿರ್ಧರಿಸಬೇಕು ಎಂದು ಎರಡೂ ಕಡೆಯವರು ಕೋರಿದ್ದಾರೆ.

ಸುಪ್ರೀಂ ಕೋರ್ಟ್‌ ಪ್ರಕರಣಗಳ ಇತ್ಯರ್ಥಕ್ಕಾಗಿ ಆ.21-23ರ ತನಕ ವಿಶೇಷ ಲೋಕ ಅದಾಲತ್‌ ಆಯೋಜಿಸಿದೆ. ಅದಕ್ಕೂ ಮುಂಚಿತವಾಗಿ ‘ರಾಷ್ಟ್ರಾದ್ಯಂತ ಮಧ್ಯಸ್ಥಿಕೆ ತೀರ್ಪು ಮತ್ತು ವಿವಾದಗಳ ಸಾಮರಸ್ಯಕ್ಕಾಗಿ ಸುಪ್ರೀಂ ಕೋರ್ಟ್‌ ಕ್ರಮ’ ಎಂಬ ಕಾರ್ಯಕ್ರಮವನ್ನು ಕೋರ್ಟ್‌ಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅದರಂತೆ ಮಂಗಳವಾರ ಎರಡೂ ಕಡೆಯವರು ವಾರಾಣಸಿ ನ್ಯಾಯಾಲಯದಲ್ಲಿರುವ ಮಧ್ಯಸ್ಥಿಕೆ ಕೇಂದ್ರದ ಮುಂದೆ ಹಾಜರಾದರು.

ಈ ವೇಳೆ ಮುಸ್ಲಿಂ ಸಮುದಾಯದವರು, ‘ಇದೇ ರೀತಿಯ ಹಲವಾರು ವಿಷಯಗಳು ಸುಪ್ರೀಂ ಕೋರ್ಟ್‌ ಮುಂದೆ ಬಾಕಿ ಉಳಿದಿವೆ. ನ್ಯಾಯಾಲಯದ ತೀರ್ಪನ್ನು ಪಾಲಿಸುತ್ತೇವೆ. ಆದರೆ ಮಧ್ಯಸ್ಥಿಕೆಯನ್ನು ಸ್ವೀಕರಿಸಲು ಸಿದ್ಧವಿಲ್ಲ’ ಎಂದರು. ಇತ್ತ ಹಿಂದೂ ಸಮುದಾಯವರು ‘ಮುಸ್ಲಿಂ ಕಡೆಯವರು ಜ್ಞಾನವಾಪಿಯಲ್ಲಿ ಅತಿಕ್ರಮಣಕಾರರು. ಜ್ಯೋತಿರ್ಲಿಂಗ ಸ್ಥಳದಲ್ಲಿ ಭವ್ಯ ಕಾಶಿ ವಿಶ್ವನಾಥ ದೇಗುಲ ನಿರ್ಮಿಸಲು ಸಾಧ್ಯವಾಗುವಂತೆ ಆವರಣ ಖಾಲಿ ಮಾಡಬೇಕು’ ಎಂದು ಕೋರಿದರು ಹಾಗೂ ಮಧ್ಯಸ್ಥಿಕೆಗೆ ನಿರಾಕರಿಸಿದರು,

09:59 AM (IST) Jul 15

ಇಂಗ್ಲೆಂಡ್ ವಿರುದ್ಧ ರೋಹಿತ್-ಕೊಹ್ಲಿ ವೈಫಲ್ಯ; ಕಮ್‌ಬ್ಯಾಕ್ ಪಂದ್ಯದಲ್ಲಿ ರೋ-ಕೋ ಜೋಡಿ ಫೇಲ್

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಫಲರಾದರು. ಆದರೆ, ಇದೇ ಪಂದ್ಯದಲ್ಲಿ ಜಸ್‌ಪ್ರೀತ್‌ ಬುಮ್ರಾ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವುದರ ಜೊತೆಗೆ, ಏಕದಿನದಲ್ಲಿ ವೇಗವಾಗಿ 150 ವಿಕೆಟ್ ಪಡೆದ ಮೂರನೇ ಭಾರತೀಯ ಎನಿಸಿಕೊಂಡರು.
Read Full Story

09:52 AM (IST) Jul 15

'ಸ್ವಸ್ತಿಕ' ಹಿಟ್ಲರ್‌ನ ಚಿಹ್ನೆಯಲ್ಲ ಅದು ಹಿಂದೂಗಳದ್ದು ಅಮೆರಿಕ ಶಿಕ್ಷಣ ಮಂಡಳಿಯಲ್ಲಿ ವಾದಿಸಿ ಗೆದ್ದ ಭಾರತೀಯ ಬಾಲಕಿ!

