LIVE NOW
Published : Jan 22, 2026, 06:52 AM ISTUpdated : Jan 22, 2026, 10:55 PM IST

India Latest News Live: ಬಾಬರ್‌, ರಿಜ್ವಾನ್‌, ಶಾಹಿನ್‌ ಸೇರಿದಂತೆ 12ಕ್ಕೂ ಅಧಿಕ ಪಾಕ್‌ ಕ್ರಿಕೆಟಿಗರಿಗೆ 100 ಕೋಟಿ ವಂಚಿಸಿ ಎಸ್ಕೇಪ್‌ ಆದ ಉದ್ಯಮಿ!

ಸಾರಾಂಶ

 

ದಾವೋಸ್‌: ಭಾರತದ ಜೊತೆಗೆ ಶೀಘ್ರವೇ ನಾವು ಉತ್ತಮ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಟ್ರಂಪ್‌, ‘ಪ್ರಧಾನಿ ಮೋದಿ ಬಗ್ಗೆ ನನಗೆ ಅತ್ಯಂತ ಗೌರವವಿದೆ. ಅವರು ನನ್ನ ಆತ್ಮೀಯ ಸ್ನೇಹಿತ. ಶೀಘ್ರವೇ ನಾವು ಭಾರತದೊಂದಿಗೆ ಉತ್ತಮ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತ-ಪಾಕಿಸ್ತಾನ ನಡುವೆ ಯುದ್ಧ ನಿಲ್ಲಿಸಿದ ಕೀರ್ತಿಯ ಗರಿ ತೊಟ್ಟಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಅದೇ ರಾಗ ಹಾಡಿದ್ದಾರೆ. ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮಾವೇಶದಲ್ಲಿ ಮಾತನಾಡುವ ವೇಳೆ, ‘ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಿಲ್ಲಿಸಿದ್ದು ನಾನೇ’ ಎಂದು 71ನೇ ಸಲ ಬಡಾಯಿ ಕೊಚ್ಚಿಕೊಂಡಿದ್ದಾರೆ.

10:55 PM (IST) Jan 22

ಬಾಬರ್‌, ರಿಜ್ವಾನ್‌, ಶಾಹಿನ್‌ ಸೇರಿದಂತೆ 12ಕ್ಕೂ ಅಧಿಕ ಪಾಕ್‌ ಕ್ರಿಕೆಟಿಗರಿಗೆ 100 ಕೋಟಿ ವಂಚಿಸಿ ಎಸ್ಕೇಪ್‌ ಆದ ಉದ್ಯಮಿ!

ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್ ಸೇರಿದಂತೆ ಪಾಕಿಸ್ತಾನದ ಪ್ರಮುಖ ಕ್ರಿಕೆಟಿಗರು ಪೋಂಜಿ ಸ್ಕೀಮ್‌ನಲ್ಲಿ ಸುಮಾರು 100 ಕೋಟಿ ಪಾಕಿಸ್ತಾನಿ ರೂಪಾಯಿ ಕಳೆದುಕೊಂಡಿದ್ದಾರೆ. ಪಿಎಸ್‌ಎಲ್‌ಗೆ ಸಂಬಂಧಿಸಿದ ಉದ್ಯಮಿಯೊಬ್ಬರು ಈ ವಂಚನೆ ನಡೆಸಿದ್ದು, ಆತ ದೇಶದಿಂದ ಪರಾರಿಯಾದ ನಂತರ ಪಿಸಿಬಿ ತನಿಖೆ ಆರಂಭಿಸಿದೆ.
Read Full Story

10:35 PM (IST) Jan 22

ಪಿಂಚಣಿಯಿಂದ ಆರೋಗ್ಯ ವಿಮೆವರೆಗೆ.. ನಿವೃತ್ತಿಯ ನಂತರ ಸುನೀತಾ ವಿಲಿಯಮ್ಸ್‌ಗೆ ಪ್ರತಿ ತಿಂಗಳು ಸಿಗೋ ಹಣವೆಷ್ಟು?

ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ನಾಸಾದಿಂದ ನಿವೃತ್ತಿ ಘೋಷಿಸಿದ್ದಾರೆ. GS-15 ಶ್ರೇಣಿಯಲ್ಲಿದ್ದ ಅವರು, ಫೆಡರಲ್ ಉದ್ಯೋಗಿ ನಿವೃತ್ತಿ ವ್ಯವಸ್ಥೆಯಡಿ ಪಿಂಚಣಿ, ಆರೋಗ್ಯ ವಿಮೆ, ಮತ್ತು ಇತರ ವಿಶೇಷ ಸರ್ಕಾರಿ ಸೌಲಭ್ಯಗಳನ್ನು ಪಡೆಯಲಿದ್ದಾರೆ.
Read Full Story

09:29 PM (IST) Jan 22

ಹೊಟ್ಟೆಪಾಡಿಗಾಗಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಗುಲಾಬಿ ಹೂ ಮಾರುತ್ತಿದ್ದ 11 ವರ್ಷದ ಬಾಲಕಿಯ ಅಪಹರಿಸಿ ಅತ್ಯಾ*ಚಾರ

ಹೊಟ್ಟೆಪಾಡಿಗಾಗಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಗುಲಾಬಿ ಹೂವುಗಳನ್ನು ಮಾರುತ್ತಿದ್ದ 11 ವರ್ಷದ ಪುಟ್ಟ ಬಾಲಕಿಯನ್ನು ಕಾಮುಕನೋರ್ವ ಅಪಹರಿಸಿ ಅತ್ಯಾ*ಚಾರವೆಸಗಿ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಂತಹ ದಾರುಣ ಘಟನೆ ನಡೆದಿದೆ.

