ಚಂಡೀಗಢ: ಪಂಜಾಬ್ನ ಆಮ್ ಆದ್ಮಿ ಸರ್ಕಾರವು ಅಮೃತಸರ ಸೇರಿದಂತೆ ರಾಜ್ಯದ ಮೂರು ನಗರಗಳನ್ನು ಪವಿತ್ರ ನಗರಗಳೆಂದು ಘೋಷಿಸಿ, ಅಲ್ಲಿ ಮದ್ಯ, ಮಾಂಸ, ತಂಬಾಕು ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಿದೆ. ಕಳೆದ ನವೆಂಬರ್ನಲ್ಲಿ ಅಂಗೀಕರಿಸಿದ್ದ ಈ ಕುರಿತ ಕಾಯ್ದೆ ಭಾನುವಾರದಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ವಿಡಿಯೋ ಮುಖೇನ ಮಾಹಿತಿ ಹಂಚಿಕೊಂಡಿದ್ದಾರೆ. ಅಮೃತಸರ, ತಲ್ವಾಂಡಿ ಸಾಬೊ ಮತ್ತು ಆನಂದಪುರ್ ಸಾಹಿಬ್ ಸೇರೊ ನಗರಗಳನ್ನು ಪವಿತ್ರ ನಗರಗಳೆಂದು ಘೋಷಿಸಲಾಗಿದೆ. ಈ ಮೂರೂ ನಗರಗಳು ಸಿಖ್ಖರ ಧಾರ್ಮಿಕ ಕೇಂದ್ರಗಳಿರುವ ನಗರಗಳಾಗಿವೆ.

11:37 PM (IST) Dec 22
ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ, ಸುಂದರ ಸಂಸಾರದಲ್ಲಿ ಇಬ್ಬರು ಮಕ್ಕಳಿದ್ದಾರೆ. ಆದರೆ ಲವರ್ ಜೊತೆಗಿನ ಚಕ್ಕಂದ ಅರಿತ ಗಂಡ, ಬಿಟ್ಟು ಬಿಡುವಂತೆ ತಿಳಿ ಹೇಳಿದ್ದ. ಇಷ್ಟೇ ನೋಡಿ ಹಲವು ಪೀಸ್ ಆಗಿದ್ದಾನೆ.
10:40 PM (IST) Dec 22
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್, ಜಿಲ್ಲಾ ಪಂಚಾಯತ್ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 31 ಸ್ಥಾನ ಗೆದ್ದು ಅಧಿಪತ್ಯ ಸಾಧಿಸಿದೆ.
08:36 PM (IST) Dec 22
70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ, ಹೌದು ಆಕೆಯ ಸೌಂದರ್ಯಕ್ಕೆ ಉದ್ಯಮಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ಯಾರೀಕೆ? ಆಕೆಯ ವಿಡಿಯೋ ಹಂಚಿಕೊಂಡಿದ್ದಾರೆ.
07:40 PM (IST) Dec 22
07:38 PM (IST) Dec 22
ದಕ್ಷಿಣ ಕೊರಿಯಾದಲ್ಲಿ, 20 ವರ್ಷ ಹಳೆಯ ಎಲ್ಜಿ ವಿಸೆನ್ ಏರ್ ಕಂಡೀಷನರ್ಗಳ ಲೋಗೋ 24 ಕ್ಯಾರಟ್ ಚಿನ್ನದಿಂದ ಮಾಡಲ್ಪಟ್ಟಿದೆ ಎಂಬ ವೈರಲ್ ವಿಡಿಯೋ ಸಂಚಲನ ಸೃಷ್ಟಿಸಿದೆ. ಈ ವಿಡಿಯೋದಿಂದಾಗಿ, ಜನರು ತಮ್ಮ ಹಳೆಯ ಎಸಿಗಳಲ್ಲಿರುವ ಈ ಚಿನ್ನದ ಲೋಗೋವನ್ನು ಹುಡುಕಲು ಆರಂಭಿಸಿದ್ದಾರೆ.
