LIVE NOW
Published : Jan 17, 2026, 07:01 AM ISTUpdated : Jan 17, 2026, 08:16 PM IST

India Latest News Live: ಗೋಲ್ಡನ್ ಟೆಂಪಲ್ ಕೊಳದಲ್ಲಿ ಮುಖ ತೊಳೆದು ಉಗುಳಿದ ಅನ್ಯಕೋಮಿನ ವ್ಯಕ್ತಿ, ಭುಗಿಲೆದ್ದ ಆಕ್ರೋಶ

ಸಾರಾಂಶ

ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರನ್ನು ರಸ್‌ಮಲೈ ಎಂದು ಅಣಕಿಸಿದ್ದ ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ರಾಕ್ರೆಗೆ ಅದೇ ಹೇಳಿಕೆ ತಿರುಗುಬಾಣವಾಗಿದೆ.

ಇತ್ತೀಚೆಗೆ ಅಣ್ಣಾಮಲೈ ಪ್ರಚಾರ ಮಾಡಿದ್ದ ಮುಂಬೈನ ಮಲಾಡ್‌ ಪಶ್ಚಿಮ ಕ್ಷೇತ್ರದ ವಾರ್ಡ್‌ ನಂ. 35 ಮತ್ತು 47 ಎರಡೂ ಕಡೆ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಬಿಜೆಪಿ ನಾಯಕರು ರಸ್‌ಮಲೈ ಫೋಟೋ ಹಂಚಿಕೊಂಡು ರಾಜ್‌ಗೆ ಟಾಂಗ್ ನೀಡಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಬಿಜೆಪಿ ಸಂಸದ ಪಿ.ಸಿ.ಮೋಹನ್‌ ಕೂಡಾ ನಾನು ಇಂದು ರಸ್‌ಮಲೈ ಆರ್ಡರ್‌ ಮಾಡಿದ್ದೇನೆ ಎಂದು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮುಂಬೈ ಬಗ್ಗೆ ಮಾತನಾಡಲು ಅಣ್ಣಾಮಲೈ ಯಾರು? ಆತ ರಸ್‌ಮಲೈ ಎಂದೆಲ್ಲಾ ರಾಜ್‌ ವ್ಯಂಗ್ಯವಾಡಿದ್ದರು.

08:16 PM (IST) Jan 17

ಗೋಲ್ಡನ್ ಟೆಂಪಲ್ ಕೊಳದಲ್ಲಿ ಮುಖ ತೊಳೆದು ಉಗುಳಿದ ಅನ್ಯಕೋಮಿನ ವ್ಯಕ್ತಿ, ಭುಗಿಲೆದ್ದ ಆಕ್ರೋಶ

ಗೋಲ್ಡನ್ ಟೆಂಪಲ್ ಕೊಳದಲ್ಲಿ ಮುಖ ತೊಳೆದು ಉಗುಳಿದ ಅನ್ಯಕೋಮಿನ ವ್ಯಕ್ತಿ, ಸಿಖ್‌ರ ಪವಿತ್ರ ಕ್ಷೇತ್ರದಲ್ಲಿ ಕೈ ಕಾಲು ಮುಖ ತೊಳೆದು ಉಗುಳಿದ ವ್ಯಕ್ತಿ ವಿರುದ್ಧ ಭಾರಿ ಆಕ್ರೋಶ ಭುಗಿಲೆದ್ದಿದೆ.

Read Full Story

07:30 PM (IST) Jan 17

Toll plaza ಏಪ್ರಿಲ್ 1 ರಿಂದ ಎಲ್ಲಾ ಟೋಲ್ ಗೇಟ್‌ಗಳಲ್ಲಿ ಕ್ಯಾಶ್‌ಲೆಸ್ ಎಂಟ್ರಿಗೆ ಮಾತ್ರ ಅವಕಾಶ

Toll plaza, ಏಪ್ರಿಲ್ 1 ರಿಂದ ಟೋಲ್ ಪ್ಲಾಜಾ ಹೊಸ ನಿಯಮ ಜಾರಿಯಾಗುತ್ತಿದೆ. ದೇಶದ ಎಲ್ಲಾ ಟೋಲ್ ಗೇಟ್‌ಗಳಲ್ಲಿ ಕ್ಯಾಶ್‌ಲೆಸ್ ಎಂಟ್ರಿಗೆ ಮಾತ್ರ ಅವಕಾಶ. ನಗದು ಪಾವತಿ ಮಾಡುವ ವ್ಯವಸ್ಥೆ ಇರುವುದಿಲ್ಲ. ಏನಿದು ಹೊಸ ನಿಯಮ? 