Read Full Story

09:17 PM (IST) Jan 22

'ಹೌದು ಆರ್‌ಸಿಬಿ ಟೀಮ್‌ ಖರೀದಿಗೆ ದೊಡ್ಡ ಮೊತ್ತದ ಬಿಡ್‌ ಮಾಡಿದ್ದೇನೆ..' ಖಚಿತಪಡಿಸಿದ ಬಿಲಿಯನೇರ್‌!

ಐಪಿಎಲ್ 2026ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಮಾಲೀಕರು ಬರುವ ಸಾಧ್ಯತೆ ದಟ್ಟವಾಗಿದೆ. ಫಾರ್ಮಾ ಉದ್ಯಮಿ ಆದರ್ ಪೂನವಾಲ್ಲಾ ಅವರು ಆರ್‌ಸಿಬಿ ಫ್ರಾಂಚೈಸ್ ಖರೀದಿಸಲು ಆಸಕ್ತಿ ತೋರಿದ್ದು, ದೊಡ್ಡ ಮೊತ್ತದ ಬಿಡ್ ಮಾಡುವುದಾಗಿ ಖಚಿತಪಡಿಸಿದ್ದಾರೆ.
Read Full Story

08:44 PM (IST) Jan 22

ಡ್ರಾಪ್ ಬೇಡ ಬೈಕೇ ಬೇಕು - ಹೆದ್ದಾರಿಯಲ್ಲಿ ಅಡ್ಡಹಾಕಿ ಬೈಕ್ ನೀಡುವಂತೆ ಪೀಡಿಸಿದ ಮಹಿಳೆ - ಆಮೇಲಾಗಿದ್ದೇನು?

ಹೆದ್ದಾರಿಯಲ್ಲಿ ಬೈಕ್ ಸವಾರನೊಬ್ಬನನ್ನು ಅಡ್ಡಗಟ್ಟಿದ ಮಹಿಳೆಯೊಬ್ಬಳು, ತನ್ನ ಸಹೋದರನಿಗೆ ಅಪಘಾತವಾಗಿದೆ ಎಂದು ನಂಬಿಸಿ ಬೈಕ್ ಕೇಳಿದ್ದಾಳೆ. ಆಕೆಯ ವರ್ತನೆಯಿಂದ ಅನುಮಾನಗೊಂಡ ಸವಾರ ಏನು ಮಾಡಿದ್ರು ಬೈಕ್ ನೀಡಿದ್ರಾ ಆಮೇಲೆ ಏನಾಯ್ತು ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ...

Read Full Story

08:28 PM (IST) Jan 22

Greenland crisis - ನ್ಯಾಟೋಗೆ ಒತ್ತಡ ಸೃಷ್ಟಿಸಿದ ಗ್ರೀನ್‌ಲ್ಯಾಂಡ್

ನ್ಯಾಟೋ 32 ಸದಸ್ಯರ ಒಂದು ಮಿಲಿಟರಿ ಮೈತ್ರಿಕೂಟ. ಆರ್ಟಿಕಲ್ 5ರ ಅಡಿ 'ಒಬ್ಬರ ಮೇಲಿನ ದಾಳಿ ಎಲ್ಲರ ಮೇಲಿನ ದಾಳಿ' ಎಂಬ ತತ್ವದ ಮೇಲೆ ಕಾರ್ಯ.. ಒಂದು ವೇಳೆ ಅಮೆರಿಕ ಸದಸ್ಯ ರಾಷ್ಟ್ರವೇ ಡೆನ್ಮಾರ್ಕ್‌ನ ಭಾಗವಾದ ಗ್ರೀನ್‌ಲ್ಯಾಂಡ್‌ ಮೇಲೆ ದಾಳಿ ನಡೆಸಿದರೆ, ಅದು ಆಂತರಿಕ ಬಿಕ್ಕಟ್ಟು ಸೃಷ್ಟಿಸಬಹುದು.

Read Full Story

08:06 PM (IST) Jan 22

ಮದುವೆಯಾದ ಎರಡೇ ತಿಂಗಳಿಗೆ ಹೆಂಡ್ತಿಯನ್ನು ಕೊಂದು ಪೊಲೀಸರ ಎದುರಲ್ಲೇ ಶೂಟ್‌ ಮಾಡಿಕೊಂಡ ಸಂಸದನ ಅಳಿಯ!!

