LIVE NOW
Published : Dec 21, 2025, 07:07 AM ISTUpdated : Dec 21, 2025, 11:51 PM IST

India Latest News Live: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು

ಸಾರಾಂಶ

 

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನೂತನವಾಗಿ ನೇಮಕವಾಗಿದ್ದ ಮಹಿಳಾ ವೈದ್ಯೆ ಡಾ। ನುಸ್ರತ್‌ರ ಹಿಜಾಬ್‌ ಎಳೆದಿದ್ದರು. ಅಂದಿನಿಮದ ತೀವ್ರ ಮಾನಸಿಕ ಒತ್ತಡದಲ್ಲಿ ಸಿಲುಕಿರುವ ನುಸ್ರತ್‌, ಕರ್ತವ್ಯಕ್ಕೆ ಹಾಜರಾಗಲು ಕೊನೆಯ ದಿನವಾಗಿದ್ದ ಶನಿವಾರ ಡ್ಯೂಟಿಗೆ ಗೈರಾಗಿದ್ದಾರೆ. ಈ ನಡುವೆ ನುಸ್ರತ್‌ಗೆ ಜಾರ್ಖಂಡ್ ಸರ್ಕಾರ ಆಫರ್‌ ನೀಡಿದೆ. ‘ನಮ್ಮಲ್ಲಿ ನುಸ್ರತ್‌ಗೆ 3 ಲಕ್ಷ ರು. ಮಾಸಿಕ ಸಂಬಳ, ಸರ್ಕಾರಿ ಫ್ಲಾಟ್ ಮತ್ತು ಅಪೇಕ್ಷಿತ ಹುದ್ದೆಯೊಂದಿಗೆ ಕೆಲಸ ನೀಡುತ್ತೇವೆ’ ಎಂದು ಜಾರ್ಖಂಡ್ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಹೇಳಿದ್ದಾರೆ.

 

11:51 PM (IST) Dec 21

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು, ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ಸಂಭ್ರಮಾಚರಣೆ ನಡೆಸುತ್ತಿದ್ದರೆ ಇತ್ತ, ಭಾರಿ ಅಧಿಪತ್ಯ ಹೊಂದಿದ್ದ ಸೂರ್ಯವಂಶಿ ಕುಟುಂಬದ 6 ಸದಸ್ಯರು ಸೋಲುಂಡಿದ್ದಾರೆ.

Read Full Story

11:07 PM (IST) Dec 21

ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ, ಮೈಸಾ ಆ್ಯಕ್ಷನ್ ಸಿನಿಮಾ ರಿಲೀಸ್ ಅಪ್‌ಡೇಟ್ ಕೊಟ್ಟ ನಟಿ

ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ, ಮೈಸಾ ಆ್ಯಕ್ಷನ್ ಸಿನಿಮಾ ರಿಲೀಸ್ ಅಪ್‌ಡೇಟ್ ಕೊಟ್ಟ ನಟಿ, ಇದುವರೆಗೆ ತೆರೆ ಮೇಲೆ ನೋಡಿದ ರಶ್ಮಿಕಾ ಮಂದಣ್ಣಗಿಂತ ಮೈಸಾ ಸಿನಿಮಾದಲ್ಲಿನ ರಶ್ಮಿಕಾ ಭಾರಿ ಭಿನ್ನ. ಬುಡುಕಟ್ಟು ಸಮುದಾಯದ ಮಹಿಳೆಯ ಕತೆಯೊಂದಿಗೆ ರಶ್ಮಿಕಾ ಬರುತ್ತಿದ್ದಾರೆ.

 

Read Full Story

10:13 PM (IST) Dec 21

ಬಿಜೆಪಿ ಮಹಾಯುತಿ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ

ಬಿಜೆಪಿ ಮಹಾಯುತಿ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ, ಮಹಾರಾಷ್ಟ್ರದಲ್ಲಿ ಮಹಾಯುತಿ 214 ಸ್ಥಾನ ಗೆದ್ದಿದೆ. ಇದು ಇವಿಎಂ, ಚುನಾವಣಾ ಆಯೋಗದ ಕೃಪೆ ಎಂದು ಕಾಂಗ್ರೆಸ್ ಸೇರಿ ವಿಪಕ್ಷ ಆರೋಪಿಸಿದೆ.