 

Read Full Story

07:24 PM (IST) Jan 17

'ಒಳನುಸುಳುವಿಕೆ ಅಷ್ಟು ದೊಡ್ಡದೇ..' ಪ್ರಧಾನಿ ಮೋದಿ ಬಂಗಾಳ ಭೇಟಿ ಬೆನ್ನಲ್ಲೇ ಟಿಎಂಸಿ ವಾಗ್ದಾಳಿ!

ಪ್ರಧಾನಿ ನರೇಂದ್ರ ಮೋದಿಯವರ ಪಶ್ಚಿಮ ಬಂಗಾಳ ಭೇಟಿಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ತೀವ್ರ ವಾಗ್ದಾಳಿಗೆ ಕಾರಣವಾಗಿದೆ. ಟಿಎಂಸಿ, ಮೋದಿಯವರನ್ನು 'ರಾಜಕೀಯ ಪ್ರವಾಸಿ' ಎಂದು ಜರಿದು, ಗಡಿ ಭದ್ರತೆ, ಗಲಭೆಗಳು ಮತ್ತು ಮತದಾರರ ಪಟ್ಟಿ ಪರಿಶೀಲನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಸರಣಿ ಪ್ರಶ್ನೆ.

Read Full Story

05:46 PM (IST) Jan 17

ಪ್ರೇಮಿಗಳ ದಿನ ಧನುಷ್-ಮೃಣಾಲ್ ಮದುವೆ? ಮರಾಠಿ ಬ್ಯೂಟಿ ಜೊತೆ ಪ್ರೀತಿಯಲ್ಲಿ ಬಿದ್ದ ರಜಿನಿಕಾಂತ್ ಮಾಜಿ ಅಳಿಯ!

ನಟ ಧನುಷ್, ಐಶ್ವರ್ಯ ರಜನಿಕಾಂತ್‌ಗೆ ವಿಚ್ಛೇದನ ನೀಡಿದ ನಂತರ ಎರಡನೇ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. 'ಹಾಯ್ ನಾನಾ' ಖ್ಯಾತಿಯ ನಟಿ ಮೃಣಾಲ್ ಠಾಕೂರ್ ಜೊತೆ ಪ್ರೇಮಿಗಳ ದಿನದಂದು ಅವರ ವಿವಾಹ ನಡೆಯಲಿದೆ ಎಂದು ಕಾಲಿವುಡ್ ಮೂಲಗಳು ತಿಳಿಸಿವೆ.
Read Full Story

05:03 PM (IST) Jan 17

11 ಮಂದಿ ಪ್ರಯಾಣಿಸುತ್ತಿದ್ದ ATR 42 ವಿಮಾನ ನಾಪತ್ತೆ, ಪರ್ವತ ಬಳಿ ಅವಶೇಷಗಳು ಪತ್ತೆ

11 ಮಂದಿ ಪ್ರಯಾಣಿಸುತ್ತಿದ್ದ ATR 42 ವಿಮಾನ ನಾಪತ್ತೆ, ಪರ್ವತ ಬಳಿ ಅವಶೇಷಗಳು ಪತ್ತೆಯಾಗಿದ್ದು ಪತನಗೊಂಡಿರುವುದಾಗಿ ವರದಿಯಾಗಿದೆ. ದಿಢೀರ್ ವಿಮಾನದ ಸಂಪರ್ಕ ಕಡಿತಗೊಂಡಿತ್ತು. ಭಾರಿ ಕಾರ್ಯಾಚರಣೆ ವೇಳೆ ಅವಶೇಷಗಳು ಪತ್ತೆಯಾಗಿದೆ.