ಕಾಂಗ್ರೆಸ್ ರಾಜ್ಯಸಭಾ ಸಂಸದ ಶಕ್ತಿ ಸಿನ್ಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್, ತಮ್ಮ ಪತ್ನಿ ರಾಜೇಶ್ವರಿಗೆ ಗುಂಡಿಕ್ಕಿ ಕೊಂದ ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ ಕೇವಲ ಎರಡು ತಿಂಗಳಾಗಿದ್ದ ದಂಪತಿಗಳ ಸಾವಿನ ಸುತ್ತ ಅನುಮಾನಗಳು ಮೂಡಿವೆ.

Read Full Story

07:52 PM (IST) Jan 22

ಸಾವಿರಾರು ಕೋಟಿ ವ್ಯವಹಾರದ ಅದಾನಿ Q3 ಆದಾಯ ಕೇವಲ ಇಷ್ಟೇನಾ? ಕುಸಿತ ಕಂಡ ಎನರ್ಜಿ

ಸಾವಿರಾರು ಕೋಟಿ ವ್ಯವಹಾರದ ಅದಾನಿ Q3 ಆದಾಯ ಕೇವಲ ಇಷ್ಟೇನಾ? ಕುಸಿತ ಕಂಡ ಎನರ್ಜಿ, ಮೂರನೈ ತ್ರೈಮಾಸಿಕದಲ್ಲಿ ಅದಾನಿ ಅದಾಯ ಕುಸಿತ ತಂಡಿದೆ. ಅಚ್ಚರಿ ಎಂದರೆ ಸಾವಿರ ಕೋಟಿ ಆದಾಯ ಪಡೆಯುತ್ತಿದ್ದ ಅದಾನಿ ಆದಾಯ ಇಷ್ಟೇನಾ?

 

Read Full Story

07:31 PM (IST) Jan 22

Viral Video - ಶಾಲಾ ಸಮವಸ್ತ್ರದಲ್ಲಿಯೇ ನದಿಗೆ ಹಾರಿದ ಬಾಲಕಿ- ಬೆಚ್ಚಿಬೀಳೋ ವಿಡಿಯೋ ವೈರಲ್​

ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯೊಬ್ಬಳು ಸೇತುವೆಯಿಂದ ನದಿಗೆ ಹಾರಿದ ಆಘಾತಕಾರಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯು ಇಂದಿನ ಮಕ್ಕಳ ಸೂಕ್ಷ್ಮ ಮನಸ್ಥಿತಿ ಮತ್ತು ಪಾಲಕರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ತೀವ್ರ ಆತಂಕವನ್ನು ಹುಟ್ಟುಹಾಕಿದೆ. ಬಾಲಕಿಯ ಮುಂದಿನ ಸ್ಥಿತಿ ಇನ್ನೂ ತಿಳಿದುಬಂದಿಲ್ಲ.
Read Full Story

07:08 PM (IST) Jan 22

ಹೆಣ್​ಮಕ್ಕಳೇ ಡೇಂಜರ್​ ಗುರು - ಜೀವ ರಕ್ಷಣೆಗೆ ಬಸ್​ನಲ್ಲಿ ಪುರುಷರಿಂದ ಶುರುವಾಯ್ತು ಹೊಸ ಟ್ರೆಂಡ್​!

ಸೋಷಿಯಲ್ ಮೀಡಿಯಾ ಲೈಕ್ಸ್‌ಗಾಗಿ ಕೇರಳದ ಶಿಮ್ಜಿತಾ ಮುಸ್ತಫಾ ಎಂಬ ಮಹಿಳೆ, ದೀಪಕ್ ಎಂಬ ಅಮಾಯಕನ ಮೇಲೆ ಸುಳ್ಳು ಆರೋಪ ಮಾಡಿ ವಿಡಿಯೋ ವೈರಲ್ ಮಾಡಿದ್ದಳು. ಈ ಅವಮಾನ ತಾಳಲಾರದೆ ದೀಪಕ್ ಸಾವಿನ ಹಾದಿ ಹಿಡಿದ ಬೆನ್ನಲ್ಲೇ ಜೀವ ರಕ್ಷಣೆಗೆ ಹೊಸ ಟ್ರೆಂಡ್​ ಶುರುವಾಗಿದೆ. 

Read Full Story

07:02 PM (IST) Jan 22

ಅಪ್ಪನ ಹಳೇ ಪೆಟ್ಟಿಗೆಯಲ್ಲಿದ್ದ 'ನಿಧಿ' - 60 ವರ್ಷಗಳ ಬಳಿಕ ಮಗನ ಪಾಲಿಗೆ ಒಲಿದು ಬಂತು ಅದೃಷ್ಟದ 10 ಕೋಟಿ!