07:30 PM (IST) Dec 22
ಎರ್ಟಿಗಾ ಸೇರಿ 7 ಸೀಟರ್ ಕಾರಿಗೆ ಠಕ್ಕರ್, ಬರುತ್ತಿದೆ ಮೇಡ್ ಇನ್ ಇಂಡಿಯಾ ನಿಸ್ಸಾನ್ ಗ್ರಾವೈಟ್ ಕಾರು, ಕೆಲವೇ ದಿನಗಳಲ್ಲಿ ಹೊಸ ಕಾರು ಬಿಡುಗಡೆಯಾಗುತ್ತಿದೆ. ಅತ್ಯಾಕರ್ಷಕ ವಿನ್ಯಾಸ, ಕೈಗೆಟುಕುವ ಬೆಲೆ ಸೇರಿದಂತೆ ಹಲವು ವಿಶೇಷತೆಗಳು ಈ ಕಾರಿನಲ್ಲಿದೆ.
07:02 PM (IST) Dec 22
ಸಂವಾದ ವೇದಿಕೆಯಲ್ಲೇ ಪತ್ರಕರ್ತನನ್ನೇ ಎತ್ತಿ ಕೆಳಕ್ಕುರುಳಿಸಿದ ಬಾಬಾ ರಾಮ್ದೇವ್,ರಸ್ಲಿಂಗ್ ವಿಡಿಯೋ ವೈರಲ್ ಆಗಿದೆ. 59 ವರ್ಷದ ಯೋಗ ಗುರು ಎಲ್ಲರಿಗೆ ಅಚ್ಚರಿ ನೀಡಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ನಡೆದ ಫ್ಲೆಂಡ್ಲಿ ರಸ್ಲಿಂಗ್ ವಿಡಿಯೋ ಇಲ್ಲಿದೆ
06:51 PM (IST) Dec 22
ಪಂಜಾಬ್ನ ಮಾಜಿ ಪೊಲೀಸ್ ಇನ್ಸ್ಪೆಕ್ಟರ್ ಜನರಲ್(Inspector General of Police)ಅಮರ್ ಸಿಂಗ್ ಚಹಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿಯ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ.
06:31 PM (IST) Dec 22
ಹೋಮ್ ವರ್ಕ್ ಮಾಡದ 11 ವರ್ಷ ಬಾಲಕನ ತಲೆ ಗೋಡೆ ಜಜ್ಜಿ, ಬಾಟಲಿಯಿಂದ ಥಳಿಸಿದ ಶಿಕ್ಷಕ, ಬಾಲಕ ಸಂಪೂರ್ಣ ಅಸ್ವಸ್ಥನಾಗಿ ಮನೆಗೆ ಹಿಂದಿರುಗಿದಾಗ ಘಟನೆ ಬೆಳೆಕಿಗೆ ಬಂದಿದ್ದು, ಶಿಕ್ಷಕ ಹಾಗೂ ಶಾಲೆ ವಿರುದ್ದ ಪ್ರಕರಣ ದಾಖಲಾಗಿದೆ.
06:15 PM (IST) Dec 22
05:48 PM (IST) Dec 22
ಅನೇಕ ಜನರು ನಿವೃತ್ತಿ ಹೊಂದಿ ಆರಾಮದಾಯಕ ಜೀವನ ನಡೆಸುವ ಬಗ್ಗೆ ಯೋಚಿಸುವ ವಯಸ್ಸಿನಲ್ಲಿ, ಜಲಗಾಂವ್ನ ಜನಾಬಾಯಿ ರಾಂಧೆ ನಗರಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಚಪ್ಪಲಿ ಕೂಡ ಧರಿಸದೆ ಸುಡುವ ಬಿಸಿಲಿನಲ್ಲಿ ಪ್ರಚಾರ ಮಾಡಿದ್ದರು.
05:26 PM (IST) Dec 22
ಬೆಡ್ನಲ್ಲಿ ಮಲಗಿದ್ದ ರೋಗಿಯೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ವೈದ್ಯನೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಚಾರ ತಿಳಿದು ಆಸ್ಪತ್ರೆಗೆ ಬಂದ ರೋಗಿಯ ಸಂಬಂಧಿಕರು ಹಾಗೂ ಊರವರು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
05:12 PM (IST) Dec 22
ಭಾರತ ಹಿಂದೂ ರಾಷ್ಟ್ರ, ಇದಕ್ಕೆ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ; ಮೋಹನ್ ಭಾಗವತ್, ಸಂವಿಧಾನ ಪೀಠಿಕೆಯಲ್ಲಿ ಭಾರತ ಹಿಂದೂ ರಾಷ್ಟ್ರ ಎಂಬುದು ಸೇರಿಸಬೇಕೆ ಅನ್ನೋದಕ್ಕೆ ಮೋಹನ್ ಭಾಗವತ್ ಉತ್ತರಿಸಿದ್ದಾರೆ.
