ಏರ್ ಇಂಡಿಯಾ ವಿಮಾನ ಮತ್ತೊಂದು ಎಡವಟ್ಟು ಮಾಡಿ ತೀವ್ರ ಆಕ್ರೋಶಕ್ಕೆ ತುತ್ತಾಗಿದೆ. ದೆಹಲಿ ಕೆನಡಾ ಏರ್ ಇಂಡಿಯಾ ವಿಮಾನ ಬರೋಬ್ಬರಿ 5 ಗಂಟೆ ಹಾರಾಟದ ಬಳಿಕ ಅಧಿಕಾರಿಗಳಿಗೆ ತಾವು ಕೆನಡಾಗೆ ಕಳುಹಿಸಿದ ವಿಮಾನಕ್ಕೆ ವಿದೇಶದಲ್ಲಿ ಲ್ಯಾಂಡ್ ಆಗಲು ಅನುಮತಿ ಇಲ್ಲ ಅನ್ನೋದು ಜ್ಞಾನೋದಯವಾಗಿದೆ. ತಕ್ಷಣವೇ ಏರ್ ಇಂಡಿಯಾ ವಿಮಾನ ಯೂ ಟೂರ್ನ್ ಪಡೆದು ಮರಳಿ ದೆಹಲಿಯಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ. ಅಧಿಕಾರಿಗಳಿಗೆ ತಪ್ಪಿನ ಅರಿವಾದಾಗ ವಿಮಾನ ಚೀನಾ ಗಡಿ ದಾಟಿತ್ತು. ಪಂಚ ರಾಜ್ಯ ಚುನಾವಣೆ ಅಪ್ಡೇಟ್, ಮದ್ಯಪ್ರಾಚ್ಯ ಯುದ್ಧ, ತೈಲ ಹಾಗೂ ಗ್ಯಾಸ್ ಕೊರತೆ ಸೇರಿದಂತೆ ಇಂದಿನ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿದೆ.
11:33 AM (IST) Mar 21
ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಈದ್ ಪ್ರಾರ್ಥನೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೊದಲ ಬಾರಿಗೆ ಗೈರಾಗಿದ್ದರು. ಅವರ ಬದಲಿಗೆ ಪುತ್ರ ನಿಶಾಂತ್ ಕುಮಾರ್ ಭಾಗವಹಿಸಿದ್ದು, ಬಿಹಾರ ರಾಜಕೀಯದಲ್ಲಿ ಉತ್ತರಾಧಿಕಾರದ ಚರ್ಚೆಗೆ ಕಾರಣವಾಗಿದೆ. .
11:01 AM (IST) Mar 21
ಹೈದರಾಬಾದ್ನ ಮೆಕ್ಕಾ ಮಸೀದಿಯಲ್ಲಿ ಮಾತನಾಡಿದ ಸಂಸದ ಅಸಾದುದ್ದೀನ್ ಓವೈಸಿ, ಪಾಕಿಸ್ತಾನವನ್ನು 'ಇಸ್ರೇಲ್ನ ಕಿರಿಯ ಸಹೋದರ' ಎಂದು ಕರೆದು ತೀವ್ರ ವಾಗ್ದಾಳಿ. ಕಾಬೂಲ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 400 ಅಮಾಯಕರು ಸಾವನ್ನಪ್ಪಿದ್ದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದರು.
10:17 AM (IST) Mar 21
'ಕೆಡಿ' ಸಿನಿಮಾದ 'ಸರ್ಸೆ ಸರ್ಸೆ' ಹಾಡು ದೊಡ್ಡ ವಿವಾದ ಸೃಷ್ಟಿಸಿದೆ. ಈ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ನೋರಾ ಫತೇಹಿ, ತನಗೆ ಸಾಹಿತ್ಯದ ಅರ್ಥವೇ ತಿಳಿದಿರಲಿಲ್ಲ ಎಂದು ಹೇಳುವ ಮೂಲಕ ನಿರ್ದೇಶಕ ಪ್ರೇಮ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಇದಕ್ಕೆ ಪ್ರೇಮ್ ತಿರುಗೇಟು ನೀಡಿದ್ದಾರೆ.
09:52 AM (IST) Mar 21
ಟಿ20 ವಿಶ್ವಕಪ್ ಗೆದ್ದ ಸಂಭ್ರಮದಲ್ಲಿ, ಹಾರ್ದಿಕ್ ಪಾಂಡ್ಯ ತಮ್ಮ ಪಾರ್ಟ್ನರ್ ಮಹಿಕಾ ಶರ್ಮಾಗೆ 10 ಕೋಟಿ ರೂ. ಮೌಲ್ಯದ ಫೆರಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಹೊಸ ಕಾರಿಗೆ ಮಹಿಕಾ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಲೇಖನವು ಕಾರಿನ ವಿಶೇಷತೆಗಳೇನು ನೋಡೋಣ ಬನ್ನಿ.