ಚಿಲಿಯ ಯುವಕನೊಬ್ಬನಿಗೆ ತನ್ನ ತಂದೆಯ ಹಳೆಯ ಪೆಟ್ಟಿಗೆಯಲ್ಲಿ 60 ವರ್ಷಗಳ ಹಿಂದಿನ ಪಾಸ್‌ಬುಕ್ ಸಿಕ್ಕಿತು. ಕಾನೂನು ಹೋರಾಟದ ನಂತರ, ಅಂದು ಸಣ್ಣ ಮೊತ್ತವಾಗಿದ್ದ ಆ ಉಳಿತಾಯವು ಬಡ್ಡಿ ಮತ್ತು ಹಣದುಬ್ಬರದಿಂದಾಗಿ ಇಂದು 10 ಕೋಟಿ ರೂಪಾಯಿಗಳ ಬೃಹತ್ ನಿಧಿಯಾಗಿ ಪರಿವರ್ತನೆಯಾಗಿದೆ.

Read Full Story

06:45 PM (IST) Jan 22

ಸ್ಮೃತಿ ಮಂಧನಾ ಪತಿ ಆಗಬೇಕಿದ್ದ ಪಲಾಶ್‌ ಮುಚ್ಚಾಲ್‌ ಮೇಲೆ ಮತ್ತೊಂದು ಸೆನ್ಸೇಷನಲ್‌ ಆರೋಪ, ಎಫ್‌ಐಆರ್‌ ದಾಖಲು!

ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧನಾ ಅವರೊಂದಿಗಿನ ಮದುವೆ ಮುರಿದುಬಿದ್ದ ನಂತರ ಸುದ್ದಿಯಲ್ಲಿದ್ದ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಾಲ್ ಇದೀಗ ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಮೃತಿ ಅವರ ಬಾಲ್ಯದ ಗೆಳೆಯ ವಿಜ್ಞಾನ್ ಮಾನೆ, ಪಲಾಶ್‌ ವಿರುದ್ಧ ದೂರು ದಾಖಲಿಸಿದ್ದಾರೆ.

Read Full Story

06:13 PM (IST) Jan 22

ಬಾಂಗ್ಲಾದೇಶ ಅಧಿಕೃತವಾಗಿ ಟಿ20 ವಿಶ್ವಕಪ್ ಬಾಯ್ಕಾಟ್! ಭಾರತಕ್ಕೇನು ನಷ್ಟವಿಲ್ಲ

ಭಾರತದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಬಹಿಷ್ಕರಿಸಲು ಬಾಂಗ್ಲಾದೇಶ ತೀರ್ಮಾನಿಸಿದೆ. ಮುಸ್ತಾಫಿಜುರ್ ರಹಮಾನ್ ಅವರ ಐಪಿಎಲ್ ವಿವಾದದ ಹಿನ್ನೆಲೆಯಲ್ಲಿ ಭದ್ರತೆಯ ಕಾರಣ ನೀಡಿ, ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಮಾಡಿದ ಮನವಿಯನ್ನು ಐಸಿಸಿ ತಿರಸ್ಕರಿಸಿದೆ.

Read Full Story

05:24 PM (IST) Jan 22

ಮಗು ನೋಡಿಕೊಳ್ಳಲು ಬಂದ 10 ವರ್ಷದ ಬಾಲಕಿಯ ಉಪವಾಸ ಹಾಕಿ ಪಕ್ಕೆಲುಬು ಮುರಿಯುವಂತೆ ಹೊಡೆದ CRPF ದಂಪತಿ

ಗ್ರೇಟರ್ ನೋಯ್ಡಾದಲ್ಲಿ, ಸಿಆರ್‌ಪಿಎಫ್ ಜವಾನನ ಮನೆಯಲ್ಲಿ ಕೆಲಸಕ್ಕಿದ್ದ 10 ವರ್ಷದ ಬಾಲಕಿಯ ಮೇಲೆ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಸರಿಯಾಗಿ ಊಟ ನೀಡದೆ ಉಪವಾಸ ಹಾಕಿ ಆಕೆಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ ಬಾಲಿಯ ಪಕ್ಕೆಲುಬು ಮುರಿದಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ.

Read Full Story

04:53 PM (IST) Jan 22

ಫ್ಲಾಶ್ ಹಾಕಿ ಜೀವ ಉಳಿಸಲು ಅಂಗಲಾಚಿದ ಟೆಕ್ಕಿ ಕೊನೆಯ ವಿಡಿಯೋ, ಅಸಹಾಯಕರಾಗಿ ಕುಳಿತ ತಂದೆ

ಫ್ಲಾಶ್ ಹಾಕಿ ಜೀವ ಉಳಿಸಲು ಅಂಗಲಾಚಿದ ಟೆಕ್ಕಿ ಕೊನೆಯ ವಿಡಿಯೋ, ಮಕಲುಕುವ ವಿಡಿಯೋ ಇದೀಗ ಹೊರಬಂದಿದೆ. ಮಗನ ಉಳಿಸಲು ಸಾಧ್ಯವಾಗದೆ ಚಡಪಡಿಸುತ್ತಿರುವ ವಿಡಿಯೋ ಘಟನೆಯ ಕರಾಳತೆಯನ್ನು ಬಿಡಿಸಿ ಹೇಳುತ್ತಿದೆ.