 

Read Full Story

09:21 PM (IST) Dec 21

ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ

ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ, ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸೆಯಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗಿದೆ. ದೀಪು ಚಂದ್ರದಾಸ್ ಬಡಿದು ಕೊಂದ ಬೆನ್ನಲ್ಲೇ ಇದೀಗ ಮತ್ತೊಬ್ಬ ಹಿಂದೂ ಮೇಲೆ ದಾಳಿಯಾಗಿದೆ.

Read Full Story

08:08 PM (IST) Dec 21

ನಿಧಿ ಅಗರ್ವಾಲ್ ಬೆನ್ನಲ್ಲೇ ನಟಿ ಸಮಂತಾಗೆ ಮೇಲೆ ಮುಗಿ ಬಿದ್ದ ಫ್ಯಾನ್ಸ್, ಹುಚ್ಚಾಟದ ದೃಶ್ಯ ಸೆರೆ

ನಿಧಿ ಅಗರ್ವಾಲ್ ಬೆನ್ನಲ್ಲೇ ನಟಿ ಸಮಂತಾಗೆ ಮೇಲೆ ಮುಗಿ ಬಿದ್ದ ಫ್ಯಾನ್ಸ್, ಹುಚ್ಚಾಟದ ದೃಶ್ಯ ಸೆರೆ, ಈ ಘಟನೆ ಕೂಡ ಹೈದರಾಬಾದ್‌ನಲ್ಲಿ ನಡೆದಿದೆ. ಬೌನ್ಸರ್, ಪೊಲೀಸರು ಇದ್ದರೂ ಅಭಿಮಾನಿಗಳು ಅತೀರೇಖದ ವರ್ತನೆಯಿಂದ ನಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

Read Full Story

08:05 PM (IST) Dec 21

ಅನ್ಯ ಧರ್ಮಿಯ ಜೊತೆ ಮದುವೆ - ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಪೋಷಕರ ಇಚ್ಛೆಗೆ ವಿರುದ್ಧವಾಗಿ ಅನ್ಯ ಧರ್ಮದವರನ್ನು ಮದುವೆಯಾದ ಮಗಳನ್ನು, ತಂದೆಯು ತನ್ನ ಸ್ವಯಾರ್ಜಿತ ಆಸ್ತಿಯಿಂದ ಹೊರಗಿಟ್ಟ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸ್ವಯಾರ್ಜಿತ ಆಸ್ತಿಯನ್ನು ಯಾರಿಗೆ ನೀಡಬೇಕೆಂಬುದು ತಂದೆಯ ಇಚ್ಛೆಗೆ ಬಿಟ್ಟ ವಿಚಾರವಾಗಿದೆ ಎಂದಿದೆ.

Read Full Story

07:04 PM (IST) Dec 21

ಸೋನಿಯಾ ಗಾಂಧಿ ತ್ಯಾಗದಿಂದ ಮಾತ್ರ ನಾವು ಕ್ರಿಸ್ಮಸ್ ಆಚರಿಸಲು ಸಾಧ್ಯವಾಗಿದೆ, ರೇವಂತ್ ರೆಡ್ಡಿ ವಿವಾದ

ಸೋನಿಯಾ ಗಾಂಧಿ ತ್ಯಾಗದಿಂದ ಮಾತ್ರ ನಾವು ಕ್ರಿಸ್ಮಸ್ ಆಚರಿಸಲು ಸಾಧ್ಯವಾಗಿದೆ, ರೇವಂತ್ ರೆಡ್ಡಿ ವಿವಾದ ಸೃಷ್ಟಿಸಿದ್ದಾರೆ. ಗಾಂಧಿ ಕುಟುಂಬ, ಕಾಂಗ್ರೆಸ್ ನಾಯಕರ ಮೆಚ್ಚಿಸಲು ನೀಡಿದ ಹೇಳಿಕೆ ಇದೀಗ ಭಾರಿ ಕೋಲಾಹಲ ಸೃಷ್ಟಿಸಿದೆ.

