LIVE NOW
Published : Jun 02, 2026, 07:02 AM ISTUpdated : Jun 02, 2026, 09:39 AM IST

India Latest News Live: IPL 2026 Flop XI - ಈ ಸೀಸನ್‌ ಐಪಿಎಲ್‌ನ ಅತ್ಯಂತ ಪ್ಲಾಫ್ ತಂಡಕ್ಕೆ ರಿಷಭ್ ಪಂತ್ ಕ್ಯಾಪ್ಟನ್! ಈ ತಂಡದಲ್ಲಿ ಆರ್‌ಸಿಬಿ ಆಟಗಾರನಿಗೂ ಸ್ಥಾನ!

ಸಾರಾಂಶ

ತಿರುಚಿರಾಪಳ್ಳಿ: ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ ಹಲವು ಬಾರಿ ಸೂಟ್‌ನಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದ ತಮಿಳುನಾಡು ಸಿಎಂ ವಿಜಯ್‌, ಅದರ ಕಾರಣವನ್ನು ಬಹಿರಂಗಪಡಿಸಿದ್ದಾರೆ. ನಾನು ಎಲ್ಲವನ್ನೂ ಕಪ್ಪು ಬಿಳುಪಾಗಿ (ಅಕ್ರಮ ಹಾಗೂ ಸಕ್ರಮ) ನೋಡುವುದರ ಸಂಕೇತವಿದು ಎಂದಿದ್ದಾರೆ.

ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿ ಸಾರ್ವಜನಿಕರ ಎದುರು ತಮ್ಮ ಕ್ಷೇತ್ರವಾದ ತಿರುಚಿರಾಪಳ್ಳಿಯಲ್ಲಿ ಮಾತನಾಡಿದ ಅವರು, ‘ನನ್ನ ಸೂಟ್‌ ಬಣ್ಣ ಯಾವಾಗಲೂ ಕಪ್ಪು ಮತ್ತು ಬಿಳಿ ಆಗಿರುತ್ತದೆ. ಕಾರಣ ನಾನು ಎಲ್ಲವನ್ನು ಈ ಎರಡು ಬಣ್ಣಗಳಲ್ಲಷ್ಟೇ ನೋಡುತ್ತೇನೆ. ಅದರ ನಡುವಿನ ಯಾವ ಬಣ್ಣವನ್ನೂ ಧರಿಸುವುದಿಲ್ಲ ಹಾಗೂ ನೋಡುವುದಿಲ್ಲ’ ಎಂದಿದ್ದಾರೆ.

ಇದೇ ವೇಳೆ ಚೊಚ್ಚಲ ಚುನಾವಣೆಯಲ್ಲಿ ತಮ್ಮ ಕೈಹಿಡಿದು ಅಧಿಕಾರಕ್ಕೇರಿಸಿದ ಮತದಾರರಿಗೆ ಧನ್ಯವಾದವನ್ನು ಅರ್ಪಿಸಿದ ವಿಜಯ್‌, ‘ಇಷ್ಟು ವರ್ಷ ನಿಮಗೆ ಮೋಸ ಮಾಡಿದ ಇಬ್ಬರನ್ನು (ಡಿಎಂಕೆ ಮತ್ತು ಅಣ್ಣಾಡಿಎಂಕೆ) ನಿರ್ಲಕ್ಷಿಸಿ ನನ್ನನ್ನು ಬೆಂಬಲಿಸಿದ್ದಕ್ಕೆ ಶಿರಬಾಗಿ ವಂದಿಸುತ್ತೇನೆ’ ಎಂದರು. ಜತೆಗೆ, ‘ನನ್ನ ಆಡಳಿತವನ್ನು ನೀವೆಲ್ಲಾ ಮೆಚ್ಚುತ್ತೀರಿ ಹಾಗೂ ಮುಂದೆಯೂ ಬೆಂಬಲಿಸುತ್ತೀರಿ ಎಂಬ ನಂಬಿಕೆಯಿದೆ’ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು.

09:39 AM (IST) Jun 02

IPL 2026 Flop XI - ಈ ಸೀಸನ್‌ ಐಪಿಎಲ್‌ನ ಅತ್ಯಂತ ಪ್ಲಾಫ್ ತಂಡಕ್ಕೆ ರಿಷಭ್ ಪಂತ್ ಕ್ಯಾಪ್ಟನ್! ಈ ತಂಡದಲ್ಲಿ ಆರ್‌ಸಿಬಿ ಆಟಗಾರನಿಗೂ ಸ್ಥಾನ!