 

Read Full Story

04:07 PM (IST) Jan 17

ನೀವು IMPS ಹಣ ವರ್ಗಾವಣೆ, ಎಟಿಎಂನಿಂದ ವಿಥ್‌ಡ್ರಾ ಮಾಡ್ತೀರಾ? ಫೆ.15ರಿಂದ SBI ಹೊಸ ನಿಯಮ

ನೀವು IMPS ಹಣ ವರ್ಗಾವಣೆ, ಎಟಿಎಂನಿಂದ ವಿಥ್‌ಡ್ರಾ ಮಾಡ್ತೀರಾ? ಫೆಬ್ರವರಿ 15ರಿಂದ ಶುಲ್ಕ ಹೆಚ್ಚಳವಾಗುತ್ತಿದೆ. ಎಟಿಎಂ ಮೂಲಕ ಹಣ ಹಿಂಪಡೆಯುವುದು, ಐಪಿಎಂಪಿಸ್ ಮೂಲಕ ಹಣ ವರ್ಗಾವಣೆ ಮಾಡುವುದಕ್ಕೂ ಚಾರ್ಜ್ ಅನ್ವಯ.

 

Read Full Story

02:42 PM (IST) Jan 17

ವಿವಾಹಿತ ತೆರಿಗೆದಾರರಿಗೆ ಭರ್ಜರಿ ಗುಡ್​ನ್ಯೂಸ್​ - ಈ ಬಾರಿ ಜಂಟಿ ತೆರಿಗೆ? ಏನಿದು ಹೊಸ ತಂತ್ರ- ಡಿಟೇಲ್ಸ್​ ಇಲ್ಲಿದೆ

ಕೇಂದ್ರ ಸರ್ಕಾರವು 2026ರ ಬಜೆಟ್‌ನಲ್ಲಿ ವಿವಾಹಿತ ದಂಪತಿಗಳಿಗಾಗಿ ಐಚ್ಛಿಕ ಜಂಟಿ ತೆರಿಗೆ ಸಲ್ಲಿಕೆ ವ್ಯವಸ್ಥೆಯನ್ನು ಪರಿಗಣಿಸುತ್ತಿದೆ. ಯುಎಸ್ಎ ಮತ್ತು ಜರ್ಮನಿ ಮಾದರಿಯ ಈ ಪ್ರಸ್ತಾವನೆಯು ಅಂಗೀಕಾರವಾದರೆ, ದಂಪತಿ ತಮ್ಮ ಆದಾಯವನ್ನು ಒಟ್ಟುಗೂಡಿಸಿ ತೆರಿಗೆ ಸಲ್ಲಿಸಬಹುದು. ಏನಿದರ ವಿಶೇಷತೆ?

Read Full Story

02:19 PM (IST) Jan 17

Bigg Boss ಷೋ ತೆರೆಮರೆಯ ರೋಚಕ ರಹಸ್ಯವಿದು! ಅಸಲಿಗೆ ಅಲ್ಲಿ ನಡೆಯೋದೇನು, ನಡೆಸೋರು ಯಾರು?

ಬಿಗ್ ಬಾಸ್ ಕಾರ್ಯಕ್ರಮವನ್ನು ಕಲರ್ಸ್ ವಾಹಿನಿಯವರು ನಡೆಸಿಕೊಡುತ್ತಾರೆ ಎಂದು ಹಲವರು ಭಾವಿಸಿದ್ದಾರೆ, ಆದರೆ ಇದರ ಹಿಂದಿನ ಅಸಲಿ ನಿರ್ಮಾಣ ಸಂಸ್ಥೆ ಎಂಡೆಮೋಲ್ ಶೈನ್ ಇಂಡಿಯಾ. ಈ ಫ್ರೆಂಚ್ ಮೂಲದ ಕಂಪನಿಯೇ ಸ್ಪರ್ಧಿಗಳ ಸೌಲಭ್ಯ, ಸಂಭಾವನೆ ಸೇರಿದಂತೆ ಎಲ್ಲವನ್ನೂ ನಿರ್ವಹಿಸುತ್ತದೆ.
Read Full Story