 

Read Full Story

06:27 PM (IST) Dec 21

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA

ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA, 129 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಂಡಿದ್ದರೆ, ಮೈತ್ರಿಕೂಟ 200ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

 

Read Full Story

06:01 PM (IST) Dec 21

ಅಂಡರ್ 19 ಏಷ್ಯಾಕಪ್ ಫೈನಲ್ - ಪಾಕ್ ಎದುರು ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿ ಕನಸು ನುಚ್ಚುನೂರು!

2025ರ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವು ಭಾರತವನ್ನು 191 ರನ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದಿದೆ. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, ಸಮೀರ್ ಮಿನ್ಹಾಸ್ ಅವರ 172 ರನ್‌ಗಳ ನೆರವಿನಿಂದ 347 ರನ್ ಗಳಿಸಿತು.  

Read Full Story

05:34 PM (IST) Dec 21

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ, ಕಾಂಗ್ರೆಸ್ ನಾಯಕಿ ಪೋಸ್ಟ್ ಮಾಡಿದ ಎಐ ವಿಡಿಯೋಗೆ ಇಷ್ಟು ದಿನ ಮೋದಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಏನಿದು ಏಟು ತಿರುಗೇಟಿನ ಕತೆ?

 

Read Full Story

05:18 PM (IST) Dec 21

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ - ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ - ಬಂಧನ

ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿಯ 'ಜಾಗೋ ಮಾ' ಭಕ್ತಿಗೀತೆ ಹಾಡುತ್ತಿದ್ದ ಖ್ಯಾತ ಗಾಯಕಿ ಲಗ್ನಜಿತಾ ಚಕ್ರವರ್ತಿ ಅವರನ್ನು ಕಾರ್ಯಕ್ರಮದ ಸಂಘಟಕ ಮೆಹಬೂಬ್ ಮಲ್ಲಿಕ್ ತಡೆದು. ಜಾತ್ಯತೀತ ಗೀತೆ ಹಾಡುವಂತೆ ಒತ್ತಾಯಿಸಿ, ಹಲ್ಲೆಗೆ ಯತ್ನಿಸಿದ ಆರೋಪ ಕೇಳಿ ಬಂದಿದ್ದು, ಆತನನ್ನು ಬಂಧಿಸಲಾಗಿದೆ.

Read Full Story

04:49 PM (IST) Dec 21

2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ಬದಲಾವಣೆ!

ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ಹಾಲಿ ಚಾಂಪಿಯನ್ ಭಾರತ ತಂಡದಲ್ಲಿ ಕಳೆದ ವಿಶ್ವಕಪ್‌ಗೆ ಹೋಲಿಸಿದರೆ 7 ಬದಲಾವಣೆಗಳಾಗಿವೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.

 

Read Full Story

04:46 PM (IST) Dec 21

ಬೊಂಡಿ ಬೀಚ್ ರೀತಿಯಲ್ಲೇ ಮತ್ತೊಂದು ಉಗ್ರ ಕೃತ್ಯ, ಗುಂಡಿನ ದಾಳಿಯಲ್ಲಿ 10 ಸಾವು, ಹಲವರು ಗಂಭೀರ

ಬೊಂಡಿ ಬೀಚ್ ರೀತಿಯಲ್ಲೇ ಮತ್ತೊಂದು ಉಗ್ರ ಕೃತ್ಯ, ಗುಂಡಿನ ದಾಳಿಯಲ್ಲಿ 10 ಸಾವು, ಹಲವರು ಗಂಭೀರ, ಕಾರಿನಲ್ಲಿ ಆಗಮಿಸಿದ ಬಂದೂಕುದಾರಿಗಳು ಅಮಾಯಕರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

