LIVE NOW
Published : May 17, 2026, 06:43 AM ISTUpdated : May 17, 2026, 08:47 AM IST

India Latest News Live: ಸಿಬಿಎಸ್ಇ 9ನೇ ಕ್ಲಾಸ್‌ಗೆ ಜು.1ರಿಂದ್ಲೇ ತ್ರಿಭಾಷೆ ಸೂತ್ರ; 3ರಲ್ಲಿ 2 ಸ್ಥಳೀಯ ಭಾಷೆ ಕಡ್ಡಾಯ

ಸಾರಾಂಶ

 

ಹೇಗ್‌: ಸದ್ಯ ನೆದರ್ಲೆಂಡ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಸರ್ಕಾರ 11ನೇ ಶತಮಾನದ ಚೋಳರ ಕಾಲದ ಅನ್ನೈಮಂಗಲಂ ತಾಮ್ರದ ಫಲಕಗಳನ್ನು ಹಸ್ತಾಂತರಿಸಿದೆ.

ನೆದರ್ಲೆಂಡ್ಸ್‌ನಲ್ಲಿ ಲೈಡೆನ್ ಫಲಕಗಳು ಎಂದು ಕರೆಯಲ್ಪಡುವ ಅನ್ನೈಮಂಗಲಂ ಅನ್ನು ಭಾರತಕ್ಕೆ ಮರಳಿ ತರಲು 2012ರಿಂದಲೂ ಸರ್ಕಾರ ಪ್ರಯತ್ನಿಸುತ್ತಲೇ ಇತ್ತು. ಕೊನೆಗೂ ಫಲಪ್ರದವಾಗಿದೆ. ರಾಜೇಂದ್ರ ಚೋಳ I ಕಾಲದ ಈ ತಾಮ್ರ ಫಲಕದಲ್ಲಿನ ಕೆತ್ತನೆಗಳು ತಮಿಳು ಭಾಷೆಯಲ್ಲಿದೆ. ಇದು 21 ದೊಡ್ಡ ಫಲಕ ಮತ್ತು 3 ಸಣ್ಣ ಫಲಕಗಳನ್ನು ಹೊಂದಿದ್ದು, 30 ಕೇಜಿ ತೂಕ ಹೊಂದಿದ್ದು ಉಂಗುರದಿಂದ ಬಂಧಿಸಲ್ಪಟ್ಟಿದೆ.

ನೆದರ್ಲೆಂಡ್ಸ್‌ ತಲುಪಿದ್ದು ಹೇಗೆ?

ತಮಿಳುನಾಡಿನ ನಾಗಪಟ್ಟಣಂ ಡಚ್‌ ಈಸ್ಟ್‌ ಇಂಡಿಯಾ ಕಂಪನಿಯ ನಿಯಂತ್ರಣದಲ್ಲಿದ್ದಾಗ ಡಚ್‌ ಅಧಿಕಾರಿ ಫ್ಲೋರೆಂಟಿಯಸ್ ಕ್ಯಾಂಪರ್ ಎಂಬಾತ 1703-1712ರ ಅವಧಿಯಲ್ಲಿ ಈ ಶಾಸನಗಳನ್ನು ವಶಪಡಿಸಿಕೊಂಡಿದ್ದ. ಆ ಬಳಿಕ ಕಾಲಾಂತರದಲ್ಲಿ ಅದು ಲೈಡೆನ್ ವಿವಿ ಸೇರಿತ್ತು. ಅಲ್ಲಿ ನಿಬಂಧನೆಗಳೊಂದಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಿತ್ತು.

08:47 AM (IST) May 17

ಸಿಬಿಎಸ್ಇ 9ನೇ ಕ್ಲಾಸ್‌ಗೆ ಜು.1ರಿಂದ್ಲೇ ತ್ರಿಭಾಷೆ ಸೂತ್ರ; 3ರಲ್ಲಿ 2 ಸ್ಥಳೀಯ ಭಾಷೆ ಕಡ್ಡಾಯ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 9ನೇ ತರಗತಿಗೆ ತ್ರಿಭಾಷಾ ಸೂತ್ರವನ್ನು ಕಡ್ಡಾಯಗೊಳಿಸಿದೆ. ಈ ನಿಯಮದ ಪ್ರಕಾರ, ವಿದ್ಯಾರ್ಥಿಗಳು ಕನಿಷ್ಠ ಎರಡು ಸ್ಥಳೀಯ ಭಾಷೆಗಳನ್ನು ಕಲಿಯಬೇಕಿದ್ದು, 10ನೇ ತರಗತಿಯಲ್ಲಿ ಮೂರನೇ ಭಾಷೆಗೆ ಬೋರ್ಡ್ ಪರೀಕ್ಷೆ ಇರುವುದಿಲ್ಲ.
Read Full Story

