ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಯನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ‘ವಿದ್ಯಾರ್ಥಿಗಳ ಅಭಿಯಾನ’ದ ಬಗ್ಗೆ ಸರ್ಕಾರ ಅತ್ಯಂತ ಸಂವೇದನಾಶೀಲವಾಗಿದೆ ಮತ್ತು ಸಿಜೆಪಿ ಜೊತೆಗೆ ಮಾತುಕತೆಗೆ ಸರ್ಕಾರ ಮುಕ್ತವಾಗಿದೆ. ಆದರೆ ವಿಪಕ್ಷಗಳು ದೇಶದ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಸುಳ್ಳು ನಿರೂಪಣೆ ಮಾಡುತ್ತಿದೆ ಎಂದು ಆರೋಪಿಸಿದೆ.
ಈ ನಡುವೆ ಬಿಜೆಪಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ‘ನಾವು ಸರ್ಕಾರದ ಜೊತೆಗೆ ಮಾತುಕತೆಗೆ ಸಿದ್ಧ. ಆದರೆ ಅದು ಯಾವುದೇ ಸಚಿವರ ಮನೆಯಲ್ಲಿ ಆಗಿರಬಾರದು. ಬದಲಾಗಿ ಯಾವುದಾದರೂ ತಟಸ್ಥ ಸ್ಥಳದಲ್ಲಿ ಆಗಿರಬೇಕು’ ಎಂದು ಹೇಳಿದ್ದಾರೆ.
10:22 PM (IST) Jul 23
ಮಾರುತಿ ಸುಜುಕಿ ತನ್ನ ಜನಪ್ರಿಯ ಬ್ರೆಝಾ ಎಸ್ಯುವಿಯ ಫೇಸ್ಲಿಫ್ಟ್ ಆವೃತ್ತಿಯನ್ನು ಬಿಡುಗಡೆಗೆ ಸಿದ್ಧಪಡಿಸಿದ್ದು, ಇದು ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್ನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದಿದೆ. ಈ ನೂತನ ಮಾದರಿಯು ವೆಂಟಿಲೇಟೆಡ್ ಸೀಟ್ಗಳು, 360-ಡಿಗ್ರಿ ಕ್ಯಾಮೆರಾದಂತಹ ಪ್ರೀಮಿಯಂ ಫೀಚರ್ಗಳೊಂದಿಗೆ ಬರಲಿದೆ.
10:05 PM (IST) Jul 23
ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ನಟ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಪ್ರಧಾನಿಯವರೇ ಭರವಸೆ ನೀಡಿರುವುದರಿಂದ ಹೋರಾಟವನ್ನು ಅಂತ್ಯಗೊಳಿಸುವಂತೆ ವಾಂಗ್ಚುಕ್ ಅವರಿಗೆ ಮನವಿ ಮಾಡಿದ್ದಾರೆ.
09:00 PM (IST) Jul 23
ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ, ದೆಹಲಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗುರುತಿಸಿ, ಅವರ ಪಾಸ್ಪೋರ್ಟ್ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸುವ ಸಾಧ್ಯತೆಯಿದೆ.
08:13 PM (IST) Jul 23
15 ವರ್ಷದ ವೈಭವ್ ಸೂರ್ಯವಂಶಿ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಅರ್ಧಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ, ಅಂತರರಾಷ್ಟ್ರೀಯ ಟಿ20ಯಲ್ಲಿ ಅರ್ಧಶತಕ ಗಳಿಸಿದ ಜಗತ್ತಿನ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
07:29 PM (IST) Jul 23
07:06 PM (IST) Jul 23
ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರಗಳ ಪ್ರಕಾರ, ಮನೆಯ ವಾತಾವರಣ ನಮ್ಮ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಅದರಲ್ಲೂ ಮನೆಯಲ್ಲಿ ನೆಗೆಟಿವ್ ಎನರ್ಜಿ ಹೆಚ್ಚಾದರೆ ಸಮಸ್ಯೆಗಳು ತಪ್ಪಿದ್ದಲ್ಲ ಎನ್ನುತ್ತಾರೆ ಪಂಡಿತರು. ಹಾಗಾದ್ರೆ ಮನೆಯಲ್ಲಿ ನೆಗೆಟಿವ್ ಎನರ್ಜಿ ಇದೆ ಎಂದು ತಿಳಿಯುವುದು ಹೇಗೆ? ನೋಡೋಣ
06:38 PM (IST) Jul 23
ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲುತೂರಾಟ ನಡೆದಿದ್ದು, ಈ ವೇಳೆ ಗರ್ಭಿಣಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡು ಮಗುವನ್ನು ಕಳೆದುಕೊಂಡಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ, ನಿಜವಾಗಿಯೂ ಆಗಿದ್ದೇನು? ಏನಿದರ ಅಸಲಿತ್ತು?