Read Full Story

04:31 PM (IST) Dec 21

1,2,5 ರೂ. ನಾಣ್ಯ ಇವೆಯಾ? ಹಾಗಿದ್ರೆ ರಿಸರ್ವ್​ ಬ್ಯಾಂಕ್​ ಕೊಟ್ಟಿರೋ ಬಿಗ್​ ಅಪ್​ಡೇಟ್​ ಒಮ್ಮೆ ನೋಡಿ

ಸಾಮಾಜಿಕ ಜಾಲತಾಣಗಳಲ್ಲಿ 1 ರೂಪಾಯಿ ನಾಣ್ಯ ಬ್ಯಾನ್ ಆಗಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ವದಂತಿಗಳಿಗೆ ತೆರೆ ಎಳೆದಿರುವ ಭಾರತೀಯ ರಿಸರ್ವ್ ಬ್ಯಾಂಕ್ (RBI), 50 ಪೈಸೆ, 1, 2, 5, ಮತ್ತು 10 ರೂಪಾಯಿ ಸೇರಿದಂತೆ ಎಲ್ಲಾ ನಾಣ್ಯಗಳು ಕಾನೂನುಬದ್ಧವಾಗಿವೆ ಎಂದು ಸ್ಪಷ್ಟಪಡಿಸಿದೆ.  

Read Full Story

04:05 PM (IST) Dec 21

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದಿಂದ ಹೊರಬಿದ್ದ ಟಾಪ್-5 ಆಟಗಾರರಿವರು! ಪಟ್ಟಿಯಲ್ಲಿವೆ ಅಚ್ಚರಿ ಹೆಸರು

ಮುಂಬೈ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಟಿ20 ತಂಡ ಪ್ರಕಟವಾಗಿದ್ದು, ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಈ ಟೂರ್ನಿಗೆ ಭಾರತ ತಂಡದಿಂದ ಹೊರಬಿದ್ದ ಐದು ಸ್ಟಾರ್ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ.

Read Full Story

03:48 PM (IST) Dec 21

ಸೆಲ್ಫಿ& ಶೇಕ್‌ಹ್ಯಾಂಡ್‌ಗೆ 10 ಲಕ್ಷ - ಇಂಡಿಯಾ ಟೂರ್ ಮಾಡಿದ ಮೆಸ್ಸಿಗೆ ಆಯೋಜಕರು ಕೊಟ್ಟಿದ್ದು ಎಷ್ಟು ಕೋಟಿ

ಫುಟ್ಬಾಲ್ ದಂತಕತೆ ಲಿಯೋನಲ್ ಮೆಸ್ಸಿ ಅವರ 'ದಿ ಗೋಟ್ ಇಂಡಿಯಾ ಟೂರ್' ಕೋಲ್ಕತ್ತಾದಲ್ಲಿ ಅವ್ಯವಸ್ಥೆಯಿಂದ ವಿವಾದಕ್ಕೆ ಕಾರಣವಾಯಿತು. ಈ ಪ್ರವಾಸಕ್ಕಾಗಿ ಮೆಸ್ಸಿಗೆ ಆಯೋಜಕರು ನೀಡಿದ್ದ ಹಣ ಎಷ್ಟು ಕೋಟಿ ಇಲ್ಲಿದೆ ಡಿಟೇಲ್ ಸ್ಟೋರಿ..