12:48 PM (IST) Jan 17

ಬಿಗ್‌ ಬ್ಯಾಷ್ ಲೀಗ್‌ನಲ್ಲಿ ಬಾಬರ್ ಅಜಂಗೆ ಮುಖಭಂಗ - ಮೈದಾನದಲ್ಲಿ ನಡೆದದ್ದೇನು? ವಿಡಿಯೋ ವೈರಲ್

ಬಿಗ್ ಬ್ಯಾಷ್ ಲೀಗ್ ಪಂದ್ಯದಲ್ಲಿ, ಸ್ಟೀವನ್ ಸ್ಮಿತ್ ಸಿಂಗಲ್ ನಿರಾಕರಿಸಿದ್ದಕ್ಕೆ ಬಾಬರ್ ಅಜಂ ಅಸಮಾಧಾನಗೊಂಡರು. ನಂತರದ ಓವರ್‌ನಲ್ಲಿ ಔಟಾದ ಬಾಬರ್, ಪೆವಿಲಿಯನ್‌ಗೆ ಮರಳುವಾಗ ಕೋಪದಿಂದ ಜಾಹೀರಾತು ಬೋರ್ಡ್‌ಗೆ ಒದ್ದು ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Read Full Story

10:28 AM (IST) Jan 17

ಕಿವೀಸ್ ಎದುರಿನ ಟಿ20 ಸರಣಿ - ಟೀಂ ಇಂಡಿಯಾಗೆ ಅಯ್ಯರ್ ಜತೆ ಮತ್ತೊಬ್ಬ ಆಟಗಾರನಿಗೆ ಅನಿರೀಕ್ಷಿತ ಎಂಟ್ರಿ?

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದು, ಗಾಯಗೊಂಡ ತಿಲಕ್ ವರ್ಮಾ ಮತ್ತು ವಾಷಿಂಗ್ಟನ್ ಸುಂದರ್ ಬದಲಿಗೆ ಕ್ರಮವಾಗಿ ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ ಆಯ್ಕೆಯಾಗಿದ್ದಾರೆ. ಒಂದು ವರ್ಷದಿಂದ ತಂಡದಿಂದ ಹೊರಗಿದ್ದ ಶ್ರೇಯಸ್ ಅಯ್ಯರ್‌ಗೆ ಬುಲಾವ್ ಬಂದಿದೆ.

Read Full Story

09:50 AM (IST) Jan 17

ಅಂಡರ್-19 ವಿಶ್ವಕಪ್ - ಇಂದು ಭಾರತ vs ಬಾಂಗ್ಲಾ ಕದನ, ಸೂಪರ್-6 ಮೇಲೆ ಭಾರತದ ಕಣ್ಣು!

ಐಸಿಸಿ ಅಂಡರ್‌-19 ವಿಶ್ವಕಪ್‌ನಲ್ಲಿ ಯುಎಸ್‌ಎ ವಿರುದ್ಧ ಗೆದ್ದ ಭಾರತ ತಂಡ, ಸೂಪರ್‌-6 ಹಂತವನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶವನ್ನು ಎದುರಿಸಲಿದೆ. ವೈಭವ್‌ ಸೂರ್ವವಂಶಿ ಅವರಂತಹ ಆಟಗಾರರ ಮೇಲೆ ನಿರೀಕ್ಷೆ ಇದ್ದರೂ, 2020ರ ಚಾಂಪಿಯನ್ ಬಾಂಗ್ಲಾದೇಶವನ್ನು ಲಘುವಾಗಿ ಪರಿಗಣಿಸುವಂತಿಲ್ಲ.

Read Full Story

08:46 AM (IST) Jan 17

ಇಲಿಗಳು 7 ಕೋಟಿ ರು. ಮೌಲ್ಯದ 26000 ಟನ್‌ ಭತ್ತ ತಿಂದು ತೇಗಿದವಂತೆ! ಅಕ್ಕಿ ನಾಪತ್ತೆಗೆ ಸರ್ಕಾರದ ಉತ್ತರ

ಛತ್ತೀಸ್‌ಗಢದ ಗೋದಾಮುಗಳಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 26,000 ಕ್ವಿಂಟಾಲ್ ಭತ್ತ ನಾಶವಾಗಿದೆ. ಇದಕ್ಕೆ ಅಧಿಕಾರಿಗಳು ಇಲಿಗಳನ್ನು ದೂಷಿಸಿದ್ದು, ಇದು ಭ್ರಷ್ಟಾಚಾರ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಎಂದು ವಿಪಕ್ಷಗಳು ಆರೋಪಿಸಿ ಪ್ರತಿಭಟನೆ ಆರಂಭಿಸಿವೆ.
Read Full Story

More Trending News