ಲಾತೂರ್ (ಮಹಾರಾಷ್ಟ್ರ): ಕಾಕ್ರೋಚ್ ಜನತಾ ಪಕ್ಷದ ಮುಖ್ಯಸ್ಥ ಅಭಿಜಿತ್ ದೀಪ್ಕೆ ಶಾಲೆಗಳನ್ನು ಅಭಿವೃದ್ಧಿಪಡಿಸುವ ಅಭಿಯಾನದ ಭಾಗವಾಗಿ ಲಾತೂರ್ನ ಸರ್ಕಾರಿ ಶಾಲೆಗೆ ಅನುಮತಿಯಿಲ್ಲದೆ ಪ್ರವೇಶಿಸಿ ಶಿಕ್ಷಕರಿಗೆ ಬೆದರಿಕೆಯೊಡ್ಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ದೀಪ್ಕೆ ವಿರುದ್ಧ ಪ್ರಕರಣ ಎಫ್ಐಆರ್ ದಾಖಲಾಗಿದೆ.
ಇಲ್ಲಿನ ಔಸಾ ಬಳಿಯ ಜವಾಲಿಯಲ್ಲಿರುವ ಜಿಲ್ಲಾ ಪರಿಷತ್ ಉರ್ದು ಶಾಲೆಯಲ್ಲಿ ಈ ಘಟನೆ ನಡೆದಿದೆ. ದೀಪ್ಕೆ ಹಾಗೂ ಸಿಜೆಪಿ ಬೆಂಬಲಿಗರು ಯಾವುದೇ ಅನುಮತಿಯಿಲ್ಲದೆ ಶಾಲೆಗೆ ಭೇಟಿ ನೀಡಿದ್ದಾರೆ. ಮಾತ್ರವಲ್ಲದೇ ವಿದ್ಯಾರ್ಥಿಗಳ ಜತೆ ಕುಳಿತು ಅವರಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದರ ವಿಡಿಯೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಶಿಕ್ಷಕರಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ ಘಟನೆ ಸಂಬಂಧ ಶಾಲಾ ಶಿಕ್ಷಕರು ನೀಡಿದ ದೂರಿನನ್ವಯ ಔಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
07:22 AM (IST) Aug 23