ನವದೆಹಲಿ: ಅನಿಲ ಕೊರತೆಯಿಂದಾಗಿ ಹೊಟೆಲ್, ರೆಸ್ಟೋರೆಂಟ್, ಬೀದಿ ಬದಿ ಅಂಗಡಿಗಳಿಗೆ ಬೀಗ ಬಿದ್ದಿರುವ ಹೊತ್ತಿನಲ್ಲಿ, 29 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಣಿಜ್ಯ ಸಿಲಿಂಡರ್ಗಳ ವಿತರಣೆ ಆರಂಭವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ‘ದೇಶದಲ್ಲಿ ಸಾಕಷ್ಟು ಕಚ್ಚಾ ತೈಲ ದಾಸ್ತಾನಿದ್ದು, ದೇಶೀಯ ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಎಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿಲ್ಲ’ ಎಂದು ಹೇಳಿದ್ದಾರೆ.
ಜತೆಗೇ, ನಗರ ಪ್ರದೇಶಗಳಲ್ಲಿ 25 ದಿನಗಳ ಅಂತರದಲ್ಲಿ ಗ್ಯಾಸ್ ಬುಕ್ ಮಾಡಬಹುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಈ ಅಂತರ 45 ದಿನ ಇರಲಿದೆ ಎಂದೂ ತಿಳಿಸಿದರು
10:01 PM (IST) Mar 15
ಇರಾನ್ ದಾಳಿಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳಿಗೆ, ಅವರು ಕಾಫಿ ಶಾಪ್ನಿಂದಲೇ ವಿಡಿಯೋ ಮೂಲಕ ತಮಾಷೆಯಾಗಿ ಉತ್ತರಿಸಿದ್ದಾರೆ. ತಮ್ಮ ಸಾವಿನ ವದಂತಿ ಹಾಗೂ ಆರು ಬೆರಳುಗಳಿರುವ ಎಐ ವಿಡಿಯೋ ಕುರಿತು ಸ್ಪಷ್ಟನೆ ನೀಡಿದ ಅವರು, ಇಸ್ರೇಲಿ ನಾಗರಿಕರಿಗೆ ಧೈರ್ಯ ತುಂಬಿದ್ದಾರೆ.
09:32 PM (IST) Mar 15
ಟಾಲಿವುಡ್ನಲ್ಲಿ ಸ್ಟಾರ್ ಹೀರೋಯಿನ್ ಆಗಿ, ಬಾಲಿವುಡ್ನಲ್ಲೂ ತನ್ನ ಛಾಪು ಮೂಡಿಸಿರುವ ನಟಿ ರಶ್ಮಿಕಾ ಮಂದಣ್ಣ. ಚಿತ್ರರಂಗದಲ್ಲಿ ರಶ್ಮಿಕಾ 'ಅಣ್ಣ' ಎಂದು ಕರೆಯುವ ನಟ ಯಾರು ಗೊತ್ತಾ? ಈ ಸುದ್ದಿಯಲ್ಲಿ ಸತ್ಯಾಂಶ ಇದೆಯೇ?
09:07 PM (IST) Mar 15
ಅಜಿತ್, ತಮ್ಮದೇ ಆದ 'ಅಜಿತ್ ಕುಮಾರ್ ರೇಸಿಂಗ್' ತಂಡದ ಮೂಲಕ ದುಬೈ, ಅಬುಧಾಬಿ, ಮಲೇಷ್ಯಾ ಹಾಗೂ ಯುರೋಪಿಯನ್ ದೇಶಗಳಲ್ಲಿ ನಡೆದ ಹಲವು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.
08:38 PM (IST) Mar 15
ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಕಳವಳದ ನಡುವೆ, ಆಸ್ಪತ್ರೆಗೆ ಹೋಗದೆ ಮನೆಯಲ್ಲೇ ಹೃದಯದ ಆರೋಗ್ಯವನ್ನು ಪರೀಕ್ಷಿಸಿಕೊಳ್ಳುವ 5 ಸರಳ ವಿಧಾನಗಳನ್ನು ಡಾ. ವಿನಯ್ ವಿವರಿಸಿದ್ದಾರೆ. ಮನೆಯಲ್ಲಿ ಈ ಸುಲಭದ ಪರೀಕ್ಷೆ ಮಾಡುವಂತಹ ಈ ಸುಲಭ ಟೆಸ್ಟ್ಗಳಿಂದ ಹೃದಯದ ಸ್ಥಿತಿ ಅರಿಯಬಹುದು.
