ಭಾರತದ ಆರ್ಥಿಕತೆ ನಿರ್ಜೀವವಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಲವಾಗಿ ಸಮರ್ಥಿಸಿಕೊಂಡಿದ್ದರೆ, ಕಾಂಗ್ರೆಸ್ ಸಂಸದರಾದ ಶಶಿ ತರೂರ್, ರಾಜೀವ್ ಶುಕ್ಲಾ ಅವರೇ ಬಹಿರಂಗವಾಗಿ ವಿರೋಧಿಸಿದ್ದಾರೆ. ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮಹಾ ಅಘಾಡಿ ಒಕ್ಕೂಟದ ಭಾಗವಾಗಿರುವ ಉದ್ಧವ್ ಠಾಕ್ರೆ ಬಣದ ಶಿವಸೇನೆ ಕೂಡಾ ಟ್ರಂಪ್ ಹೇಳಿಕೆಯನ್ನು ಟೀಕಿಸಿದ್ದಾರೆ. ಆದರೆ ಕಾಂಗ್ರೆಸ್ನ ರಾಹುಲ್ ಗಾಂಧಿ ಮಾತ್ರ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 'ಟ್ರಂಪ್ ಹೇಳಿದ್ದು ಸತ್ಯ. ಪ್ರಧಾನಿ ಮೋದಿ ಮತ್ತು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೊರತುಪಡಿಸಿ ಉಳಿದೆಲ್ಲರಿಗೂ ಭಾರತದ ಆರ್ಥಿಕತೆ ಸತ್ತುಹೋಗಿದೆ ಎಂಬ ಅರಿವಿದೆ. ಟ್ರಂಪ್ ಅವರು ಈ ಸತ್ಯ ಹೇಳಿದ್ದಕ್ಕೆ ನನಗೆ ಖುಷಿ ಇದೆ. ಬಿಜೆಪಿಯು ಉದ್ಯಮಿ ಗೌತಮ್ ಅದಾನಿಗೆ ಅನುಕೂಲ ಮಾಡಿಕೊಡಲು ದೇಶದ ಆರ್ಥಿಕತೆಯನ್ನು ಹಾಳುಗೆಡವಿದೆ' ಎಂದು ರಾಹುಲ್ ಹೇಳಿದ್ದಾರೆ. ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಟ್ರಂಪ್ ಹೇಳಿಕೆ ಬೆಂಬಲಿಸುವ ಮೂಲಕ ರಾಹುಲ್ ಗಾಂಧಿ ಅವರು ತೀರಾ ಕೆಳಮಟ್ಟಕ್ಕಿಳಿದಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಅಮಿತ್ ಮಾಳವಿಯಾ ಕಿಡಿಕಾರಿದ್ದಾರೆ
10:52 PM (IST) Aug 01
10:39 PM (IST) Aug 01
ರಾಷ್ಟ್ರೀಯ ಪ್ರಶಸ್ತಿಯಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ಊರ್ವಶಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಲ್ಲೊಳುಕ್ಕು ಚಿತ್ರದಲ್ಲಿನ ಪಾತ್ರ ಪೋಷಕ ಪಾತ್ರವಲ್ಲ, ಪೂರ್ಣ ಪ್ರಮಾಣದ ಪಾತ್ರ ಎಂದು ಹೇಳಿದ್ದಾರೆ. ಅಚ್ಚುವಿನಮ್ಮ ಚಿತ್ರದ ಅಭಿನಯಕ್ಕೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಗಬೇಕಿತ್ತು ಎಂದರು.
10:10 PM (IST) Aug 01
ಕ್ರಿಕೆಟಿಗ ಯಜುವೇಂದ್ರ ಚಾಹಲ್ ಅವರು ಧನಶ್ರೀ ವರ್ಮ ಅವರೊಂದಿಗಿನ ತಮ್ಮ ವಿಚ್ಛೇದನದ ಬಗ್ಗೆ ಮೌನ ಮುರಿದಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಆದ ಆತುರದ ನಿರ್ಧಾರ ಮತ್ತು ಜೀವನಶೈಲಿಯ ವ್ಯತ್ಯಾಸಗಳು ಬೇರ್ಪಡುವಿಕೆಗೆ ಕಾರಣ ಎಂದು ಚಾಹಲ್ ಹೇಳಿದ್ದಾರೆ.
07:47 PM (IST) Aug 01
07:10 PM (IST) Aug 01
India manufacturing PMI July 2025: ಕಳೆದ 16 ತಿಂಗಳಲ್ಲಿಯೇ ಅತಿ ಹೆಚ್ಚಿನ PMI ಇಂಡೆಕ್ಸ್ 59.1ಕ್ಕೆ ಏರಿಕೆಯಾಗಿದೆ. ಜುಲೈನಲ್ಲಿ ಉತ್ಪಾದನಾ ವಲಯದಲ್ಲಿ ಗಮನಾರ್ಹ ಬೆಳವಣಿಗೆ ಕಂಡುಬಂದಿದೆ. ಈ ಏರಿಕೆ ಭಾರತದ ಆರ್ಥಿಕತೆಗೆ ಧನಾತ್ಮಕ ಸಂಕೇತವಾಗಿದೆಯೇ?