Read Full Story

03:47 PM (IST) Dec 21

ರೈಲು ಪ್ರಯಾಣಿಕರಿಗೆ ಶಾಕ್, ಡಿಸೆಂಬರ್ 26ರಿಂದ ಟಿಕೆಟ್ ದರ ಹೆಚ್ಚಳ ಘೋಷಿಸಿದ ಭಾರತೀಯ ರೈಲ್ವೇ

ರೈಲು ಪ್ರಯಾಣಿಕರಿಗೆ ಶಾಕ್, ಡಿಸೆಂಬರ್ 26ರಿಂದ ಟಿಕೆಟ್ ದರ ಹೆಚ್ಚಳ ಘೋಷಿಸಿದ ಭಾರತೀಯ ರೈಲ್ವೇ, ವಿಶೇಷ ಅಂದರೆ ಈ ಬಾರಿಯ ರೈಲು ಟಿಕೆಟ್ ದರ ಹೆಚ್ಚಳದಲ್ಲಿ ಪ್ರತಿ ನಿತ್ಯ ರೈಲಿನಲ್ಲಿ ಓಡಾಡುವವರಿಗೆ ಸೇರಿದಂತೆ ಹಲವರಿಗೆ ವಿನಾಯಿತಿ ನೀಡಲಾಗಿದೆ.

 

Read Full Story

03:00 PM (IST) Dec 21

60ರ ಹರೆಯದಲ್ಲಿ 3ನೇ ಹಿಂದೂ ಸ್ತ್ರೀ ಎಂಟ್ರಿ ಕೊಟ್ಟಾಗ ಆಮೀರ್​ ಖಾನ್​ಗೆ ಆಗಿದ್ದೇನು? ನಟನ ಬಾಯಲ್ಲೇ ಕೇಳಿ

61ನೇ ವಯಸ್ಸಿನ ಹೊಸ್ತಿಲಲ್ಲಿರುವ ನಟ ಆಮೀರ್ ಖಾನ್, ತಮ್ಮ 60ನೇ ಹುಟ್ಟುಹಬ್ಬದಂದು ಮೂರನೇ ಸಂಗಾತಿ ಗೌರಿಯನ್ನು ಪರಿಚಯಿಸಿದ್ದಾರೆ. ಈ ವಯಸ್ಸಿನಲ್ಲಿ ಹೊಸ ಸಂಬಂಧ ಸಿಕ್ಕಿದ್ದಕ್ಕೆ ಅಚ್ಚರಿ ವ್ಯಕ್ತಪಡಿಸಿರುವ ಅವರು, ತಮ್ಮ ಹಿಂದಿನ ಇಬ್ಬರು ಪತ್ನಿಯರೊಂದಿಗಿನ ಸೌಹಾರ್ದಯುತ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ.
Read Full Story

02:37 PM (IST) Dec 21

ಶುಭ್‌ಮನ್ ಗಿಲ್ ಕೈಬಿಟ್ಟಿಕ್ಕೇಕೆ? - ಫಾರ್ಮ್ ಅಲ್ಲ, ಬೇರೆಯೇ ಕಾರಣ ಎಂದ ಅಜಿತ್ ಅಗರ್ಕರ್!

ವಿಶ್ವಕಪ್ ತಂಡದಿಂದ ಶುಭಮನ್ ಗಿಲ್‌ರನ್ನು ಕೈಬಿಟ್ಟಿರುವುದು ಕೇವಲ ಫಾರ್ಮ್ ಕೊರತೆಯಿಂದಲ್ಲ, ಬದಲಿಗೆ ತಂಡದ ಸಂಯೋಜನೆಯ ಅಗತ್ಯತೆಗಳಿಂದ ಎಂದು ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಸ್ಪಷ್ಟಪಡಿಸಿದ್ದಾರೆ.  

Read Full Story

02:28 PM (IST) Dec 21

ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ - ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿಯಲ್ಲಿ, 8ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಅಪ್ರಾಪ್ತ ಬಾಲಕರ ಕೃತ್ಯಕ್ಕಾಗಿ ಅವರ ತಾಯಂದಿರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಗೆ ಸರಿಯಾದ ಸಂಸ್ಕಾರ ನೀಡದ ಕಾರಣಕ್ಕೆ ಪೋಷಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದು, ಈ ಪ್ರಕರಣ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Read Full Story

01:27 PM (IST) Dec 21

ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ - ಮನೆ ಮುಂದೆ ಚಳಿ ಕಾಯಿಸುತ್ತಿದ್ದ90 ವರ್ಷದ ವೃದ್ಧ ಬಲಿ

