ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸಿರುವ ನಡುವೆಯೇ ಮತ್ತೊಂದು ಅಕ್ರಮದ ಶಂಕೆ ವ್ಯಕ್ತವಾಗಿದ್ದು, ಪಡೆ ಪೂಜೆ ಕಾಣಿಕೆ ಹಂಚಿಕೆಯಲ್ಲಿಯೂ ಭ್ರಷ್ಟಾಚಾರ, ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ದಳ( ವಿಎಸಿಬಿ)ಯ ಗುಪ್ತಚರ ವಿಭಾಗ ಬಹಿರಂಗ ಪಡಿಸಿದೆ. ಪವಿತ್ರ ಪಡಿಪೂಜೆಯ ಬುಕ್ಕಿಂಗ್, ಭಕ್ತರಿಗೆ ಟಿಕೆಟ್ ವಿತರಣೆಯಲ್ಲಿ ನಿಗದಿಗಿಂತ ಹಲವು ಪಟ್ಟು ಹೆಚ್ಚು ದರಕ್ಕೆ ಮಾರಾಟ, ಹಣ ನೀಡಿದವರಿಗೆ ಪೂಜೆಯಲ್ಲಿ ಆದ್ಯತೆ ಸೇರಿದಂತೆ ಅನೇಕ ಅಕ್ರಮ ನಡೆದಿರುವ ಸಾಧ್ಯತೆ ಬಗ್ಗೆ ವರದಿ ಮಾಡಿದೆ. ಮಾತ್ರವಲ್ಲದೇ ತಿರುವಾಂಕೂರು ದೇವಸ್ವಂ ಮಂಡಳಿ( ಟಿಡಿಬಿ) ಸಿಬ್ಬಂದಿ ಮತ್ತು ಇತರ ಏಜೆಂಟ್ಗಳು ಇದರಲ್ಲಿ ಭಾಗಿದಾರರು ಎಂದು ಉಲ್ಲೇಖಿಸಿದೆ.

11:01 PM (IST) Jan 18
ತೀವ್ರ ಕುತೂಹಲ ಕೆರಳಿಸಿದ ಬಿಗ್ ಬಾಸ್ 9 ವಿನ್ನರ್ ಘೋಷಣೆ, ಯಾರು ಚಾಂಪಿಯನ್ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ದಿವ್ಯಾ ಗಣೇಶನ್ ಬಿಗ್ ಬಾಸ್ ಟ್ರೋಫಿ ಗೆದ್ದುಕೊಂಡಿದ್ದಾರೆ. ಇದೀಗ ಸಂಭ್ರಮಾಚರಣೆ ಶುರುವಾಗಿದೆ.
08:15 PM (IST) Jan 18
ಸಾಯಲು ಇಷ್ಟವಿಲ್ಲ ಅಪ್ಪ ಕಾಪಾಡು, ಇದು 27ರ ಹರೆಯದ ಟೆಕ್ಕಿಯ ಕೊನೆಯ ಕರೆ. ತಂದೆ ಸ್ಥಳಕ್ಕೆ ಓಡೋಡಿ ಬಂದಿದ್ದಾರೆ. ಆದರೆ ಮಗನ ರಕ್ಷಿಸಲು ಸಾಧ್ಯವಾಗದೆ ಕಣ್ಣೀರಿಡುತ್ತಿದ್ದಾರೆ. ಟೆಕ್ಕಿ ಕೆಸರು ತುಂಬಿದ ಗುಂಡಿಗೆ ಬಿದ್ದು ಮೃತಪಟ್ಟ ದುರಂತ ಘಟನೆ ನಡೆದಿದೆ.
06:02 PM (IST) Jan 18
57 ನಿಮಿಷದಲ್ಲಿ 10KM ಮ್ಯಾರಥಾನ್ ಓಟ, ಪತ್ನಿ ಸೀಮಾ ಕಾಮತ್ ಸಾಧನೆ ಹಾಗೂ ಹೋರಾಟದ ಕುರಿತು ಉದ್ಯಮಿ ನಿತಿನ್ ಕಾಮತ್ ಹೇಳಿಕೊಂಡಿದ್ದಾರೆ. ಏನಿದು ಶ್ರೀಮಂತ ಯುವ ಉದ್ಯಮಿ ಹಿಂದಿನ ಹೋರಾಟದ ಹಾದಿ
05:52 PM (IST) Jan 18
ಕಾಲ್ತುಳಿತದ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಕೆಎಸ್ಸಿಎ ಸರ್ಕಾರದ ಷರತ್ತುಗಳನ್ನು ಪೂರೈಸಲು ಒಪ್ಪಿಕೊಂಡಿದೆ.
03:25 PM (IST) Jan 18
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಮೇಲೆ ಗಮನಹರಿಸಿದ್ದು, ನ್ಯೂಜಿಲೆಂಡ್ ಸರಣಿಯ ನಂತರ ಸುಮಾರು ಆರು ತಿಂಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ.
11:38 AM (IST) Jan 18
ಢಾಕಾ: ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನಾಡಲು ಭಾರತಕ್ಕೆ ಬರುವುದಿಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾದೇಶ, ಇದೀಗ ಐಸಿಸಿ ಮುಂದೆ ಮತ್ತೊಂದು ಬೇಡಿಕೆಯಿಟ್ಟಿದೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.
10:48 AM (IST) Jan 18
ಭಾನುವಾರದಿಂದ ಆರಂಭವಾಗಲಿರುವ ವರ್ಷದ ಮೊದಲ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ ಆಸ್ಟ್ರೇಲಿಯನ್ ಓಪನ್ನಲ್ಲಿ, ನೋವಾಕ್ ಜೋಕೋವಿಚ್ 25ನೇ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದ್ದಾರೆ. ಯುವ ತಾರೆಗಳಾದ ಕಾರ್ಲೊಸ್ ಆಲ್ಕರಜ್ ಮತ್ತು ಯಾನಿಕ್ ಸಿನ್ನರ್ರಿಂದ ತೀವ್ರ ಪೈಪೋಟಿ ಎದುರಾಗಲಿದೆ.
09:45 AM (IST) Jan 18
ಐಸಿಸಿ ಅಂಡರ್-19 ವಿಶ್ವಕಪ್ನ ಮಳೆ ಪೀಡಿತ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ ವಿರುದ್ಧ 18 ರನ್ಗಳ ರೋಚಕ ಜಯ ಸಾಧಿಸಿದೆ. ವೈಭವ್ ಸೂರ್ಯವಂಶಿ ಮತ್ತು ಅಭಿಗ್ಯಾನ್ ಕುಂಡು ಅವರ ಅರ್ಧಶತಕಗಳ ನೆರವಿನಿಂದ ಭಾರತ ಉತ್ತಮ ಮೊತ್ತ ಕಲೆಹಾಕಿತು.
09:17 AM (IST) Jan 18