ಅಮೆರಿಕದ ಶಾಲೆಯೊಂದರಲ್ಲಿ ಹಿಂದೂಗಳ ಪವಿತ್ರ ಸ್ವಸ್ತಿಕ ಚಿಹ್ನೆಯನ್ನು ಹಿಟ್ಲರ್‌ನ ನಾಜಿ ಚಿಹ್ನೆ ಎಂದು ತಪ್ಪಾಗಿ ಬೋಧಿಸುತ್ತಿದ್ದರ ವಿರುದ್ಧ ಭಾರತೀಯ ಮೂಲದ ವಿದ್ಯಾರ್ಥಿನಿ ಮೀರಾ ತ್ರಿವೇದಿ ಧ್ವನಿ ಎತ್ತಿದಳು. ತನ್ನ ಸುದೀರ್ಘ ಹೋರಾಟ ಮತ್ತು ಐತಿಹಾಸಿಕ ಪುರಾವೆಗಳ ಮೂಲಕ, ಆಕೆ ಶಾಲಾ ಪಠ್ಯಕ್ರಮದಲ್ಲಿನ ತಪ್ಪನ್ನು ಸರಿಪಡಿಸುವಲ್ಲಿ ಯಶಸ್ವಿಯಾದಳು.
Read Full Story

09:40 AM (IST) Jul 15

ನನ್ನ ಹೆಂಡ್ತಿಯನ್ನು ಕಳುಹಿಸಿ; ನಾನು ಆಕೆಯ ಗಂಡ ಎಂದು ಪೊಲೀಸ್ ಸ್ಟೇಶನ್‌ಗೆ ಬಂದ ಯುವತಿ

ಮದುವೆಯಾದ ಮೂರೇ ದಿನಕ್ಕೆ ಯುವತಿಯೊಬ್ಬಳು ತನ್ನ ಸಲಿಂಗಿ ಗೆಳತಿಯೊಂದಿಗೆ ಪರಾರಿಯಾಗಿದ್ದಾಳೆ. ನಂತರ ಪೊಲೀಸ್ ಠಾಣೆಗೆ ಬಂದು, ಆಕೆ ನನ್ನ ಹೆಂಡತಿ, ನನ್ನೊಂದಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದು, ಇಬ್ಬರೂ ಈಗಾಗಲೇ ನ್ಯಾಯಾಲಯದಲ್ಲಿ ಮದುವೆಯಾಗಿರುವ ವಿಷಯ ಬಹಿರಂಗವಾಗಿದೆ.

Read Full Story

09:36 AM (IST) Jul 15

ಟಿ20 ಸೋಲಿನ ಕಹಿ ಮರೆತ ಭಾರತ; ಮೊದಲ ಏಕದಿನದಲ್ಲಿ ಇಂಗ್ಲೆಂಡ್‌ಗೆ ತಿರುಗೇಟು ಕೊಟ್ಟ ಟೀಂ ಇಂಡಿಯಾ

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಜಯ ಸಾಧಿಸಿದೆ. ಜೋ ರೂಟ್‌ ಮತ್ತು ಲಿಯಾಮ್‌ ಡಾವ್ಸನ್‌ ಅವರ ಹೋರಾಟದ ಹೊರತಾಗಿಯೂ ಇಂಗ್ಲೆಂಡ್‌ 258 ರನ್‌ಗಳಿಗೆ ಆಲೌಟಾಯಿತು. ಶುಭ್‌ಮನ್‌ ಗಿಲ್‌, ಅಕ್ಷರ್‌ ಪಟೇಲ್ ಮತ್ತು ವಾಷಿಂಗ್ಟನ್‌ ಸುಂದರ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ ಭಾರತ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
Read Full Story

08:13 AM (IST) Jul 15

20 ವರ್ಷಗಳ ಬಳಿಕ ಕೋಲ್ಕತಾಗೆ ಬರಲು ತಸ್ಲೀಮಾ ನಸ್ರೀನ್‌ ಸಜ್ಜು! 2007ರ ಆ ಘಟನೆಯಿಂದ ಪಶ್ಚಿಮ ತೊರೆದಿದ್ದ ಲೇಖಕಿ!

2007ರಲ್ಲಿ ತಮ್ಮ ಬರಹಗಳ ಕಾರಣದಿಂದ ಸೃಷ್ಟಿಯಾಗಿದ್ದ ವಿರೋಧದಿಂದ ಕೋಲ್ಕತಾ ತೊರೆದಿದ್ದ ಬಾಂಗ್ಲಾದೇಶದ ಲೇಖಕಿ 20 ತಸ್ಲೀಮಾ ನಸ್ರೀನ್‌(Taslima Nasrin) ವರ್ಷಗಳ ಬಳಿಕ ಮತ್ತೆ ಕೋಲ್ಕತಾಗೆ ಮರಳಲು ಸಜ್ಜಾಗಿದ್ದಾರೆ. ಆಗಸ್ಟ್‌ 1 ರಂದು ರವೀಂದ್ರ ಸದನದಲ್ಲಿ ನಡೆಯವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Read Full Story

07:31 AM (IST) Jul 15

ಭೋಜಶಾಲಾ ಸಮೀಪ ನಮಾಜ್‌ಗೆ ಪ್ರತ್ಯೇಕ ಸ್ಥಳವಕಾಶಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಮುಸ್ಲಿಮರಿಗೆ ಶುಕ್ರವಾರದ ನಮಾಜ್‌ಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಯಾವುದೇ ರಚನಾತ್ಮಕ ಬದಲಾವಣೆ ಮಾಡದಂತೆ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಿದೆ.

Read Full Story

More Trending News