09:21 AM (IST) Mar 21
ಗುರೂಜಿ ರಾಸಲೀಲೆ ವಿಡಿಯೋ ಕೇಸ್ನಲ್ಲಿ ಮಹತ್ವದ ಬೆಳವಣಿಗೆ, ಮಹಿಳಾ ಆಯೋಗ ಮುಖ್ಯೆಸ್ಥೆ ರಾಜೀನಾಮೆ, 35ರ ಮಹಿಳೆಯನ್ನು3 ವರ್ಷದಿಂದ ಬಳಸಿಕೊಂಡ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಗುರೂಜಿ ಪ್ರಕರಣ ಇದೀಗ ಕೆಲ ಟ್ವಿಸ್ಟ್ ಪಡೆದುಕೊಂಡಿದೆ.
08:39 AM (IST) Mar 21
08:24 AM (IST) Mar 21
ಐಪಿಎಲ್ 2024 ಆರಂಭಕ್ಕೆ ಮುನ್ನವೇ ಹಲವು ಫ್ರಾಂಚೈಸಿಗಳು ಆಟಗಾರರ ಗಾಯದ ಸಮಸ್ಯೆಯಿಂದ ಕಂಗೆಟ್ಟಿವೆ. ಜೋಶ್ ಹೇಜಲ್ವುಡ್, ಪ್ಯಾಟ್ ಕಮಿನ್ಸ್ರಂತಹ ಪ್ರಮುಖರು ಆರಂಭಿಕ ಪಂದ್ಯಗಳಿಗೆ ಗೈರಾದರೆ, ಸ್ಯಾಮ್ ಕರನ್, ನೇಥನ್ ಎಲ್ಲಿಸ್ರಂತಹ ಆಟಗಾರರು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
08:22 AM (IST) Mar 21
ಯೂಟ್ಯೂಬರ್ ಧ್ರುವ್ ರಾಥಿ ಅವರು 'ಧುರಂಧರ್ 2' ಚಿತ್ರವನ್ನು ಕಳಪೆ 'ಪ್ರೊಪಗಾಂಡ' ಎಂದು ಟೀಕಿಸಿದ್ದಾರೆ. ನಿರ್ದೇಶಕ ಆದಿತ್ಯ ಧರ್ ಅವರನ್ನು 'ಬಿಜೆಪಿ ಪ್ರಚಾರಕ' ಎಂದು ಕರೆದಿದ್ದು, ಈ ಚಿತ್ರದ ಮೂಲಕ ಅದು ಎಲ್ಲರಿಗೂ ತಿಳಿಯಲಿದೆ ಎಂದಿದ್ದಾರೆ.
08:12 AM (IST) Mar 21
ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗಳು ಬಹುತೇಕ ಗುರಿ ತಲುಪಿವೆ ಮತ್ತು ಅಲ್ಲಿನ ಸರ್ಕಾರವನ್ನು ಬದಲಿಸುವ ಪ್ರಯತ್ನ ಯಶಸ್ವಿಯಾಗುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕದನ ವಿರಾಮದ ಸಾಧ್ಯತೆಯನ್ನು ತಳ್ಳಿಹಾಕಿದ ಅವರು, ಹಾರ್ಮುಜ್ ವಿಚಾರದಲ್ಲಿ ನ್ಯಾಟೋವನ್ನು ಟೀಕಿಸಿದ್ದಾರೆ.
07:18 AM (IST) Mar 21
ಅಧಿಕಾರಿಗಳು ಬೋಯಿಂಗ್ 77-300 ER ವಿಮಾನದ ಬದಲು ಬೋಯಿಂಗ್ 777 ವಿಮಾನ AI185ವನ್ನು ಕೆನಡಾಗೆ ರೂಟ್ ಮಾಡಿದ್ದಾರೆ. ಪ್ರಯಾಣಿಕರ ಹೊತ್ತು ವಿಮಾನ ಚೀನಾ ಗಡಿ ದಾಟಿ ಸಾಗುತ್ತಿದ್ದಂತೆ ಅಧಿಕಾರಿಗಳಿಗೆ ತಪ್ಪಿನ ಅರಿವಾಗಿದೆ. ಬೋಯಿಂಗ್ 777 ವಿಮಾನಕ್ಕೆ ಕೆನಾಡ ಪ್ರವೇಶಿಸುವ ಅನುಮತಿ ಇರಲಿಲ್ಲ.