08:37 AM (IST) May 17

ಹಾವಾಮಾನ ಇಲಾಖೆ ಎಚ್ಚರಿಕೆ, ಮುಂಗಾರು ಪ್ರವೇಶದ ಜೊತೆಗೆ ದೇಶದೆ ಕೆಲವೆಡೆ ವಿಪರೀತ ಬಿಸಿಗಾಳಿ

ಮೇ.26ಕ್ಕೆ ಮುಂಗಾರು ಕೇರಳ ಪ್ರವೇಶ ಮಾಡಲಿದೆ. ಈ ಬಾರಿ ಮಳೆ ಪ್ರಮಾಣ ಕೊಂಚ ಕಡಿಮೆಯಾಗಲಿದೆ. ಇದರ ಜೊತೆಗೆ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ದೇಶದ ಕೆಲ ಭಾಗದಲ್ಲಿ ವಿಪರೀತ ಬಿಸಿ ಗಾಳಿ ಜನರನ್ನು ಕಂಗಾಲು ಮಾಡಲಿದೆ ಎಂದಿದೆ.

Read Full Story

08:37 AM (IST) May 17

ಪೋಕ್ಸೋ ಪ್ರಕರಣದಲ್ಲಿ ಕೇಂದ್ರ ಸಚಿವ ಸಂಜಯ್ ಕುಮಾರ್‌ ಬಂಡಿ ಪುತ್ರ ಭಗೀರಥ ಅರೆಸ್ಟ್‌

ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕೇಂದ್ರ ಸಚಿವ ಬಂಡಿ ಸಂಜಯ್ ಅವರ ಪುತ್ರ ಭಗೀರಥನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ತಂದೆಯ ಸೂಚನೆಯಂತೆ ಪೊಲೀಸರಿಗೆ ಶರಣಾದ ನಂತರ ಈ ಬಂಧನ ನಡೆದಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಸಚಿವರು ಹೇಳಿದ್ದಾರೆ.
Read Full Story

08:25 AM (IST) May 17

Supreme Court ಸುಪ್ರೀಂ ಕೋರ್ಟ್‌ಗೆ ಬಲ - ನ್ಯಾಯಾಧೀಶರ ಸಂಖ್ಯೆ 38ಕ್ಕೆ ಏರಿಕೆ, ರಾಷ್ಟ್ರಪತಿ ಅಂಕಿತ

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆಯನ್ನು 34 ರಿಂದ 38ಕ್ಕೆ ಹೆಚ್ಚಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಪ್ರಕರಣಗಳ ವಿಲೇವಾರಿಗೆ ಇದು ಸಹಕಾರಿಯಾಗಲಿದೆ ಎಂದು ಕಾನೂನು ತಜ್ಞರು ಸ್ವಾಗತಿಸಿದ್ದಾರೆ.
Read Full Story

08:00 AM (IST) May 17

ರನ್‌ ಮಷೀನ್‌ ಕೊಹ್ಲಿಗೆ ಆ ಆಟಗಾರನ ಸಾಥ್ ಸಿಕ್ರೆ ಪಂಜಾಬ್ ಉಡೀಸ್; ಪ್ಲೇ-ಆಫ್‌ಗೆ RCB

ಪ್ಲೇ-ಆಫ್ ಪ್ರವೇಶದ ಗುರಿಯೊಂದಿಗೆ ಆರ್‌ಸಿಬಿ ತಂಡವು ಧರ್ಮಶಾಲಾದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಮತ್ತೊಂದು ಮಹತ್ವದ ಪಂದ್ಯದಲ್ಲಿ, ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಲು ರಾಜಸ್ಥಾನ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮಾಡು ಇಲ್ಲವೇ ಮಡಿ ಹೋರಾಟ ನಡೆಸಲಿದೆ.
Read Full Story

More Trending News