ಐಪಿಎಲ್ 2026 ಸೀಸನ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಸೂಪರ್‌ಸ್ಟಾರ್ ಆಟಗಾರರನ್ನು ಸೇರಿಸಿ 'ಫ್ಲಾಪ್ XI' ತಂಡವನ್ನು ರಚಿಸಲಾಗಿದೆ. ರಿಷಭ್ ಪಂತ್ ನಾಯಕತ್ವದ ಈ ತಂಡದಲ್ಲಿ ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾರಂತಹ ದೊಡ್ಡ ಹೆಸರುಗಳು ಸೇರಿವೆ.
Read Full Story

09:26 AM (IST) Jun 02

ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆಯೇ ಭಾವುಕರಾದ ರಜತ್ ಪಾಟೀದಾರ್! ಆ ನೋವು ಬಿಚ್ಚಿಟ್ಟ ಆರ್‌ಸಿಬಿ ನಾಯಕ

19ನೇ ಆವೃತ್ತಿಯ ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್, ಕಳೆದ ವರ್ಷದ ಕಾಲ್ತುಳಿತದಲ್ಲಿ ಮಡಿದ 11 ಅಭಿಮಾನಿಗಳಿಗೆ ಈ ಗೆಲುವನ್ನು ಅರ್ಪಿಸಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ ಮತ್ತು ಇತರೆ ಕಾರಣಗಳಿಂದಾಗಿ ಈ ಬಾರಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸದಿರಲು ಫ್ರಾಂಚೈಸಿ ನಿರ್ಧರಿಸಿದೆ.
Read Full Story

07:52 AM (IST) Jun 02

ಆನ್‌ಲೈನ್‌ನಲ್ಲಿ ಕಿಡಿ ಹಚ್ಚಿದ್ದ ಜಿರಳೆ ಪಕ್ಷ ಈಗ ಬೀದಿಗಿಳಿದಿದೆ! ನೀಟ್ ಸೋರಿಕೆ ವಿರುದ್ಧ ನೇರ ಹೋರಾಟ, ಜೂ.6ಕ್ಕೆ ಬಿಗ್ ಆಕ್ಷನ್

ಆನ್‌ಲೈನ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಸ್ಥಾಪಿಸಿ ಸಂಚಲನ ಮೂಡಿಸಿದ್ದ ಅಮೆರಿಕ ವಾಸಿ ಅಭಿಜಿತ್ ದೀಪ್ಕೆ, ಇದೀಗ ಭಾರತಕ್ಕೆ ಆಗಮಿಸುತ್ತಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅವರು ಪ್ರತಿಭಟನೆ.

Read Full Story

07:48 AM (IST) Jun 02

ಆರ್‌ಸಿಬಿ ಚಾಂಪಿಯನ್ - ಕೊಹ್ಲಿ ಡ್ಯಾನ್ಸ್‌ಗೆ ದಂಗಾದ ಅನುಷ್ಕಾ!

ಗುಜರಾತ್‌ ಟೈಟಾನ್ಸ್‌ ವಿರುದ್ಧ ಐಪಿಎಲ್‌ ಫೈನಲ್‌ ಗೆದ್ದ ಆರ್‌ಸಿಬಿ ತಂಡದ ಆಟಗಾರರು ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆ ನೃತ್ಯ ಮಾಡಿದ್ದು, ದೇಶ-ವಿದೇಶಗಳಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
Read Full Story

07:26 AM (IST) Jun 02

West Bengal Kalita Majhi - ಮನೆ ಮನೆ ಮುಸುರೆ ತಿಕ್ಕುತ್ತಿದ್ದ ಕಲಿತಾ ಮಾಝಿ ಈಗ ಬಂಗಾಳ ಸಚಿವೆ!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಂಪುಟ ವಿಸ್ತರಣೆಯಾಗಿದ್ದು, 35 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಾಜಿ ಕ್ರಿಕೆಟಿಗ ಅಶೋಕ್‌ ದಿಂಡಾ ಹಾಗೂ ಈ ಹಿಂದೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಸಚಿವರಾಗಿರುವುದು ವಿಶೇಷ.
Read Full Story

More Trending News