05:40 PM (IST) Jul 23
05:23 PM (IST) Jul 23
04:36 PM (IST) Jul 23
04:03 PM (IST) Jul 23
ಮರ್ಸಿಡಿಸ್-ಬೆನ್ಜ್ ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಫೈಡ್ ಎಎಂಜಿ ಇ-ಕ್ಲಾಸ್, 'ಮರ್ಸಿಡಿಸ್-ಎಎಂಜಿ ಇ 53 ಹೈಬ್ರಿಡ್ 4ಮ್ಯಾಟಿಕ್+' ಅನ್ನು ಬಿಡುಗಡೆ ಮಾಡಿದೆ. ಈ ಐಷಾರಾಮಿ ಕಾರು ಶಕ್ತಿಶಾಲಿ 3.0-ಲೀಟರ್ ಇಂಜಿನ್ ಮತ್ತು ಕೇವಲ ಎಲೆಕ್ಟ್ರಿಕ್ ಮೋಡ್ನಲ್ಲಿ 100 ಕಿ.ಮೀ. ವರೆಗೆ ಚಲಿಸುತ್ತದೆ.
03:48 PM (IST) Jul 23
ದೇಶದಲ್ಲಿ 629 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ನಿಗದಿತ ಸಮಯ ಮೀರಿ ವಿಳಂಬವಾಗಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕಳಪೆ ಕಾಮಗಾರಿ ನಡೆಸಿದ 103 ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ..
03:42 PM (IST) Jul 23
ಹರಾರೆ: ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ, ಇಂದಿನಿಂದ ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್, 15 ವರ್ಷದ ವೈಭವ್ ಸೂರ್ಯವಂಶಿ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದಾರೆ.
02:23 PM (IST) Jul 23
02:04 PM (IST) Jul 23
01:32 PM (IST) Jul 23
ಫಿಫಾ, ವಿಶ್ವಕಪ್ ಟೂರ್ನಿಯ ಅತ್ಯುತ್ತಮ ತಂಡವನ್ನು ಪ್ರಕಟಿಸಿದೆ. ಸ್ಪೇನ್ ಮತ್ತು ಫ್ರಾನ್ಸ್ನಿಂದ ತಲಾ ಮೂವರು ಆಟಗಾರರು ಹಾಗೂ ಅರ್ಜೆಂಟೀನಾದಿಂದ ಇಬ್ಬರು ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಫಿಫಾ ವಿಶ್ವಕಪ್ ಟೀಂ ಆಫ್ ದಿ ಟೂರ್ನಮೆಂಟ್ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ ಬನ್ನಿ.