 

Read Full Story

04:50 PM (IST) Jan 22

44 ಸೆಕೆಂಡ್‌ನಲ್ಲಿ 72 ರಾಕೆಟ್‌ ಲಾಂಚ್‌ ಮಾಡುವ ಘಾತಕ ರಾಕೆಟ್‌ ಸಿಸ್ಟಮ್‌ಅನ್ನು ಪ್ರಮುಖ ದೇಶಕ್ಕೆ ಮಾರಿದ ಭಾರತ!

ಭಾರತದ ಶಸ್ತ್ರಾಸ್ತ್ರ ರಫ್ತು ದಾಖಲೆಯ ಮಟ್ಟಕ್ಕೆ ಏರಿದ್ದು, ನಾಗ್ಪುರದಿಂದ ಪಿನಾಕಾ ರಾಕೆಟ್ ವ್ಯವಸ್ಥೆಯ ಮೊದಲ ರಫ್ತು ಆದೇಶ ರವಾನೆಯಾಗಿದೆ. 44 ಸೆಕೆಂಡುಗಳಲ್ಲಿ 72 ರಾಕೆಟ್‌ಗಳನ್ನು ಉಡಾಯಿಸುವ ಸಾಮರ್ಥ್ಯವಿರುವ ಈ ವ್ಯವಸ್ಥೆಯನ್ನು, ರಾಜತಾಂತ್ರಿಕ ಕಾರಣಗಳಿಗಾಗಿ ಅರ್ಮೇನಿಯಾಗೆ ರಫ್ತು ಮಾಡಲಾಗಿದೆ.

Read Full Story

04:31 PM (IST) Jan 22

ಲಾಟರಿ ಡ್ರಾ ಮೂಲಕ ನಿರ್ಧಾರ, ಬಿಎಂಸಿಗೆ ಜನರಲ್‌ ಕೆಟಗರಿಯ ಮಹಿಳಾ ಮೇಯರ್‌!

ಮೀಸಲಾತಿಯ ಪ್ರಕಾರ, ಪುಣೆ, ಧುಲೆ, ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ), ನಾಂದೇಡ್, ನವಿ ಮುಂಬೈ, ಮಾಲೆಗಾಂವ್, ಮೀರಾ ಭಯಂದರ್, ನಾಸಿಕ್ ಮತ್ತು ನಾಗ್ಪುರದಲ್ಲಿ ಮೇಯರ್ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

 

Read Full Story

04:09 PM (IST) Jan 22

12 ಸಾವಿರ ಕೋಟಿಯ IPO ಮೂಲಕ ಷೇರು ಮಾರುಕಟ್ಟೆಗೆ ಬರಲಿರುವ PhonePe, ಮೈಕ್ರೋಸಾಫ್ಟ್‌ನ ಎಲ್ಲಾ ಪಾಲು ಮಾರಾಟ!

ಭಾರತದ ಅತಿದೊಡ್ಡ ಡಿಜಿಟಲ್ ಪೇಮೆಂಟ್ ಕಂಪನಿ ಫೋನ್‌ಪೇ, ತನ್ನ ಐಪಿಒಗಾಗಿ ಸೆಬಿಯಿಂದ ಅನುಮೋದನೆ ಪಡೆದಿದ್ದು, ಸುಮಾರು ₹12,000 ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ. ಈ 'ಆಫರ್‌ ಫಾರ್‌ ಸೇಲ್‌' (OFS) ಮೂಲಕ, ವಾಲ್‌ಮಾರ್ಟ್ ತನ್ನ ಪಾಲನ್ನು ಕಡಿಮೆ ಮಾಡಲಿದೆ.

Read Full Story

03:42 PM (IST) Jan 22

Breaking - ಜಮ್ಮು ಕಾಶ್ಮೀರದಲ್ಲಿ 200 ಅಡಿ ಕಮರಿಗೆ ಬಿದ್ದ ಸೇನಾ ವಾಹನ, 11 ಸೇನಾ ಸಿಬ್ಬಂದಿ ಸಾವು!

Breaking: 11 Soldiers Dead as Army Vehicle Falls into Gorge in Jammu Kashmir ಒಟ್ಟು 21 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ.

 

Read Full Story

02:15 PM (IST) Jan 22

ಗಂಡನ ಮೇಲಿನ ಕೋಪಕ್ಕೆ 18 ತಿಂಗಳ ಮಗುವನ್ನೇ ಚಾಕುವಿನಿಂದ ಇರಿದು ಕೊಂದ ತಾಯಿ

ಮಹಾರಾಷ್ಟ್ರದ ಲತೂರ್‌ನಲ್ಲಿ, ಪತಿ ತಡವಾಗಿ ಮನೆಗೆ ಬಂದಿದ್ದಕ್ಕೆ ಜಗಳವಾಡಿದ ತಾಯಿಯೊಬ್ಬಳು, ತನ್ನ 18 ತಿಂಗಳ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ಗಂಡನ ಮೇಲಿನ ಸಿಟ್ಟಿಗೆ ಈ ಕೃತ್ಯ ಎಸಗಿದ್ದು, ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ ತಾಯಿಯನ್ನು ಬಂಧಿಸಿದ್ದಾರೆ.
Read Full Story

02:06 PM (IST) Jan 22

ಬಿರಿಯಾನಿಗೆ 20 ಮಾತ್ರೆ - ಗಂಡನ ಉಸಿರು ನಿಲ್ಲಿಸಿ ಗೆಳೆಯನ ಜೊತೆ ಆ ಸಿನಿಮಾ ನೋಡಿದ್ಳು!

ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಗೆ ಬಿರಿಯಾನಿಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಲೆ ಮಾಡಿದ್ದಾಳೆ. ನಂತರ ಇದನ್ನು ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದರೂ, ಮೃತನ ಸ್ನೇಹಿತರ ಅನುಮಾನದಿಂದಾಗಿ ಪೊಲೀಸರು ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆದಿದ್ದಾರೆ.

Read Full Story

01:36 PM (IST) Jan 22

Ayodya Rama Mandir ರಾಮಲಲ್ಲಾ ಪ್ರತಿಷ್ಠಾಪನೆಗೆ 2 ವರ್ಷ - ದಾಖಲೆಯ ಪುಟ ಸೇರಿದ ನಗರಿಯ ಒಂದು ನೋಟ

ರಾಮಲಲ್ಲಾ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ಹೊತ್ತಿನಲ್ಲಿ ಅಯೋಧ್ಯೆಯು ಅಭಿವೃದ್ಧಿಯ ಹೊಸ ಮಜಲನ್ನು ತಲುಪಿದೆ. ರಾಮ ಜನ್ಮಭೂಮಿ ಸಂಕೀರ್ಣದಲ್ಲಿ 14 ಹೊಸ ಉಪ ದೇವಾಲಯಗಳು ನಿರ್ಮಾಣವಾಗಿದ್ದು, ದಾಖಲೆ ಸಂಖ್ಯೆಯ ಭಕ್ತರ ಆಗಮನದೊಂದಿಗೆ ನಗರವು ಆರ್ಥಿಕವಾಗಿಯೂ ಪ್ರಗತಿ ಸಾಧಿಸಿದೆ.
Read Full Story

01:29 PM (IST) Jan 22

T20 ಕ್ರಿಕೆಟ್‌ನಲ್ಲಿ ಅತಿವೇಗದ 5000 ರನ್! ರಸೆಲ್, ಟಿಮ್ ಡೇವಿಡ್‌ರನ್ನೇ ಹಿಂದಿಕ್ಕಿದ ಅಭಿಷೇಕ್ ಶರ್ಮಾ!

ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಇನ್ನು ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ದಿಗ್ಗಜರನ್ನು ಹಿಂದಿಕ್ಕಿ ಹೊಸ ದಾಖಲೆ ಬರೆದಿದ್ದಾರೆ.

 

Read Full Story

01:07 PM (IST) Jan 22

1984 ಸಿಖ್ ವಿರೋಧಿ ದಂಗೆ - ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ನ್ಯಾಯಾಲಯ

1984ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ತೀರ್ಪಿನಿಂದ ಆಕ್ರೋಶಗೊಂಡ ಸಂತ್ರಸ್ತರ ಕುಟುಂಬಗಳು ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಈ ದಂಗೆಯಲ್ಲಿ 2,733 ಜನರು ಮೃತಪಟ್ಟಿದ್ದರು.

Read Full Story

12:33 PM (IST) Jan 22

ತಾಂತ್ರಿಕ ದೋಷದಿಂದ IAF ವಿಮಾನ ಪತನ, ಸ್ಥಳೀಯರ ಸಾಹಸದದಿಂದ ಇಬ್ಬರ ರಕ್ಷಣೆ

ತಾಂತ್ರಿಕ ದೋಷದಿಂದ IAF ವಿಮಾನ ಪತನ, ಪ್ರಯಾಗರಾಜ್‌ನಲ್ಲಿ ವಿಮಾನ ಪತನಗೊಂಡಿದೆ. ಸದ್ಧುಕೇಳಿ ಓಡೋಡಿ ಬಂದ ಸ್ಥಳೀಯರು ಸಾಹಸ ಮೆರೆದಿದ್ದಾರೆ. ಧೈರ್ಯದಿಂದ ಇಬ್ಬರು ಪೈಲೆಟ್ ರಕ್ಷಿಸಿದ್ದಾರೆ

Read Full Story

12:22 PM (IST) Jan 22

ಕೇವಲ 10 ಗಂಟೆ ಕ್ಯಾಬ್ ಓಡಿಸಿ ಗಳಿಸಿದ್ದು ಇಷ್ಟೊಂದಾ? ಆಸ್ಟ್ರೇಲಿಯಾದಲ್ಲಿ ಭಾರತೀಯ ಚಾಲಕನ ಶಾಕಿಂಗ್ ಸಂಪಾದನೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಉಬರ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುವ ಯುವಕನೋರ್ವ, ತನ್ನ ಒಂದು ದಿನದ ಗಳಿಕೆಯ ವಿವರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. ಸುಮಾರು 10 ಗಂಟೆಗಳ ಕಾಲ ಕೆಲಸ ಮಾಡಿ ಆತ ಗಳಿಸಿದ ಹಣದ ಮೊತ್ತವನ್ನು ತಿಳಿದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Read Full Story