05:10 PM (IST) Dec 22
ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಶುಭ್ಮನ್ ಗಿಲ್, ಇದೀಗ ಡಿಸೆಂಬರ್ 24ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಟೂರ್ನಿಯಲ್ಲಿ ಪಂಜಾಬ್ ತಂಡದ ಪರ ಆಡಲು ಸಜ್ಜಾಗಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಗಿಲ್, ಈ ಟೂರ್ನಿಯಲ್ಲಿ ಪಂಜಾಬ್ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆಯಿದೆ.
04:25 PM (IST) Dec 22
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ 170 ಸ್ಥಾನದ ಭರ್ಜರಿ ಗೆಲುವು, 7ಕ್ಕೆ ಕುಸಿದ ಕಾಂಗ್ರೆಸ್, ಮಹಾರಾಷ್ಟ್ರದ ಬೆನ್ನಲ್ಲೇ ಅರುಣಾಚಲ ಪ್ರದೇಶದಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಗೆಲುವು ಕಂಡಿದೆ. ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ.
04:18 PM (IST) Dec 22
ಮುಂಬೈ ಲೋಕಲ್ ರೈಲಿನ ಮಹಿಳಾ ಬೋಗಿಗೆ ಅಕ್ರಮವಾಗಿ ಹತ್ತಿದ ವ್ಯಕ್ತಿಯೊಬ್ಬ, ವಾಗ್ವಾದದ ಬಳಿಕ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರನ್ನು ಚಲಿಸುತ್ತಿದ್ದ ರೈಲಿನಿಂದ ಕೆಳಗೆ ತಳ್ಳಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯುವತಿ ಆಸ್ಪತ್ರೆಗೆ ದಾಖಲಾಗಿದೆ.
03:30 PM (IST) Dec 22
ಬಾಂಗ್ಲಾದೇಶದಲ್ಲಿ, ಶೇಖ್ ಹಸೀನಾ ವಿರೋಧಿ ಎನ್ಸಿಪಿ ನಾಯಕ ಮೊಹಮ್ಮದ್ ಮೋತಲೇಬ್ ಶಿಕ್ದರ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಘಟನೆಯು ಇತ್ತೀಚೆಗೆ ಮತ್ತೊಬ್ಬ ವಿದ್ಯಾರ್ಥಿ ನಾಯಕನ ಹತ್ಯೆಯ ನಂತರ ದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ತೋರಿಸುತ್ತದೆ.
03:29 PM (IST) Dec 22
ಕೇವಲ 36,000 ರೂಪಾಯಿಗೆ ಐಫೋನ್ 15, ಈ ಆಫರ್ ಜನವರಿ 4ರ ವರೆಗೆ ಮಾತ್ರ, ಭಾರತದಲ್ಲಿ ಐಫೋನ್ ಬೇಡಿಕೆ ಹೆಚ್ಚಾಗುತ್ತಿದೆ. ಕ್ರಿಸ್ಮಸ್, ಹೊಸ ವರ್ಷದ ನಡುವೆ ಇದೀಗ ಭರ್ಜರಿ ಆಫರ್ ನೀಡಲಾಗಿದೆ. ಸೀಮಿತ ಅವಧಿಯ ಆಫರ್ ಆಗಿರುವ ಕಾರಣ ಜನ ಮುಗಿಬಿದ್ದಿದ್ದಾರೆ.
03:27 PM (IST) Dec 22
ಬೆಂಗಳೂರು: ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಭಾರತ ತಂಡ ಪ್ರಕಟವಾಗಿದ್ದು, ಯಾವ ಐಪಿಎಲ್ ತಂಡದ ಆಟಗಾರರು ಎಷ್ಟು ಸಂಖ್ಯೆಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ನೋಡೋಣ ಬನ್ನಿ.
