LIVE NOW
Published : May 12, 2026, 06:46 AM IST

India Latest News Live: ಬಂಗಾಳ ಮುಖ್ಯ ಚುನಾವಣಾಧಿಕಾರಿ ಇದೀಗ ಸುವೇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ

ಸಾರಾಂಶ

ಕೋಲ್ಕತಾ: ಬಂಗಾಳದ ಮುಖ್ಯ ಚುನಾವಣಾಧಿಕಾರಿ ಮನೋಜ್ ಅಗರ್ವಾಲ್ ಅವರನ್ನು ಸಿಎಂ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜತೆಗೆ, ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾರನ್ನು ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಇದಕ್ಕೆ ವಿಪಕ್ಷ ಟಿಎಂಸಿ ಕಡೆಯಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ.

‘ಇದು ನಾಚಿಗ್ಗೇಡನ್ನೂ ಮೀರಿದ ನಡೆ’ ಎಂದು ಕರೆದಿರುವ ಟಿಎಂಸಿಯ ಸಾಕೇತ್‌ ಗೋಖಲೆ, ‘ಚುನಾವಣೆ ಕಳವಿನ ಬಗ್ಗೆ ಬಿಜೆಪಿ ಮತ್ತು ಚುನಾವಣಾ ಆಯೋಗ ಮುಕ್ತವಾಗಿ ಒಪ್ಪಿಕೊಂಡಂತಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ. ಜತೆಗೆ, ಕೋರ್ಟ್‌ ಕುರುಡಾಗಿದೆಯೇ ಎಂದೂ ಪ್ರಶ್ನಿಸಿದ್ದಾರೆ.

ಪಶ್ಚಿಮ ಬಂಗಾಳ ಕೇಡರ್‌ನ 1990ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅಗರ್ವಾಲ್, ಇತ್ತೀಚೆಗೆ ಇತ್ತೀಚಿನ ಚುನಾವಣೆ ನಡೆಸುವ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಂಶಗಳನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದ್ದರು. ಇವರೀಗ ದುಷ್ಯಂತ್ ನರಿಯಾಲರ ಜಾಗಕ್ಕೆ ನೇಮಕವಾಗಿದ್ದಾರೆ.


More Trending News