ನವದೆಹಲಿ: ಅನಿಲ ಕೊರತೆಯಿಂದಾಗಿ ಹೊಟೆಲ್, ರೆಸ್ಟೋರೆಂಟ್, ಬೀದಿ ಬದಿ ಅಂಗಡಿಗಳಿಗೆ ಬೀಗ ಬಿದ್ದಿರುವ ಹೊತ್ತಿನಲ್ಲಿ, 29 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಣಿಜ್ಯ ಸಿಲಿಂಡರ್ಗಳ ವಿತರಣೆ ಆರಂಭವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ‘ದೇಶದಲ್ಲಿ ಸಾಕಷ್ಟು ಕಚ್ಚಾ ತೈಲ ದಾಸ್ತಾನಿದ್ದು, ದೇಶೀಯ ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಎಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿಲ್ಲ’ ಎಂದು ಹೇಳಿದ್ದಾರೆ.
ಜತೆಗೇ, ನಗರ ಪ್ರದೇಶಗಳಲ್ಲಿ 25 ದಿನಗಳ ಅಂತರದಲ್ಲಿ ಗ್ಯಾಸ್ ಬುಕ್ ಮಾಡಬಹುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಈ ಅಂತರ 45 ದಿನ ಇರಲಿದೆ ಎಂದೂ ತಿಳಿಸಿದರು
09:29 AM (IST) Mar 15
ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಒಣಹಣ್ಣುಗಳ ಬೆಲೆ ಶೇ. 30-40ರಷ್ಟು ಏರಿಕೆಯಾಗಿದೆ. ಇದೇ ಸಂಘರ್ಷವು ಪಾಕಿಸ್ತಾನದಲ್ಲಿ ತೀವ್ರ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದ್ದು, ಸರ್ಕಾರಿ ನೌಕರರ ಸಂಬಳ ಕಡಿತಕ್ಕೆ ಕಾರಣವಾಗಿದೆ.
09:07 AM (IST) Mar 15
ಪಾಕಿಸ್ತಾನದ ಆಯ್ಕೆಗಾರ ಆಕಿಬ್ ಜಾವೇದ್, ಜಸ್ಪ್ರೀತ್ ಬುಮ್ರಾರ ವಿಶಿಷ್ಟ ಬೌಲಿಂಗ್ ಶೈಲಿಯನ್ನು ಸ್ಪಿನ್ನರ್ ಉಸ್ಮಾನ್ ತಾರಿಖ್ಗೆ ಹೋಲಿಸಿದ್ದಾರೆ. ಟಿ20 ವಿಶ್ವಕಪ್ನಲ್ಲಿ 14 ವಿಕೆಟ್ ಪಡೆದು ಮಿಂಚಿದ ಬುಮ್ರಾ, ಫೈನಲ್ನಲ್ಲಿ 4 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
07:48 AM (IST) Mar 15
ಭಾರತದ ಸ್ವದೇಶಿ ದಿಕ್ಸೂಚಿ ವ್ಯವಸ್ಥೆಯಾದ 'ನಾವಿಕ್'ನಲ್ಲಿ ಭಾರೀ ದೋಷ ಕಂಡುಬಂದಿದೆ. ಕಾರ್ಯನಿರ್ವಹಣೆಯಲ್ಲಿದ್ದ ನಾಲ್ಕು ಉಪಗ್ರಹಗಳಲ್ಲಿ ಒಂದಾದ ಐಆರ್ಎನ್ಎಸ್ಎಸ್-1ಎಫ್ ಸಂಪೂರ್ಣ ನಿಷ್ಕ್ರಿಯವಾಗಿದ್ದು, ಇದು ರೈಲ್ವೆ ಸೇನಾ ಸೇವೆಗಳ ಮೇಲೆ ಪರಿಣಾಮ ಬೀರಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಕಳವಳ ಮೂಡಿಸಿದೆ.
07:44 AM (IST) Mar 15
ಚಿಕಿತ್ಸೆ ಫಲಕಾರಿಯಾಗದೆ ಮೊಜ್ತಬಾ ಖಮೇನಿ ಸಾವು, ಫೋನ್ ಮೂಲಕ ಅನುಮಾನ ವ್ಯಕ್ತಪಡಿಸಿದ ಟ್ರಂಪ್, ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಹತ್ಯೆಯಾಗಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.
07:29 AM (IST) Mar 15
Meta Tech Layoffs Cutsಜಾಗತಿಕ ಟೆಕ್ ದೈತ್ಯ ಮೆಟಾ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಕಾರಣ, ತನ್ನ ಇತಿಹಾಸದಲ್ಲೇ ಅತಿದೊಡ್ಡ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಈ ನಿರ್ಧಾರದಿಂದಾಗಿ ಸುಮಾರು 16,000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.