07:02 PM (IST) Aug 01
ಪ್ರಾಯೋಗಿಕವಾಗಿ ಆರಂಭವಾದ ಎದೆಹಾಲಿನ ಬ್ಯಾಂಕುಗಳು ಯಶಸ್ವಿಯಾಗಿವೆ. ಈ ಬ್ಯಾಂಕುಗಳು ಅನಾಥ ಮಕ್ಕಳು ಮತ್ತು ಎದೆಹಾಲುಣಿಸಲು ಸಾಧ್ಯವಾಗದ ತಾಯಂದಿರ ಮಕ್ಕಳಿಗೆ ಅನುಕೂಲವಾಗಿದೆ. 17 ಸಾವಿರಕ್ಕೂ ಅಧಿಕ ಮಕ್ಕಳಿಗೆ ಈ ಯೋಜನೆಯಿಂದ ಪ್ರಯೋಜನವಾಗಿದೆ.
05:01 PM (IST) Aug 01
ಫಿರೋಜಾಬಾದ್ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 19 ವರ್ಷದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಪರಾಧ ಮರೆಮಾಚಲು ಸಹಕರಿಸಿದ ಆತನ ಕುಟುಂಬಕ್ಕೂ ಶಿಕ್ಷೆ. ಕೇವಲ ೨೫ ದಿನಗಳಲ್ಲಿ ವಿಚಾರಣೆ ಪೂರ್ಣ.
04:46 PM (IST) Aug 01
ಮುಂಬೈನ ಗೇಟ್ವೇ ಆಫ್ ಇಂಡಿಯಾದಲ್ಲಿ ವಿದೇಶಿ ಮಹಿಳಾ ಪ್ರವಾಸಿಗರೊಬ್ಬರಿಗೆ ಸೆಲ್ಫಿಗಾಗಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
04:23 PM (IST) Aug 01
03:41 PM (IST) Aug 01
03:28 PM (IST) Aug 01
ಅಡುಗೆಯವರು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಪಾದಿಸುತ್ತಾರೆ ಎಂಬ ವಕೀಲರೊಬ್ಬರ ಪೋಸ್ಟ್ ವೈರಲ್ ಆಗಿದೆ. ಕೇವಲ ಅರ್ಧ ಗಂಟೆ ಕೆಲಸಕ್ಕೆ 18,000 ರೂಪಾಯಿ ಸಂಬಳ ಪಡೆಯುತ್ತಾರೆ.
02:28 PM (IST) Aug 01
01:21 PM (IST) Aug 01
ಸಾಲ ತೀರಿಸಲು ಅಮೆರಿಕದಿಂದ ಭಾರತಕ್ಕೆ ಬಂದ ಅಣ್ಣ ತಂಗಿಯ ಕಥೆ. 12 ವರ್ಷಗಳ ಹಿಂದೆ ತಂದೆ ಪಡೆದಿದ್ದ ಕಡಲೆಬೀಜದ ಸಾಲವನ್ನು ಮಕ್ಕಳು ತೀರಿಸಿದರು. ವ್ಯಾಪಾರಿಯನ್ನು ಹುಡುಕಿ ಕುಟುಂಬಕ್ಕೆ ಹಣ ನೀಡಿದರು.
01:12 PM (IST) Aug 01
ಲೋಕಸಭೆಯಲ್ಲಿಯೂ ಬಿಸಿಬಿಸಿ ಸಮೋಸಾ ಚರ್ಚೆಗೆ ಬಂದಿದೆ. ಅಲ್ಲಿ ಆಗಿದ್ದೇನು? ಬಾಯಲ್ಲಿ ನೀರು ತರಿಸೋ ಸಮೋಸಾವನ್ನು ಮನೆಯಲ್ಲಿಯೇ ಹೇಗೆ ಸುಲಭದಲ್ಲಿ ಮಾಡಬಹುದು? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ...
01:04 PM (IST) Aug 01
ತೆಲಂಗಾಣದಲ್ಲಿ 40 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಶಾಲೆಯಲ್ಲಿ ಶಿಕ್ಷಕರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
12:01 PM (IST) Aug 01
ರೈಲಿನಲ್ಲಿ ಪ್ರಯಾಣಿಕರ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ ಘಟನೆ, ಚಲಿಸುತ್ತಿದ್ದ ಸ್ಕೂಟರ್ ಮೇಲೆ ಕರೆಂಟ್ ಕಂಬ ಬಿದ್ದ ಘಟನೆ ಹಾಗೂ ಪಂಜಾಬ್ನಲ್ಲಿ ನೀರಿನಲ್ಲಿ ಕೊಚ್ಚಿಹೋದ ಯುವಕರು ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕೆಲ ಘಟನೆಗಳ ವೀಡಿಯೋ ಇಲ್ಲಿದೆ ನೋಡಿ.
10:38 AM (IST) Aug 01
09:00 AM (IST) Aug 01
ಚಿಕನ್ ಚಿಲ್ಲಿ ಎಂದು ಬಾವಲಿ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ. ತಮಿಳುನಾಡಿನ ಸೇಲಂನಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇದು ಸಾರ್ವಜನಿಕ ಆರೋಗ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.