07:31 PM (IST) Mar 15
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸಿನೆಮಾಗಳ ಜೊತೆಗೆ ಬ್ಯುಸಿನೆಸ್ನಲ್ಲೂ ರಾಮ್ ಚರಣ್ ಸಖತ್ ಬ್ಯುಸಿ. ಇದೀಗ ಅವರು ಹೊಸ ಉದ್ಯಮವೊಂದನ್ನು ಆರಂಭಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಏನಿದು ಹೊಸ ಬ್ಯುಸಿನೆಸ್? ಇಲ್ಲಿದೆ ಪೂರ್ತಿ ವಿವರ.
07:22 PM (IST) Mar 15
ನಟ ಪವನ್ ಕಲ್ಯಾಣ್ ಅವರ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಬಿಡುಗಡೆಗೆ ಸಿದ್ಧವಾಗಿರುವ ಹೊತ್ತಲ್ಲಿ, ಅವರ ವೈಯಕ್ತಿಕ ಜೀವನದ ಚರ್ಚೆ ಮುನ್ನೆಲೆಗೆ ಬಂದಿದೆ. ಅವರು ತಮ್ಮ ಮೂರು ಮದುವೆಗಳ ಹಿಂದಿನ ಕಾರಣ ಮತ್ತು ಹೊಂದಾಣಿಕೆಯ ಕೊರತೆಯಿಂದ ಸಂಬಂಧಗಳು ಮುರಿದುಬಿದ್ದ ಬಗ್ಗೆ ಮಾತನಾಡಿದ್ದು ವಿಡಿಯೋ ವೈರಲ್ ಆಗಿದೆ.
07:14 PM (IST) Mar 15
ಮೆಗಾ ಸೊಸೆ ಲಾವಣ್ಯ ತ್ರಿಪಾಠಿ ತಮ್ಮ ಹೊಸ ಚಿತ್ರ 'ಸತಿ ಲೀಲಾವತಿ' ಪ್ರಚಾರದಲ್ಲಿ ನಿರತರಾಗಿದ್ದಾರೆ. ಮದುವೆಯ ನಂತರದ ಅವರ ಮೊದಲ ಚಿತ್ರ ಇದಾಗಿದ್ದರಿಂದ ಅಭಿಮಾನಿಗಳಲ್ಲಿ ವಿಶೇಷ ಆಸಕ್ತಿ ಮೂಡಿದೆ.
06:55 PM (IST) Mar 15
ನಿರ್ದೇಶಕ ರಾಜಮೌಳಿ ಸದ್ಯ ಸೂಪರ್ಸ್ಟಾರ್ ಮಹೇಶ್ ಬಾಬು ಜೊತೆ 'ವಾರಣಾಸಿ' ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರವನ್ನು 1300 ಕೋಟಿ ರೂಪಾಯಿಗಳ ಬೃಹತ್ ಬಜೆಟ್ನಲ್ಲಿ ನಿರ್ಮಿಸಲಾಗುತ್ತಿದೆ.
06:23 PM (IST) Mar 15
ನಟ ಪಾರ್ತಿಬನ್ ಜೊತೆಗಿನ ವಿವಾದದ ನಂತರ, ನಟಿ ತ್ರಿಷಾ ಕೃಷ್ಣನ್ ಇದೀಗ ಅವರ ಮಗಳು ಕೀರ್ತನಾ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
05:54 PM (IST) Mar 15
ಪಶ್ಚಿಮ ಬಂಗಾಳವೂ ಸೇರಿದಂತೆ 5 ರಾಜ್ಯಗಳ ವಿಧಾನಸಭಾ ದಿನಾಂಕ ಘೋಷಣೆಯಾಗಿದೆ. ಈ ಹಿಂದೆ ಹಲವು ಚುನಾವಣಾ ಹಿಂಸಾಚಾರಕ್ಕೆ ಕಾರಣವಾಗಿರುವ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಕೇವಲ 2 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಅದಕ್ಕೇನು ಕಾರಣ…
05:29 PM (IST) Mar 15
ಆರ್ತಿ ರವಿ ತಮ್ಮ ಸ್ಟೋರಿಯಲ್ಲಿ, ಬಟ್ಟೆ ಮತ್ತು ಬಣ್ಣದ ಬಗ್ಗೆ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ, 'ನೀವು ಒಂದು ಕಡೆಗೆ ಹೋದಾಗ, ಅಲ್ಲಿ ಬೇರೊಬ್ಬರು ನಿಮ್ಮಂತೆಯೇ ಅದೇ ಬಣ್ಣದ ಬಟ್ಟೆ ಧರಿಸಿದ್ದರೆ ಸುಮ್ಮನಿರುತ್ತೀರಾ?
