LIVE NOW
Published : Aug 18, 2026, 05:32 AM ISTUpdated : Aug 18, 2026, 07:06 AM IST

India Latest News Live: ಚಿಕಿತ್ಸೆ ಸಿಗದೆ ಗರ್ಭಿಣಿ ಪತ್ನಿ ಸಾವು - ಗ್ರಾಮಕ್ಕೆ ರಸ್ತೆ ನಿರ್ಮಿಸಿದ ಪತಿ

ಸಾರಾಂಶ

ನವದೆಹಲಿ: ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಬಳಿಕ ಕಾಂಗ್ರೆಸ್‌- ಬಿಜೆಪಿ ನಡುವೆ ಶುರುವಾಗಿದ್ದ ‘ಬೌದ್ಧಿಕ ನಕ್ಸಲ್’ ತಿಕ್ಕಾಟ ಮತ್ತಷ್ಟು ತೀವ್ರಗೊಂಡಿದೆ. ‘ನಾನು ಬೌದ್ಧಿಕ ನಕ್ಸಲ್‌ ಆಗಲು ಹೆಮ್ಮೆ ಪಡುತ್ತೇನೆ’ನೆಂಬ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹೇಳಿಕೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.

2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಮಾವೋವಾದಿಗಳ ಸಮಸ್ಯೆ ದೇಶ ಎದುರಿಸುತ್ತಿರುವ ಏಕೈಕ ಅತಿದೊಡ್ಡ ಆಂತರಿಕ ಭದ್ರತಾ ಸವಾಲು ಎಂದಿದ್ದರು. ಆದರೆ, ಈಗ ಚಿದಂಬರಂ ನಾನು ಬೌದ್ಧಿಕ ನಕ್ಸಲ್‌ ಆಗಲು ಹೆಮ್ಮೆ ಪಡುತ್ತೇನೆ ಎಂದಿದ್ದಾರೆ. ಇದಕ್ಕಾಗಿ ಕಾಂಗ್ರೆಸ್‌ ಪಕ್ಷವು ಮಾಜಿ ಪ್ರಧಾನಿ ಕುಟುಂಬದ ಕ್ಷಮೆ ಯಾಚಿಸಬೇಕು ಎಂದು ಸಚಿವ ಕಿರಣ್‌ ರಿಜಿಜು ಆಗ್ರಹಿಸಿದರು.

ತ್ರಿವೇದಿ ತಿರುಗೇಟು:

ಈ ನಡುವೆ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರು, ಕಾಂಗ್ರೆಸ್‌ ಪಕ್ಷ ‘ಮುಸ್ಲಿಂ ಲೀಗ್‌ ಮಾವೋವಾದಿ ಕಾಂಗ್ರೆಸ್‌’ ಎಂಬುದಾಗಿ ಅವರ ಪಕ್ಷದವರೇ ಬಯಲು ಮಾಡಿದ್ದರು. ಇದೀಗ ತಮ್ಮದು ‘ಬೌದ್ಧಿಕ ನಕ್ಸಲ್‌ ಕಾಂಗ್ರೆಸ್‌’ ಎಂದು ಹೇಳಿಕೊಳ್ಳುತ್ತಿದ್ದಾರೆ’ಎಂದು ವ್ಯಂಗ್ಯವಾಡಿದರು.

07:06 AM (IST) Aug 18

ಚಿಕಿತ್ಸೆ ಸಿಗದೆ ಗರ್ಭಿಣಿ ಪತ್ನಿ ಸಾವು - ಗ್ರಾಮಕ್ಕೆ ರಸ್ತೆ ನಿರ್ಮಿಸಿದ ಪತಿ

ರಸ್ತೆ ಇಲ್ಲದ ಕಾರಣ ಚಿಕಿತ್ಸೆ ಸಿಗದೆ ಗರ್ಭಿಣಿ ಪತ್ನಿ ಮೃತಪಟ್ಟಿದ್ದರಿಂದ ನೊಂದ ಪತಿ ತುಳಸಿರಾಮ್ ಗೆಡಮ್, ಗ್ರಾಮಸ್ಥರ ನೆರವಿನಿಂದ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತನ್ನ ಪತ್ನಿಗಾದ ದುರ್ಗತಿ ಬೇರೆಯವರಿಗೆ ಬರಬಾರದೆಂಬ ಉದ್ದೇಶದಿಂದ ಅವರು ಈ ಕಾರ್ಯಕ್ಕೆ ಕೈಹಾಕಿದ್ದಾರೆ.

Read Full Story

05:58 AM (IST) Aug 18

ಬಿಜೆಪಿಗೆ 65 ಪದಾಧಿಕಾರಿಗಳ ಹೊಸ ರಾಷ್ಟ್ರೀಯ ತಂಡ ಪ್ರಕಟಿಸಿದ ಅಧ್ಯಕ್ಷ ನಿತಿನ್‌ ನವೀನ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಅವರು 65 ಪದಾಧಿಕಾರಿಗಳ ಹೊಸ ರಾಷ್ಟ್ರೀಯ ತಂಡವನ್ನು ಪ್ರಕಟಿಸಿದ್ದಾರೆ. 2029ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ರಚಿಸಲಾದ ಈ ತಂಡದಲ್ಲಿ 51 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದ್ದು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯರಂತಹವರನ್ನು ಕೈಬಿಟ್ಟು ಸ್ಮೃತಿ ಇರಾನಿ, ರಾಮ್‌ಮಾಧವ್‌ಗೆ ಮಹತ್ವದ ಸ್ಥಾನ ನೀಡಲಾಗಿದೆ.
Read Full Story

More Trending News