ಮನೆಯ ಹೊರಗೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧರೊಬ್ಬರ ಮೇಲೆ ಜಲ್ಲಿಕಲ್ಲು ತುಂಬಿದ ಲಾರಿ ಮಗುಚಿ ಬಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read Full Story

01:11 PM (IST) Dec 21

ರೈಲ್ವೆ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕಿಂಗ್ ನ್ಯೂಸ್; ಡಿ.26ರಿಂದಲೇ ಹೊಸ ದರಗಳು ಅನ್ವಯ

Indian Railways Price: ಭಾರತೀಯ ರೈಲ್ವೆಯು ಡಿಸೆಂಬರ್ 26 ರಿಂದ ಜಾರಿಗೆ ಬರುವಂತೆ ಪ್ರಯಾಣ ದರವನ್ನು ಹೆಚ್ಚಿಸಿದೆ.. ಈ ದರ ಏರಿಕೆಯು ಲೋಕಲ್ ರೈಲು ಮತ್ತು ಮಾಸಿಕ ಸೀಸನ್ ಟಿಕೆಟ್‌ಗಳಿಗೆ ಅನ್ವಯಿಸುವುದಿಲ್ಲ.

Read Full Story

12:41 PM (IST) Dec 21

ಮಾಲ್‌ನಲ್ಲಿ ಹುಡುಗಿಗೆ ಪ್ರಪೋಸ್ ಮಾಡಿ ಅಲ್ಲೇ ತಾಳಿ ಕಟ್ಟಿದ ಯುವಕ - ವೀಡಿಯೋ ಭಾರಿ ವೈರಲ್

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮಾಲ್ ಒಂದರಲ್ಲಿ ಯುವಕನೊಬ್ಬ ಯುವತಿಗೆ ಪ್ರೇಮ ನಿವೇದನೆ ಮಾಡಿ, ಅಲ್ಲೇ ತಾಳಿ ಕಟ್ಟಿ ಮದುವೆಯಾಗಿದ್ದಾನೆ. ಈ ಅನಿರೀಕ್ಷಿತ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರ ಪರ-ವಿರೋಧದ ಚರ್ಚೆಗಳಿಗೆ ಕಾರಣವಾಗಿದೆ.
Read Full Story

12:32 PM (IST) Dec 21

ಟಿ20 ವಿಶ್ವಕಪ್‌ನಿಂದ ಶುಭ್‌ಮನ್ ಗಿಲ್ ಹೊರಬಿದ್ದ ಬೆನ್ನಲ್ಲೇ ಗೌತಮ್ ಗಂಭೀರ್ ರಿಯಾಕ್ಷನ್ ಹೀಗಿತ್ತು ನೋಡಿ! ವಿಡಿಯೋ ವೈರಲ್

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟವಾಗಿದ್ದು, ಕಳಪೆ ಫಾರ್ಮ್‌ನಿಂದಾಗಿ ಉಪನಾಯಕ ಶುಭ್‌ಮನ್ ಗಿಲ್ ಅವರನ್ನು ಕೈಬಿಡಲಾಗಿದೆ. ಗಿಲ್ ಬದಲು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದ್ದು, ಈ ಆಯ್ಕೆ ಬಗ್ಗೆ ಕೋಚ್ ಗೌತಮ್ ಗಂಭೀರ್ ಮೌನ ವಹಿಸಿರುವುದು ಚರ್ಚೆಗೆ ಕಾರಣವಾಗಿದೆ.
Read Full Story

11:57 AM (IST) Dec 21

ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು

ತನ್ನ ಪ್ರೇಮ ಸಂಬಂಧವನ್ನು ವಿರೋಧಿಸಿದ್ದಕ್ಕಾಗಿ 17 ವರ್ಷದ ಬಾಲಕಿಯೊಬ್ಬಳು ತನ್ನ ಗೆಳೆಯನೊಂದಿಗೆ ಸೇರಿ ಸ್ವಂತ ತಂದೆಯನ್ನೇ ಕೊಲೆ ಮಾಡಿದ್ದಾಳೆ. ಪೋಷಕರಿಗೆ ನಿದ್ರೆ ಮಾತ್ರೆ ನೀಡಿ, ಅವರು ಗಾಢ ನಿದ್ರೆಗೆ ಜಾರಿದ ನಂತರ, ಈ ಕೃತ್ಯವೆಸಗಲಾಗಿದೆ.

