ಕೋಲ್ಕತಾ: ಭಾನುವಾರ ಚುನಾವಣಾ ಪ್ರಚಾರಕ್ಕೆಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ವೇಳೆಪ್ರಧಾನಿ ನರೇಂದ್ರ ಮೋದಿ, ಕುರುಕಲು ತಿಂಡಿ ಅಂಗಡಿಯಲ್ಲಿ ಮಂಡಕ್ಕಿ ಖರೀದಿಸಿದ್ದು ಬರೀ ನಾಟಕ ಎಂದು ಸಿಎಂ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.
ನರೇಂದ್ರ ಮೋದಿ ಹೆಸರು ಹೇಳದೆಯೇ ಚುನಾವಣಾ ರ್ಯಾಲಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ದೀದಿ, ‘ಇದೆಲ್ಲ ನಾಟಕ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಇದ್ದಕ್ಕಿದ್ದಂತೆ ಅಂಗಡಿಗೆ ತೆರಳಿದಾಗ ಅಂಗಡಿಗೆ ಕ್ಯಾಮರಾಮ್ಯಾನ್ ಏಕೆ ಬಂದಿದ್ದ? ಇಡೀ ಘಟನೆಯನ್ನು ಹೇಗೆ ಚಿತ್ರೀಕರಿಸಲಾಯಿತು? ಅವರು ಜೇಬಿನಲ್ಲಿ 10 ರು. ನೋಟು ಇರಿಸಿಕೊಂಡಿದ್ದು ಕಂಡು ಬಂದಿದೆ. ಇದು ನಂಬುವುದಕ್ಕೆ ಸಾಧ್ಯವೇ?’ ಎಂದು ಪ್ರಶ್ನಿಸಿದರು.
ಮೋದಿ ಚುನಾವಣಾ ಪ್ರಚಾರಕ್ಕೆಂದು ಭಾನುವಾರ ಬಂಗಾಳಕ್ಕೆ ಬಂದಾಗ ಝಾರ್ಗ್ರಾಮದ ಕುರುಕಲು ತಿಂಡಿ ಅಂಗಡಿಗೆ ‘ಅನಿರೀಕ್ಷಿತವಾಗಿ’ ತೆರಳಿ, ಮಂಡಕ್ಕಿ ಖರಿದಿಸಿ ತಿಂದಿದ್ದಲ್ಲದೆ ಮಕ್ಕಳಿಗೆ ಹಂಚಿದ್ದರು.
10:44 PM (IST) Apr 21
10:27 PM (IST) Apr 21
ಗುಜರಾತ್ನ ಅಹಮದಾಬಾದ್ನಲ್ಲಿ, ಮಗುವಿನ ನಿಜವಾದ ತಂದೆಯನ್ನು ಪತ್ತೆಹಚ್ಚಲು ನಡೆಸುವ ಡಿಎನ್ಎ ಪರೀಕ್ಷೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಹಿಂದೆ ವೈದ್ಯಕೀಯ ಕಾರಣಗಳಿಗೆ ಸೀಮಿತವಾಗಿದ್ದ ಈ ಪರೀಕ್ಷೆಗಳು, ಈಗ ದಂಪತಿಗಳ ನಡುವಿನ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಬಳಕೆಯಾಗುತ್ತಿವೆ.
08:42 PM (IST) Apr 21
ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಪತ್ನಿ ಮತ್ತು ಮಗಳನ್ನು ಕಳೆದುಕೊಂಡ ಮೊಹಮ್ಮದ್ ಶೇತ್ವಾಲಾ ಎಂಬ ಭಾರತೀಯನಿಗೆ ಬ್ರಿಟನ್ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಮಾನವೀಯ ನೆಲೆಯಲ್ಲಿ ವಾಸ್ತವ್ಯ ವಿಸ್ತರಿಸಲು ಸಲ್ಲಿಸಿದ್ದ ಅವರ ಮನವಿಯನ್ನು ತಿರಸ್ಕರಿಸಿದೆ.
08:37 PM (IST) Apr 21
ನಟ ಶ್ರೀಹರಿಗೆ ವಿಶೇಷ ಸ್ಥಾನವಿದೆ. ಅವರು ಹೀರೋ, ವಿಲನ್ ಹಾಗೂ ಪೋಷಕ ನಟನಾಗಿ ಪ್ರೇಕ್ಷಕರನ್ನು ರಂಜಿಸಿದ್ದರು. ತೆರೆಮೇಲೆ ಸಿಕ್ಸ್ ಪ್ಯಾಕ್ ತೋರಿಸಿದ ಮೊದಲ ಹೀರೋ ಎಂಬ ಹೆಗ್ಗಳಿಕೆ ಶ್ರೀಹರಿಗಿದೆ. ಅವರು ಅನಾರೋಗ್ಯದಿಂದ ನಿಧನರಾದರು.
