ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಯನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ‘ವಿದ್ಯಾರ್ಥಿಗಳ ಅಭಿಯಾನ’ದ ಬಗ್ಗೆ ಸರ್ಕಾರ ಅತ್ಯಂತ ಸಂವೇದನಾಶೀಲವಾಗಿದೆ ಮತ್ತು ಸಿಜೆಪಿ ಜೊತೆಗೆ ಮಾತುಕತೆಗೆ ಸರ್ಕಾರ ಮುಕ್ತವಾಗಿದೆ. ಆದರೆ ವಿಪಕ್ಷಗಳು ದೇಶದ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಸುಳ್ಳು ನಿರೂಪಣೆ ಮಾಡುತ್ತಿದೆ ಎಂದು ಆರೋಪಿಸಿದೆ.
ಈ ನಡುವೆ ಬಿಜೆಪಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ‘ನಾವು ಸರ್ಕಾರದ ಜೊತೆಗೆ ಮಾತುಕತೆಗೆ ಸಿದ್ಧ. ಆದರೆ ಅದು ಯಾವುದೇ ಸಚಿವರ ಮನೆಯಲ್ಲಿ ಆಗಿರಬಾರದು. ಬದಲಾಗಿ ಯಾವುದಾದರೂ ತಟಸ್ಥ ಸ್ಥಳದಲ್ಲಿ ಆಗಿರಬೇಕು’ ಎಂದು ಹೇಳಿದ್ದಾರೆ.
01:23 PM (IST) Jul 23
12:56 PM (IST) Jul 23
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದಾನಿಶ್ ಕನೇರಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲ ಸೂಚಿಸಿರುವ ಅವರು, ಭಾರತದಲ್ಲಿ ನಡೆಯುವ ಪ್ರತಿಭಟನೆಗಳ ಹಿಂದೆ ಒಂದು ನಿರ್ದಿಷ್ಟ ಸ್ಕ್ರಿಪ್ಟ್ ಕೆಲಸ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
12:56 PM (IST) Jul 23
12:28 PM (IST) Jul 23
Actor Thalapathy Vijay: ಒಬ್ಬರು ಅಧಿಕಾರದಲ್ಲಿ ಮುಖ್ಯಮಂತ್ರಿ... ಇನ್ನೊಂದೆಡೆ ಥಿಯೇಟರ್ನಲ್ಲಿ ಮಾಸ್ ಹೀರೋ! 50 ವರ್ಷಗಳ ನಂತರ ತಮಿಳು ಚಿತ್ರರಂಗದ ಇತಿಹಾಸದಲ್ಲಿ ಈ ಅಪರೂಪದ ಘಟನೆ ಪುನರಾವರ್ತನೆಯಾಗಿದೆ. ಎಂಜಿಆರ್ನಿಂದ ದಳಪತಿ ವಿಜಯ್ವರೆಗೆ ನಡೆದ ಈ ಟ್ರೆಂಡಿಂಗ್ ಬೆಳವಣಿಗೆ ಇದು.
12:13 PM (IST) Jul 23
ಹರಾರೆ: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಆರಂಭವಾಗಲಿದೆ. ಈ ಸರಣಿ ಹಲವು ಕಾರಣಗಳಿಗೆ ವಿಶೇಷತೆ ಎನಿಸಿಕೊಂಡಿದೆ. ಈ ಪೈಕಿ ಈ ಐದು ಕಾರಣಗಳಿಗೋಸ್ಕರವಾದರೂ ಕ್ರಿಕೆಟ್ ಅಭಿಮಾನಿಗಳು ಈ ಸರಣಿಯನ್ನು ನೋಡಲೇಬೇಕು.
12:05 PM (IST) Jul 23
ಸೀರೆ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಪತ್ನಿಯೇ ಪತಿಯನ್ನು ಕೊಲೆ ಮಾಡಿದ್ದಾಳೆ. ಜಗಳದ ವೇಳೆ ಕುಕ್ಕರ್ನಿಂದ ಹೊಡೆದು, ನಂತರ ಕತ್ತು ಹಿಸುಕಿ ಹತ್ಯೆ ಮಾಡಿದ್ದು, ಪೊಲೀಸರು ಆರೋಪಿ ಪತ್ನಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
11:24 AM (IST) Jul 23
ನೀಟ್ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. 1997ರಲ್ಲಿ ಅವರು ಪೇಪರ್ ಲೀಕ್ ವಿರುದ್ಧ ನಡೆಸಿದ್ದ ಹೋರಾಟ ಮತ್ತು ಪೊಲೀಸ್ ಲಾಠಿ ಏಟು ತಿಂದಿದ್ದ ಘಟನೆ ವೈರಲ್ ಆಗಿದೆ.
10:48 AM (IST) Jul 23
10:48 AM (IST) Jul 23
ನೀಟ್ ಅಕ್ರಮದ ಕುರಿತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅವರು ಮುಂದಿಟ್ಟಿದ್ದಾರೆ.
10:46 AM (IST) Jul 23
10:35 AM (IST) Jul 23
09:48 AM (IST) Jul 23
09:42 AM (IST) Jul 23
09:23 AM (IST) Jul 23
ಕಳೆದ ಮೂರು ವರ್ಷಗಳಲ್ಲಿ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿನ 6,358 'ಬ್ಲ್ಯಾಕ್ ಕಾರಿಡಾರ್'ಗಳಲ್ಲಿ 37,000ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಅತಿ ಹೆಚ್ಚು ಅಪಘಾತ ಪೀಡಿತ ವಲಯಗಳನ್ನು ಹೊಂದಿರುವ ರಾಜ್ಯಗಳಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ಅಪಾಯಕಾರಿ ವಲಯಗಳನ್ನು ಸರಿಪಡಿಸಲು ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ.
08:48 AM (IST) Jul 23
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಕನ್ನಾಟ ಪ್ಯಾಲೇಸ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಪಿಎಸ್ಐ ಒಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.
05:29 AM (IST) Jul 23