05:15 PM (IST) Mar 15
‘ಕೈದಿ’, ‘ಮಾಸ್ಟರ್’ ಚಿತ್ರಗಳ ಮೂಲಕ ಖಡಕ್ ವಿಲನ್ ಆಗಿ, ‘ಅನೀತಿ’ ಚಿತ್ರದ ಮೂಲಕ ಅತ್ಯುತ್ತಮ ನಟನಾಗಿ ಗುರುತಿಸಿಕೊಂಡಿರುವ ಅರ್ಜುನ್ ದಾಸ್, ಇದೀಗ ತಮ್ಮ ಬದುಕಿನ ಒಂದು ಕಹಿ ಅಧ್ಯಾಯವನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
05:00 PM (IST) Mar 15
ನಟ ವಿಜಯ್ ಸೇತುಪತಿ ತಾವು ನಿರ್ಮಾಪಕರಾಗಿ ಮಾಡಿದ ಎಲ್ಲಾ ಸಿನಿಮಾಗಳೂ ತಮಗೆ ಆರ್ಥಿಕವಾಗಿ ದೊಡ್ಡ ನಷ್ಟವನ್ನುಂಟು ಮಾಡಿವೆ ಎಂದು ಬಹಿರಂಗಪಡಿಸಿದ್ದಾರೆ. ಆದರೂ ಈ ಬಗ್ಗೆ ತಮಗೆ ಯಾವುದೇ ಬೇಸರವಿಲ್ಲ ಎಂದಿದ್ದಾರೆ.
04:41 PM (IST) Mar 15
ಬಾಲಿವುಡ್ ಸಿನಿಮಾ 'ಧುರಂಧರ್' ಸೂಪರ್ ಹಿಟ್ ಆದ್ಮೇಲೆ, ಡೈರೆಕ್ಟರ್ ಆದಿತ್ಯ ಧರ್ ಮತ್ತು ಅವರ ಪತ್ನಿ ಯಾಮಿ ಗೌತಮ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಒಂದು ಗಂಭೀರ ಎಚ್ಚರಿಕೆ ಕೊಟ್ಟಿದ್ದಾರೆ.
04:40 PM (IST) Mar 15
ರಾಷ್ಟ್ರಿಯ ಚುನಾವಣಾ ಆಯೋಗವೂ ಬಹು ನಿರೀಕ್ಷಿತ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
04:34 PM (IST) Mar 15
04:27 PM (IST) Mar 15
ಯುವಕನೋರ್ವ ತಾನು ಐಎಎಸ್ ಪಾಸಾಗಿದ್ದೇನೆ ಎಂದು ಹೇಳಿಕೊಂಡು ಊರ ತುಂಬೆಲ್ಲಾ ಜನರಿಂದ ಸನ್ಮಾನ ಮಾಡಿಸಿಕೊಂಡ ಘಟನೆ ನಡೆದಿದೆ. ಆದರೆ ನಂತರ ಸುಳ್ಳು ಹೇಳಿರುವುದು ಗೊತ್ತಾಗಿ ಜನ ಬೆಸ್ತು ಬಿದ್ದಿದ್ದಾರೆ. ಬಿಹಾರದ ಶೇಖ್ಪುರ ಜಿಲ್ಲೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ.ಡಿಟೇಲ್ ಸ್ಟೋರಿ ಇಲ್ಲಿದೆ.
04:24 PM (IST) Mar 15
ನಿದ್ದೆಯಲ್ಲಿ ಕನಸು ಬೀಳೋದು ಸಹಜ. ಕೆಲವು ಕನಸುಗಳು ಸಾಮಾನ್ಯವಾಗಿ ಕಂಡರೂ, ಇನ್ನು ಕೆಲವು ಮನಸ್ಸಲ್ಲಿ ಅನುಮಾನ ಹುಟ್ಟಿಸುತ್ತವೆ. ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನ ಸ್ವಭಾವ, ಸಮಯ ಮತ್ತು ಬಿದ್ದ ದಿನದ ಆಧಾರದ ಮೇಲೆ ಅವುಗಳ ಅರ್ಥವನ್ನು ತಿಳಿಯಬಹುದು.