11:43 AM (IST) Jan 22

ತನ್ನ ನಾಯಿಗೆ ವಾಕ್ ಮಾಡಿಸಲು ಇಡೀ ಸ್ಟೇಡಿಯಂನ್ನೇ ಖಾಲಿ ಮಾಡಿಸಿದ ಅಧಿಕಾರಿ ಈಗ ಪಾಲಿಕೆ ಕಮೀಷನರ್

ಹಿಂದೊಮ್ಮೆ ನಾಯಿಯನ್ನು ವಾಕ್ ಕರೆದೊಯ್ಯಲು ಇಡೀ ಕ್ರೀಡಾಂಗಣವನ್ನು ಖಾಲಿ ಮಾಡಿಸಿ ವಿವಾದಕ್ಕೆ ಒಳಗಾಗಿದ್ದ ಐಎಎಸ್ ಅಧಿಕಾರಿ ಸಂಜೀವ್ ಖಿರ್ವರ್ ಅವರನ್ನು ದೆಹಲಿ ಮುನ್ಸಿಪಲ್ ಕಾರ್ಪೋರೇಷನ್‌ನ (MCD) ನೂತನ ಕಮೀಷನರ್ ಆಗಿ ನೇಮಿಸಲಾಗಿದೆ. 2022ರ ವಿವಾದದ ನಂತರ ಅವರು ಲಡಾಕ್‌ಗೆ ವರ್ಗಾವಣೆಗೊಂಡಿದ್ದರು.

Read Full Story

11:36 AM (IST) Jan 22

ಇದು Bigg Boss ಮೀರಿಸೋ, ಕಿರುತೆರೆ ಇತಿಹಾಸದಲ್ಲೇ ದೊಡ್ಡ ಷೋ - ಫೆ.1 ರಿಂದ ಆರಂಭ- ಡಿಟೇಲ್ಸ್ ಇಲ್ಲಿದೆ

ಬಿಗ್​ಬಾಸ್​ ಸೀಸನ್​ 12 ಮುಗಿದು ಬೇಸರದಲ್ಲಿರುವ ವೀಕ್ಷಕರಿಗೆ ಕಲರ್ಸ್​ ಟಿವಿ ಗುಡ್​ನ್ಯೂಸ್​ ನೀಡಿದೆ. ಬಿಗ್​ಬಾಸ್​ಗಿಂತಲೂ ದೊಡ್ಡದೆನ್ನಲಾದ 'ದಿ 50' ಎಂಬ ಹೊಸ ರಿಯಾಲಿಟಿ ಷೋ ಶೀಘ್ರದಲ್ಲೇ ಆರಂಭವಾಗಲಿದ್ದು, ಇದು ಕಿರುತೆರೆ ಇತಿಹಾಸದಲ್ಲಿಯೇ ಹೊಸ ಸಂಚಲನ ಸೃಷ್ಟಿಸುವ ನಿರೀಕ್ಷೆಯಿದೆ. 

Read Full Story

11:34 AM (IST) Jan 22

ಸೊಳ್ಳೆ ಹತ್ತಿಕ್ಕಲು ಚರಂಡಿಗೆ ಪರದೆ ಹಾಕಿದ ನಗರ ಪಾಲಿಕೆ - ಮೇಯರ್ ಟ್ರೋಲ್, ವಿಡಿಯೀ ವೈರಲ್

ಹೆಚ್ಚುತ್ತಿರುವ ಸೊಳ್ಳೆ ಸಮಸ್ಯೆಯನ್ನು ನಿಯಂತ್ರಿಸಲು, ಮಹಾನಗರ ಪಾಲಿಕೆಯು ಚರಂಡಿ ಮ್ಯಾನ್‌ಹೋಲ್‌ಗಳಿಗೆ ಸೊಳ್ಳೆ ಪರದೆಗಳನ್ನು ಅಳವಡಿಸುತ್ತಿದೆ. ಈ ಕ್ರಮವು ವಿಪಕ್ಷ ಎಐಎಡಿಎಂಕೆ ಮತ್ತು ಸಾರ್ವಜನಿಕರಿಂದ ತೀವ್ರ ಟೀಕೆ ಮತ್ತು ಟ್ರೋಲ್‌ಗೆ ಗುರಿಯಾಗಿದೆ.

Read Full Story

11:32 AM (IST) Jan 22

ಆ ತಪ್ಪು ಮಾಡಿದರೆ RCB ಅಡಿಪಾಯವೇ ಅಲುಗಾಡಲಿದೆ. ಇದಂತೂ ಶತ ಸಿದ್ಧ..!

17 ವರ್ಷಗಳಿಂದ ನಿಷ್ಠಾವಂತ ಬೆಂಬಲ ನೀಡಿದರೂ, ಆರ್‌ಸಿಬಿ ಫ್ರಾಂಚೈಸಿ ಈಗ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸ್ಥಳಾಂತರಿಸಲು ಚಿಂತಿಸುತ್ತಿದೆ. ಕಳೆದ ವರ್ಷದ ಕಾಲ್ತುಳಿತ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿದ್ದು, ಅಭಿಮಾನಿಗಳಿಗೆ ಮಾಡುವ ದ್ರೋಹ.