Read Full Story

10:59 AM (IST) Dec 21

ಟಿ20 ವಿಶ್ವಕಪ್ ತಂಡದಿಂದ ಗಿಲ್‌ಗೆ ಔಟ್ - ಅಷ್ಟಕ್ಕೂ ಕೊನೆಯ ಕ್ಷಣದಲ್ಲಿ ಆಯ್ಕೆ ಸಮಿತಿ ಈ ತೀರ್ಮಾನ ಮಾಡಿದ್ದೇಕೆ?

ವಿಶ್ವಕಪ್ ತಂಡದಿಂದ ಉಪನಾಯಕ ಶುಭಮನ್ ಗಿಲ್ ಅವರನ್ನು ಅನಿರೀಕ್ಷಿತವಾಗಿ ಕೈಬಿಡಲಾಗಿದೆ. ಪವರ್‌ಪ್ಲೇನಲ್ಲಿನ ಕಳಪೆ ಸ್ಟ್ರೈಕ್ ರೇಟ್, ಸಂಜು ಸ್ಯಾಮ್ಸನ್-ಅಭಿಷೇಕ್ ಶರ್ಮಾ ಜೋಡಿಗೆ ಆದ್ಯತೆ, ಮತ್ತು ತಂಡದ ಸಂಯೋಜನೆಯನ್ನು ಸಮತೋಲನಗೊಳಿಸುವ ನಿರ್ಧಾರವೇ ಇದಕ್ಕೆ ಪ್ರಮುಖ ಕಾರಣಗಳಾಗಿವೆ.
Read Full Story

10:33 AM (IST) Dec 21

ಎರಡು ಮ್ಯಾಚ್ ಬಾಕಿ ಇರುವಂತೆಯೇ ಆ್ಯಶಸ್ ಕಿರೀಟ ಗೆದ್ದ ಆಸ್ಟ್ರೇಲಿಯಾ! ಇಂಗ್ಲೆಂಡ್‌ಗೆ ರೋಚಕ ಸೋಲು

ಆ್ಯಶಸ್‌ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 82 ರನ್‌ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ, ಸರಣಿ ಕೈವಶ ಮಾಡಿಕೊಂಡು ಕಿರೀಟವನ್ನು ಉಳಿಸಿಕೊಂಡಿದೆ. 435 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ಅಂತಿಮ ದಿನ ಹೋರಾಟ ನಡೆಸಿದರೂ, ಆಸೀಸ್ ಬೌಲರ್‌ಗಳ ದಾಳಿಗೆ ತತ್ತರಿಸಿ ಸೋಲೊಪ್ಪಿಕೊಂಡಿತು.

Read Full Story

09:19 AM (IST) Dec 21

ಅಂಡರ್-19 ಏಷ್ಯಾಕಪ್‌ - ಫೈನಲ್‌ನಲ್ಲಿ ಮತ್ತೆ ಪಾಕ್ ಬಗ್ಗುಬಡಿಯಲು ಭಾರತ ಯುವ ಪಡೆ ರೆಡಿ!

ದುಬೈ: 12ನೇ ಆವೃತ್ತಿಯ ಅಂಡರ್‌-19 ಏಷ್ಯಾಕಪ್‌ ಫೈನಲ್‌ ಭಾನುವಾರ ನಡೆಯಲಿದ್ದು, ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಈ ಕುರಿತಾದ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ

 

Read Full Story

More Trending News