04:00 PM (IST) Mar 15
ಐಪಿಎಲ್ 2025ಕ್ಕೆ ಮುನ್ನ ಟ್ರೋಫಿ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಫಿಲ್ ಸಾಲ್ಟ್ ಅವರನ್ನು ಕೈಬಿಟ್ಟ ಕೆಕೆಆರ್ ನಿರ್ಧಾರವನ್ನು ಅನಿಲ್ ಕುಂಬ್ಳೆ ತೀವ್ರವಾಗಿ ಟೀಕಿಸಿದ್ದಾರೆ. ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಕೆಕೆಆರ್ ಸ್ಥಿರತೆ ತೋರುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
03:03 PM (IST) Mar 15
ಟೀಂ ಇಂಡಿಯಾದ ಗೆಲುವಿನ ಓಟ ಮುಂದಿನ ವರ್ಷಗಳಲ್ಲಿಯೂ ಮುಂದುವರಿಯಲಿದೆ ಎಂದು ಮಾಜಿ ನಾಯಕ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುರುಷ ಮತ್ತು ಮಹಿಳಾ ತಂಡಗಳು ಇತ್ತೀಚೆಗೆ ಗೆದ್ದಿರುವ ವಿಶ್ವಕಪ್ಗಳು ಈ ಪ್ರಾಬಲ್ಯದ ಆರಂಭವಷ್ಟೇ ಎಂದಿದ್ದಾರೆ.
02:43 PM (IST) Mar 15
ಹವಾಮಾನ ವೈಪರಿತ್ಯಕ್ಕೆ ಭೂಮಿ ತಿರುಗುವ ವೇಗ ಕಡಿತ, ದಿನದ ಸಮಯ ಹೆಚ್ಚಳ, ಕಾದಿದೆಯಾ ಗಂಡಾತರ?, ಗ್ರಹದ ತಿರುಗುವಿಕೆ ವೇಗ ಬದಲಾದರೆ ಅಪಾಯ ತಪ್ಪಿದ್ದಲ್ಲ, ಇದರಿಂದ ಆಗುವ ಪರಿಣಾಮವೇನು? 24 ಗಂಟೆಯಲ್ಲಿ ಒಂದು ದಿನ ಮುಗಿಯಲ್ಲ
02:18 PM (IST) Mar 15
01:47 PM (IST) Mar 15
ಏರ್ ಇಂಡಿಯಾ ಮತ್ತು ಇಂಡಿಗೋ, ಯುಎಇ ಅಧಿಕಾರಿಗಳ ಸೂಚನೆಯಂತೆ ತಮ್ಮ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿವೆ. ಈ ದಿಢೀರ್ ನಿರ್ಧಾರವು ಕುವೈತ್ ವಿಮಾನ ನಿಲ್ದಾಣದ ಮೇಲಿನ ಡ್ರೋನ್ ದಾಳಿಗಳಂತಹ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಂದಿದೆ.
01:30 PM (IST) Mar 15
ಐಪಿಎಲ್ ಟೂರ್ನಿಗಾಗಿ ಹೊಸ ಹೇರ್ಸ್ಟೈಲ್ನಲ್ಲಿ ವಿರಾಟ್ ಕೊಹ್ಲಿ, ಟ್ರೋಫಿ ಗೆಲುವಿಗೂ ಇದೆ ನಂಟು, ಕೊಹ್ಲಿ ಹೇರ್ಸ್ಟೈಲ್ ಬದಲಿಸಿ ಕಣಕ್ಕಿಳಿದಾಗ ಟ್ರೋಫಿ ಒಲಿದಿದೆ. ಇದೀಗ 2026ರ ಐಪಿಎಲ್ ಟ್ರೋಫಿ ಗೆಲುವಿನ ಸೂಚನೆ ಕೊಹ್ಲಿ ನೀಡಿದ್ರಾ?