03:04 PM (IST) Dec 22
ಬಾಂಗ್ಲಾದಲ್ಲಿ ಹೆಚ್ಚುತ್ತಿರುವ ಭಾರತ ಮತ್ತು ಹಿಂದೂ ವಿರೋಧಿ ಹಿಂಸಾಚಾರಕ್ಕೆ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವೇ ಕಾರಣ ಎಂದು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ. ವಿದ್ಯಾರ್ಥಿ ನಾಯಕ ಹತ್ಯೆಯ ನಂತರ ಭುಗಿಲೆದ್ದಿರುವ ಈ ಗಲಭೆಗಳು ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದಿದ್ದಾರೆ
02:51 PM (IST) Dec 22
ಬಾಂಗ್ಲಾದೇಶದಲ್ಲಿ ಅನಾಮಿಕನ ಕೈಚಳಕ, ಒಸ್ಮಾನ್ ಹದಿ ಬೆನ್ನಲ್ಲೇ ಮತ್ತೊಬ್ಬ ನಾಯಕನಿಗೆ ಗುಂಡೇಟು, ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಒಂದೆಡೆ ಹಿಂದೂಗಳ ಟಾರ್ಗೆಟ್ ಮಾಡಲಾಗಿದ್ದರೆ, ಇತ್ತ ಬಾಂಗ್ಲಾದಲ್ಲಿ ಹಸೀನಾ ಸರ್ಕಾರ ಉರುಳಿಸುವಲ್ಲಿ ಮುಂಚೂಣಿಯಲ್ಲಿದ್ದ ನಾಯಕರ ಹತ್ಯೆಯಾಗುತ್ತಿದೆ.
02:41 PM (IST) Dec 22
01:06 PM (IST) Dec 22
ಕೆಲಸ ಹುಡುಕಿ ಕೇರಳಕ್ಕೆ ಬಂದಿದ್ದ ಛತ್ತೀಸ್ಗಢದ ರಾಮ್ ನಾರಾಯಣ್ ಬಘೇಲ್ ಎಂಬ ಯುವಕನನ್ನು ಕಳ್ಳತನದ ಆರೋಪದ ಮೇಲೆ ಸ್ಥಳೀಯರ ಗುಂಪೊಂದು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿದೆ. ಮರಣೋತ್ತರ ಪರೀಕ್ಷೆಯಲ್ಲಿ 80ಕ್ಕೂ ಹೆಚ್ಚು ಗಾಯಗಳಿರುವುದು ಪತ್ತೆಯಾಗಿದೆ.
12:42 PM (IST) Dec 22
ಹೊಲದಲ್ಲಿ ತಾಯಿಯ ಹಿಂದೆ ನಡೆದು ಹೋಗುತ್ತಿದ್ದ 5 ವರ್ಷದ ಬಾಲಕನ ಮೇಲೆ ಚಿರತೆಯೊಂದು ದಾಳಿ ಮಾಡಿ ಸಾಯಿಸಿದೆ. ಭಾನುವಾರ ಮುಂಜಾನೆ ಬಾಲಕ ತಮ್ಮ ಕುಟುಂಬದ ಹೊಲದಲ್ಲಿ ತಾಯಿಯ ಹಿಂದೆ ನಡೆದು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಚಿರತೆಯೊಂದು ಬಾಲಕನನ್ನು ಹಿಡಿದು ಸಾಯಿಸಿದೆ
11:54 AM (IST) Dec 22
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ, ಶಾಲಾ ವ್ಯಾನ್ ಬಾರದ ಕಾರಣ 10 ವರ್ಷದ ಬಾಲಕಿಯೊಬ್ಬಳು ಮೂರು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿದ್ದಾಳೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪಡೆದ ಈ ಬಾಲಕಿಗೆ ಶಾಲೆ ಕಿರುಕುಳ ನೀಡುತ್ತಿದೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ.
11:06 AM (IST) Dec 22
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವಿಜ್ಞಾನಿಗಳ ತಂಡವು ತಮ್ಮ ಹೊಸ ಸ್ಯಾಟಲೈಟ್ ಲಾಂಚ್ಗೂ ಮೊದಲು ಆಂಧ್ರಪ್ರದೇಶದ ತಿರುಪತಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.
10:29 AM (IST) Dec 22
ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೊಡಿಬಡಿಯಾಟಕ್ಕೆ ಹೆಸರುವಾಸಿಯಾಗಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.
09:44 AM (IST) Dec 22
ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನದೆದುರು ಸೋತು ರನ್ನರ್-ಅಪ್ ಆದ ಭಾರತ ತಂಡ, ಪಾಕ್ ಸಚಿವ ಮತ್ತು ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಪದಕ ಸ್ವೀಕರಿಸಲು ನಿರಾಕರಿಸಿದೆ. ಈ ಹಿಂದೆ ಹಿರಿಯರ ಏಷ್ಯಾಕಪ್ನಲ್ಲೂ ಇದೇ ರೀತಿ ಘಟನೆ ನಡೆದಿತ್ತು.
09:00 AM (IST) Dec 22