LIVE NOW
Published : Sep 17, 2026, 07:14 AM ISTUpdated : Sep 17, 2026, 07:44 AM IST

UPI Payment - ಯಾರೇ ವಿರೋಧಿಸಿದ್ರೂ ಯುಪಿಐ ಮೇಲಿನ ಶುಲ್ಕ ವಾಪಸ್ ಇಲ್ಲ - ಹೊರಬಿತ್ತು ಅಚ್ಚರಿಯ ಸತ್ಯ! ಯಾವಾಗ ಜಾರಿ?

ಸಾರಾಂಶ

ನವದೆಹಲಿ: ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸಬಾರದು ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ನೇತೃತ್ವದ ವಿಚಾರಣಾ ಆಯೋಗ ಕೇಂದ್ರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ.

ಹಿಂದು, ಸಿಖ್, ಬೌದ್ಧ ಧರ್ಮಕ್ಕೆ ಸೇರಿದವರಷ್ಟೇ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಬಹುದು ಎಂದು 1950ರ ರಾಷ್ಟ್ರಪತಿ ಆದೇಶದಲ್ಲಿ ತಿಳಿಸಲಾಗಿತ್ತು. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯಾನಿಟಿಗೆ ಸೇರಿದ 'ಮತಾಂತರಿತ ದಲಿತರು' ತಮಗೂ ಈ ಪಟ್ಟಿಯಲ್ಲಿ ಸ್ಥಾನ ನೀಡಬೇಕು ಎಂಬ ಬೇಡಿಕೆ ಸಲ್ಲಿಸಿದ್ದರು.

ಇದರ ಪರಿಶೀಲನೆಗೆ ಈ ಹಿಂದೆ ಕಾಕಾ ಕಲೇಲ್ಕರ್, ಸಚಾರ್ ಹಾಗೂ ರಂಗನಾಥ್ ಮಿಶ್ರಾ ಸಮಿತಿಗಳನ್ನು ರಚಿಸಲಾಗಿತ್ತು. 2022ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬಾಲಕೃಷ್ಣನ್ ನೇತೃತ್ವದಲ್ಲಿ ಸಮಿತಿ ರಚಿಸಿತು. ಇದು ಸಲ್ಲಿಸಲಿರುವ ವರದಿಯಲ್ಲಿ, 1950ರ ರಾಷ್ಟ್ರಪತಿ ಆದೇಶವನ್ನು ಯಥಾಸ್ಥಿತಿ ಮುಂದುವರಿಸಬೇಕು ಮತ್ತು ಮತಾಂತರಿತ ದಲಿತರಿಗೆ ಪರಿಶಿಷ್ಟ ಸ್ಥಾನಮಾನ ನೀಡಬಾರದು ಎಂದು ಶಿಫಾರಸು ಮಾಡುವ ಸಾಧ್ಯತೆಯಿದೆ.

07:44 AM (IST) Sep 17

UPI Payment - ಯಾರೇ ವಿರೋಧಿಸಿದ್ರೂ ಯುಪಿಐ ಮೇಲಿನ ಶುಲ್ಕ ವಾಪಸ್ ಇಲ್ಲ - ಹೊರಬಿತ್ತು ಅಚ್ಚರಿಯ ಸತ್ಯ! ಯಾವಾಗ ಜಾರಿ?

UPI transaction charges update ಯುಪಿಐ ಮೇಲಿನ ಪ್ರಸ್ತಾವಿತ ಶುಲ್ಕವನ್ನು ಹಿಂಪಡೆಯುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದು ವಿದೇಶಿ ಒತ್ತಡದ ನಿರ್ಧಾರವಲ್ಲ ಮತ್ತು ಆರ್ಥಿಕ ಸುಸ್ಥಿರತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

Read Full Story

07:22 AM (IST) Sep 17

ಭಾರತದ ಫಲವತ್ತತೆ ದರ ಕುಸಿತ, ಜನಸಂಖ್ಯೆ ನಿಯಂತ್ರಣ ಕ್ರಮ ಸಾಕು - ಪಿಎಂ ಸಲಹಾ ಮಂಡಳಿ!

ಭಾರತದ ಒಟ್ಟು ಫಲವತ್ತತೆ ದರ 1.9ಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ, ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಹಿಂಪಡೆಯುವಂತೆ ಪಿಎಂ ಆರ್ಥಿಕ ಸಲಹಾ ಮಂಡಳಿ ಶಿಫಾರಸು ಮಾಡಿದೆ. ಎರಡು ಮಕ್ಕಳ ನೀತಿ, ನಗದು ವರ್ಗಾವಣೆ ಮತ್ತು ಜನಸಂಖ್ಯೆ ನಿಯಂತ್ರಣ ಉತ್ತೇಜಿಸುವ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ವರದಿಯಲ್ಲಿ ತಿಳಿಸಲಾಗಿದೆ.
Read Full Story

More Trending News