12:30 PM (IST) Mar 15
12:29 PM (IST) Mar 15
ಟಿ20 ವಿಶ್ವಕಪ್ ಸೋಲಿನ ನಂತರ, ಪಾಕಿಸ್ತಾನ ಕ್ರಿಕೆಟ್ನಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಬಾಬರ್ ಅಜಂ ಸೇರಿದಂತೆ ಪ್ರಮುಖ ಆಟಗಾರರು ಸಂಪೂರ್ಣ ಫಿಟ್ ಇಲ್ಲದಿದ್ದರೂ ವಿಶ್ವಕಪ್ ಆಡಿದ್ದಾರೆ ಎಂದು ಆಯ್ಕೆ ಸಮಿತಿ ಸದಸ್ಯ ಆಕಿಬ್ ಜಾವೇದ್ ಆರೋಪಿಸಿದ್ದು, ಪಿಸಿಬಿ ತನಿಖೆಗೆ ಒತ್ತಾಯಿಸಿದ್ದಾರೆ.
12:22 PM (IST) Mar 15
ನಟ ವಿಜಯ್ಗೆ ಉಪ ಮುಖ್ಯಮಂತ್ರಿ ಸ್ಥಾನ, ಟಿವಿಕೆಗೆ 80 ಕ್ಷೇತ್ರ, ಕೋಲಾಹಲ ಸೃಷ್ಟಿಸಿದ ಬಿಜೆಪಿ ಆಫರ್ ವರದಿ, ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಗೊಳ್ಳುವ ಸಾಧ್ಯತೆ ಕಾಣಿಸುತ್ತಿದೆ.
11:28 AM (IST) Mar 15
11:19 AM (IST) Mar 15
ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯವು ಈ ಬಾರಿಯ ಉಮ್ರಾ ಯಾತ್ರೆಗೆ ಸಂಬಂಧಿಸಿದಂತೆ ಹೊಸ ದಿನಾಂಕಗಳನ್ನು ಪ್ರಕಟಿಸಿದೆ. ವೀಸಾ ನೀಡಿಕೆ, ಯಾತ್ರಿಗಳ ಪ್ರವೇಶ ಮತ್ತು ನಿರ್ಗಮನಕ್ಕೆ ಹೊಸ ಗಡುವನ್ನು ನಿಗದಿಪಡಿಸಿದ್ದು, ಹಜ್ ಯಾತ್ರೆಗೆ ಅಧಿಕೃತ ಹಜ್ ವೀಸಾ ಕಡ್ಡಾಯವೆಂದು ಪುನರುಚ್ಚರಿಸಿದೆ.
11:12 AM (IST) Mar 15
ನೇಪಾಳದ ದೇವಸ್ಥಾನ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಸ್ ಅಪಘಾತ, 7 ಭಾರತೀಯರು ಸಾವು, ಮನಕಾಮನ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. 7 ಮಂದಿ ಮೃತಪಟ್ಟರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದರೆ.
11:02 AM (IST) Mar 15
ಮಹಿಳೆಯೊಬ್ಬರು, ತಮ್ಮ ನೋವನ್ನು ವಾಟ್ಸಾಪ್ ಸ್ಟೇಟಸ್ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡಿದ ತಕ್ಷಣವೇ ಅವರು ಆತ್ಮ*ಹತ್ಯೆ ಮಾಡಿಕೊಂಡಿದ್ದು, ಸಂಬಂಧಿಕರು ಪೊಲೀಸರಿಗೆ ತಿಳಿಸುವಷ್ಟರಲ್ಲಿ ದುರಂತ ಸಂಭವಿಸಿತ್ತು.
10:36 AM (IST) Mar 15
ಹವಾಮಾನ ವಿಜ್ಞಾನಿಗಳು 'ಗಾಡ್ಜಿಲ್ಲಾ ಎಲ್ ನಿನೋ' ಎಂಬ ಭೀಕರ ಹವಾಮಾನ ವಿದ್ಯಮಾನದ ಬಗ್ಗೆ ಎಚ್ಚರಿಸಿದ್ದಾರೆ. ಪೆಸಿಫಿಕ್ ಸಾಗರದಲ್ಲಿ ಉಷ್ಣಾಂಶ ಏರಿಕೆಯಿಂದ ಉಂಟಾಗುವ ಈ ವಿದ್ಯಮಾನವು ಜಾಗತಿಕ ಹವಾಮಾನವನ್ನು ಏರುಪೇರು ಮಾಡಲಿದ್ದು, ಭಾರತದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ.