08:15 PM (IST) Apr 21
ಭಾರತೀಯ ಸೇನೆಯ T-72 ಮತ್ತು T-90 ಟ್ಯಾಂಕ್ಗಳಿಗಾಗಿ 975 ಕೋಟಿ ರೂಪಾಯಿ ಮೌಲ್ಯದ 'ಟ್ರಾಲ್' ವ್ಯವಸ್ಥೆಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿದೆ. ಡಿಆರ್ಡಿಒ ಅಭಿವೃದ್ಧಿಪಡಿಸಿದ ಈ ತಂತ್ರಜ್ಞಾನವು ಯುದ್ಧಭೂಮಿಯಲ್ಲಿ ಮೈನ್ಗಳನ್ನು ತೆರವುಗೊಳಿಸಿ, ಸೈನಿಕರ ಸುರಕ್ಷಿತ ಸಂಚಾರಕ್ಕೆ ನೆರವಾಗಲಿದೆ.
08:13 PM (IST) Apr 21
ನಟ ಅಜಿತ್ ಸಿನಿಮಾ ಮಾತ್ರವಲ್ಲದೆ ಬೇರೆ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಅದರಲ್ಲೂ ಕಾರ್ ರೇಸಿಂಗ್ನಲ್ಲಿ ಅವರ ಆಸಕ್ತಿ ಮತ್ತು ಪ್ರತಿಭೆ ಅಭಿಮಾನಿಗಳನ್ನು ಹಾಗೂ ಕ್ರೀಡಾ ಜಗತ್ತನ್ನು ಬೆರಗುಗೊಳಿಸಿದೆ.
07:10 PM (IST) Apr 21
07:07 PM (IST) Apr 21
ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್, ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ತಮ್ಮ ಆಧ್ಯಾತ್ಮಿಕ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಭೇಟಿಯನ್ನು 'ದೆೈವಿಕ' ಮತ್ತು 'ಮನಸ್ಸನ್ನು ಕಲಕುವ' ಅನುಭವ ಎಂದು ಅವರು ಬಣ್ಣಿಸಿದ್ದಾರೆ.
06:35 PM (IST) Apr 21
ಒಂದು ಅವಾರ್ಡ್ ಶೋನಲ್ಲಿ ಆಲಿಯಾ ಭಟ್, ನೀತಾ ಅಂಬಾನಿಯವರನ್ನು 'ಭಾಭಿ' ಎಂದು ಕರೆದ ವಿಡಿಯೋ ವೈರಲ್ ಆಗಿದೆ. ನೀತಾ ಅವರ ಪ್ರತಿಕ್ರಿಯೆಯಿಂದ ತಪ್ಪು ಅರಿತ ಆಲಿಯಾ, ತಕ್ಷಣವೇ 'ನೀತಾ ಮ್ಯಾಮ್' ಎಂದು ಸರಿಪಡಿಸಿಕೊಂಡರು.
06:21 PM (IST) Apr 21
ಮಹಾರಾಷ್ಟ್ರದ ಲಾತೂರ್ನಲ್ಲಿ, ಕೌಟುಂಬಿಕ ಕಲಹದಿಂದ ಬೇಸತ್ತ 25 ವರ್ಷದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ಈ ದುರಂತ ಘಟನೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಅವರ ಮೃತದೇಹಗಳು ಸೋಮವಾರ ಪತ್ತೆಯಾಗಿವೆ.
06:10 PM (IST) Apr 21
2023ರಲ್ಲಿ ಭರ್ಜರಿ ಯಶಸ್ಸು ಕಂಡಿದ್ದ ಶಾರುಖ್ ಖಾನ್, 'ಪಠಾಣ್' ನಿರ್ದೇಶಕ ಸಿದ್ಧಾರ್ಥ್ ಆನಂದ್ ಜೊತೆ 'ಕಿಂಗ್' ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ದೊಡ್ಡ ಮೊತ್ತದ ಬಿಸಿನೆಸ್ ಮಾಡಿದೆ.
05:48 PM (IST) Apr 21
05:06 PM (IST) Apr 21
ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಹಾಗೂ ಜೂ.ಎನ್ಟಿಆರ್ ಕಾಂಬಿನೇಷನ್ನ ಬಹುನಿರೀಕ್ಷಿತ ಚಿತ್ರದ ರಿಲೀಸ್ ಡೇಟ್ ಘೋಷಣೆಯಾಗಿದೆ. ಮೇ 20ರಂದು ಫಸ್ಟ್ ಗ್ಲಿಂಪ್ಸ್ ಬಿಡುಗಡೆಯಾಗಲಿದೆ. ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.