Read Full Story

10:56 AM (IST) Jan 22

ಕ್ಯಾನ್ಸರ್ ಪೀಡಿತ ಬಾಲಕಿಯನ್ನು ಬೆಂಬಲಿಸಿ ತಲೆ ಬೋಳಿಸಿಕೊಂಡ ತರಗತಿಯ ಎಲ್ಲಾ ಮಕ್ಕಳು, ಟೀಚರ್

ಕ್ಯಾನ್ಸರ್‌ ಚಿಕಿತ್ಸೆಗಾಗಿ ಕೂದಲು ಕಳೆದುಕೊಂಡು ಖಿನ್ನತೆಗೊಳಗಾದ ಬಾಲಕಿಗೆ, ಜೋಧ್‌ಪುರದ ಶಾಲೆಯೊಂದರ ಸಹಪಾಠಿಗಳು ಮತ್ತು ಶಿಕ್ಷಕರು ಬೆಂಬಲ ಸೂಚಿಸಿದ್ದಾರೆ. ಅವಳ ನೋವಿನಲ್ಲಿ ಭಾಗಿಯಾಗಲು, ಅವರೆಲ್ಲರೂ ತಮ್ಮ ತಲೆಗೂದಲನ್ನು ಬೋಳಿಸಿಕೊಂಡು ಮಾನವೀಯತೆ ಮೆರೆದಿದ್ದು, ಈ ಭಾವುಕ ಘಟನೆ ವೈರಲ್ ಆಗಿದೆ.
Read Full Story

09:25 AM (IST) Jan 22

ಬಾಂಗ್ಲಾದ ಮ್ಯಾಚ್ ಸ್ಥಳಾಂತರ ಬೇಡಿಕೆ ವಿರುದ್ಧ 14 ದೇಶಗಳಿಂದ ಮತ; ಆದ್ರೆ ಅದೊಂದು ದೇಶ ಮಾತ್ರ ಬಾಂಗ್ಲಾ ಪರ ಮತ!

ದುಬೈ: ಫೆಬ್ರವರಿ 07ರಿಂದ ಆರಂಭವಾಗಬೇಕಿರುವ ಐಸಿಸಿ ಟಿ20 ವಿಶ್ವಕಪ್ ಬಗ್ಗೆ ವಿವಾದ ಮುಂದುವರೆದಿದ್ದು, ಬಾಂಗ್ಲಾದೇಶ ಪಟ್ಟು ಸಡಿಲಿಸಿಲ್ಲ. ಆದರೆ ಇದೀಗ ಬಾಂಗ್ಲಾದೇಶ ಮ್ಯಾಚ್ ಬೇರೆಡೆಗೆ ಶಿಫ್ಟ್ ಮಾಡಬೇಕೇ-ಬೇಡವೇ ಎನ್ನುವ ಬಗ್ಗೆ ನಡೆಸಿದ ಮತ ಚಲಾವಣೆಯಲ್ಲಿ ಬಾಂಗ್ಲಾದೇಶಕ್ಕೆ ಮುಖಭಂಗವಾಗಿದೆ.

 

Read Full Story

08:10 AM (IST) Jan 22

ಸೀರೆಯುಟ್ಟು ಮೋಡಿ ಮಾಡಿದ ಜರ್ಮನ್ ಬೆಡಗಿ - ಈಕೆ ಈಗ ಹೊಸ ನ್ಯಾಷನಲ್ ಕ್ರಶ್..!

ಬೆಂಗಳೂರಿನ ಬೀದಿಯಲ್ಲಿ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬರು ಸೀರೆಯುಟ್ಟಿದ್ದ ಜರ್ಮನ್ ಯುವತಿ ಲಿಜ್ ಅವರ ಫೋಟೋಗಳನ್ನು ತೆಗೆದಿದ್ದಾರೆ. ಈ ಫೋಟೋಗಳು ಮತ್ತು ವೀಡಿಯೋಗಳು ಇನ್ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆಕೆಯ ಸೌಂದರ್ಯಕ್ಕೆ ಮಾರುಹೋಗಿ 'ಹೊಸ ನ್ಯಾಷನಲ್ ಕ್ರಶ್' ಎಂದು ಕರೆಯುತ್ತಿದ್ದಾರೆ.

Read Full Story

07:14 AM (IST) Jan 22

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ - ಅಸಭ್ಯವಾಗಿ ಮುಟ್ಟಿ ತಬ್ಬಿಕೊಂಡು ಥ್ಯಾಂಕ್ಸ್ ಹೇಳಿದ..!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪಾಸಣೆ ನೆಪದಲ್ಲಿ ಅಸಭ್ಯವಾಗಿ ಸ್ಪರ್ಶಿಸಿ ತಬ್ಬಿಕೊಂಡು ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Read Full Story

More Trending News