10:34 AM (IST) Mar 15
10:06 AM (IST) Mar 15
ಅರೆನಗ್ನ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆಯಾದ ಬೆನ್ನಲ್ಲೇ 12 ಸೆಕೆಂಡ್ ವಿಡಿಯೋ ಬಹಿರಂಗ, 20ರ ಹರೆಯದ ಯುವತಿ ಮೃತತದೇಹ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಇದರ ಬೆನ್ನಲ್ಲೇ ವೈರಲ್ ಆದ 12 ಸಕೆಂಡ್ ವಿಡಿಯೋದಲ್ಲಿ ಏನಿದೆ?
09:43 AM (IST) Mar 15
ಐಪಿಎಲ್ 2026ಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ನ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ರಾಬಿನ್ ಉತ್ತಪ್ಪ ಮಾತನಾಡಿದ್ದಾರೆ. ವೈಭವ್ ಕೇವಲ ಅದೃಷ್ಟವನ್ನು ನಂಬಿ ಆಡುತ್ತಿದ್ದಾನೆ, ಇದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.
09:29 AM (IST) Mar 15
ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಒಣಹಣ್ಣುಗಳ ಬೆಲೆ ಶೇ. 30-40ರಷ್ಟು ಏರಿಕೆಯಾಗಿದೆ. ಇದೇ ಸಂಘರ್ಷವು ಪಾಕಿಸ್ತಾನದಲ್ಲಿ ತೀವ್ರ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದ್ದು, ಸರ್ಕಾರಿ ನೌಕರರ ಸಂಬಳ ಕಡಿತಕ್ಕೆ ಕಾರಣವಾಗಿದೆ.
09:07 AM (IST) Mar 15
ಪಾಕಿಸ್ತಾನದ ಆಯ್ಕೆಗಾರ ಆಕಿಬ್ ಜಾವೇದ್, ಜಸ್ಪ್ರೀತ್ ಬುಮ್ರಾರ ವಿಶಿಷ್ಟ ಬೌಲಿಂಗ್ ಶೈಲಿಯನ್ನು ಸ್ಪಿನ್ನರ್ ಉಸ್ಮಾನ್ ತಾರಿಖ್ಗೆ ಹೋಲಿಸಿದ್ದಾರೆ. ಟಿ20 ವಿಶ್ವಕಪ್ನಲ್ಲಿ 14 ವಿಕೆಟ್ ಪಡೆದು ಮಿಂಚಿದ ಬುಮ್ರಾ, ಫೈನಲ್ನಲ್ಲಿ 4 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
07:48 AM (IST) Mar 15
ಭಾರತದ ಸ್ವದೇಶಿ ದಿಕ್ಸೂಚಿ ವ್ಯವಸ್ಥೆಯಾದ 'ನಾವಿಕ್'ನಲ್ಲಿ ಭಾರೀ ದೋಷ ಕಂಡುಬಂದಿದೆ. ಕಾರ್ಯನಿರ್ವಹಣೆಯಲ್ಲಿದ್ದ ನಾಲ್ಕು ಉಪಗ್ರಹಗಳಲ್ಲಿ ಒಂದಾದ ಐಆರ್ಎನ್ಎಸ್ಎಸ್-1ಎಫ್ ಸಂಪೂರ್ಣ ನಿಷ್ಕ್ರಿಯವಾಗಿದ್ದು, ಇದು ರೈಲ್ವೆ ಸೇನಾ ಸೇವೆಗಳ ಮೇಲೆ ಪರಿಣಾಮ ಬೀರಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಕಳವಳ ಮೂಡಿಸಿದೆ.
07:44 AM (IST) Mar 15
ಚಿಕಿತ್ಸೆ ಫಲಕಾರಿಯಾಗದೆ ಮೊಜ್ತಬಾ ಖಮೇನಿ ಸಾವು, ಫೋನ್ ಮೂಲಕ ಅನುಮಾನ ವ್ಯಕ್ತಪಡಿಸಿದ ಟ್ರಂಪ್, ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಹತ್ಯೆಯಾಗಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.
07:29 AM (IST) Mar 15
Meta Tech Layoffs Cutsಜಾಗತಿಕ ಟೆಕ್ ದೈತ್ಯ ಮೆಟಾ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಕಾರಣ, ತನ್ನ ಇತಿಹಾಸದಲ್ಲೇ ಅತಿದೊಡ್ಡ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಈ ನಿರ್ಧಾರದಿಂದಾಗಿ ಸುಮಾರು 16,000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.