04:52 PM (IST) Apr 21
ಪ್ರಧಾನಿ ನರೇಂದ್ರ ಮೋದಿಯವರನ್ನು 'ಭಯೋತ್ಪಾದಕ' ಎಂದು ಕರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯು ರಾಷ್ಟ್ರಮಟ್ಟದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಬಿಜೆಪಿ ನಾಯಕರು, ಅದರಲ್ಲೂ ವಿಶೇಷವಾಗಿ ಬಿ.ಎಸ್. ಯಡಿಯೂರಪ್ಪ ತೀವ್ರವಾಗಿ ಖಂಡಿಸಿದ್ದಾರೆ.
04:44 PM (IST) Apr 21
ಪುಷ್ಪ ಫ್ರಾಂಚೈಸಿ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಅಲ್ಲು ಅರ್ಜುನ್, ಈ ಚಿತ್ರಕ್ಕಾಗಿ ಅಡ್ವಾನ್ಸ್ ಸಂಭಾವನೆಯನ್ನೇ ಪಡೆದಿರಲಿಲ್ಲ. ಬದಲಿಗೆ, ಸಿನಿಮಾ ಗಳಿಸಿದ ಲಾಭದಲ್ಲಿ ಪಾಲು ಪಡೆಯುವ ಒಪ್ಪಂದ ಮಾಡಿಕೊಂಡಿದ್ದರು. ಇದರ ಅಸಲಿ ಲೆಕ್ಕಾಚಾರ ಇಲ್ಲಿದೆ.
04:28 PM (IST) Apr 21
'ಹಾಯ್ ನಾನ್ನ' ಚಿತ್ರದ ಮೂಲಕ ಗಮನ ಸೆಳೆದ ನಿರ್ದೇಶಕ ಶೌರ್ಯುವ್ ಜೊತೆ ವಿಜಯ್ ದೇವರಕೊಂಡ ಕೈಜೋಡಿಸಿದ್ದು, ಈ ಹೊಸ ಗ್ಲೋಬಲ್ ಪ್ರಾಜೆಕ್ಟ್ಗೆ ಹೈದರಾಬಾದ್ನಲ್ಲಿ ಚಾಲನೆ ಸಿಕ್ಕಿದೆ. ನಾನಿ ಮೊದಲ ಶಾಟ್ಗೆ ಕ್ಲ್ಯಾಪ್.
04:06 PM (IST) Apr 21
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಮೋದಿಯವರನ್ನು 'ಭಯೋತ್ಪಾದಕ' ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ. ನಂತರ, ಅವರು ಎಲ್ಲರನ್ನೂ ಬೆದರಿಸುತ್ತಾರೆ ಎಂಬ ಅರ್ಥದಲ್ಲಿ ಹೇಳಿದ್ದಾಗಿ ಸ್ಪಷ್ಟನೆ ನೀಡಿದರು.
03:18 PM (IST) Apr 21
ರಾಪಿಡೋ ರೈಡ್ ಮುಗಿದ ನಂತರ ಚಾಲಕನೊಬ್ಬ ಮಹಿಳಾ ಗ್ರಾಹಕಿಗೆ ವೈಯಕ್ತಿಕ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಈ ಘಟನೆಯು ರೈಡ್-ಹೇಲಿಂಗ್ ಅಪ್ಲಿಕೇಶನ್ಗಳಲ್ಲಿ ಬಳಕೆದಾರರ ಡೇಟಾ ಗೌಪ್ಯತೆ ಮತ್ತು ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ.
02:46 PM (IST) Apr 21
ಮುಂಬೈನ ಬೈಕುಲ್ಲಾದಲ್ಲಿ ಟಿಎಂಸಿ ಸಂಸದ ಯೂಸುಫ್ ಪಠಾಣ್ ಅವರ ಸಂಬಂಧಿಕರು ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಕಾರಿನಿಂದ ನೀರು ಸಿಡಿದ ಸಣ್ಣ ಕಾರಣಕ್ಕೆ ಆರಂಭವಾದ ಜಗಳವು, ದೊಣ್ಣೆ ಮತ್ತು ಬ್ಯಾಟ್ಗಳಿಂದ ನಡೆದ ಬರ್ಬರ ಹಲ್ಲೆಯಲ್ಲಿ ಅಂತ್ಯಗೊಂಡಿದೆ.
01:53 PM (IST) Apr 21
01:19 PM (IST) Apr 21
ದೆಹಲಿಯಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಸ್ಕೃತ ಭಾರತಿಯ 'ಪ್ರಣವ್' ಅಂತರರಾಷ್ಟ್ರೀಯ ತರಬೇತಿ ಕೇಂದ್ರವನ್ನು ಉದ್ಘಾಟಿಸಿದರು. ಸಂಸ್ಕೃತವು ಭಾರತದ ಆತ್ಮವಾಗಿದ್ದು, ಸಂಭಾಷಣೆಯ ಮೂಲಕ ಅದನ್ನು ಸುಲಭವಾಗಿ ಕಲಿಯಬಹುದು ಎಂದು ಪ್ರತಿಪಾದಿಸಿದರು.