01:23 PM (IST) Jul 23
12:56 PM (IST) Jul 23
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದಾನಿಶ್ ಕನೇರಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲ ಸೂಚಿಸಿರುವ ಅವರು, ಭಾರತದಲ್ಲಿ ನಡೆಯುವ ಪ್ರತಿಭಟನೆಗಳ ಹಿಂದೆ ಒಂದು ನಿರ್ದಿಷ್ಟ ಸ್ಕ್ರಿಪ್ಟ್ ಕೆಲಸ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
12:56 PM (IST) Jul 23
12:28 PM (IST) Jul 23
Actor Thalapathy Vijay: ಒಬ್ಬರು ಅಧಿಕಾರದಲ್ಲಿ ಮುಖ್ಯಮಂತ್ರಿ... ಇನ್ನೊಂದೆಡೆ ಥಿಯೇಟರ್ನಲ್ಲಿ ಮಾಸ್ ಹೀರೋ! 50 ವರ್ಷಗಳ ನಂತರ ತಮಿಳು ಚಿತ್ರರಂಗದ ಇತಿಹಾಸದಲ್ಲಿ ಈ ಅಪರೂಪದ ಘಟನೆ ಪುನರಾವರ್ತನೆಯಾಗಿದೆ. ಎಂಜಿಆರ್ನಿಂದ ದಳಪತಿ ವಿಜಯ್ವರೆಗೆ ನಡೆದ ಈ ಟ್ರೆಂಡಿಂಗ್ ಬೆಳವಣಿಗೆ ಇದು.
12:13 PM (IST) Jul 23
ಹರಾರೆ: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಆರಂಭವಾಗಲಿದೆ. ಈ ಸರಣಿ ಹಲವು ಕಾರಣಗಳಿಗೆ ವಿಶೇಷತೆ ಎನಿಸಿಕೊಂಡಿದೆ. ಈ ಪೈಕಿ ಈ ಐದು ಕಾರಣಗಳಿಗೋಸ್ಕರವಾದರೂ ಕ್ರಿಕೆಟ್ ಅಭಿಮಾನಿಗಳು ಈ ಸರಣಿಯನ್ನು ನೋಡಲೇಬೇಕು.
12:05 PM (IST) Jul 23
ಸೀರೆ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಪತ್ನಿಯೇ ಪತಿಯನ್ನು ಕೊಲೆ ಮಾಡಿದ್ದಾಳೆ. ಜಗಳದ ವೇಳೆ ಕುಕ್ಕರ್ನಿಂದ ಹೊಡೆದು, ನಂತರ ಕತ್ತು ಹಿಸುಕಿ ಹತ್ಯೆ ಮಾಡಿದ್ದು, ಪೊಲೀಸರು ಆರೋಪಿ ಪತ್ನಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
11:24 AM (IST) Jul 23
ನೀಟ್ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. 1997ರಲ್ಲಿ ಅವರು ಪೇಪರ್ ಲೀಕ್ ವಿರುದ್ಧ ನಡೆಸಿದ್ದ ಹೋರಾಟ ಮತ್ತು ಪೊಲೀಸ್ ಲಾಠಿ ಏಟು ತಿಂದಿದ್ದ ಘಟನೆ ವೈರಲ್ ಆಗಿದೆ.
10:48 AM (IST) Jul 23
10:48 AM (IST) Jul 23
ನೀಟ್ ಅಕ್ರಮದ ಕುರಿತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅವರು ಮುಂದಿಟ್ಟಿದ್ದಾರೆ.
10:46 AM (IST) Jul 23
10:35 AM (IST) Jul 23
09:48 AM (IST) Jul 23
09:42 AM (IST) Jul 23
09:23 AM (IST) Jul 23
ಕಳೆದ ಮೂರು ವರ್ಷಗಳಲ್ಲಿ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿನ 6,358 'ಬ್ಲ್ಯಾಕ್ ಕಾರಿಡಾರ್'ಗಳಲ್ಲಿ 37,000ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಅತಿ ಹೆಚ್ಚು ಅಪಘಾತ ಪೀಡಿತ ವಲಯಗಳನ್ನು ಹೊಂದಿರುವ ರಾಜ್ಯಗಳಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ಅಪಾಯಕಾರಿ ವಲಯಗಳನ್ನು ಸರಿಪಡಿಸಲು ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ.
08:48 AM (IST) Jul 23
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಕನ್ನಾಟ ಪ್ಯಾಲೇಸ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಪಿಎಸ್ಐ ಒಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.
05:29 AM (IST) Jul 23