01:15 PM (IST) Apr 21
IPL 2026: ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗುತ್ತಿರುವ ಸನ್ರೈಸರ್ಸ್ ಹೈದರಾಬಾದ್, ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಮಂಗಳವಾರ ಸಂಜೆ ಹೈದರಾಬಾದ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಗುರಿ ಹೊಂದಿದೆ.
01:11 PM (IST) Apr 21
ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ತಿರುಚಿಯ ಚರ್ಚ್ನಲ್ಲಿ ಮೊಣಕಾಲೂರಿ ಪ್ರಾರ್ಥನೆ ಸಲ್ಲಿಸಿದ್ದು, ಈ ವೀಡಿಯೋ ವೈರಲ್ ಆಗಿದೆ. ಸಿನಿಮಾಗಳಲ್ಲಿ ಹಿಂದೂ ನಂಬಿಕೆಗಳನ್ನು ಅವಹೇಳನ ಮಾಡುವ ವಿಜಯ್, ತಮ್ಮ ಧರ್ಮವನ್ನು ಶ್ರದ್ಧೆಯಿಂದ ಪಾಲಿಸುವುದು ನೆಟ್ಟಿಗರ ಟೀಕೆಗೆ ಕಾರಣವಾಗಿದೆ.
12:09 PM (IST) Apr 21
ಲೆನ್ಸ್ಕಾರ್ಟ್ ಕಂಪನಿಯು ಉದ್ಯೋಗಿಗಳಿಗೆ ಡ್ರೆಸ್ ಕೋಡ್ ಜಾರಿಗೊಳಿಸಿದ್ದು, ಹಿಂದೂಗಳ ಬಿಂದಿ, ಸಿಂಧೂರಕ್ಕೆ ನಿರ್ಬಂಧ ಹೇರಿ ಹಿಜಾಬ್ಗೆ ಅವಕಾಶ ನೀಡಿದೆ. ಸುಪ್ರೀಂಕೋರ್ಟ್ ವಕೀಲೆ, BJP Leader ನಾಜಿಯಾ ಖಾನ್ ಮಳಿಗೆಗೆ ಭೇಟಿ ನೀಡಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
11:50 AM (IST) Apr 21
ದೆಹಲಿ ಸಿಎಂ ರೇಖಾ ಗುಪ್ತಾ ಅವರು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಸುರಕ್ಷತೆ, ಭ್ರಷ್ಟಾಚಾರ, ಗೂಂಡಾಗಿರಿ ವಿಷಯಗಳನ್ನು ಮುಂದಿಟ್ಟುಕೊಂಡು, ಈ ಬಾರಿ ಬಂಗಾಳದ ಜನರು ಬಿಜೆಪಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
10:58 AM (IST) Apr 21
ಜರ್ಮನಿಯ ಡುಯಿಸ್ಬರ್ಗ್ ಪ್ರದೇಶದ ಗುರುದ್ವಾರವೊಂದರಲ್ಲಿ ನಿರ್ವಹಣೆ ಮತ್ತು ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಈ ಗಲಾಟೆಯಲ್ಲಿ ಕಿರ್ಪಾನ್ಗಳನ್ನು ಬಳಸಿ ದಾಳಿ ನಡೆಸಲಾಗಿದ್ದು, ಕನಿಷ್ಠ 11 ಜನರು ಗಾಯಗೊಂಡಿದ್ದಾರೆ.
10:57 AM (IST) Apr 21
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ನಡೆದ 'ಎಂಎಲ್ಎ ಟ್ರೋಫಿ' ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ತಮ್ಮನ್ನು ಆಹ್ವಾನಿಸದ ಕಾರಣ, ಕೋಪಗೊಂಡ ಪುರಸಭೆ ಅಧ್ಯಕ್ಷರೊಬ್ಬರು ಟ್ರ್ಯಾಕ್ಟರ್ ಬಳಸಿ ಪಿಚ್ ಅನ್ನೇ ಧ್ವಂಸಗೊಳಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ ವಿಡಯೋ ನೋಡಿ.
10:15 AM (IST) Apr 21
09:14 AM (IST) Apr 21
08:08 AM (IST) Apr 21
ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಪಚ್ಪದ್ರಾದಲ್ಲಿನ ನೂತನ ತೈಲ ಶುದ್ಧೀಕರಣ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಿಂದಾಗಿ ₹80000 ಕೋಟಿ ವೆಚ್ಚದ, ದೇಶದ ಮೊದಲ ಗ್ರೀನ್ಫೀಲ್ಡ್ ರಿಫೈನರಿಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.